Homeಅಂತರಾಷ್ಟ್ರೀಯ'ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ': 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

- Advertisement -
- Advertisement -

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3) ನಡೆಯಿತು.

ಈ ಕುರಿತ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮುಗ್ದ ಮಕ್ಕಳ ಸಾವಿಗೆ ಇಡೀ ಮಾನವೀಯ ಜಗತ್ತು ಮರುಗಿದೆ.

ಶಾಲೆಯ ಮೇಲೆ ದಾಳಿ ನಡೆಸಿ ಅಮಾಯಕ ಮಕ್ಕಳನ್ನು ಭೀಕರವಾಗಿ ಕೊಂದಿರುವುದಕ್ಕೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಾಗಾಗಿ, ಇಸ್ರೇಲ್ ತನ್ನ ದುಷ್ಕೃತ್ಯವನ್ನು ಮರೆಮಾಚುವ ಪ್ರಯತ್ನ ನಡೆಸುತ್ತಿದೆ. ಶಾಲೆಯ ಮೇಲೆ ನಾವು ಅಥವಾ ಅಮೆರಿಕ ದಾಳಿ ನಡೆಸಿಲ್ಲ ಎನ್ನುತ್ತಿದೆ.

ಗಾಝಾ ಮೇಲೆ ದಾಳಿ ನಡೆಸಿ ಮುಗ್ದ ಮಕ್ಕಳ ರಕ್ತ ಹರಿಸಿದಾಗಲೂ ಇಸ್ರೇಲ್ ಇದೇ ವಾದವನ್ನು ಮುಂದಿಡುತ್ತಿತ್ತು. ಮಾಧ್ಯಮಗಳ ಸಾಕ್ಷಿ ಸಮೇತ ಇಸ್ರೇಲ್‌ನ ಕ್ರೌರ್ಯವನ್ನು ಜಗತ್ತಿನ ಮುಂದಿಟ್ಟಾಗ, ಅದು ಅನಿವಾರ್ಯವಾಗಿ ದಾಳಿ ನಡೆಸಿರುವುದನ್ನು ಒಪ್ಪಿಕೊಳ್ಳಬೇಕಾಯಿತು ಎಂದು ಅಲ್‌-ಜಝೀರಾ ವರದಿ ಹೇಳುತ್ತದೆ.

ಇರಾನ್‌ನ ಸರ್ಕಾರಿ ಮಾಧ್ಯಮ ಮಕ್ಕಳ ಸಾಮೂಹಿಕ ಅಂತ್ಯ ಸಂಸ್ಕಾರದ ದೃಶ್ಯಗಳನ್ನು ಮಂಗಳವಾರ ಪ್ರಸಾರ ಮಾಡಿದೆ. ಅದರಲ್ಲಿ, ಮಿನಾಬ್‌ ನಗರದ ಸಾರ್ವಜನಿಕ ಚೌಕವೊಂದರಲ್ಲಿ ಸಾವಿರಾರು ಜನರು ಜಮಾಯಿಸಿರುವುದು ಕಂಡು ಬಂದಿದೆ. ಅಲ್ಲಿ ನೆರೆದಿದ್ದ ಪುರುಷರು ಇಸ್ಲಾಮಿಕ್ ರಿಪಬ್ಲಿಕ್ ಧ್ವಜವನ್ನು ಬೀಸುತ್ತಿದ್ದರು ಮತ್ತು ಕಪ್ಪು ಚಾದರ್ ಧರಿಸಿದ್ದ ಮಹಿಳೆಯರಿಂದ ಸ್ವಲ್ಪ ದೂರದಲ್ಲಿ ಪ್ರತ್ಯೇಕವಾಗಿ ನಿಂತಿದ್ದರು.

