Homeಮುಖಪುಟಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಹೊಸ ಕಾಯ್ದೆ ತರಬೇಕು ಎಂದು ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ರೈತ ಹೋರಾಟ 91ನೇ ದಿನಕ್ಕೆ ಕಾಲಿಟ್ಟಿದೆ. ಈ ರೈತ ಹೋರಾಟ ಬೆಂಬಲಿಸಿ ದಕ್ಷಿಣ ಭಾರತದ ನೂರಾರು ಕಾರ್ಯಕರ್ತರು ದೆಹಲಿಯ ಟಿಕ್ರಿ ಗಡಿಯಲ್ಲಿ ಮೆರವಣಿಗೆ ನಡೆಸಿದ್ದಾರೆ. ಕರ್ನಾಟಕ ಜನಶಕ್ತಿಯ ನೇತೃತ್ವದಲ್ಲಿ 60 ಕ್ಕೂ ಹೆಚ್ಚು ಕಾರ್ಯಕರ್ತರು, ಆಂಧ್ರ ಪ್ರದೇಶದ ವಿವಿಧ ಸಂಘ ಸಂಸ್ಥೆಗಳಿಂದ 40 ಸದಸ್ಯರು, ತೆಲಂಗಾಣದಿಂದ 30 ಮತ್ತು ತಮಿಳುನಾಡಿನ ಸಂಸ್ಥೆಗಳಿಂದ 8 ಸದಸ್ಯರು ಮತ್ತು ಕೇರಳದ ಹಲವು ಸದಸ್ಯರು ದೆಹಲಿ ಹೋರಾಟದ ಭಾಗವಾಗಿದ್ದಾರೆ.

ಇಂದು ಮಧ್ಯಾಹ್ನ ಟಿಕ್ರಿ ಗಡಿಯುದ್ದಕ್ಕೂ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು, ರೈತರ ಹೋರಾಟಕ್ಕೆ ಜಯವಾಗಲಿ ಸೇರಿದಂತೆ ಕನ್ನಡದಲ್ಲಿ ಘೋಷಣೆ ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ನಾವು ದಕ್ಷಿಣ ಭಾರತದ 5 ರಾಜ್ಯಗಳಿಂದ 130 ಕ್ಕೂ ಹೆಚ್ಚು ಪ್ರತಿನಿಧಿಗಳು ನಿಮ್ಮೊಂದಿಗೆ ಸೇರಿ ಹೋರಾಡಲು ಬಂದಿದ್ದೇವೆ. ಇದು ಕೇವಲ ಪಂಜಾಬ್, ಹರಿಯಾಣ ರೈತರ ಹೋರಾಟ, ಒಂದು ಧರ್ಮದ ಹೋರಾಟ, ಖಲಿಸ್ತಾನಿಗಳ, ಅರ್ಬನ್ ನಕ್ಸಲರ ಹೋರಾಟ ಎಂದು ಬ್ರಾಂಡ್‌ ಮಾಡಿರುವುದು ಸುಳ್ಳು ಎಂದು ಸಾರಿ ಹೇಳಲು ನಾವು ಬಂದಿದ್ದೇವೆ. ಇದು ಇಡೀ ದೇಶದ ಹೋರಾಟ ಎಂಬುದನ್ನು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಬಂದಿದ್ದೇವೆ. ದೇಶದ ಎಲ್ಲಾ ರೈತರು ಮತ್ತು ಕಾರ್ಮಿಕರು ಒಂದಾಗಿದ್ದರು, ಈಗಲೂ ಒಂದಾಗಿದ್ದೇವೆ ಮತ್ತು ಮುಂದೆಯೂ ಒಂದಾಗಿರುತ್ತೇವೆ. ಸರ್ಕಾರ ಈ ಕರಾಳ ಕಾನೂನುಗಳನ್ನು ಹಿಂಪಡೆಯುವವರೆಗೂ, ಎಂಎಸ್‌ಪಿ ಜಾರಿಗೊಳಿಸುವವರೆಗೂ ಹೋರಾಡುತ್ತೇವೆ ಎಂದು ಸಾರಿ ಹೇಳಲು ಬಂದಿದ್ದೇವೆ” ಎಂದರು.

ಕಾರ್ಮಿಕ ಸಂಘಟನೆಯ ವರದರಾಜೇಂದ್ರ ಮಾತನಾಡಿ “ನಾವು ಕರ್ನಾಟಕದಲ್ಲಿ ರೈತ-ಕಾರ್ಮಿಕ-ದಲಿತ ಸಂಘಟನೆಗಳು ಒಟ್ಟು ಸೇರಿ ಐಕ್ಯ ಹೋರಾಟ ವೇದಿಕೆಯಡಿ ಕಳೆದ ಆಗಸ್ಟ್ ತಿಂಗಳಿನಿಂದಲೂ ಹೋರಾಟ ನಡೆಸುತ್ತಿದ್ದೇವೆ. ಕರ್ನಾಟಕ ಬಂದ್ ನಡೆಸಿದ್ದೇವೆ. ಆದರೆ ಗೋದಿ ಮಾಧ್ಯಮಗಳು ಅದನ್ನು ಪ್ರಸಾರ ಮಾಡುತ್ತಿಲ್ಲ. ಕರ್ನಾಟಕ ಸರ್ಕಾರ ಕೂಡ ಅತಿ ವೇಗದಲ್ಲಿ ಸುಗ್ರೀವಾಜ್ಞೆಗಳ ಮೂಲಕ ಎಪಿಎಂಸಿ ಕಾನೂನಿಗೆ ತಿದ್ದುಪಡಿ ತಂದಿದೆ. ಕೇಂದ್ರದ ಕಾನೂನುಗಳನ್ನು ಜಾರಿಗೊಳಿಸಿದೆ. ನವೆಂಬರ್ ತಿಂಗಳಿನಿಂದ ಸಂಯುಕ್ತ ಕಿಸಾನ್ ಮೋರ್ಚಾದ ಕರೆ ಮೇರೆಗೆ ಸತತ ಹೋರಾಟ ನಡೆಸುತ್ತಿದ್ದೇವೆ. ಜನವರಿ 26ರ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದೇವೆ. ಇದು ರೈತರ – ಕಾರ್ಮಿಕರ ಹೋರಾಟವಾಗಿದ್ದು ಗೆಲ್ಲುವವರೆಗೂ ನಿಲ್ಲುವುದಿಲ್ಲ” ಎಂದರು.

ಆಂಧ್ರಪ್ರದೇಶದ AIKMS ಉಪಾಧ್ಯಕ್ಷರಾದ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್, ತೆಲಂಗಾನದ ಹನುಮೇಶ್, ತಮಿಳುನಾಡು ರೈತ ಸಂಘಟನೆಯ ಅರುಣ್ ಚೌರಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ರೈತ ಹೋರಾಟದ ಸ್ಫೂರ್ತಿಗಳಾದ ಸಹಜಾನಂದ್‌ ಸರಸ್ವತಿ ಮತ್ತು ಸರ್ದಾರ್‌ ಅಜಿತ್‌ ಸಿಂಗ್‌ರ ನೆನಪಿನಲ್ಲಿ ದೆಹಲಿ ಗಡಿಗಳಲ್ಲಿ ನಡೆದ ಪಗಡಿ ಸಂಭಾಲ್‌ ದಿನದ ಆಚರಣೆಯಲ್ಲಿ ದಕ್ಷಿಣ ಭಾರತದ ತಂಡ ಭಾಗವಹಿಸಿತ್ತು.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...