Homeಮುಖಪುಟಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಹೊಸ ಕಾಯ್ದೆ ತರಬೇಕು ಎಂದು ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ರೈತ ಹೋರಾಟ 91ನೇ ದಿನಕ್ಕೆ ಕಾಲಿಟ್ಟಿದೆ. ಈ ರೈತ ಹೋರಾಟ ಬೆಂಬಲಿಸಿ ದಕ್ಷಿಣ ಭಾರತದ ನೂರಾರು ಕಾರ್ಯಕರ್ತರು ದೆಹಲಿಯ ಟಿಕ್ರಿ ಗಡಿಯಲ್ಲಿ ಮೆರವಣಿಗೆ ನಡೆಸಿದ್ದಾರೆ. ಕರ್ನಾಟಕ ಜನಶಕ್ತಿಯ ನೇತೃತ್ವದಲ್ಲಿ 60 ಕ್ಕೂ ಹೆಚ್ಚು ಕಾರ್ಯಕರ್ತರು, ಆಂಧ್ರ ಪ್ರದೇಶದ ವಿವಿಧ ಸಂಘ ಸಂಸ್ಥೆಗಳಿಂದ 40 ಸದಸ್ಯರು, ತೆಲಂಗಾಣದಿಂದ 30 ಮತ್ತು ತಮಿಳುನಾಡಿನ ಸಂಸ್ಥೆಗಳಿಂದ 8 ಸದಸ್ಯರು ಮತ್ತು ಕೇರಳದ ಹಲವು ಸದಸ್ಯರು ದೆಹಲಿ ಹೋರಾಟದ ಭಾಗವಾಗಿದ್ದಾರೆ.

ಇಂದು ಮಧ್ಯಾಹ್ನ ಟಿಕ್ರಿ ಗಡಿಯುದ್ದಕ್ಕೂ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು, ರೈತರ ಹೋರಾಟಕ್ಕೆ ಜಯವಾಗಲಿ ಸೇರಿದಂತೆ ಕನ್ನಡದಲ್ಲಿ ಘೋಷಣೆ ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ನಾವು ದಕ್ಷಿಣ ಭಾರತದ 5 ರಾಜ್ಯಗಳಿಂದ 130 ಕ್ಕೂ ಹೆಚ್ಚು ಪ್ರತಿನಿಧಿಗಳು ನಿಮ್ಮೊಂದಿಗೆ ಸೇರಿ ಹೋರಾಡಲು ಬಂದಿದ್ದೇವೆ. ಇದು ಕೇವಲ ಪಂಜಾಬ್, ಹರಿಯಾಣ ರೈತರ ಹೋರಾಟ, ಒಂದು ಧರ್ಮದ ಹೋರಾಟ, ಖಲಿಸ್ತಾನಿಗಳ, ಅರ್ಬನ್ ನಕ್ಸಲರ ಹೋರಾಟ ಎಂದು ಬ್ರಾಂಡ್‌ ಮಾಡಿರುವುದು ಸುಳ್ಳು ಎಂದು ಸಾರಿ ಹೇಳಲು ನಾವು ಬಂದಿದ್ದೇವೆ. ಇದು ಇಡೀ ದೇಶದ ಹೋರಾಟ ಎಂಬುದನ್ನು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಬಂದಿದ್ದೇವೆ. ದೇಶದ ಎಲ್ಲಾ ರೈತರು ಮತ್ತು ಕಾರ್ಮಿಕರು ಒಂದಾಗಿದ್ದರು, ಈಗಲೂ ಒಂದಾಗಿದ್ದೇವೆ ಮತ್ತು ಮುಂದೆಯೂ ಒಂದಾಗಿರುತ್ತೇವೆ. ಸರ್ಕಾರ ಈ ಕರಾಳ ಕಾನೂನುಗಳನ್ನು ಹಿಂಪಡೆಯುವವರೆಗೂ, ಎಂಎಸ್‌ಪಿ ಜಾರಿಗೊಳಿಸುವವರೆಗೂ ಹೋರಾಡುತ್ತೇವೆ ಎಂದು ಸಾರಿ ಹೇಳಲು ಬಂದಿದ್ದೇವೆ” ಎಂದರು.

ಕಾರ್ಮಿಕ ಸಂಘಟನೆಯ ವರದರಾಜೇಂದ್ರ ಮಾತನಾಡಿ “ನಾವು ಕರ್ನಾಟಕದಲ್ಲಿ ರೈತ-ಕಾರ್ಮಿಕ-ದಲಿತ ಸಂಘಟನೆಗಳು ಒಟ್ಟು ಸೇರಿ ಐಕ್ಯ ಹೋರಾಟ ವೇದಿಕೆಯಡಿ ಕಳೆದ ಆಗಸ್ಟ್ ತಿಂಗಳಿನಿಂದಲೂ ಹೋರಾಟ ನಡೆಸುತ್ತಿದ್ದೇವೆ. ಕರ್ನಾಟಕ ಬಂದ್ ನಡೆಸಿದ್ದೇವೆ. ಆದರೆ ಗೋದಿ ಮಾಧ್ಯಮಗಳು ಅದನ್ನು ಪ್ರಸಾರ ಮಾಡುತ್ತಿಲ್ಲ. ಕರ್ನಾಟಕ ಸರ್ಕಾರ ಕೂಡ ಅತಿ ವೇಗದಲ್ಲಿ ಸುಗ್ರೀವಾಜ್ಞೆಗಳ ಮೂಲಕ ಎಪಿಎಂಸಿ ಕಾನೂನಿಗೆ ತಿದ್ದುಪಡಿ ತಂದಿದೆ. ಕೇಂದ್ರದ ಕಾನೂನುಗಳನ್ನು ಜಾರಿಗೊಳಿಸಿದೆ. ನವೆಂಬರ್ ತಿಂಗಳಿನಿಂದ ಸಂಯುಕ್ತ ಕಿಸಾನ್ ಮೋರ್ಚಾದ ಕರೆ ಮೇರೆಗೆ ಸತತ ಹೋರಾಟ ನಡೆಸುತ್ತಿದ್ದೇವೆ. ಜನವರಿ 26ರ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದೇವೆ. ಇದು ರೈತರ – ಕಾರ್ಮಿಕರ ಹೋರಾಟವಾಗಿದ್ದು ಗೆಲ್ಲುವವರೆಗೂ ನಿಲ್ಲುವುದಿಲ್ಲ” ಎಂದರು.

ಆಂಧ್ರಪ್ರದೇಶದ AIKMS ಉಪಾಧ್ಯಕ್ಷರಾದ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್, ತೆಲಂಗಾನದ ಹನುಮೇಶ್, ತಮಿಳುನಾಡು ರೈತ ಸಂಘಟನೆಯ ಅರುಣ್ ಚೌರಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ರೈತ ಹೋರಾಟದ ಸ್ಫೂರ್ತಿಗಳಾದ ಸಹಜಾನಂದ್‌ ಸರಸ್ವತಿ ಮತ್ತು ಸರ್ದಾರ್‌ ಅಜಿತ್‌ ಸಿಂಗ್‌ರ ನೆನಪಿನಲ್ಲಿ ದೆಹಲಿ ಗಡಿಗಳಲ್ಲಿ ನಡೆದ ಪಗಡಿ ಸಂಭಾಲ್‌ ದಿನದ ಆಚರಣೆಯಲ್ಲಿ ದಕ್ಷಿಣ ಭಾರತದ ತಂಡ ಭಾಗವಹಿಸಿತ್ತು.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...