Homeಕರ್ನಾಟಕ‘ಯಾರಿಂದಲೊ ಡೀಲ್‌ ತೆಗೆದುಕೊಂಡು ನನ್ನ ಮುಗಿಸಲು ಮಾಡಿದ ತಂತ್ರ’: ಪವರ್‌ ಟಿವಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್‌...

‘ಯಾರಿಂದಲೊ ಡೀಲ್‌ ತೆಗೆದುಕೊಂಡು ನನ್ನ ಮುಗಿಸಲು ಮಾಡಿದ ತಂತ್ರ’: ಪವರ್‌ ಟಿವಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್‌ ಆರೋಪ

- Advertisement -
- Advertisement -

ಕೆಎಸ್‌ಆರ್‌‌ಟಿಸಿ ನೌಕರರ ಹೋರಾಟ ಮತ್ತು ರೈತ ಹೋರಾಟದ ವಿಚಾರದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್‌‌ ಕೋಟಿ ಕೋಟಿ ಡೀಲ್ ನಡೆಸಿದಿದ್ದಾರೆ ಎಂದು ಕನ್ನಡದ ಸುದ್ದಿ ವಾಹಿನಿ ಪವರ್‌ ಟಿವಿ ಆರೋಪಿಸಿದ್ದು, ಈ ಬಗ್ಗೆ ಸುದ್ದಿ ಪ್ರಸಾರ ಮಾಡಿದೆ. ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು, ಇದು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವ ಕೃತ್ಯ. ನಾನು ಭ್ರಷ್ಟಾಚಾರದ ವಿರುದ್ಧ ಮಾತನಾಡುವುದಕ್ಕೆ ನನ್ನನ್ನು ಮುಗಿಸಬೇಕು ಎಂದು ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಎಂದು ಪವರ್‌ ಟಿವಿ ವಿರುದ್ದ ಶನಿವಾರ ಆರೋಪ ವ್ಯಕ್ತಪಡಿಸಿದ್ದಾರೆ.

ತಮ್ಮ ಮೇಲಿನ ಡೀಲ್ ಆರೋಪದ ವಿಚಾರವಾಗಿ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವರು,“ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುವವನಿಗೆ ನೈತಿಕತೆ ಇರಬೇಕು, ಮೊದಲು ಅವನು ಭ್ರಷ್ಟಾಚಾರ ಮುಕ್ತನಾಗಿರಬೇಕು. ಅವನೇ ಭ್ರಷ್ಟಾಚಾರ ಮಾಡಿ, ನಮ್ಮನ್ನು ಭ್ರಷ್ಟರು ಎಂದರೆ ಹೇಗೆ? ಅವರು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವಂತಹ ಒಂದು ಡೀಲ್ ಅದು” ಎಂದು ಅವರು ಪವರ್‌ ಟಿವಿಯ ವಿರುದ್ಧವೇ ಆರೋಪ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೋಡಿಹಳ್ಳಿ ಚಂದ್ರಶೇಖರ್‌ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ, ಹಾಗಾಗಿ ಅವರನ್ನು ಮುಗಿಸಬೇಕು ಎಂದು, ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಅದು. ಏಳೆಂಟು ತಿಂಗಳುಗಳ ಕಾಲ ನನ್ನ ಸಂಪರ್ಕ ಮಾಡಿ, ಕಟ್‌ ಆಂಡ್‌ ಪೇಸ್ಟ್‌ ಮಾಡಿ ಅದನ್ನು ಸ್ಟೋರಿ ಮಾಡಿದ್ದಾರೆ” ಎಂದು ಕೋಡಿಹಳ್ಳಿ ಹೇಳಿದ್ದಾರೆ.

ಇದನ್ನೂ ಓದಿ: ಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

‘ಇವನು ಭ್ರಷ್ಟ, ಇವನು ಭ್ರಷ್ಟ’ ಎಂದು ಹೇಳುವ ಅವನು ಲೋಫರ್‌‌. ಅವರೇನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯೆ? ಈ ದೇಶದ ಪ್ರಧಾನ ಮಂತ್ರಿಯೆ? ಎಂದು ಅವರು ಪ್ರಶ್ನಿಸಿದ್ದಾರೆ.

