Homeಮುಖಪುಟಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಹೊಸ ಕಾಯ್ದೆ ತರಬೇಕು ಎಂದು ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ರೈತ ಹೋರಾಟ 91ನೇ ದಿನಕ್ಕೆ ಕಾಲಿಟ್ಟಿದೆ. ಈ ರೈತ ಹೋರಾಟ ಬೆಂಬಲಿಸಿ ದಕ್ಷಿಣ ಭಾರತದ ನೂರಾರು ಕಾರ್ಯಕರ್ತರು ದೆಹಲಿಯ ಟಿಕ್ರಿ ಗಡಿಯಲ್ಲಿ ಮೆರವಣಿಗೆ ನಡೆಸಿದ್ದಾರೆ. ಕರ್ನಾಟಕ ಜನಶಕ್ತಿಯ ನೇತೃತ್ವದಲ್ಲಿ 60 ಕ್ಕೂ ಹೆಚ್ಚು ಕಾರ್ಯಕರ್ತರು, ಆಂಧ್ರ ಪ್ರದೇಶದ ವಿವಿಧ ಸಂಘ ಸಂಸ್ಥೆಗಳಿಂದ 40 ಸದಸ್ಯರು, ತೆಲಂಗಾಣದಿಂದ 30 ಮತ್ತು ತಮಿಳುನಾಡಿನ ಸಂಸ್ಥೆಗಳಿಂದ 8 ಸದಸ್ಯರು ಮತ್ತು ಕೇರಳದ ಹಲವು ಸದಸ್ಯರು ದೆಹಲಿ ಹೋರಾಟದ ಭಾಗವಾಗಿದ್ದಾರೆ.

ಇಂದು ಮಧ್ಯಾಹ್ನ ಟಿಕ್ರಿ ಗಡಿಯುದ್ದಕ್ಕೂ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು, ರೈತರ ಹೋರಾಟಕ್ಕೆ ಜಯವಾಗಲಿ ಸೇರಿದಂತೆ ಕನ್ನಡದಲ್ಲಿ ಘೋಷಣೆ ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ನಾವು ದಕ್ಷಿಣ ಭಾರತದ 5 ರಾಜ್ಯಗಳಿಂದ 130 ಕ್ಕೂ ಹೆಚ್ಚು ಪ್ರತಿನಿಧಿಗಳು ನಿಮ್ಮೊಂದಿಗೆ ಸೇರಿ ಹೋರಾಡಲು ಬಂದಿದ್ದೇವೆ. ಇದು ಕೇವಲ ಪಂಜಾಬ್, ಹರಿಯಾಣ ರೈತರ ಹೋರಾಟ, ಒಂದು ಧರ್ಮದ ಹೋರಾಟ, ಖಲಿಸ್ತಾನಿಗಳ, ಅರ್ಬನ್ ನಕ್ಸಲರ ಹೋರಾಟ ಎಂದು ಬ್ರಾಂಡ್‌ ಮಾಡಿರುವುದು ಸುಳ್ಳು ಎಂದು ಸಾರಿ ಹೇಳಲು ನಾವು ಬಂದಿದ್ದೇವೆ. ಇದು ಇಡೀ ದೇಶದ ಹೋರಾಟ ಎಂಬುದನ್ನು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಬಂದಿದ್ದೇವೆ. ದೇಶದ ಎಲ್ಲಾ ರೈತರು ಮತ್ತು ಕಾರ್ಮಿಕರು ಒಂದಾಗಿದ್ದರು, ಈಗಲೂ ಒಂದಾಗಿದ್ದೇವೆ ಮತ್ತು ಮುಂದೆಯೂ ಒಂದಾಗಿರುತ್ತೇವೆ. ಸರ್ಕಾರ ಈ ಕರಾಳ ಕಾನೂನುಗಳನ್ನು ಹಿಂಪಡೆಯುವವರೆಗೂ, ಎಂಎಸ್‌ಪಿ ಜಾರಿಗೊಳಿಸುವವರೆಗೂ ಹೋರಾಡುತ್ತೇವೆ ಎಂದು ಸಾರಿ ಹೇಳಲು ಬಂದಿದ್ದೇವೆ” ಎಂದರು.

ಕಾರ್ಮಿಕ ಸಂಘಟನೆಯ ವರದರಾಜೇಂದ್ರ ಮಾತನಾಡಿ “ನಾವು ಕರ್ನಾಟಕದಲ್ಲಿ ರೈತ-ಕಾರ್ಮಿಕ-ದಲಿತ ಸಂಘಟನೆಗಳು ಒಟ್ಟು ಸೇರಿ ಐಕ್ಯ ಹೋರಾಟ ವೇದಿಕೆಯಡಿ ಕಳೆದ ಆಗಸ್ಟ್ ತಿಂಗಳಿನಿಂದಲೂ ಹೋರಾಟ ನಡೆಸುತ್ತಿದ್ದೇವೆ. ಕರ್ನಾಟಕ ಬಂದ್ ನಡೆಸಿದ್ದೇವೆ. ಆದರೆ ಗೋದಿ ಮಾಧ್ಯಮಗಳು ಅದನ್ನು ಪ್ರಸಾರ ಮಾಡುತ್ತಿಲ್ಲ. ಕರ್ನಾಟಕ ಸರ್ಕಾರ ಕೂಡ ಅತಿ ವೇಗದಲ್ಲಿ ಸುಗ್ರೀವಾಜ್ಞೆಗಳ ಮೂಲಕ ಎಪಿಎಂಸಿ ಕಾನೂನಿಗೆ ತಿದ್ದುಪಡಿ ತಂದಿದೆ. ಕೇಂದ್ರದ ಕಾನೂನುಗಳನ್ನು ಜಾರಿಗೊಳಿಸಿದೆ. ನವೆಂಬರ್ ತಿಂಗಳಿನಿಂದ ಸಂಯುಕ್ತ ಕಿಸಾನ್ ಮೋರ್ಚಾದ ಕರೆ ಮೇರೆಗೆ ಸತತ ಹೋರಾಟ ನಡೆಸುತ್ತಿದ್ದೇವೆ. ಜನವರಿ 26ರ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದೇವೆ. ಇದು ರೈತರ – ಕಾರ್ಮಿಕರ ಹೋರಾಟವಾಗಿದ್ದು ಗೆಲ್ಲುವವರೆಗೂ ನಿಲ್ಲುವುದಿಲ್ಲ” ಎಂದರು.

ಆಂಧ್ರಪ್ರದೇಶದ AIKMS ಉಪಾಧ್ಯಕ್ಷರಾದ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್, ತೆಲಂಗಾನದ ಹನುಮೇಶ್, ತಮಿಳುನಾಡು ರೈತ ಸಂಘಟನೆಯ ಅರುಣ್ ಚೌರಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ರೈತ ಹೋರಾಟದ ಸ್ಫೂರ್ತಿಗಳಾದ ಸಹಜಾನಂದ್‌ ಸರಸ್ವತಿ ಮತ್ತು ಸರ್ದಾರ್‌ ಅಜಿತ್‌ ಸಿಂಗ್‌ರ ನೆನಪಿನಲ್ಲಿ ದೆಹಲಿ ಗಡಿಗಳಲ್ಲಿ ನಡೆದ ಪಗಡಿ ಸಂಭಾಲ್‌ ದಿನದ ಆಚರಣೆಯಲ್ಲಿ ದಕ್ಷಿಣ ಭಾರತದ ತಂಡ ಭಾಗವಹಿಸಿತ್ತು.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...