Homeಕರ್ನಾಟಕ‘ಯಾರಿಂದಲೊ ಡೀಲ್‌ ತೆಗೆದುಕೊಂಡು ನನ್ನ ಮುಗಿಸಲು ಮಾಡಿದ ತಂತ್ರ’: ಪವರ್‌ ಟಿವಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್‌...

‘ಯಾರಿಂದಲೊ ಡೀಲ್‌ ತೆಗೆದುಕೊಂಡು ನನ್ನ ಮುಗಿಸಲು ಮಾಡಿದ ತಂತ್ರ’: ಪವರ್‌ ಟಿವಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್‌ ಆರೋಪ

- Advertisement -
- Advertisement -

ಕೆಎಸ್‌ಆರ್‌‌ಟಿಸಿ ನೌಕರರ ಹೋರಾಟ ಮತ್ತು ರೈತ ಹೋರಾಟದ ವಿಚಾರದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್‌‌ ಕೋಟಿ ಕೋಟಿ ಡೀಲ್ ನಡೆಸಿದಿದ್ದಾರೆ ಎಂದು ಕನ್ನಡದ ಸುದ್ದಿ ವಾಹಿನಿ ಪವರ್‌ ಟಿವಿ ಆರೋಪಿಸಿದ್ದು, ಈ ಬಗ್ಗೆ ಸುದ್ದಿ ಪ್ರಸಾರ ಮಾಡಿದೆ. ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು, ಇದು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವ ಕೃತ್ಯ. ನಾನು ಭ್ರಷ್ಟಾಚಾರದ ವಿರುದ್ಧ ಮಾತನಾಡುವುದಕ್ಕೆ ನನ್ನನ್ನು ಮುಗಿಸಬೇಕು ಎಂದು ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಎಂದು ಪವರ್‌ ಟಿವಿ ವಿರುದ್ದ ಶನಿವಾರ ಆರೋಪ ವ್ಯಕ್ತಪಡಿಸಿದ್ದಾರೆ.

ತಮ್ಮ ಮೇಲಿನ ಡೀಲ್ ಆರೋಪದ ವಿಚಾರವಾಗಿ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವರು,“ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುವವನಿಗೆ ನೈತಿಕತೆ ಇರಬೇಕು, ಮೊದಲು ಅವನು ಭ್ರಷ್ಟಾಚಾರ ಮುಕ್ತನಾಗಿರಬೇಕು. ಅವನೇ ಭ್ರಷ್ಟಾಚಾರ ಮಾಡಿ, ನಮ್ಮನ್ನು ಭ್ರಷ್ಟರು ಎಂದರೆ ಹೇಗೆ? ಅವರು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವಂತಹ ಒಂದು ಡೀಲ್ ಅದು” ಎಂದು ಅವರು ಪವರ್‌ ಟಿವಿಯ ವಿರುದ್ಧವೇ ಆರೋಪ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೋಡಿಹಳ್ಳಿ ಚಂದ್ರಶೇಖರ್‌ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ, ಹಾಗಾಗಿ ಅವರನ್ನು ಮುಗಿಸಬೇಕು ಎಂದು, ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಅದು. ಏಳೆಂಟು ತಿಂಗಳುಗಳ ಕಾಲ ನನ್ನ ಸಂಪರ್ಕ ಮಾಡಿ, ಕಟ್‌ ಆಂಡ್‌ ಪೇಸ್ಟ್‌ ಮಾಡಿ ಅದನ್ನು ಸ್ಟೋರಿ ಮಾಡಿದ್ದಾರೆ” ಎಂದು ಕೋಡಿಹಳ್ಳಿ ಹೇಳಿದ್ದಾರೆ.

ಇದನ್ನೂ ಓದಿ: ಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

‘ಇವನು ಭ್ರಷ್ಟ, ಇವನು ಭ್ರಷ್ಟ’ ಎಂದು ಹೇಳುವ ಅವನು ಲೋಫರ್‌‌. ಅವರೇನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯೆ? ಈ ದೇಶದ ಪ್ರಧಾನ ಮಂತ್ರಿಯೆ? ಎಂದು ಅವರು ಪ್ರಶ್ನಿಸಿದ್ದಾರೆ.

