Homeಕರ್ನಾಟಕ‘ಯಾರಿಂದಲೊ ಡೀಲ್‌ ತೆಗೆದುಕೊಂಡು ನನ್ನ ಮುಗಿಸಲು ಮಾಡಿದ ತಂತ್ರ’: ಪವರ್‌ ಟಿವಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್‌...

‘ಯಾರಿಂದಲೊ ಡೀಲ್‌ ತೆಗೆದುಕೊಂಡು ನನ್ನ ಮುಗಿಸಲು ಮಾಡಿದ ತಂತ್ರ’: ಪವರ್‌ ಟಿವಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್‌ ಆರೋಪ

- Advertisement -
- Advertisement -

ಕೆಎಸ್‌ಆರ್‌‌ಟಿಸಿ ನೌಕರರ ಹೋರಾಟ ಮತ್ತು ರೈತ ಹೋರಾಟದ ವಿಚಾರದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್‌‌ ಕೋಟಿ ಕೋಟಿ ಡೀಲ್ ನಡೆಸಿದಿದ್ದಾರೆ ಎಂದು ಕನ್ನಡದ ಸುದ್ದಿ ವಾಹಿನಿ ಪವರ್‌ ಟಿವಿ ಆರೋಪಿಸಿದ್ದು, ಈ ಬಗ್ಗೆ ಸುದ್ದಿ ಪ್ರಸಾರ ಮಾಡಿದೆ. ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು, ಇದು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವ ಕೃತ್ಯ. ನಾನು ಭ್ರಷ್ಟಾಚಾರದ ವಿರುದ್ಧ ಮಾತನಾಡುವುದಕ್ಕೆ ನನ್ನನ್ನು ಮುಗಿಸಬೇಕು ಎಂದು ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಎಂದು ಪವರ್‌ ಟಿವಿ ವಿರುದ್ದ ಶನಿವಾರ ಆರೋಪ ವ್ಯಕ್ತಪಡಿಸಿದ್ದಾರೆ.

ತಮ್ಮ ಮೇಲಿನ ಡೀಲ್ ಆರೋಪದ ವಿಚಾರವಾಗಿ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವರು,“ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುವವನಿಗೆ ನೈತಿಕತೆ ಇರಬೇಕು, ಮೊದಲು ಅವನು ಭ್ರಷ್ಟಾಚಾರ ಮುಕ್ತನಾಗಿರಬೇಕು. ಅವನೇ ಭ್ರಷ್ಟಾಚಾರ ಮಾಡಿ, ನಮ್ಮನ್ನು ಭ್ರಷ್ಟರು ಎಂದರೆ ಹೇಗೆ? ಅವರು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವಂತಹ ಒಂದು ಡೀಲ್ ಅದು” ಎಂದು ಅವರು ಪವರ್‌ ಟಿವಿಯ ವಿರುದ್ಧವೇ ಆರೋಪ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೋಡಿಹಳ್ಳಿ ಚಂದ್ರಶೇಖರ್‌ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ, ಹಾಗಾಗಿ ಅವರನ್ನು ಮುಗಿಸಬೇಕು ಎಂದು, ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಅದು. ಏಳೆಂಟು ತಿಂಗಳುಗಳ ಕಾಲ ನನ್ನ ಸಂಪರ್ಕ ಮಾಡಿ, ಕಟ್‌ ಆಂಡ್‌ ಪೇಸ್ಟ್‌ ಮಾಡಿ ಅದನ್ನು ಸ್ಟೋರಿ ಮಾಡಿದ್ದಾರೆ” ಎಂದು ಕೋಡಿಹಳ್ಳಿ ಹೇಳಿದ್ದಾರೆ.

ಇದನ್ನೂ ಓದಿ: ಕೋಡಿಹಳ್ಳಿ ಚಂದ್ರಶೇಖರ್‌‌ ಕಳ್ಳ ಎಂದು ಗೊತ್ತಿತ್ತು; ಅದಕ್ಕಾಗಿ 2011 ರಿಂದ ದೂರವಿಟ್ಟಿದ್ದೆವು: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

‘ಇವನು ಭ್ರಷ್ಟ, ಇವನು ಭ್ರಷ್ಟ’ ಎಂದು ಹೇಳುವ ಅವನು ಲೋಫರ್‌‌. ಅವರೇನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯೆ? ಈ ದೇಶದ ಪ್ರಧಾನ ಮಂತ್ರಿಯೆ? ಎಂದು ಅವರು ಪ್ರಶ್ನಿಸಿದ್ದಾರೆ.