ವೇದಿಕೆಯ ಮೇಲಿಂದ ಮಾತನಾಡಿದ ಮಹಿಳೆಯೊಬ್ಬರು, ತಾನು “ಆಟೆನಾ”ಳ (ಮೃತ ಬಾಲಕಿ) ತಾಯಿ ಎಂದು ಪರಿಚಯಿಸಿಕೊಂಡಿದ್ದು, ಅವರು ಫೋಟೋವೊಂದನ್ನು ಎತ್ತಿ ತೋರಿಸುತ್ತಾ, ಇದು ‘ಅಮೆರಿಕದ ಅಪರಾಧದ ದಾಖಲೆ’ ಎಂದು ಹೇಳಿದ್ದಾರೆ. ಮುಂದುವರಿದು ಅವರು, “ಅವರು (ಮಕ್ಕಳು) ದೇವರ ಹಾದಿಯಲ್ಲಿ ಮರಣ ಹೊಂದಿದ್ದಾರೆ” ಎಂದು ಹೇಳಿದ್ದಾರೆ.

ಸಭೆಯಲ್ಲಿದ್ದ ಜನಸಮೂಹವು ಅಮೆರಿಕ ಮತ್ತು ಇಸ್ರೇಲ್‌ನ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿತ್ತು. ಮತ್ತು ‘ಶರಣಾಗತಿ ಇಲ್ಲ’ (No surrender) ಎಂದು ಜೋರಾಗಿ ಹೇಳುತ್ತಿತ್ತು.

ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಸೋಮವಾರದಂದು, ಶಾಲಾ ವಿದ್ಯಾರ್ಥಿನಿಯರ ಹತ್ಯೆಗೆ ಅಮೆರಿಕ ಮತ್ತು ಇಸ್ರೇಲ್ ನೇರ ಕಾರಣ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ಮಕ್ಕಳನ್ನು ದಫನ ಮಾಡಲು ತೋಡಿದ್ದ ಗುಂಡಿಗಳ ಫೋಟೋ ಹಂಚಿಕೊಂಡಿದ್ದ ಅರಾಗ್ಚಿ, “ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಪ್ರಾಥಮಿಕ ಶಾಲೆಯ ಮೇಲಿನ ಬಾಂಬ್ ದಾಳಿಯಲ್ಲಿ ಹತ್ಯೆಗೀಡಾದ 160ಕ್ಕೂ ಹೆಚ್ಚು ಮುಗ್ಧ ಹೆಣ್ಣು ಮಕ್ಕಳ ಸಮಾಧಿಗಳಿವು. ದಾಳಿಯಲ್ಲಿ ಮಕ್ಕಳ ದೇಹಗಳು ಛಿದ್ರಛಿದ್ರವಾಗಿವೆ” ಎಂದು ಬರೆದುಕೊಂಡಿದ್ದರು.

“ಇದು ಮಿಸ್ಟರ್ ಟ್ರಂಪ್ ವಾಗ್ದಾನ ಮಾಡಿದ ರಕ್ಷಣಾ ಕಾರ್ಯದ ಅಸಲಿ ರೂಪ. ಗಾಝಾದಿಂದ ಮಿನಾಬ್‌ವರೆಗೆ ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ” ಎಂದು ಅರಾಗ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಿಂದ ಇರಾನ್‌ನಲ್ಲಿ ಹಲವು ಆಸ್ಪತ್ರೆಗಳು ಮತ್ತು ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಇರಾನ್‌ ನಾಯಕರು ಅಂತಾರಾಷ್ಟ್ರೀಯ ಮಟ್ಟದ ಕ್ರಮ ಮತ್ತು ಒಗ್ಗಟ್ಟಿಗೆ ಕರೆ ನೀಡಿದ್ದಾರೆ.

