Homeಕರೋನಾ ತಲ್ಲಣಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

ಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಿಸಿರುವ ಪ್ಯಾಕೇಜ್ ದುಡಿಯುವ ಜನರನ್ನು
ನಿರಾಶೆಗೊಳಿಸಿರುವುದು ಮಾತ್ರವಲ್ಲ, ಅವಮಾನಿಸುವ ಪ್ಯಾಕೇಜ್ ಆಗಿದೆ ಎಂದು ಜನಾಗ್ರಹ ಆಂದೋಲನ ಆಕ್ರೋಶ ವ್ಯಕ್ತಪಡಿಸಿದೆ.

ಮಾನವ ಬಿಕ್ಕಟ್ಟನಿ ಈ ಸಂದರ್ಭದಲ್ಲಿ ಜನರಿಗೆ ಬದುಕುಳಿಯಲು ಆಸರೆಯಾಗಿರುವ ಪ್ಯಾಕೇಜ್‌ಗಾಗಿ ಜನಾಗ್ರಹವನ್ನೂ ಒಳಗೊಂಡಂತೆ ಬಹುತೇಕ ಜನಪರ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಒತ್ತಾಯಿಸುತ್ತಾ ಬರುತ್ತಿವೆ. ನೆರೆಹೊರೆಯ ರಾಜ್ಯಗಳು ಅನೇಕ ಜನಪರ ಕ್ರಮಗಳನ್ನು ಕಣ್ಣೆದುರಿಗೇ ತೆಗೆದುಕೊಳ್ಳುತ್ತಿದ್ದರೂ ರಾಜ್ಯ ಸರ್ಕಾರ ಕಿಮ್ಮೆನ್ನದೆ ಕೂತಿತ್ತು. ಜನರ ಹಾಗೂ ಜನರ ಸಂಘಟನೆಗಳ ಒತ್ತಡಕ್ಕೆ ಮಣಿದು ಕೊನೆಗೆ ಇಂದು ಮುಖ್ಯಮಂತ್ರಿಯವರು ಪ್ಯಾಕೇಜ್ ಒಂದನ್ನು ಘೋಷಿಸಿದ್ದಾರೆ. ಆದರೆ ಈ ಪ್ಯಾಕೇಜ್ ತೀವ್ರ ನಿರಾಶೆ ಮೂಡಿಸಿರುವುದು ಮಾತ್ರವಲ್ಲ, ದುಡಿಯುವ ಜನರನ್ನು ಅವಮಾನಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಸಂಘಟಿತ, ಸ್ವಯಂ ಉದ್ಯೋಗಿ ಮುಂತಾದ ಶ್ರಮಿಕ ಕುಟುಂಬಗಳಿಗೆ ಕೇವಲ 2,000 ಮತ್ತು 3,000 ರೂಪಾಯಿಗಳ ನೆರವನ್ನು ಮಾತ್ರ ಘೋಷಿಸಿದೆ. ಇಂಥ ದುಷ್ಕಾಲವನ್ನು ಎದುರಿಸಲು 2000 ಏತಕ್ಕೆ ಸಾಲುತ್ತಿದೆ ಎಂಬುದನ್ನು ಸರ್ಕಾರವೇ ಹೇಳಬೇಕಿದೆ. ಅದೂ ಸಹ ನೊಂದಣಿಯಾಗಿರುವ ಶ್ರಮಿಕರಿಗೆ ಎಂದು ಹೇಳಿರುವುದರಿಂದ ಅದು ಎಲ್ಲರಿಗೂ ತಲುಪುವುದು ಸಾಧ್ಯವೇ ಇಲ್ಲ. ಉದಾಹರಣೆಗೆ ನೇಕಾರ ಕಾರ್ಮಿಕರಿಗೆ ಗುರುತಿನ ಚೀಟಿಯನ್ನೂ ಸರ್ಕಾರ ಇದುವರೆಗೆ ನೀಡಿಲ್ಲ. ಮನೆಕೆಲಸದವರಿಗೂ ಯಾವ ನೊಂದಣಿಯೂ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದೆ.

ಅಪಾರ ನಷ್ಟ ಹೊಂದಿರುವ ಹೂವು ಮತ್ತು ತರಕಾರಿ ಬೆಳೆಯುವ ರೈತರಿಗೆ ಮಾತ್ರ 10,000 ರೂಗಳ ನೆರವನ್ನು ಘೋಷಿಸಿದೆ. ಅವರಿಗಾಗಿರುವ ನಷ್ಟದ ಮುಂದೆ ಈ ಹಣ ಏತಕ್ಕೂ ಸಾಲುವುದಿಲ್ಲ. ಅಲ್ಲದೆ ವಿಶಾಲ ರೈತಾಪಿಗಾಗಲೀ, ಕೃಷಿ ಕೂಲಿಗಳಿಗಾಗಲೀ ಯಾವುದೇ ನೆರವನ್ನು ಸರ್ಕಾರ ಘೋಷಿಸಿಲ್ಲ. ಕೆಲಸ ಕಳೆದುಕೊಂಡಿರುವ ಖಾಸಗೀ ಶಾಲೆ ಮತ್ತು ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ನೆರವಾಗುವ ಯಾವ ಅಂಶವೂ ಇದರಲ್ಲಿಲ್ಲ. ಇದು ನೆರವಿನ ಪ್ಯಾಕೇಜ್ ಎಂದು ಕರೆಯಲಿಕ್ಕೇ ಅನರ್ಹವಾಗಿದೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಸರ್ಕಾರ ನಿಜವಾಗಲೂ ಜನಹಿತವನ್ನು ಬಯಸುತ್ತಿದ್ದಲ್ಲಿ ಕೋವಿಡ್ ರೋಗಕ್ಕೆ ತುತ್ತಾಗಿರುವ ಎಲ್ಲಾ ಜನರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಎಲ್ಲಾ ಜನರಿಗೂ ಉಚಿತವಾಗಿ ವ್ಯಾಕ್ಸಿನ್ ಒದಗಿಸಲು ತುರ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಬಿಪಿಎಲ್ ಜನರಿಗೂ ಸಮಗ್ರ ದಿನಸಿ ಮತ್ತು ಮಾಸಿಕ 5000 ರೂಗಳ ನೆರವು ಧನ ನೀಡಬೇಕು. ಕೋವಿಡ್‌ನಿಂದ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ಆಂದೋಲನ ಒತ್ತಾಯಿಸಿದೆ.

