Homeಕರ್ನಾಟಕ‘ಯಾರಿಂದಲೊ ಡೀಲ್‌ ತೆಗೆದುಕೊಂಡು ನನ್ನ ಮುಗಿಸಲು ಮಾಡಿದ ತಂತ್ರ’: ಪವರ್‌ ಟಿವಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್‌...

‘ಯಾರಿಂದಲೊ ಡೀಲ್‌ ತೆಗೆದುಕೊಂಡು ನನ್ನ ಮುಗಿಸಲು ಮಾಡಿದ ತಂತ್ರ’: ಪವರ್‌ ಟಿವಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್‌ ಆರೋಪ

- Advertisement -
- Advertisement -

ಕೆಎಸ್‌ಆರ್‌‌ಟಿಸಿ ನೌಕರರ ಹೋರಾಟ ಮತ್ತು ರೈತ ಹೋರಾಟದ ವಿಚಾರದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್‌‌ ಕೋಟಿ ಕೋಟಿ ಡೀಲ್ ನಡೆಸಿದಿದ್ದಾರೆ ಎಂದು ಕನ್ನಡದ ಸುದ್ದಿ ವಾಹಿನಿ ಪವರ್‌ ಟಿವಿ ಆರೋಪಿಸಿದ್ದು, ಈ ಬಗ್ಗೆ ಸುದ್ದಿ ಪ್ರಸಾರ ಮಾಡಿದೆ. ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು, ಇದು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವ ಕೃತ್ಯ. ನಾನು ಭ್ರಷ್ಟಾಚಾರದ ವಿರುದ್ಧ ಮಾತನಾಡುವುದಕ್ಕೆ ನನ್ನನ್ನು ಮುಗಿಸಬೇಕು ಎಂದು ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಎಂದು ಪವರ್‌ ಟಿವಿ ವಿರುದ್ದ ಶನಿವಾರ ಆರೋಪ ವ್ಯಕ್ತಪಡಿಸಿದ್ದಾರೆ.

ತಮ್ಮ ಮೇಲಿನ ಡೀಲ್ ಆರೋಪದ ವಿಚಾರವಾಗಿ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವರು,“ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುವವನಿಗೆ ನೈತಿಕತೆ ಇರಬೇಕು, ಮೊದಲು ಅವನು ಭ್ರಷ್ಟಾಚಾರ ಮುಕ್ತನಾಗಿರಬೇಕು. ಅವನೇ ಭ್ರಷ್ಟಾಚಾರ ಮಾಡಿ, ನಮ್ಮನ್ನು ಭ್ರಷ್ಟರು ಎಂದರೆ ಹೇಗೆ? ಅವರು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವಂತಹ ಒಂದು ಡೀಲ್ ಅದು” ಎಂದು ಅವರು ಪವರ್‌ ಟಿವಿಯ ವಿರುದ್ಧವೇ ಆರೋಪ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೋಡಿಹಳ್ಳಿ ಚಂದ್ರಶೇಖರ್‌ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ, ಹಾಗಾಗಿ ಅವರನ್ನು ಮುಗಿಸಬೇಕು ಎಂದು, ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಅದು. ಏಳೆಂಟು ತಿಂಗಳುಗಳ ಕಾಲ ನನ್ನ ಸಂಪರ್ಕ ಮಾಡಿ, ಕಟ್‌ ಆಂಡ್‌ ಪೇಸ್ಟ್‌ ಮಾಡಿ ಅದನ್ನು ಸ್ಟೋರಿ ಮಾಡಿದ್ದಾರೆ” ಎಂದು ಕೋಡಿಹಳ್ಳಿ ಹೇಳಿದ್ದಾರೆ.

ಇದನ್ನೂ ಓದಿ: ಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

‘ಇವನು ಭ್ರಷ್ಟ, ಇವನು ಭ್ರಷ್ಟ’ ಎಂದು ಹೇಳುವ ಅವನು ಲೋಫರ್‌‌. ಅವರೇನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯೆ? ಈ ದೇಶದ ಪ್ರಧಾನ ಮಂತ್ರಿಯೆ? ಎಂದು ಅವರು ಪ್ರಶ್ನಿಸಿದ್ದಾರೆ.

