Homeಕರೋನಾ ತಲ್ಲಣಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

ಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಿಸಿರುವ ಪ್ಯಾಕೇಜ್ ದುಡಿಯುವ ಜನರನ್ನು
ನಿರಾಶೆಗೊಳಿಸಿರುವುದು ಮಾತ್ರವಲ್ಲ, ಅವಮಾನಿಸುವ ಪ್ಯಾಕೇಜ್ ಆಗಿದೆ ಎಂದು ಜನಾಗ್ರಹ ಆಂದೋಲನ ಆಕ್ರೋಶ ವ್ಯಕ್ತಪಡಿಸಿದೆ.

ಮಾನವ ಬಿಕ್ಕಟ್ಟನಿ ಈ ಸಂದರ್ಭದಲ್ಲಿ ಜನರಿಗೆ ಬದುಕುಳಿಯಲು ಆಸರೆಯಾಗಿರುವ ಪ್ಯಾಕೇಜ್‌ಗಾಗಿ ಜನಾಗ್ರಹವನ್ನೂ ಒಳಗೊಂಡಂತೆ ಬಹುತೇಕ ಜನಪರ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಒತ್ತಾಯಿಸುತ್ತಾ ಬರುತ್ತಿವೆ. ನೆರೆಹೊರೆಯ ರಾಜ್ಯಗಳು ಅನೇಕ ಜನಪರ ಕ್ರಮಗಳನ್ನು ಕಣ್ಣೆದುರಿಗೇ ತೆಗೆದುಕೊಳ್ಳುತ್ತಿದ್ದರೂ ರಾಜ್ಯ ಸರ್ಕಾರ ಕಿಮ್ಮೆನ್ನದೆ ಕೂತಿತ್ತು. ಜನರ ಹಾಗೂ ಜನರ ಸಂಘಟನೆಗಳ ಒತ್ತಡಕ್ಕೆ ಮಣಿದು ಕೊನೆಗೆ ಇಂದು ಮುಖ್ಯಮಂತ್ರಿಯವರು ಪ್ಯಾಕೇಜ್ ಒಂದನ್ನು ಘೋಷಿಸಿದ್ದಾರೆ. ಆದರೆ ಈ ಪ್ಯಾಕೇಜ್ ತೀವ್ರ ನಿರಾಶೆ ಮೂಡಿಸಿರುವುದು ಮಾತ್ರವಲ್ಲ, ದುಡಿಯುವ ಜನರನ್ನು ಅವಮಾನಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಸಂಘಟಿತ, ಸ್ವಯಂ ಉದ್ಯೋಗಿ ಮುಂತಾದ ಶ್ರಮಿಕ ಕುಟುಂಬಗಳಿಗೆ ಕೇವಲ 2,000 ಮತ್ತು 3,000 ರೂಪಾಯಿಗಳ ನೆರವನ್ನು ಮಾತ್ರ ಘೋಷಿಸಿದೆ. ಇಂಥ ದುಷ್ಕಾಲವನ್ನು ಎದುರಿಸಲು 2000 ಏತಕ್ಕೆ ಸಾಲುತ್ತಿದೆ ಎಂಬುದನ್ನು ಸರ್ಕಾರವೇ ಹೇಳಬೇಕಿದೆ. ಅದೂ ಸಹ ನೊಂದಣಿಯಾಗಿರುವ ಶ್ರಮಿಕರಿಗೆ ಎಂದು ಹೇಳಿರುವುದರಿಂದ ಅದು ಎಲ್ಲರಿಗೂ ತಲುಪುವುದು ಸಾಧ್ಯವೇ ಇಲ್ಲ. ಉದಾಹರಣೆಗೆ ನೇಕಾರ ಕಾರ್ಮಿಕರಿಗೆ ಗುರುತಿನ ಚೀಟಿಯನ್ನೂ ಸರ್ಕಾರ ಇದುವರೆಗೆ ನೀಡಿಲ್ಲ. ಮನೆಕೆಲಸದವರಿಗೂ ಯಾವ ನೊಂದಣಿಯೂ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದೆ.

ಅಪಾರ ನಷ್ಟ ಹೊಂದಿರುವ ಹೂವು ಮತ್ತು ತರಕಾರಿ ಬೆಳೆಯುವ ರೈತರಿಗೆ ಮಾತ್ರ 10,000 ರೂಗಳ ನೆರವನ್ನು ಘೋಷಿಸಿದೆ. ಅವರಿಗಾಗಿರುವ ನಷ್ಟದ ಮುಂದೆ ಈ ಹಣ ಏತಕ್ಕೂ ಸಾಲುವುದಿಲ್ಲ. ಅಲ್ಲದೆ ವಿಶಾಲ ರೈತಾಪಿಗಾಗಲೀ, ಕೃಷಿ ಕೂಲಿಗಳಿಗಾಗಲೀ ಯಾವುದೇ ನೆರವನ್ನು ಸರ್ಕಾರ ಘೋಷಿಸಿಲ್ಲ. ಕೆಲಸ ಕಳೆದುಕೊಂಡಿರುವ ಖಾಸಗೀ ಶಾಲೆ ಮತ್ತು ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ನೆರವಾಗುವ ಯಾವ ಅಂಶವೂ ಇದರಲ್ಲಿಲ್ಲ. ಇದು ನೆರವಿನ ಪ್ಯಾಕೇಜ್ ಎಂದು ಕರೆಯಲಿಕ್ಕೇ ಅನರ್ಹವಾಗಿದೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಸರ್ಕಾರ ನಿಜವಾಗಲೂ ಜನಹಿತವನ್ನು ಬಯಸುತ್ತಿದ್ದಲ್ಲಿ ಕೋವಿಡ್ ರೋಗಕ್ಕೆ ತುತ್ತಾಗಿರುವ ಎಲ್ಲಾ ಜನರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಎಲ್ಲಾ ಜನರಿಗೂ ಉಚಿತವಾಗಿ ವ್ಯಾಕ್ಸಿನ್ ಒದಗಿಸಲು ತುರ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಬಿಪಿಎಲ್ ಜನರಿಗೂ ಸಮಗ್ರ ದಿನಸಿ ಮತ್ತು ಮಾಸಿಕ 5000 ರೂಗಳ ನೆರವು ಧನ ನೀಡಬೇಕು. ಕೋವಿಡ್‌ನಿಂದ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ಆಂದೋಲನ ಒತ್ತಾಯಿಸಿದೆ.

