Homeಅಂತರಾಷ್ಟ್ರೀಯ'ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ': 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

- Advertisement -
- Advertisement -

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3) ನಡೆಯಿತು.

ಈ ಕುರಿತ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮುಗ್ದ ಮಕ್ಕಳ ಸಾವಿಗೆ ಇಡೀ ಮಾನವೀಯ ಜಗತ್ತು ಮರುಗಿದೆ.

ಶಾಲೆಯ ಮೇಲೆ ದಾಳಿ ನಡೆಸಿ ಅಮಾಯಕ ಮಕ್ಕಳನ್ನು ಭೀಕರವಾಗಿ ಕೊಂದಿರುವುದಕ್ಕೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಾಗಾಗಿ, ಇಸ್ರೇಲ್ ತನ್ನ ದುಷ್ಕೃತ್ಯವನ್ನು ಮರೆಮಾಚುವ ಪ್ರಯತ್ನ ನಡೆಸುತ್ತಿದೆ. ಶಾಲೆಯ ಮೇಲೆ ನಾವು ಅಥವಾ ಅಮೆರಿಕ ದಾಳಿ ನಡೆಸಿಲ್ಲ ಎನ್ನುತ್ತಿದೆ.

ಗಾಝಾ ಮೇಲೆ ದಾಳಿ ನಡೆಸಿ ಮುಗ್ದ ಮಕ್ಕಳ ರಕ್ತ ಹರಿಸಿದಾಗಲೂ ಇಸ್ರೇಲ್ ಇದೇ ವಾದವನ್ನು ಮುಂದಿಡುತ್ತಿತ್ತು. ಮಾಧ್ಯಮಗಳ ಸಾಕ್ಷಿ ಸಮೇತ ಇಸ್ರೇಲ್‌ನ ಕ್ರೌರ್ಯವನ್ನು ಜಗತ್ತಿನ ಮುಂದಿಟ್ಟಾಗ, ಅದು ಅನಿವಾರ್ಯವಾಗಿ ದಾಳಿ ನಡೆಸಿರುವುದನ್ನು ಒಪ್ಪಿಕೊಳ್ಳಬೇಕಾಯಿತು ಎಂದು ಅಲ್‌-ಜಝೀರಾ ವರದಿ ಹೇಳುತ್ತದೆ.

ಇರಾನ್‌ನ ಸರ್ಕಾರಿ ಮಾಧ್ಯಮ ಮಕ್ಕಳ ಸಾಮೂಹಿಕ ಅಂತ್ಯ ಸಂಸ್ಕಾರದ ದೃಶ್ಯಗಳನ್ನು ಮಂಗಳವಾರ ಪ್ರಸಾರ ಮಾಡಿದೆ. ಅದರಲ್ಲಿ, ಮಿನಾಬ್‌ ನಗರದ ಸಾರ್ವಜನಿಕ ಚೌಕವೊಂದರಲ್ಲಿ ಸಾವಿರಾರು ಜನರು ಜಮಾಯಿಸಿರುವುದು ಕಂಡು ಬಂದಿದೆ. ಅಲ್ಲಿ ನೆರೆದಿದ್ದ ಪುರುಷರು ಇಸ್ಲಾಮಿಕ್ ರಿಪಬ್ಲಿಕ್ ಧ್ವಜವನ್ನು ಬೀಸುತ್ತಿದ್ದರು ಮತ್ತು ಕಪ್ಪು ಚಾದರ್ ಧರಿಸಿದ್ದ ಮಹಿಳೆಯರಿಂದ ಸ್ವಲ್ಪ ದೂರದಲ್ಲಿ ಪ್ರತ್ಯೇಕವಾಗಿ ನಿಂತಿದ್ದರು.

