Homeಕರೋನಾ ತಲ್ಲಣಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

ಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಿಸಿರುವ ಪ್ಯಾಕೇಜ್ ದುಡಿಯುವ ಜನರನ್ನು
ನಿರಾಶೆಗೊಳಿಸಿರುವುದು ಮಾತ್ರವಲ್ಲ, ಅವಮಾನಿಸುವ ಪ್ಯಾಕೇಜ್ ಆಗಿದೆ ಎಂದು ಜನಾಗ್ರಹ ಆಂದೋಲನ ಆಕ್ರೋಶ ವ್ಯಕ್ತಪಡಿಸಿದೆ.

ಮಾನವ ಬಿಕ್ಕಟ್ಟನಿ ಈ ಸಂದರ್ಭದಲ್ಲಿ ಜನರಿಗೆ ಬದುಕುಳಿಯಲು ಆಸರೆಯಾಗಿರುವ ಪ್ಯಾಕೇಜ್‌ಗಾಗಿ ಜನಾಗ್ರಹವನ್ನೂ ಒಳಗೊಂಡಂತೆ ಬಹುತೇಕ ಜನಪರ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಒತ್ತಾಯಿಸುತ್ತಾ ಬರುತ್ತಿವೆ. ನೆರೆಹೊರೆಯ ರಾಜ್ಯಗಳು ಅನೇಕ ಜನಪರ ಕ್ರಮಗಳನ್ನು ಕಣ್ಣೆದುರಿಗೇ ತೆಗೆದುಕೊಳ್ಳುತ್ತಿದ್ದರೂ ರಾಜ್ಯ ಸರ್ಕಾರ ಕಿಮ್ಮೆನ್ನದೆ ಕೂತಿತ್ತು. ಜನರ ಹಾಗೂ ಜನರ ಸಂಘಟನೆಗಳ ಒತ್ತಡಕ್ಕೆ ಮಣಿದು ಕೊನೆಗೆ ಇಂದು ಮುಖ್ಯಮಂತ್ರಿಯವರು ಪ್ಯಾಕೇಜ್ ಒಂದನ್ನು ಘೋಷಿಸಿದ್ದಾರೆ. ಆದರೆ ಈ ಪ್ಯಾಕೇಜ್ ತೀವ್ರ ನಿರಾಶೆ ಮೂಡಿಸಿರುವುದು ಮಾತ್ರವಲ್ಲ, ದುಡಿಯುವ ಜನರನ್ನು ಅವಮಾನಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಸಂಘಟಿತ, ಸ್ವಯಂ ಉದ್ಯೋಗಿ ಮುಂತಾದ ಶ್ರಮಿಕ ಕುಟುಂಬಗಳಿಗೆ ಕೇವಲ 2,000 ಮತ್ತು 3,000 ರೂಪಾಯಿಗಳ ನೆರವನ್ನು ಮಾತ್ರ ಘೋಷಿಸಿದೆ. ಇಂಥ ದುಷ್ಕಾಲವನ್ನು ಎದುರಿಸಲು 2000 ಏತಕ್ಕೆ ಸಾಲುತ್ತಿದೆ ಎಂಬುದನ್ನು ಸರ್ಕಾರವೇ ಹೇಳಬೇಕಿದೆ. ಅದೂ ಸಹ ನೊಂದಣಿಯಾಗಿರುವ ಶ್ರಮಿಕರಿಗೆ ಎಂದು ಹೇಳಿರುವುದರಿಂದ ಅದು ಎಲ್ಲರಿಗೂ ತಲುಪುವುದು ಸಾಧ್ಯವೇ ಇಲ್ಲ. ಉದಾಹರಣೆಗೆ ನೇಕಾರ ಕಾರ್ಮಿಕರಿಗೆ ಗುರುತಿನ ಚೀಟಿಯನ್ನೂ ಸರ್ಕಾರ ಇದುವರೆಗೆ ನೀಡಿಲ್ಲ. ಮನೆಕೆಲಸದವರಿಗೂ ಯಾವ ನೊಂದಣಿಯೂ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದೆ.

ಅಪಾರ ನಷ್ಟ ಹೊಂದಿರುವ ಹೂವು ಮತ್ತು ತರಕಾರಿ ಬೆಳೆಯುವ ರೈತರಿಗೆ ಮಾತ್ರ 10,000 ರೂಗಳ ನೆರವನ್ನು ಘೋಷಿಸಿದೆ. ಅವರಿಗಾಗಿರುವ ನಷ್ಟದ ಮುಂದೆ ಈ ಹಣ ಏತಕ್ಕೂ ಸಾಲುವುದಿಲ್ಲ. ಅಲ್ಲದೆ ವಿಶಾಲ ರೈತಾಪಿಗಾಗಲೀ, ಕೃಷಿ ಕೂಲಿಗಳಿಗಾಗಲೀ ಯಾವುದೇ ನೆರವನ್ನು ಸರ್ಕಾರ ಘೋಷಿಸಿಲ್ಲ. ಕೆಲಸ ಕಳೆದುಕೊಂಡಿರುವ ಖಾಸಗೀ ಶಾಲೆ ಮತ್ತು ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ನೆರವಾಗುವ ಯಾವ ಅಂಶವೂ ಇದರಲ್ಲಿಲ್ಲ. ಇದು ನೆರವಿನ ಪ್ಯಾಕೇಜ್ ಎಂದು ಕರೆಯಲಿಕ್ಕೇ ಅನರ್ಹವಾಗಿದೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಸರ್ಕಾರ ನಿಜವಾಗಲೂ ಜನಹಿತವನ್ನು ಬಯಸುತ್ತಿದ್ದಲ್ಲಿ ಕೋವಿಡ್ ರೋಗಕ್ಕೆ ತುತ್ತಾಗಿರುವ ಎಲ್ಲಾ ಜನರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಎಲ್ಲಾ ಜನರಿಗೂ ಉಚಿತವಾಗಿ ವ್ಯಾಕ್ಸಿನ್ ಒದಗಿಸಲು ತುರ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಬಿಪಿಎಲ್ ಜನರಿಗೂ ಸಮಗ್ರ ದಿನಸಿ ಮತ್ತು ಮಾಸಿಕ 5000 ರೂಗಳ ನೆರವು ಧನ ನೀಡಬೇಕು. ಕೋವಿಡ್‌ನಿಂದ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ಆಂದೋಲನ ಒತ್ತಾಯಿಸಿದೆ.

