Homeಕರ್ನಾಟಕ‘ಯಾರಿಂದಲೊ ಡೀಲ್‌ ತೆಗೆದುಕೊಂಡು ನನ್ನ ಮುಗಿಸಲು ಮಾಡಿದ ತಂತ್ರ’: ಪವರ್‌ ಟಿವಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್‌...

‘ಯಾರಿಂದಲೊ ಡೀಲ್‌ ತೆಗೆದುಕೊಂಡು ನನ್ನ ಮುಗಿಸಲು ಮಾಡಿದ ತಂತ್ರ’: ಪವರ್‌ ಟಿವಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್‌ ಆರೋಪ

- Advertisement -
- Advertisement -

ಕೆಎಸ್‌ಆರ್‌‌ಟಿಸಿ ನೌಕರರ ಹೋರಾಟ ಮತ್ತು ರೈತ ಹೋರಾಟದ ವಿಚಾರದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್‌‌ ಕೋಟಿ ಕೋಟಿ ಡೀಲ್ ನಡೆಸಿದಿದ್ದಾರೆ ಎಂದು ಕನ್ನಡದ ಸುದ್ದಿ ವಾಹಿನಿ ಪವರ್‌ ಟಿವಿ ಆರೋಪಿಸಿದ್ದು, ಈ ಬಗ್ಗೆ ಸುದ್ದಿ ಪ್ರಸಾರ ಮಾಡಿದೆ. ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು, ಇದು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವ ಕೃತ್ಯ. ನಾನು ಭ್ರಷ್ಟಾಚಾರದ ವಿರುದ್ಧ ಮಾತನಾಡುವುದಕ್ಕೆ ನನ್ನನ್ನು ಮುಗಿಸಬೇಕು ಎಂದು ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಎಂದು ಪವರ್‌ ಟಿವಿ ವಿರುದ್ದ ಶನಿವಾರ ಆರೋಪ ವ್ಯಕ್ತಪಡಿಸಿದ್ದಾರೆ.

ತಮ್ಮ ಮೇಲಿನ ಡೀಲ್ ಆರೋಪದ ವಿಚಾರವಾಗಿ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವರು,“ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುವವನಿಗೆ ನೈತಿಕತೆ ಇರಬೇಕು, ಮೊದಲು ಅವನು ಭ್ರಷ್ಟಾಚಾರ ಮುಕ್ತನಾಗಿರಬೇಕು. ಅವನೇ ಭ್ರಷ್ಟಾಚಾರ ಮಾಡಿ, ನಮ್ಮನ್ನು ಭ್ರಷ್ಟರು ಎಂದರೆ ಹೇಗೆ? ಅವರು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವಂತಹ ಒಂದು ಡೀಲ್ ಅದು” ಎಂದು ಅವರು ಪವರ್‌ ಟಿವಿಯ ವಿರುದ್ಧವೇ ಆರೋಪ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೋಡಿಹಳ್ಳಿ ಚಂದ್ರಶೇಖರ್‌ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ, ಹಾಗಾಗಿ ಅವರನ್ನು ಮುಗಿಸಬೇಕು ಎಂದು, ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಅದು. ಏಳೆಂಟು ತಿಂಗಳುಗಳ ಕಾಲ ನನ್ನ ಸಂಪರ್ಕ ಮಾಡಿ, ಕಟ್‌ ಆಂಡ್‌ ಪೇಸ್ಟ್‌ ಮಾಡಿ ಅದನ್ನು ಸ್ಟೋರಿ ಮಾಡಿದ್ದಾರೆ” ಎಂದು ಕೋಡಿಹಳ್ಳಿ ಹೇಳಿದ್ದಾರೆ.

ಇದನ್ನೂ ಓದಿ: ಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

‘ಇವನು ಭ್ರಷ್ಟ, ಇವನು ಭ್ರಷ್ಟ’ ಎಂದು ಹೇಳುವ ಅವನು ಲೋಫರ್‌‌. ಅವರೇನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯೆ? ಈ ದೇಶದ ಪ್ರಧಾನ ಮಂತ್ರಿಯೆ? ಎಂದು ಅವರು ಪ್ರಶ್ನಿಸಿದ್ದಾರೆ.