ಇರಾನ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘಾಯಿ ಸೋಮವಾರ ಮಾತನಾಡಿ, “ಅಮೆರಿಕ ಮತ್ತು ಇಸ್ರೇಲ್ ಯಾವುದೇ ವ್ಯತ್ಯಾಸವಿಲ್ಲದೆ ವಸತಿ ಪ್ರದೇಶಗಳ ಮೇಲೆ ಸತತವಾಗಿ ದಾಳಿ ನಡೆಸುತ್ತಿವೆ. ಅವು ಆಸ್ಪತ್ರೆಗಳು, ಶಾಲೆಗಳು, ರೆಡ್ ಕ್ರೆಸೆಂಟ್ ಸೌಲಭ್ಯಗಳು ಮತ್ತು ಸಾಂಸ್ಕೃತಿಕ ಸ್ಮಾರಕಗಳನ್ನೂ ಬಿಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ವಿಶ್ವಸಂಸ್ಥೆಯ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆಯಾದ ಯುನೆಸ್ಕೋ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ ಮಲಾಲ ಯೂಸುಫ್‌ಝೈ ಅವರು ಶಾಲೆ ಮೇಲಿನ ದಾಳಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಛೇರಿಯು ಈ ದಾಳಿಯ ಕುರಿತು ತಕ್ಷಣದ, ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸುವಂತೆ ಕರೆ ನೀಡಿದೆ. ವಿಶ್ವಸಂಸ್ಥೆಯ ಹೈಕಮಿಷನರ್ ವೋಲ್ಕರ್ ಟರ್ಕ್ ಅವರ ಕಛೇರಿಯ ವಕ್ತಾರರಾದ ರವೀನಾ ಶಮದಾಸನಿ ಅವರು ಮಾತನಾಡುತ್ತಾ, ಈ ದಾಳಿಯು ‘ಯುದ್ಧಾಪರಾಧ’ ಎಂದು ನಿರ್ಧರಿಸಲು ತಮ್ಮ ಕಛೇರಿಯ ಬಳಿ ಸದ್ಯಕ್ಕೆ ಸಾಕಷ್ಟು ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಇದು ಅತ್ಯಂತ ಭಯಾನಕವಾದುದು ಎಂದು ಶಮದಾಸನಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋಗಳು ಈ ಸಂಘರ್ಷದ ವಿನಾಶ, ಹತಾಶೆ, ಅರ್ಥಹೀನತೆ ಮತ್ತು ಕ್ರೌರ್ಯದ ನೈಜ ಸ್ವರೂಪವನ್ನು ತೋರಿಸಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂತರರಾಷ್ಟ್ರೀಯ ಮಾನವೀಯ ಕಾನೂನಿನಡಿಯಲ್ಲಿ ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು ಅಥವಾ ಯಾವುದೇ ನಾಗರಿಕ ಮೂಲಸೌಕರ್ಯಗಳ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ಮಾಡುವುದು ಯುದ್ಧಾಪರಾಧ ಎಂದು ಪರಿಗಣಿಸಲಾಗುತ್ತದೆ.

“ಅದು ನಮ್ಮ ದಾಳಿಯಾಗಿದ್ದರೆ ಯುದ್ಧ ಇಲಾಖೆ ತನಿಖೆ ನಡೆಸುತ್ತದೆ ಮತ್ತು ನಿಮ್ಮ ಪ್ರಶ್ನೆಯನ್ನು ನಾನು ಅವರಿಗೆ ಉಲ್ಲೇಖಿಸುತ್ತೇನೆ” ಎಂದು ಘಟನೆಯ ಬಗ್ಗೆ ಕೇಳಿದಾಗ ಸೋಮವಾರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಉದ್ದೇಶಪೂರ್ವಕವಾಗಿ ಶಾಲೆಯನ್ನು ಗುರಿಯಾಗಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಗಳಿಂದ ನಾಗರಿಕರಿಗೆ ಹಾನಿಯಾಗಿದೆ ಎಂಬ ವರದಿಗಳನ್ನು ಪರಿಶೀಲಿಸುತ್ತಿರುವುದಾಗಿ ಯುಎಸ್ ಸೆಂಟ್ರಲ್ ಕಮಾಂಡ್ ಮಾಧ್ಯಮಗಳಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...