Homeಕರೋನಾ ತಲ್ಲಣಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

ಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಿಸಿರುವ ಪ್ಯಾಕೇಜ್ ದುಡಿಯುವ ಜನರನ್ನು
ನಿರಾಶೆಗೊಳಿಸಿರುವುದು ಮಾತ್ರವಲ್ಲ, ಅವಮಾನಿಸುವ ಪ್ಯಾಕೇಜ್ ಆಗಿದೆ ಎಂದು ಜನಾಗ್ರಹ ಆಂದೋಲನ ಆಕ್ರೋಶ ವ್ಯಕ್ತಪಡಿಸಿದೆ.

ಮಾನವ ಬಿಕ್ಕಟ್ಟನಿ ಈ ಸಂದರ್ಭದಲ್ಲಿ ಜನರಿಗೆ ಬದುಕುಳಿಯಲು ಆಸರೆಯಾಗಿರುವ ಪ್ಯಾಕೇಜ್‌ಗಾಗಿ ಜನಾಗ್ರಹವನ್ನೂ ಒಳಗೊಂಡಂತೆ ಬಹುತೇಕ ಜನಪರ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಒತ್ತಾಯಿಸುತ್ತಾ ಬರುತ್ತಿವೆ. ನೆರೆಹೊರೆಯ ರಾಜ್ಯಗಳು ಅನೇಕ ಜನಪರ ಕ್ರಮಗಳನ್ನು ಕಣ್ಣೆದುರಿಗೇ ತೆಗೆದುಕೊಳ್ಳುತ್ತಿದ್ದರೂ ರಾಜ್ಯ ಸರ್ಕಾರ ಕಿಮ್ಮೆನ್ನದೆ ಕೂತಿತ್ತು. ಜನರ ಹಾಗೂ ಜನರ ಸಂಘಟನೆಗಳ ಒತ್ತಡಕ್ಕೆ ಮಣಿದು ಕೊನೆಗೆ ಇಂದು ಮುಖ್ಯಮಂತ್ರಿಯವರು ಪ್ಯಾಕೇಜ್ ಒಂದನ್ನು ಘೋಷಿಸಿದ್ದಾರೆ. ಆದರೆ ಈ ಪ್ಯಾಕೇಜ್ ತೀವ್ರ ನಿರಾಶೆ ಮೂಡಿಸಿರುವುದು ಮಾತ್ರವಲ್ಲ, ದುಡಿಯುವ ಜನರನ್ನು ಅವಮಾನಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಸಂಘಟಿತ, ಸ್ವಯಂ ಉದ್ಯೋಗಿ ಮುಂತಾದ ಶ್ರಮಿಕ ಕುಟುಂಬಗಳಿಗೆ ಕೇವಲ 2,000 ಮತ್ತು 3,000 ರೂಪಾಯಿಗಳ ನೆರವನ್ನು ಮಾತ್ರ ಘೋಷಿಸಿದೆ. ಇಂಥ ದುಷ್ಕಾಲವನ್ನು ಎದುರಿಸಲು 2000 ಏತಕ್ಕೆ ಸಾಲುತ್ತಿದೆ ಎಂಬುದನ್ನು ಸರ್ಕಾರವೇ ಹೇಳಬೇಕಿದೆ. ಅದೂ ಸಹ ನೊಂದಣಿಯಾಗಿರುವ ಶ್ರಮಿಕರಿಗೆ ಎಂದು ಹೇಳಿರುವುದರಿಂದ ಅದು ಎಲ್ಲರಿಗೂ ತಲುಪುವುದು ಸಾಧ್ಯವೇ ಇಲ್ಲ. ಉದಾಹರಣೆಗೆ ನೇಕಾರ ಕಾರ್ಮಿಕರಿಗೆ ಗುರುತಿನ ಚೀಟಿಯನ್ನೂ ಸರ್ಕಾರ ಇದುವರೆಗೆ ನೀಡಿಲ್ಲ. ಮನೆಕೆಲಸದವರಿಗೂ ಯಾವ ನೊಂದಣಿಯೂ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದೆ.

ಅಪಾರ ನಷ್ಟ ಹೊಂದಿರುವ ಹೂವು ಮತ್ತು ತರಕಾರಿ ಬೆಳೆಯುವ ರೈತರಿಗೆ ಮಾತ್ರ 10,000 ರೂಗಳ ನೆರವನ್ನು ಘೋಷಿಸಿದೆ. ಅವರಿಗಾಗಿರುವ ನಷ್ಟದ ಮುಂದೆ ಈ ಹಣ ಏತಕ್ಕೂ ಸಾಲುವುದಿಲ್ಲ. ಅಲ್ಲದೆ ವಿಶಾಲ ರೈತಾಪಿಗಾಗಲೀ, ಕೃಷಿ ಕೂಲಿಗಳಿಗಾಗಲೀ ಯಾವುದೇ ನೆರವನ್ನು ಸರ್ಕಾರ ಘೋಷಿಸಿಲ್ಲ. ಕೆಲಸ ಕಳೆದುಕೊಂಡಿರುವ ಖಾಸಗೀ ಶಾಲೆ ಮತ್ತು ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ನೆರವಾಗುವ ಯಾವ ಅಂಶವೂ ಇದರಲ್ಲಿಲ್ಲ. ಇದು ನೆರವಿನ ಪ್ಯಾಕೇಜ್ ಎಂದು ಕರೆಯಲಿಕ್ಕೇ ಅನರ್ಹವಾಗಿದೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಸರ್ಕಾರ ನಿಜವಾಗಲೂ ಜನಹಿತವನ್ನು ಬಯಸುತ್ತಿದ್ದಲ್ಲಿ ಕೋವಿಡ್ ರೋಗಕ್ಕೆ ತುತ್ತಾಗಿರುವ ಎಲ್ಲಾ ಜನರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಎಲ್ಲಾ ಜನರಿಗೂ ಉಚಿತವಾಗಿ ವ್ಯಾಕ್ಸಿನ್ ಒದಗಿಸಲು ತುರ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಬಿಪಿಎಲ್ ಜನರಿಗೂ ಸಮಗ್ರ ದಿನಸಿ ಮತ್ತು ಮಾಸಿಕ 5000 ರೂಗಳ ನೆರವು ಧನ ನೀಡಬೇಕು. ಕೋವಿಡ್‌ನಿಂದ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ಆಂದೋಲನ ಒತ್ತಾಯಿಸಿದೆ.