‘ಇದು ಎಲ್ಲವೂ ನಡೆದಿರುವುದು ಸತ್ಯ, ಆದರೆ ಹಣಕಾಸು ವರ್ಗಾವಣೆ ನಡೆದಿಲ್ಲ’ ಎಂದು ನನ್ನ ವಿರುದ್ಧ ಮಾಡಿರುವ ಕಾರ್ಯಕ್ರಮದ ಎರಡನೇ ದಿನ ಸಂಜೆಗೆ ಹೇಳುತ್ತಾರೆ. ನನಗೆ ಸಿಂಗಪೂರ್‌, ಮುಂಬೈ, ದುಬೈನಲ್ಲಿ ಅಕೌಂಟ್‌‌ ಇದೆ; 35 ಕೋಟಿ, 3 ಸಾವಿರ ಕೋಟಿ ವಿಚಾರವೆಲ್ಲಾ ಮಾತನಾಡಿ ಹಣವರ್ಗಾವಣೆ ಆಗಿಲ್ಲ ಎಂದರೆ ಏನರ್ಥ ಅದು? ಮತ್ತೆ ಯಾಕೆ ಇಷ್ಟೆಲ್ಲಾ ಹೇಳಿದ್ದಾರೆ? ಹಾಗಾಗಿ ಈ ವಿಚಾರ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದೇನೆ ಎಂದು ಅವರು ನಾನುಗೌರಿ.ಕಾಂ ಜೊತೆಗೆ ಹೇಳಿದ್ದಾರೆ.

ರೈತ ಮುಖಂಡರುಗಳು ಕೂಡಾ ನಿಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ನಿಮ್ಮ ವಿರುದ್ದ ತನಿಖೆಗೆ ಆಗ್ರಹಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈಗ ಇರತಕ್ಕಂತಹ ರೈತ ಸಂಘಟನೆಗಳಲ್ಲಿ ಬಲಿಷ್ಠವಾದ ಸಂಘಟನೆ ನಮ್ಮದು. ಹಾಗಾಗಿ ಸಣ್ಣ ಪುಟ್ಟ ಸಂಘಟನೆಗಳೆಲ್ಲವೂ ಕೂಡಾ ನಮ್ಮ ಮೇಲೆ ಕಾಮೆಂಟ್ ಮಾಡುತ್ತಾರೆ. ಅದಕ್ಕೆ ಏನು ಮಾಡಕ್ಕೆ ಆಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

“ಇಂತಹ ಸಂದರ್ಭದಲ್ಲಿ ಕುಮಾರಸ್ವಾಮಿ ಅಂತವರು ಗುಂಪು ಕಟ್ಟಿ ನಮ್ಮ ಮೇಲೆ ಹಲ್ಲೆ ಮಾಡುತ್ತಿರುವಾಗ ಎಲ್ಲಾ ರೈತ ಸಂಘಟನೆಗಳು ನಮ್ಮ ಬೆಂಬಲಕ್ಕೆ ಇರಬೇಕಿತ್ತು. ಆದರೆ ಅವರೆಲ್ಲರೂ ಕೂಡಾ ಯಾವುದೋ ಪಕ್ಷದ ಕಾರ್ಯಕರ್ತರಾಗಿ ಹಾಗೂ ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರಾಗಿ ಇರುವ ಕಾರಣಕ್ಕೆ ಎಲ್ಲರೂ ನಮ್ಮನ್ನು ಟೀಕೆ ಮಾಡುವುದಕ್ಕೆ ಶುರು ಮಾಡಿದ್ದಾರೆ” ಎಂದು ಕೋಡಿಹಳ್ಳಿ ಚಂದ್ರಶೇಖರ್ ಅವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...