Homeಕರೋನಾ ತಲ್ಲಣಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

ಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಿಸಿರುವ ಪ್ಯಾಕೇಜ್ ದುಡಿಯುವ ಜನರನ್ನು
ನಿರಾಶೆಗೊಳಿಸಿರುವುದು ಮಾತ್ರವಲ್ಲ, ಅವಮಾನಿಸುವ ಪ್ಯಾಕೇಜ್ ಆಗಿದೆ ಎಂದು ಜನಾಗ್ರಹ ಆಂದೋಲನ ಆಕ್ರೋಶ ವ್ಯಕ್ತಪಡಿಸಿದೆ.

ಮಾನವ ಬಿಕ್ಕಟ್ಟನಿ ಈ ಸಂದರ್ಭದಲ್ಲಿ ಜನರಿಗೆ ಬದುಕುಳಿಯಲು ಆಸರೆಯಾಗಿರುವ ಪ್ಯಾಕೇಜ್‌ಗಾಗಿ ಜನಾಗ್ರಹವನ್ನೂ ಒಳಗೊಂಡಂತೆ ಬಹುತೇಕ ಜನಪರ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಒತ್ತಾಯಿಸುತ್ತಾ ಬರುತ್ತಿವೆ. ನೆರೆಹೊರೆಯ ರಾಜ್ಯಗಳು ಅನೇಕ ಜನಪರ ಕ್ರಮಗಳನ್ನು ಕಣ್ಣೆದುರಿಗೇ ತೆಗೆದುಕೊಳ್ಳುತ್ತಿದ್ದರೂ ರಾಜ್ಯ ಸರ್ಕಾರ ಕಿಮ್ಮೆನ್ನದೆ ಕೂತಿತ್ತು. ಜನರ ಹಾಗೂ ಜನರ ಸಂಘಟನೆಗಳ ಒತ್ತಡಕ್ಕೆ ಮಣಿದು ಕೊನೆಗೆ ಇಂದು ಮುಖ್ಯಮಂತ್ರಿಯವರು ಪ್ಯಾಕೇಜ್ ಒಂದನ್ನು ಘೋಷಿಸಿದ್ದಾರೆ. ಆದರೆ ಈ ಪ್ಯಾಕೇಜ್ ತೀವ್ರ ನಿರಾಶೆ ಮೂಡಿಸಿರುವುದು ಮಾತ್ರವಲ್ಲ, ದುಡಿಯುವ ಜನರನ್ನು ಅವಮಾನಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಸಂಘಟಿತ, ಸ್ವಯಂ ಉದ್ಯೋಗಿ ಮುಂತಾದ ಶ್ರಮಿಕ ಕುಟುಂಬಗಳಿಗೆ ಕೇವಲ 2,000 ಮತ್ತು 3,000 ರೂಪಾಯಿಗಳ ನೆರವನ್ನು ಮಾತ್ರ ಘೋಷಿಸಿದೆ. ಇಂಥ ದುಷ್ಕಾಲವನ್ನು ಎದುರಿಸಲು 2000 ಏತಕ್ಕೆ ಸಾಲುತ್ತಿದೆ ಎಂಬುದನ್ನು ಸರ್ಕಾರವೇ ಹೇಳಬೇಕಿದೆ. ಅದೂ ಸಹ ನೊಂದಣಿಯಾಗಿರುವ ಶ್ರಮಿಕರಿಗೆ ಎಂದು ಹೇಳಿರುವುದರಿಂದ ಅದು ಎಲ್ಲರಿಗೂ ತಲುಪುವುದು ಸಾಧ್ಯವೇ ಇಲ್ಲ. ಉದಾಹರಣೆಗೆ ನೇಕಾರ ಕಾರ್ಮಿಕರಿಗೆ ಗುರುತಿನ ಚೀಟಿಯನ್ನೂ ಸರ್ಕಾರ ಇದುವರೆಗೆ ನೀಡಿಲ್ಲ. ಮನೆಕೆಲಸದವರಿಗೂ ಯಾವ ನೊಂದಣಿಯೂ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದೆ.

ಅಪಾರ ನಷ್ಟ ಹೊಂದಿರುವ ಹೂವು ಮತ್ತು ತರಕಾರಿ ಬೆಳೆಯುವ ರೈತರಿಗೆ ಮಾತ್ರ 10,000 ರೂಗಳ ನೆರವನ್ನು ಘೋಷಿಸಿದೆ. ಅವರಿಗಾಗಿರುವ ನಷ್ಟದ ಮುಂದೆ ಈ ಹಣ ಏತಕ್ಕೂ ಸಾಲುವುದಿಲ್ಲ. ಅಲ್ಲದೆ ವಿಶಾಲ ರೈತಾಪಿಗಾಗಲೀ, ಕೃಷಿ ಕೂಲಿಗಳಿಗಾಗಲೀ ಯಾವುದೇ ನೆರವನ್ನು ಸರ್ಕಾರ ಘೋಷಿಸಿಲ್ಲ. ಕೆಲಸ ಕಳೆದುಕೊಂಡಿರುವ ಖಾಸಗೀ ಶಾಲೆ ಮತ್ತು ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ನೆರವಾಗುವ ಯಾವ ಅಂಶವೂ ಇದರಲ್ಲಿಲ್ಲ. ಇದು ನೆರವಿನ ಪ್ಯಾಕೇಜ್ ಎಂದು ಕರೆಯಲಿಕ್ಕೇ ಅನರ್ಹವಾಗಿದೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಸರ್ಕಾರ ನಿಜವಾಗಲೂ ಜನಹಿತವನ್ನು ಬಯಸುತ್ತಿದ್ದಲ್ಲಿ ಕೋವಿಡ್ ರೋಗಕ್ಕೆ ತುತ್ತಾಗಿರುವ ಎಲ್ಲಾ ಜನರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಎಲ್ಲಾ ಜನರಿಗೂ ಉಚಿತವಾಗಿ ವ್ಯಾಕ್ಸಿನ್ ಒದಗಿಸಲು ತುರ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಬಿಪಿಎಲ್ ಜನರಿಗೂ ಸಮಗ್ರ ದಿನಸಿ ಮತ್ತು ಮಾಸಿಕ 5000 ರೂಗಳ ನೆರವು ಧನ ನೀಡಬೇಕು. ಕೋವಿಡ್‌ನಿಂದ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ಆಂದೋಲನ ಒತ್ತಾಯಿಸಿದೆ.