ಅಲ್ಲದೆ ಬೆಳೆ ನಷ್ಟ ಅನುಭವಿಸಿರುವ ಹೂವು, ತರಕಾರಿ ರೈತರಿಗೆ ಎಕರೆಗೆ ಕನಿಷ್ಟ 25 ಸಾವಿರ ಪರಿಹಾರ ನೀಡಬೇಕು. ಇತರೆಲ್ಲಾ ಸಣ್ಣ ರೈತರಿಗೆ ಎಕರೆಗೆ 10,000 ನೆರವು ಧನ ನೀಡಬೇಕು. ಮೂರು ತಿಂಗಳ ಸಾಲ ಮರುಪಾವತಿ ಮುಂದೂಡುವುದು ಮಾತ್ರವಲ್ಲ,  ಮೈಕ್ರೋ ಫೈನಾನ್ಸಿನ ಸಾಲವನ್ನೂ ಒಳಗೊಂಡಂತೆ ಎಲ್ಲಾ ಸಾಲದ ಕೋರಾನಾ ಕಾಲಾವಧಿಯ ಕಂತುಗಳನ್ನು ಸರ್ಕರವೇ ಭರಿಸಿ, ಕಂತು ಮನ್ನಾ ಮಾಡಬೇಕಿದೆ. ಶಾಲಾ ಕಾಲೇಜುಗಳು ಮುಚ್ಚಿರುವುದರಿಂದ ಖಾಸಗೀ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಉಪನ್ಯಾಸಕರೂ ಸಂಕಷ್ಟದಲ್ಲಿದ್ದು ಅವರ ನೆರವಿಗೂ ಸರ್ಕಾರ ಧಾವಿಸಬೇಕಿದೆ ಎಂದು ಒತ್ತಾಯಿಸಲಾಗಿದೆ.

ಇದಕ್ಕಾಗಿ ಎಲ್ಲಾ ಕೋಟ್ಯಾಧೀಷ ರಾಜಕಾರಣಿಗಳು ಮತ್ತು ಉದ್ದಿಮೆಪತಿಗಳ ಆದಾಯದ ಮೇಲೆ ಶೇ. 5ರ ಸುಂಕವನ್ನು ವಿಧಿಸಿ ಮತ್ತು ಕಾರ್ಪೊರೇಟ್ ವಹಿವಾಟಿನ ಮೇಲೆ ಶೇ. 2ರ ಕೋರೋನಾ ಸೆಸ್ ವಿಧಿಸಿ ಸಂಪನ್ಮೂಲವನ್ನು ಕ್ರೂಢೀಕರಿಸಿ, ನಿಜವಾದ ಅರ್ಥದ ಪ್ಯಾಕೇಜಿನ ಮೂಲಕ ಜನರ ಕೈಗೆ ತಲುಪುವಂತೆ ಸರ್ಕಾರ ಮಾಡಬೇಕಿದೆ ಎಂದು ಒತ್ತಾಯಿಸಲಾಗಿದೆ.

ಈ ಕ್ರಮಗಳಿಗೆ ಸರ್ಕಾರ ಮುಂದಾಗದಿದ್ದರೆ ಕೋವಿಡ್ ಇದ್ದರೂ ಜನ ದಿಟ್ಟ ಹೋರಾಟಗಳಿಗಿಳಿಯುವು ಅನಿವಾರ್ಯವಾಗಲಿದೆ. ಜನಾಗ್ರಹ ಆಂದೋಲನ ನಿನ್ನೆ ಕರೆದಿದ್ದ ಸರ್ವ ಪಕ್ಷ ಹಾಗೂ ಸರ್ವ ಸಂಘಟನೆಗಳ ತುರ್ತು ಸಭೆಯಲ್ಲಿ ಸರ್ಕಾರ ಜನಪರ ಕ್ರಮಗಳಿಗೆ ಮುಂದಾಗದಿದ್ದರೆ ಒಗ್ಗೂಡಿ ಪ್ರತಿಭಟಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಶೀಘ್ರವೇ ಸಮಾಲೋಚನಾ ಮಂಡಳಿಯು ಸಭೆ ಸೇರಿ ಹೋರಾಟದ ರೂಪರೇಷೆಯನ್ನು ಅಂತಿಮಗೊಳಿಸಲಿದೆ ಎಂದು ಜನಾಗ್ರಹ ಆಂದೋಲನದ ಪರವಾಗಿ ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಶಸಿಕಾಂತ್ ಸೆಂದಿಲ್, ಚಾಮರಸ ಮಾಲಿ ಮಾಟೀಲ್, ಯೂಸೂಫ್ ಕನ್ನಿ, ಹೆಚ್. ಆರ್. ಬಸವಾರಾಜಪ್ಪ, ಯಾಸೀನ್ ಮಲ್ಪೆ ಮತ್ತು ನೂರ್ ಶ್ರೀಧರ್ ತಿಳಿಸಿದ್ದಾರೆ.


ಇದನ್ನೂ ಓದಿ: ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...