‘ಇದು ಎಲ್ಲವೂ ನಡೆದಿರುವುದು ಸತ್ಯ, ಆದರೆ ಹಣಕಾಸು ವರ್ಗಾವಣೆ ನಡೆದಿಲ್ಲ’ ಎಂದು ನನ್ನ ವಿರುದ್ಧ ಮಾಡಿರುವ ಕಾರ್ಯಕ್ರಮದ ಎರಡನೇ ದಿನ ಸಂಜೆಗೆ ಹೇಳುತ್ತಾರೆ. ನನಗೆ ಸಿಂಗಪೂರ್‌, ಮುಂಬೈ, ದುಬೈನಲ್ಲಿ ಅಕೌಂಟ್‌‌ ಇದೆ; 35 ಕೋಟಿ, 3 ಸಾವಿರ ಕೋಟಿ ವಿಚಾರವೆಲ್ಲಾ ಮಾತನಾಡಿ ಹಣವರ್ಗಾವಣೆ ಆಗಿಲ್ಲ ಎಂದರೆ ಏನರ್ಥ ಅದು? ಮತ್ತೆ ಯಾಕೆ ಇಷ್ಟೆಲ್ಲಾ ಹೇಳಿದ್ದಾರೆ? ಹಾಗಾಗಿ ಈ ವಿಚಾರ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದೇನೆ ಎಂದು ಅವರು ನಾನುಗೌರಿ.ಕಾಂ ಜೊತೆಗೆ ಹೇಳಿದ್ದಾರೆ.

ರೈತ ಮುಖಂಡರುಗಳು ಕೂಡಾ ನಿಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ನಿಮ್ಮ ವಿರುದ್ದ ತನಿಖೆಗೆ ಆಗ್ರಹಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈಗ ಇರತಕ್ಕಂತಹ ರೈತ ಸಂಘಟನೆಗಳಲ್ಲಿ ಬಲಿಷ್ಠವಾದ ಸಂಘಟನೆ ನಮ್ಮದು. ಹಾಗಾಗಿ ಸಣ್ಣ ಪುಟ್ಟ ಸಂಘಟನೆಗಳೆಲ್ಲವೂ ಕೂಡಾ ನಮ್ಮ ಮೇಲೆ ಕಾಮೆಂಟ್ ಮಾಡುತ್ತಾರೆ. ಅದಕ್ಕೆ ಏನು ಮಾಡಕ್ಕೆ ಆಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

“ಇಂತಹ ಸಂದರ್ಭದಲ್ಲಿ ಕುಮಾರಸ್ವಾಮಿ ಅಂತವರು ಗುಂಪು ಕಟ್ಟಿ ನಮ್ಮ ಮೇಲೆ ಹಲ್ಲೆ ಮಾಡುತ್ತಿರುವಾಗ ಎಲ್ಲಾ ರೈತ ಸಂಘಟನೆಗಳು ನಮ್ಮ ಬೆಂಬಲಕ್ಕೆ ಇರಬೇಕಿತ್ತು. ಆದರೆ ಅವರೆಲ್ಲರೂ ಕೂಡಾ ಯಾವುದೋ ಪಕ್ಷದ ಕಾರ್ಯಕರ್ತರಾಗಿ ಹಾಗೂ ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರಾಗಿ ಇರುವ ಕಾರಣಕ್ಕೆ ಎಲ್ಲರೂ ನಮ್ಮನ್ನು ಟೀಕೆ ಮಾಡುವುದಕ್ಕೆ ಶುರು ಮಾಡಿದ್ದಾರೆ” ಎಂದು ಕೋಡಿಹಳ್ಳಿ ಚಂದ್ರಶೇಖರ್ ಅವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...