Homeಕರೋನಾ ತಲ್ಲಣಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

ಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಿಸಿರುವ ಪ್ಯಾಕೇಜ್ ದುಡಿಯುವ ಜನರನ್ನು
ನಿರಾಶೆಗೊಳಿಸಿರುವುದು ಮಾತ್ರವಲ್ಲ, ಅವಮಾನಿಸುವ ಪ್ಯಾಕೇಜ್ ಆಗಿದೆ ಎಂದು ಜನಾಗ್ರಹ ಆಂದೋಲನ ಆಕ್ರೋಶ ವ್ಯಕ್ತಪಡಿಸಿದೆ.

ಮಾನವ ಬಿಕ್ಕಟ್ಟನಿ ಈ ಸಂದರ್ಭದಲ್ಲಿ ಜನರಿಗೆ ಬದುಕುಳಿಯಲು ಆಸರೆಯಾಗಿರುವ ಪ್ಯಾಕೇಜ್‌ಗಾಗಿ ಜನಾಗ್ರಹವನ್ನೂ ಒಳಗೊಂಡಂತೆ ಬಹುತೇಕ ಜನಪರ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಒತ್ತಾಯಿಸುತ್ತಾ ಬರುತ್ತಿವೆ. ನೆರೆಹೊರೆಯ ರಾಜ್ಯಗಳು ಅನೇಕ ಜನಪರ ಕ್ರಮಗಳನ್ನು ಕಣ್ಣೆದುರಿಗೇ ತೆಗೆದುಕೊಳ್ಳುತ್ತಿದ್ದರೂ ರಾಜ್ಯ ಸರ್ಕಾರ ಕಿಮ್ಮೆನ್ನದೆ ಕೂತಿತ್ತು. ಜನರ ಹಾಗೂ ಜನರ ಸಂಘಟನೆಗಳ ಒತ್ತಡಕ್ಕೆ ಮಣಿದು ಕೊನೆಗೆ ಇಂದು ಮುಖ್ಯಮಂತ್ರಿಯವರು ಪ್ಯಾಕೇಜ್ ಒಂದನ್ನು ಘೋಷಿಸಿದ್ದಾರೆ. ಆದರೆ ಈ ಪ್ಯಾಕೇಜ್ ತೀವ್ರ ನಿರಾಶೆ ಮೂಡಿಸಿರುವುದು ಮಾತ್ರವಲ್ಲ, ದುಡಿಯುವ ಜನರನ್ನು ಅವಮಾನಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಸಂಘಟಿತ, ಸ್ವಯಂ ಉದ್ಯೋಗಿ ಮುಂತಾದ ಶ್ರಮಿಕ ಕುಟುಂಬಗಳಿಗೆ ಕೇವಲ 2,000 ಮತ್ತು 3,000 ರೂಪಾಯಿಗಳ ನೆರವನ್ನು ಮಾತ್ರ ಘೋಷಿಸಿದೆ. ಇಂಥ ದುಷ್ಕಾಲವನ್ನು ಎದುರಿಸಲು 2000 ಏತಕ್ಕೆ ಸಾಲುತ್ತಿದೆ ಎಂಬುದನ್ನು ಸರ್ಕಾರವೇ ಹೇಳಬೇಕಿದೆ. ಅದೂ ಸಹ ನೊಂದಣಿಯಾಗಿರುವ ಶ್ರಮಿಕರಿಗೆ ಎಂದು ಹೇಳಿರುವುದರಿಂದ ಅದು ಎಲ್ಲರಿಗೂ ತಲುಪುವುದು ಸಾಧ್ಯವೇ ಇಲ್ಲ. ಉದಾಹರಣೆಗೆ ನೇಕಾರ ಕಾರ್ಮಿಕರಿಗೆ ಗುರುತಿನ ಚೀಟಿಯನ್ನೂ ಸರ್ಕಾರ ಇದುವರೆಗೆ ನೀಡಿಲ್ಲ. ಮನೆಕೆಲಸದವರಿಗೂ ಯಾವ ನೊಂದಣಿಯೂ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದೆ.

ಅಪಾರ ನಷ್ಟ ಹೊಂದಿರುವ ಹೂವು ಮತ್ತು ತರಕಾರಿ ಬೆಳೆಯುವ ರೈತರಿಗೆ ಮಾತ್ರ 10,000 ರೂಗಳ ನೆರವನ್ನು ಘೋಷಿಸಿದೆ. ಅವರಿಗಾಗಿರುವ ನಷ್ಟದ ಮುಂದೆ ಈ ಹಣ ಏತಕ್ಕೂ ಸಾಲುವುದಿಲ್ಲ. ಅಲ್ಲದೆ ವಿಶಾಲ ರೈತಾಪಿಗಾಗಲೀ, ಕೃಷಿ ಕೂಲಿಗಳಿಗಾಗಲೀ ಯಾವುದೇ ನೆರವನ್ನು ಸರ್ಕಾರ ಘೋಷಿಸಿಲ್ಲ. ಕೆಲಸ ಕಳೆದುಕೊಂಡಿರುವ ಖಾಸಗೀ ಶಾಲೆ ಮತ್ತು ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ನೆರವಾಗುವ ಯಾವ ಅಂಶವೂ ಇದರಲ್ಲಿಲ್ಲ. ಇದು ನೆರವಿನ ಪ್ಯಾಕೇಜ್ ಎಂದು ಕರೆಯಲಿಕ್ಕೇ ಅನರ್ಹವಾಗಿದೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಸರ್ಕಾರ ನಿಜವಾಗಲೂ ಜನಹಿತವನ್ನು ಬಯಸುತ್ತಿದ್ದಲ್ಲಿ ಕೋವಿಡ್ ರೋಗಕ್ಕೆ ತುತ್ತಾಗಿರುವ ಎಲ್ಲಾ ಜನರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಎಲ್ಲಾ ಜನರಿಗೂ ಉಚಿತವಾಗಿ ವ್ಯಾಕ್ಸಿನ್ ಒದಗಿಸಲು ತುರ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಬಿಪಿಎಲ್ ಜನರಿಗೂ ಸಮಗ್ರ ದಿನಸಿ ಮತ್ತು ಮಾಸಿಕ 5000 ರೂಗಳ ನೆರವು ಧನ ನೀಡಬೇಕು. ಕೋವಿಡ್‌ನಿಂದ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ಆಂದೋಲನ ಒತ್ತಾಯಿಸಿದೆ.

