Homeಮುಖಪುಟಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಹೊಸ ಕಾಯ್ದೆ ತರಬೇಕು ಎಂದು ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ರೈತ ಹೋರಾಟ 91ನೇ ದಿನಕ್ಕೆ ಕಾಲಿಟ್ಟಿದೆ. ಈ ರೈತ ಹೋರಾಟ ಬೆಂಬಲಿಸಿ ದಕ್ಷಿಣ ಭಾರತದ ನೂರಾರು ಕಾರ್ಯಕರ್ತರು ದೆಹಲಿಯ ಟಿಕ್ರಿ ಗಡಿಯಲ್ಲಿ ಮೆರವಣಿಗೆ ನಡೆಸಿದ್ದಾರೆ. ಕರ್ನಾಟಕ ಜನಶಕ್ತಿಯ ನೇತೃತ್ವದಲ್ಲಿ 60 ಕ್ಕೂ ಹೆಚ್ಚು ಕಾರ್ಯಕರ್ತರು, ಆಂಧ್ರ ಪ್ರದೇಶದ ವಿವಿಧ ಸಂಘ ಸಂಸ್ಥೆಗಳಿಂದ 40 ಸದಸ್ಯರು, ತೆಲಂಗಾಣದಿಂದ 30 ಮತ್ತು ತಮಿಳುನಾಡಿನ ಸಂಸ್ಥೆಗಳಿಂದ 8 ಸದಸ್ಯರು ಮತ್ತು ಕೇರಳದ ಹಲವು ಸದಸ್ಯರು ದೆಹಲಿ ಹೋರಾಟದ ಭಾಗವಾಗಿದ್ದಾರೆ.

ಇಂದು ಮಧ್ಯಾಹ್ನ ಟಿಕ್ರಿ ಗಡಿಯುದ್ದಕ್ಕೂ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು, ರೈತರ ಹೋರಾಟಕ್ಕೆ ಜಯವಾಗಲಿ ಸೇರಿದಂತೆ ಕನ್ನಡದಲ್ಲಿ ಘೋಷಣೆ ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ನಾವು ದಕ್ಷಿಣ ಭಾರತದ 5 ರಾಜ್ಯಗಳಿಂದ 130 ಕ್ಕೂ ಹೆಚ್ಚು ಪ್ರತಿನಿಧಿಗಳು ನಿಮ್ಮೊಂದಿಗೆ ಸೇರಿ ಹೋರಾಡಲು ಬಂದಿದ್ದೇವೆ. ಇದು ಕೇವಲ ಪಂಜಾಬ್, ಹರಿಯಾಣ ರೈತರ ಹೋರಾಟ, ಒಂದು ಧರ್ಮದ ಹೋರಾಟ, ಖಲಿಸ್ತಾನಿಗಳ, ಅರ್ಬನ್ ನಕ್ಸಲರ ಹೋರಾಟ ಎಂದು ಬ್ರಾಂಡ್‌ ಮಾಡಿರುವುದು ಸುಳ್ಳು ಎಂದು ಸಾರಿ ಹೇಳಲು ನಾವು ಬಂದಿದ್ದೇವೆ. ಇದು ಇಡೀ ದೇಶದ ಹೋರಾಟ ಎಂಬುದನ್ನು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಬಂದಿದ್ದೇವೆ. ದೇಶದ ಎಲ್ಲಾ ರೈತರು ಮತ್ತು ಕಾರ್ಮಿಕರು ಒಂದಾಗಿದ್ದರು, ಈಗಲೂ ಒಂದಾಗಿದ್ದೇವೆ ಮತ್ತು ಮುಂದೆಯೂ ಒಂದಾಗಿರುತ್ತೇವೆ. ಸರ್ಕಾರ ಈ ಕರಾಳ ಕಾನೂನುಗಳನ್ನು ಹಿಂಪಡೆಯುವವರೆಗೂ, ಎಂಎಸ್‌ಪಿ ಜಾರಿಗೊಳಿಸುವವರೆಗೂ ಹೋರಾಡುತ್ತೇವೆ ಎಂದು ಸಾರಿ ಹೇಳಲು ಬಂದಿದ್ದೇವೆ” ಎಂದರು.

ಕಾರ್ಮಿಕ ಸಂಘಟನೆಯ ವರದರಾಜೇಂದ್ರ ಮಾತನಾಡಿ “ನಾವು ಕರ್ನಾಟಕದಲ್ಲಿ ರೈತ-ಕಾರ್ಮಿಕ-ದಲಿತ ಸಂಘಟನೆಗಳು ಒಟ್ಟು ಸೇರಿ ಐಕ್ಯ ಹೋರಾಟ ವೇದಿಕೆಯಡಿ ಕಳೆದ ಆಗಸ್ಟ್ ತಿಂಗಳಿನಿಂದಲೂ ಹೋರಾಟ ನಡೆಸುತ್ತಿದ್ದೇವೆ. ಕರ್ನಾಟಕ ಬಂದ್ ನಡೆಸಿದ್ದೇವೆ. ಆದರೆ ಗೋದಿ ಮಾಧ್ಯಮಗಳು ಅದನ್ನು ಪ್ರಸಾರ ಮಾಡುತ್ತಿಲ್ಲ. ಕರ್ನಾಟಕ ಸರ್ಕಾರ ಕೂಡ ಅತಿ ವೇಗದಲ್ಲಿ ಸುಗ್ರೀವಾಜ್ಞೆಗಳ ಮೂಲಕ ಎಪಿಎಂಸಿ ಕಾನೂನಿಗೆ ತಿದ್ದುಪಡಿ ತಂದಿದೆ. ಕೇಂದ್ರದ ಕಾನೂನುಗಳನ್ನು ಜಾರಿಗೊಳಿಸಿದೆ. ನವೆಂಬರ್ ತಿಂಗಳಿನಿಂದ ಸಂಯುಕ್ತ ಕಿಸಾನ್ ಮೋರ್ಚಾದ ಕರೆ ಮೇರೆಗೆ ಸತತ ಹೋರಾಟ ನಡೆಸುತ್ತಿದ್ದೇವೆ. ಜನವರಿ 26ರ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದೇವೆ. ಇದು ರೈತರ – ಕಾರ್ಮಿಕರ ಹೋರಾಟವಾಗಿದ್ದು ಗೆಲ್ಲುವವರೆಗೂ ನಿಲ್ಲುವುದಿಲ್ಲ” ಎಂದರು.

ಆಂಧ್ರಪ್ರದೇಶದ AIKMS ಉಪಾಧ್ಯಕ್ಷರಾದ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್, ತೆಲಂಗಾನದ ಹನುಮೇಶ್, ತಮಿಳುನಾಡು ರೈತ ಸಂಘಟನೆಯ ಅರುಣ್ ಚೌರಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ರೈತ ಹೋರಾಟದ ಸ್ಫೂರ್ತಿಗಳಾದ ಸಹಜಾನಂದ್‌ ಸರಸ್ವತಿ ಮತ್ತು ಸರ್ದಾರ್‌ ಅಜಿತ್‌ ಸಿಂಗ್‌ರ ನೆನಪಿನಲ್ಲಿ ದೆಹಲಿ ಗಡಿಗಳಲ್ಲಿ ನಡೆದ ಪಗಡಿ ಸಂಭಾಲ್‌ ದಿನದ ಆಚರಣೆಯಲ್ಲಿ ದಕ್ಷಿಣ ಭಾರತದ ತಂಡ ಭಾಗವಹಿಸಿತ್ತು.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...