‘ಇದು ಎಲ್ಲವೂ ನಡೆದಿರುವುದು ಸತ್ಯ, ಆದರೆ ಹಣಕಾಸು ವರ್ಗಾವಣೆ ನಡೆದಿಲ್ಲ’ ಎಂದು ನನ್ನ ವಿರುದ್ಧ ಮಾಡಿರುವ ಕಾರ್ಯಕ್ರಮದ ಎರಡನೇ ದಿನ ಸಂಜೆಗೆ ಹೇಳುತ್ತಾರೆ. ನನಗೆ ಸಿಂಗಪೂರ್‌, ಮುಂಬೈ, ದುಬೈನಲ್ಲಿ ಅಕೌಂಟ್‌‌ ಇದೆ; 35 ಕೋಟಿ, 3 ಸಾವಿರ ಕೋಟಿ ವಿಚಾರವೆಲ್ಲಾ ಮಾತನಾಡಿ ಹಣವರ್ಗಾವಣೆ ಆಗಿಲ್ಲ ಎಂದರೆ ಏನರ್ಥ ಅದು? ಮತ್ತೆ ಯಾಕೆ ಇಷ್ಟೆಲ್ಲಾ ಹೇಳಿದ್ದಾರೆ? ಹಾಗಾಗಿ ಈ ವಿಚಾರ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದೇನೆ ಎಂದು ಅವರು ನಾನುಗೌರಿ.ಕಾಂ ಜೊತೆಗೆ ಹೇಳಿದ್ದಾರೆ.

ರೈತ ಮುಖಂಡರುಗಳು ಕೂಡಾ ನಿಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ನಿಮ್ಮ ವಿರುದ್ದ ತನಿಖೆಗೆ ಆಗ್ರಹಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈಗ ಇರತಕ್ಕಂತಹ ರೈತ ಸಂಘಟನೆಗಳಲ್ಲಿ ಬಲಿಷ್ಠವಾದ ಸಂಘಟನೆ ನಮ್ಮದು. ಹಾಗಾಗಿ ಸಣ್ಣ ಪುಟ್ಟ ಸಂಘಟನೆಗಳೆಲ್ಲವೂ ಕೂಡಾ ನಮ್ಮ ಮೇಲೆ ಕಾಮೆಂಟ್ ಮಾಡುತ್ತಾರೆ. ಅದಕ್ಕೆ ಏನು ಮಾಡಕ್ಕೆ ಆಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

“ಇಂತಹ ಸಂದರ್ಭದಲ್ಲಿ ಕುಮಾರಸ್ವಾಮಿ ಅಂತವರು ಗುಂಪು ಕಟ್ಟಿ ನಮ್ಮ ಮೇಲೆ ಹಲ್ಲೆ ಮಾಡುತ್ತಿರುವಾಗ ಎಲ್ಲಾ ರೈತ ಸಂಘಟನೆಗಳು ನಮ್ಮ ಬೆಂಬಲಕ್ಕೆ ಇರಬೇಕಿತ್ತು. ಆದರೆ ಅವರೆಲ್ಲರೂ ಕೂಡಾ ಯಾವುದೋ ಪಕ್ಷದ ಕಾರ್ಯಕರ್ತರಾಗಿ ಹಾಗೂ ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರಾಗಿ ಇರುವ ಕಾರಣಕ್ಕೆ ಎಲ್ಲರೂ ನಮ್ಮನ್ನು ಟೀಕೆ ಮಾಡುವುದಕ್ಕೆ ಶುರು ಮಾಡಿದ್ದಾರೆ” ಎಂದು ಕೋಡಿಹಳ್ಳಿ ಚಂದ್ರಶೇಖರ್ ಅವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...