‘ಇದು ಎಲ್ಲವೂ ನಡೆದಿರುವುದು ಸತ್ಯ, ಆದರೆ ಹಣಕಾಸು ವರ್ಗಾವಣೆ ನಡೆದಿಲ್ಲ’ ಎಂದು ನನ್ನ ವಿರುದ್ಧ ಮಾಡಿರುವ ಕಾರ್ಯಕ್ರಮದ ಎರಡನೇ ದಿನ ಸಂಜೆಗೆ ಹೇಳುತ್ತಾರೆ. ನನಗೆ ಸಿಂಗಪೂರ್‌, ಮುಂಬೈ, ದುಬೈನಲ್ಲಿ ಅಕೌಂಟ್‌‌ ಇದೆ; 35 ಕೋಟಿ, 3 ಸಾವಿರ ಕೋಟಿ ವಿಚಾರವೆಲ್ಲಾ ಮಾತನಾಡಿ ಹಣವರ್ಗಾವಣೆ ಆಗಿಲ್ಲ ಎಂದರೆ ಏನರ್ಥ ಅದು? ಮತ್ತೆ ಯಾಕೆ ಇಷ್ಟೆಲ್ಲಾ ಹೇಳಿದ್ದಾರೆ? ಹಾಗಾಗಿ ಈ ವಿಚಾರ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದೇನೆ ಎಂದು ಅವರು ನಾನುಗೌರಿ.ಕಾಂ ಜೊತೆಗೆ ಹೇಳಿದ್ದಾರೆ.

ರೈತ ಮುಖಂಡರುಗಳು ಕೂಡಾ ನಿಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ನಿಮ್ಮ ವಿರುದ್ದ ತನಿಖೆಗೆ ಆಗ್ರಹಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈಗ ಇರತಕ್ಕಂತಹ ರೈತ ಸಂಘಟನೆಗಳಲ್ಲಿ ಬಲಿಷ್ಠವಾದ ಸಂಘಟನೆ ನಮ್ಮದು. ಹಾಗಾಗಿ ಸಣ್ಣ ಪುಟ್ಟ ಸಂಘಟನೆಗಳೆಲ್ಲವೂ ಕೂಡಾ ನಮ್ಮ ಮೇಲೆ ಕಾಮೆಂಟ್ ಮಾಡುತ್ತಾರೆ. ಅದಕ್ಕೆ ಏನು ಮಾಡಕ್ಕೆ ಆಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

“ಇಂತಹ ಸಂದರ್ಭದಲ್ಲಿ ಕುಮಾರಸ್ವಾಮಿ ಅಂತವರು ಗುಂಪು ಕಟ್ಟಿ ನಮ್ಮ ಮೇಲೆ ಹಲ್ಲೆ ಮಾಡುತ್ತಿರುವಾಗ ಎಲ್ಲಾ ರೈತ ಸಂಘಟನೆಗಳು ನಮ್ಮ ಬೆಂಬಲಕ್ಕೆ ಇರಬೇಕಿತ್ತು. ಆದರೆ ಅವರೆಲ್ಲರೂ ಕೂಡಾ ಯಾವುದೋ ಪಕ್ಷದ ಕಾರ್ಯಕರ್ತರಾಗಿ ಹಾಗೂ ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರಾಗಿ ಇರುವ ಕಾರಣಕ್ಕೆ ಎಲ್ಲರೂ ನಮ್ಮನ್ನು ಟೀಕೆ ಮಾಡುವುದಕ್ಕೆ ಶುರು ಮಾಡಿದ್ದಾರೆ” ಎಂದು ಕೋಡಿಹಳ್ಳಿ ಚಂದ್ರಶೇಖರ್ ಅವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...