ಅಲ್ಲದೆ ಬೆಳೆ ನಷ್ಟ ಅನುಭವಿಸಿರುವ ಹೂವು, ತರಕಾರಿ ರೈತರಿಗೆ ಎಕರೆಗೆ ಕನಿಷ್ಟ 25 ಸಾವಿರ ಪರಿಹಾರ ನೀಡಬೇಕು. ಇತರೆಲ್ಲಾ ಸಣ್ಣ ರೈತರಿಗೆ ಎಕರೆಗೆ 10,000 ನೆರವು ಧನ ನೀಡಬೇಕು. ಮೂರು ತಿಂಗಳ ಸಾಲ ಮರುಪಾವತಿ ಮುಂದೂಡುವುದು ಮಾತ್ರವಲ್ಲ,  ಮೈಕ್ರೋ ಫೈನಾನ್ಸಿನ ಸಾಲವನ್ನೂ ಒಳಗೊಂಡಂತೆ ಎಲ್ಲಾ ಸಾಲದ ಕೋರಾನಾ ಕಾಲಾವಧಿಯ ಕಂತುಗಳನ್ನು ಸರ್ಕರವೇ ಭರಿಸಿ, ಕಂತು ಮನ್ನಾ ಮಾಡಬೇಕಿದೆ. ಶಾಲಾ ಕಾಲೇಜುಗಳು ಮುಚ್ಚಿರುವುದರಿಂದ ಖಾಸಗೀ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಉಪನ್ಯಾಸಕರೂ ಸಂಕಷ್ಟದಲ್ಲಿದ್ದು ಅವರ ನೆರವಿಗೂ ಸರ್ಕಾರ ಧಾವಿಸಬೇಕಿದೆ ಎಂದು ಒತ್ತಾಯಿಸಲಾಗಿದೆ.

ಇದಕ್ಕಾಗಿ ಎಲ್ಲಾ ಕೋಟ್ಯಾಧೀಷ ರಾಜಕಾರಣಿಗಳು ಮತ್ತು ಉದ್ದಿಮೆಪತಿಗಳ ಆದಾಯದ ಮೇಲೆ ಶೇ. 5ರ ಸುಂಕವನ್ನು ವಿಧಿಸಿ ಮತ್ತು ಕಾರ್ಪೊರೇಟ್ ವಹಿವಾಟಿನ ಮೇಲೆ ಶೇ. 2ರ ಕೋರೋನಾ ಸೆಸ್ ವಿಧಿಸಿ ಸಂಪನ್ಮೂಲವನ್ನು ಕ್ರೂಢೀಕರಿಸಿ, ನಿಜವಾದ ಅರ್ಥದ ಪ್ಯಾಕೇಜಿನ ಮೂಲಕ ಜನರ ಕೈಗೆ ತಲುಪುವಂತೆ ಸರ್ಕಾರ ಮಾಡಬೇಕಿದೆ ಎಂದು ಒತ್ತಾಯಿಸಲಾಗಿದೆ.

ಈ ಕ್ರಮಗಳಿಗೆ ಸರ್ಕಾರ ಮುಂದಾಗದಿದ್ದರೆ ಕೋವಿಡ್ ಇದ್ದರೂ ಜನ ದಿಟ್ಟ ಹೋರಾಟಗಳಿಗಿಳಿಯುವು ಅನಿವಾರ್ಯವಾಗಲಿದೆ. ಜನಾಗ್ರಹ ಆಂದೋಲನ ನಿನ್ನೆ ಕರೆದಿದ್ದ ಸರ್ವ ಪಕ್ಷ ಹಾಗೂ ಸರ್ವ ಸಂಘಟನೆಗಳ ತುರ್ತು ಸಭೆಯಲ್ಲಿ ಸರ್ಕಾರ ಜನಪರ ಕ್ರಮಗಳಿಗೆ ಮುಂದಾಗದಿದ್ದರೆ ಒಗ್ಗೂಡಿ ಪ್ರತಿಭಟಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಶೀಘ್ರವೇ ಸಮಾಲೋಚನಾ ಮಂಡಳಿಯು ಸಭೆ ಸೇರಿ ಹೋರಾಟದ ರೂಪರೇಷೆಯನ್ನು ಅಂತಿಮಗೊಳಿಸಲಿದೆ ಎಂದು ಜನಾಗ್ರಹ ಆಂದೋಲನದ ಪರವಾಗಿ ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಶಸಿಕಾಂತ್ ಸೆಂದಿಲ್, ಚಾಮರಸ ಮಾಲಿ ಮಾಟೀಲ್, ಯೂಸೂಫ್ ಕನ್ನಿ, ಹೆಚ್. ಆರ್. ಬಸವಾರಾಜಪ್ಪ, ಯಾಸೀನ್ ಮಲ್ಪೆ ಮತ್ತು ನೂರ್ ಶ್ರೀಧರ್ ತಿಳಿಸಿದ್ದಾರೆ.


ಇದನ್ನೂ ಓದಿ: ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...