ಅಲ್ಲದೆ ಬೆಳೆ ನಷ್ಟ ಅನುಭವಿಸಿರುವ ಹೂವು, ತರಕಾರಿ ರೈತರಿಗೆ ಎಕರೆಗೆ ಕನಿಷ್ಟ 25 ಸಾವಿರ ಪರಿಹಾರ ನೀಡಬೇಕು. ಇತರೆಲ್ಲಾ ಸಣ್ಣ ರೈತರಿಗೆ ಎಕರೆಗೆ 10,000 ನೆರವು ಧನ ನೀಡಬೇಕು. ಮೂರು ತಿಂಗಳ ಸಾಲ ಮರುಪಾವತಿ ಮುಂದೂಡುವುದು ಮಾತ್ರವಲ್ಲ,  ಮೈಕ್ರೋ ಫೈನಾನ್ಸಿನ ಸಾಲವನ್ನೂ ಒಳಗೊಂಡಂತೆ ಎಲ್ಲಾ ಸಾಲದ ಕೋರಾನಾ ಕಾಲಾವಧಿಯ ಕಂತುಗಳನ್ನು ಸರ್ಕರವೇ ಭರಿಸಿ, ಕಂತು ಮನ್ನಾ ಮಾಡಬೇಕಿದೆ. ಶಾಲಾ ಕಾಲೇಜುಗಳು ಮುಚ್ಚಿರುವುದರಿಂದ ಖಾಸಗೀ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಉಪನ್ಯಾಸಕರೂ ಸಂಕಷ್ಟದಲ್ಲಿದ್ದು ಅವರ ನೆರವಿಗೂ ಸರ್ಕಾರ ಧಾವಿಸಬೇಕಿದೆ ಎಂದು ಒತ್ತಾಯಿಸಲಾಗಿದೆ.

ಇದಕ್ಕಾಗಿ ಎಲ್ಲಾ ಕೋಟ್ಯಾಧೀಷ ರಾಜಕಾರಣಿಗಳು ಮತ್ತು ಉದ್ದಿಮೆಪತಿಗಳ ಆದಾಯದ ಮೇಲೆ ಶೇ. 5ರ ಸುಂಕವನ್ನು ವಿಧಿಸಿ ಮತ್ತು ಕಾರ್ಪೊರೇಟ್ ವಹಿವಾಟಿನ ಮೇಲೆ ಶೇ. 2ರ ಕೋರೋನಾ ಸೆಸ್ ವಿಧಿಸಿ ಸಂಪನ್ಮೂಲವನ್ನು ಕ್ರೂಢೀಕರಿಸಿ, ನಿಜವಾದ ಅರ್ಥದ ಪ್ಯಾಕೇಜಿನ ಮೂಲಕ ಜನರ ಕೈಗೆ ತಲುಪುವಂತೆ ಸರ್ಕಾರ ಮಾಡಬೇಕಿದೆ ಎಂದು ಒತ್ತಾಯಿಸಲಾಗಿದೆ.

ಈ ಕ್ರಮಗಳಿಗೆ ಸರ್ಕಾರ ಮುಂದಾಗದಿದ್ದರೆ ಕೋವಿಡ್ ಇದ್ದರೂ ಜನ ದಿಟ್ಟ ಹೋರಾಟಗಳಿಗಿಳಿಯುವು ಅನಿವಾರ್ಯವಾಗಲಿದೆ. ಜನಾಗ್ರಹ ಆಂದೋಲನ ನಿನ್ನೆ ಕರೆದಿದ್ದ ಸರ್ವ ಪಕ್ಷ ಹಾಗೂ ಸರ್ವ ಸಂಘಟನೆಗಳ ತುರ್ತು ಸಭೆಯಲ್ಲಿ ಸರ್ಕಾರ ಜನಪರ ಕ್ರಮಗಳಿಗೆ ಮುಂದಾಗದಿದ್ದರೆ ಒಗ್ಗೂಡಿ ಪ್ರತಿಭಟಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಶೀಘ್ರವೇ ಸಮಾಲೋಚನಾ ಮಂಡಳಿಯು ಸಭೆ ಸೇರಿ ಹೋರಾಟದ ರೂಪರೇಷೆಯನ್ನು ಅಂತಿಮಗೊಳಿಸಲಿದೆ ಎಂದು ಜನಾಗ್ರಹ ಆಂದೋಲನದ ಪರವಾಗಿ ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಶಸಿಕಾಂತ್ ಸೆಂದಿಲ್, ಚಾಮರಸ ಮಾಲಿ ಮಾಟೀಲ್, ಯೂಸೂಫ್ ಕನ್ನಿ, ಹೆಚ್. ಆರ್. ಬಸವಾರಾಜಪ್ಪ, ಯಾಸೀನ್ ಮಲ್ಪೆ ಮತ್ತು ನೂರ್ ಶ್ರೀಧರ್ ತಿಳಿಸಿದ್ದಾರೆ.


ಇದನ್ನೂ ಓದಿ: ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...