ಅಲ್ಲದೆ ಬೆಳೆ ನಷ್ಟ ಅನುಭವಿಸಿರುವ ಹೂವು, ತರಕಾರಿ ರೈತರಿಗೆ ಎಕರೆಗೆ ಕನಿಷ್ಟ 25 ಸಾವಿರ ಪರಿಹಾರ ನೀಡಬೇಕು. ಇತರೆಲ್ಲಾ ಸಣ್ಣ ರೈತರಿಗೆ ಎಕರೆಗೆ 10,000 ನೆರವು ಧನ ನೀಡಬೇಕು. ಮೂರು ತಿಂಗಳ ಸಾಲ ಮರುಪಾವತಿ ಮುಂದೂಡುವುದು ಮಾತ್ರವಲ್ಲ,  ಮೈಕ್ರೋ ಫೈನಾನ್ಸಿನ ಸಾಲವನ್ನೂ ಒಳಗೊಂಡಂತೆ ಎಲ್ಲಾ ಸಾಲದ ಕೋರಾನಾ ಕಾಲಾವಧಿಯ ಕಂತುಗಳನ್ನು ಸರ್ಕರವೇ ಭರಿಸಿ, ಕಂತು ಮನ್ನಾ ಮಾಡಬೇಕಿದೆ. ಶಾಲಾ ಕಾಲೇಜುಗಳು ಮುಚ್ಚಿರುವುದರಿಂದ ಖಾಸಗೀ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಉಪನ್ಯಾಸಕರೂ ಸಂಕಷ್ಟದಲ್ಲಿದ್ದು ಅವರ ನೆರವಿಗೂ ಸರ್ಕಾರ ಧಾವಿಸಬೇಕಿದೆ ಎಂದು ಒತ್ತಾಯಿಸಲಾಗಿದೆ.

ಇದಕ್ಕಾಗಿ ಎಲ್ಲಾ ಕೋಟ್ಯಾಧೀಷ ರಾಜಕಾರಣಿಗಳು ಮತ್ತು ಉದ್ದಿಮೆಪತಿಗಳ ಆದಾಯದ ಮೇಲೆ ಶೇ. 5ರ ಸುಂಕವನ್ನು ವಿಧಿಸಿ ಮತ್ತು ಕಾರ್ಪೊರೇಟ್ ವಹಿವಾಟಿನ ಮೇಲೆ ಶೇ. 2ರ ಕೋರೋನಾ ಸೆಸ್ ವಿಧಿಸಿ ಸಂಪನ್ಮೂಲವನ್ನು ಕ್ರೂಢೀಕರಿಸಿ, ನಿಜವಾದ ಅರ್ಥದ ಪ್ಯಾಕೇಜಿನ ಮೂಲಕ ಜನರ ಕೈಗೆ ತಲುಪುವಂತೆ ಸರ್ಕಾರ ಮಾಡಬೇಕಿದೆ ಎಂದು ಒತ್ತಾಯಿಸಲಾಗಿದೆ.

ಈ ಕ್ರಮಗಳಿಗೆ ಸರ್ಕಾರ ಮುಂದಾಗದಿದ್ದರೆ ಕೋವಿಡ್ ಇದ್ದರೂ ಜನ ದಿಟ್ಟ ಹೋರಾಟಗಳಿಗಿಳಿಯುವು ಅನಿವಾರ್ಯವಾಗಲಿದೆ. ಜನಾಗ್ರಹ ಆಂದೋಲನ ನಿನ್ನೆ ಕರೆದಿದ್ದ ಸರ್ವ ಪಕ್ಷ ಹಾಗೂ ಸರ್ವ ಸಂಘಟನೆಗಳ ತುರ್ತು ಸಭೆಯಲ್ಲಿ ಸರ್ಕಾರ ಜನಪರ ಕ್ರಮಗಳಿಗೆ ಮುಂದಾಗದಿದ್ದರೆ ಒಗ್ಗೂಡಿ ಪ್ರತಿಭಟಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಶೀಘ್ರವೇ ಸಮಾಲೋಚನಾ ಮಂಡಳಿಯು ಸಭೆ ಸೇರಿ ಹೋರಾಟದ ರೂಪರೇಷೆಯನ್ನು ಅಂತಿಮಗೊಳಿಸಲಿದೆ ಎಂದು ಜನಾಗ್ರಹ ಆಂದೋಲನದ ಪರವಾಗಿ ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಶಸಿಕಾಂತ್ ಸೆಂದಿಲ್, ಚಾಮರಸ ಮಾಲಿ ಮಾಟೀಲ್, ಯೂಸೂಫ್ ಕನ್ನಿ, ಹೆಚ್. ಆರ್. ಬಸವಾರಾಜಪ್ಪ, ಯಾಸೀನ್ ಮಲ್ಪೆ ಮತ್ತು ನೂರ್ ಶ್ರೀಧರ್ ತಿಳಿಸಿದ್ದಾರೆ.


ಇದನ್ನೂ ಓದಿ: ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...