‘ಇದು ಎಲ್ಲವೂ ನಡೆದಿರುವುದು ಸತ್ಯ, ಆದರೆ ಹಣಕಾಸು ವರ್ಗಾವಣೆ ನಡೆದಿಲ್ಲ’ ಎಂದು ನನ್ನ ವಿರುದ್ಧ ಮಾಡಿರುವ ಕಾರ್ಯಕ್ರಮದ ಎರಡನೇ ದಿನ ಸಂಜೆಗೆ ಹೇಳುತ್ತಾರೆ. ನನಗೆ ಸಿಂಗಪೂರ್‌, ಮುಂಬೈ, ದುಬೈನಲ್ಲಿ ಅಕೌಂಟ್‌‌ ಇದೆ; 35 ಕೋಟಿ, 3 ಸಾವಿರ ಕೋಟಿ ವಿಚಾರವೆಲ್ಲಾ ಮಾತನಾಡಿ ಹಣವರ್ಗಾವಣೆ ಆಗಿಲ್ಲ ಎಂದರೆ ಏನರ್ಥ ಅದು? ಮತ್ತೆ ಯಾಕೆ ಇಷ್ಟೆಲ್ಲಾ ಹೇಳಿದ್ದಾರೆ? ಹಾಗಾಗಿ ಈ ವಿಚಾರ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದೇನೆ ಎಂದು ಅವರು ನಾನುಗೌರಿ.ಕಾಂ ಜೊತೆಗೆ ಹೇಳಿದ್ದಾರೆ.

ರೈತ ಮುಖಂಡರುಗಳು ಕೂಡಾ ನಿಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ನಿಮ್ಮ ವಿರುದ್ದ ತನಿಖೆಗೆ ಆಗ್ರಹಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈಗ ಇರತಕ್ಕಂತಹ ರೈತ ಸಂಘಟನೆಗಳಲ್ಲಿ ಬಲಿಷ್ಠವಾದ ಸಂಘಟನೆ ನಮ್ಮದು. ಹಾಗಾಗಿ ಸಣ್ಣ ಪುಟ್ಟ ಸಂಘಟನೆಗಳೆಲ್ಲವೂ ಕೂಡಾ ನಮ್ಮ ಮೇಲೆ ಕಾಮೆಂಟ್ ಮಾಡುತ್ತಾರೆ. ಅದಕ್ಕೆ ಏನು ಮಾಡಕ್ಕೆ ಆಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

“ಇಂತಹ ಸಂದರ್ಭದಲ್ಲಿ ಕುಮಾರಸ್ವಾಮಿ ಅಂತವರು ಗುಂಪು ಕಟ್ಟಿ ನಮ್ಮ ಮೇಲೆ ಹಲ್ಲೆ ಮಾಡುತ್ತಿರುವಾಗ ಎಲ್ಲಾ ರೈತ ಸಂಘಟನೆಗಳು ನಮ್ಮ ಬೆಂಬಲಕ್ಕೆ ಇರಬೇಕಿತ್ತು. ಆದರೆ ಅವರೆಲ್ಲರೂ ಕೂಡಾ ಯಾವುದೋ ಪಕ್ಷದ ಕಾರ್ಯಕರ್ತರಾಗಿ ಹಾಗೂ ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರಾಗಿ ಇರುವ ಕಾರಣಕ್ಕೆ ಎಲ್ಲರೂ ನಮ್ಮನ್ನು ಟೀಕೆ ಮಾಡುವುದಕ್ಕೆ ಶುರು ಮಾಡಿದ್ದಾರೆ” ಎಂದು ಕೋಡಿಹಳ್ಳಿ ಚಂದ್ರಶೇಖರ್ ಅವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...