ಅಲ್ಲದೆ ಬೆಳೆ ನಷ್ಟ ಅನುಭವಿಸಿರುವ ಹೂವು, ತರಕಾರಿ ರೈತರಿಗೆ ಎಕರೆಗೆ ಕನಿಷ್ಟ 25 ಸಾವಿರ ಪರಿಹಾರ ನೀಡಬೇಕು. ಇತರೆಲ್ಲಾ ಸಣ್ಣ ರೈತರಿಗೆ ಎಕರೆಗೆ 10,000 ನೆರವು ಧನ ನೀಡಬೇಕು. ಮೂರು ತಿಂಗಳ ಸಾಲ ಮರುಪಾವತಿ ಮುಂದೂಡುವುದು ಮಾತ್ರವಲ್ಲ,  ಮೈಕ್ರೋ ಫೈನಾನ್ಸಿನ ಸಾಲವನ್ನೂ ಒಳಗೊಂಡಂತೆ ಎಲ್ಲಾ ಸಾಲದ ಕೋರಾನಾ ಕಾಲಾವಧಿಯ ಕಂತುಗಳನ್ನು ಸರ್ಕರವೇ ಭರಿಸಿ, ಕಂತು ಮನ್ನಾ ಮಾಡಬೇಕಿದೆ. ಶಾಲಾ ಕಾಲೇಜುಗಳು ಮುಚ್ಚಿರುವುದರಿಂದ ಖಾಸಗೀ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಉಪನ್ಯಾಸಕರೂ ಸಂಕಷ್ಟದಲ್ಲಿದ್ದು ಅವರ ನೆರವಿಗೂ ಸರ್ಕಾರ ಧಾವಿಸಬೇಕಿದೆ ಎಂದು ಒತ್ತಾಯಿಸಲಾಗಿದೆ.

ಇದಕ್ಕಾಗಿ ಎಲ್ಲಾ ಕೋಟ್ಯಾಧೀಷ ರಾಜಕಾರಣಿಗಳು ಮತ್ತು ಉದ್ದಿಮೆಪತಿಗಳ ಆದಾಯದ ಮೇಲೆ ಶೇ. 5ರ ಸುಂಕವನ್ನು ವಿಧಿಸಿ ಮತ್ತು ಕಾರ್ಪೊರೇಟ್ ವಹಿವಾಟಿನ ಮೇಲೆ ಶೇ. 2ರ ಕೋರೋನಾ ಸೆಸ್ ವಿಧಿಸಿ ಸಂಪನ್ಮೂಲವನ್ನು ಕ್ರೂಢೀಕರಿಸಿ, ನಿಜವಾದ ಅರ್ಥದ ಪ್ಯಾಕೇಜಿನ ಮೂಲಕ ಜನರ ಕೈಗೆ ತಲುಪುವಂತೆ ಸರ್ಕಾರ ಮಾಡಬೇಕಿದೆ ಎಂದು ಒತ್ತಾಯಿಸಲಾಗಿದೆ.

ಈ ಕ್ರಮಗಳಿಗೆ ಸರ್ಕಾರ ಮುಂದಾಗದಿದ್ದರೆ ಕೋವಿಡ್ ಇದ್ದರೂ ಜನ ದಿಟ್ಟ ಹೋರಾಟಗಳಿಗಿಳಿಯುವು ಅನಿವಾರ್ಯವಾಗಲಿದೆ. ಜನಾಗ್ರಹ ಆಂದೋಲನ ನಿನ್ನೆ ಕರೆದಿದ್ದ ಸರ್ವ ಪಕ್ಷ ಹಾಗೂ ಸರ್ವ ಸಂಘಟನೆಗಳ ತುರ್ತು ಸಭೆಯಲ್ಲಿ ಸರ್ಕಾರ ಜನಪರ ಕ್ರಮಗಳಿಗೆ ಮುಂದಾಗದಿದ್ದರೆ ಒಗ್ಗೂಡಿ ಪ್ರತಿಭಟಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಶೀಘ್ರವೇ ಸಮಾಲೋಚನಾ ಮಂಡಳಿಯು ಸಭೆ ಸೇರಿ ಹೋರಾಟದ ರೂಪರೇಷೆಯನ್ನು ಅಂತಿಮಗೊಳಿಸಲಿದೆ ಎಂದು ಜನಾಗ್ರಹ ಆಂದೋಲನದ ಪರವಾಗಿ ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಶಸಿಕಾಂತ್ ಸೆಂದಿಲ್, ಚಾಮರಸ ಮಾಲಿ ಮಾಟೀಲ್, ಯೂಸೂಫ್ ಕನ್ನಿ, ಹೆಚ್. ಆರ್. ಬಸವಾರಾಜಪ್ಪ, ಯಾಸೀನ್ ಮಲ್ಪೆ ಮತ್ತು ನೂರ್ ಶ್ರೀಧರ್ ತಿಳಿಸಿದ್ದಾರೆ.


ಇದನ್ನೂ ಓದಿ: ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...