ಅಲ್ಲದೆ ಬೆಳೆ ನಷ್ಟ ಅನುಭವಿಸಿರುವ ಹೂವು, ತರಕಾರಿ ರೈತರಿಗೆ ಎಕರೆಗೆ ಕನಿಷ್ಟ 25 ಸಾವಿರ ಪರಿಹಾರ ನೀಡಬೇಕು. ಇತರೆಲ್ಲಾ ಸಣ್ಣ ರೈತರಿಗೆ ಎಕರೆಗೆ 10,000 ನೆರವು ಧನ ನೀಡಬೇಕು. ಮೂರು ತಿಂಗಳ ಸಾಲ ಮರುಪಾವತಿ ಮುಂದೂಡುವುದು ಮಾತ್ರವಲ್ಲ,  ಮೈಕ್ರೋ ಫೈನಾನ್ಸಿನ ಸಾಲವನ್ನೂ ಒಳಗೊಂಡಂತೆ ಎಲ್ಲಾ ಸಾಲದ ಕೋರಾನಾ ಕಾಲಾವಧಿಯ ಕಂತುಗಳನ್ನು ಸರ್ಕರವೇ ಭರಿಸಿ, ಕಂತು ಮನ್ನಾ ಮಾಡಬೇಕಿದೆ. ಶಾಲಾ ಕಾಲೇಜುಗಳು ಮುಚ್ಚಿರುವುದರಿಂದ ಖಾಸಗೀ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಉಪನ್ಯಾಸಕರೂ ಸಂಕಷ್ಟದಲ್ಲಿದ್ದು ಅವರ ನೆರವಿಗೂ ಸರ್ಕಾರ ಧಾವಿಸಬೇಕಿದೆ ಎಂದು ಒತ್ತಾಯಿಸಲಾಗಿದೆ.

ಇದಕ್ಕಾಗಿ ಎಲ್ಲಾ ಕೋಟ್ಯಾಧೀಷ ರಾಜಕಾರಣಿಗಳು ಮತ್ತು ಉದ್ದಿಮೆಪತಿಗಳ ಆದಾಯದ ಮೇಲೆ ಶೇ. 5ರ ಸುಂಕವನ್ನು ವಿಧಿಸಿ ಮತ್ತು ಕಾರ್ಪೊರೇಟ್ ವಹಿವಾಟಿನ ಮೇಲೆ ಶೇ. 2ರ ಕೋರೋನಾ ಸೆಸ್ ವಿಧಿಸಿ ಸಂಪನ್ಮೂಲವನ್ನು ಕ್ರೂಢೀಕರಿಸಿ, ನಿಜವಾದ ಅರ್ಥದ ಪ್ಯಾಕೇಜಿನ ಮೂಲಕ ಜನರ ಕೈಗೆ ತಲುಪುವಂತೆ ಸರ್ಕಾರ ಮಾಡಬೇಕಿದೆ ಎಂದು ಒತ್ತಾಯಿಸಲಾಗಿದೆ.

ಈ ಕ್ರಮಗಳಿಗೆ ಸರ್ಕಾರ ಮುಂದಾಗದಿದ್ದರೆ ಕೋವಿಡ್ ಇದ್ದರೂ ಜನ ದಿಟ್ಟ ಹೋರಾಟಗಳಿಗಿಳಿಯುವು ಅನಿವಾರ್ಯವಾಗಲಿದೆ. ಜನಾಗ್ರಹ ಆಂದೋಲನ ನಿನ್ನೆ ಕರೆದಿದ್ದ ಸರ್ವ ಪಕ್ಷ ಹಾಗೂ ಸರ್ವ ಸಂಘಟನೆಗಳ ತುರ್ತು ಸಭೆಯಲ್ಲಿ ಸರ್ಕಾರ ಜನಪರ ಕ್ರಮಗಳಿಗೆ ಮುಂದಾಗದಿದ್ದರೆ ಒಗ್ಗೂಡಿ ಪ್ರತಿಭಟಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಶೀಘ್ರವೇ ಸಮಾಲೋಚನಾ ಮಂಡಳಿಯು ಸಭೆ ಸೇರಿ ಹೋರಾಟದ ರೂಪರೇಷೆಯನ್ನು ಅಂತಿಮಗೊಳಿಸಲಿದೆ ಎಂದು ಜನಾಗ್ರಹ ಆಂದೋಲನದ ಪರವಾಗಿ ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಶಸಿಕಾಂತ್ ಸೆಂದಿಲ್, ಚಾಮರಸ ಮಾಲಿ ಮಾಟೀಲ್, ಯೂಸೂಫ್ ಕನ್ನಿ, ಹೆಚ್. ಆರ್. ಬಸವಾರಾಜಪ್ಪ, ಯಾಸೀನ್ ಮಲ್ಪೆ ಮತ್ತು ನೂರ್ ಶ್ರೀಧರ್ ತಿಳಿಸಿದ್ದಾರೆ.


ಇದನ್ನೂ ಓದಿ: ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...