ವೇದಿಕೆಯ ಮೇಲಿಂದ ಮಾತನಾಡಿದ ಮಹಿಳೆಯೊಬ್ಬರು, ತಾನು “ಆಟೆನಾ”ಳ (ಮೃತ ಬಾಲಕಿ) ತಾಯಿ ಎಂದು ಪರಿಚಯಿಸಿಕೊಂಡಿದ್ದು, ಅವರು ಫೋಟೋವೊಂದನ್ನು ಎತ್ತಿ ತೋರಿಸುತ್ತಾ, ಇದು ‘ಅಮೆರಿಕದ ಅಪರಾಧದ ದಾಖಲೆ’ ಎಂದು ಹೇಳಿದ್ದಾರೆ. ಮುಂದುವರಿದು ಅವರು, “ಅವರು (ಮಕ್ಕಳು) ದೇವರ ಹಾದಿಯಲ್ಲಿ ಮರಣ ಹೊಂದಿದ್ದಾರೆ” ಎಂದು ಹೇಳಿದ್ದಾರೆ.

ಸಭೆಯಲ್ಲಿದ್ದ ಜನಸಮೂಹವು ಅಮೆರಿಕ ಮತ್ತು ಇಸ್ರೇಲ್‌ನ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿತ್ತು. ಮತ್ತು ‘ಶರಣಾಗತಿ ಇಲ್ಲ’ (No surrender) ಎಂದು ಜೋರಾಗಿ ಹೇಳುತ್ತಿತ್ತು.

ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಸೋಮವಾರದಂದು, ಶಾಲಾ ವಿದ್ಯಾರ್ಥಿನಿಯರ ಹತ್ಯೆಗೆ ಅಮೆರಿಕ ಮತ್ತು ಇಸ್ರೇಲ್ ನೇರ ಕಾರಣ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ಮಕ್ಕಳನ್ನು ದಫನ ಮಾಡಲು ತೋಡಿದ್ದ ಗುಂಡಿಗಳ ಫೋಟೋ ಹಂಚಿಕೊಂಡಿದ್ದ ಅರಾಗ್ಚಿ, “ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಪ್ರಾಥಮಿಕ ಶಾಲೆಯ ಮೇಲಿನ ಬಾಂಬ್ ದಾಳಿಯಲ್ಲಿ ಹತ್ಯೆಗೀಡಾದ 160ಕ್ಕೂ ಹೆಚ್ಚು ಮುಗ್ಧ ಹೆಣ್ಣು ಮಕ್ಕಳ ಸಮಾಧಿಗಳಿವು. ದಾಳಿಯಲ್ಲಿ ಮಕ್ಕಳ ದೇಹಗಳು ಛಿದ್ರಛಿದ್ರವಾಗಿವೆ” ಎಂದು ಬರೆದುಕೊಂಡಿದ್ದರು.

“ಇದು ಮಿಸ್ಟರ್ ಟ್ರಂಪ್ ವಾಗ್ದಾನ ಮಾಡಿದ ರಕ್ಷಣಾ ಕಾರ್ಯದ ಅಸಲಿ ರೂಪ. ಗಾಝಾದಿಂದ ಮಿನಾಬ್‌ವರೆಗೆ ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ” ಎಂದು ಅರಾಗ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಿಂದ ಇರಾನ್‌ನಲ್ಲಿ ಹಲವು ಆಸ್ಪತ್ರೆಗಳು ಮತ್ತು ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಇರಾನ್‌ ನಾಯಕರು ಅಂತಾರಾಷ್ಟ್ರೀಯ ಮಟ್ಟದ ಕ್ರಮ ಮತ್ತು ಒಗ್ಗಟ್ಟಿಗೆ ಕರೆ ನೀಡಿದ್ದಾರೆ.

ಇರಾನ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘಾಯಿ ಸೋಮವಾರ ಮಾತನಾಡಿ, “ಅಮೆರಿಕ ಮತ್ತು ಇಸ್ರೇಲ್ ಯಾವುದೇ ವ್ಯತ್ಯಾಸವಿಲ್ಲದೆ ವಸತಿ ಪ್ರದೇಶಗಳ ಮೇಲೆ ಸತತವಾಗಿ ದಾಳಿ ನಡೆಸುತ್ತಿವೆ. ಅವು ಆಸ್ಪತ್ರೆಗಳು, ಶಾಲೆಗಳು, ರೆಡ್ ಕ್ರೆಸೆಂಟ್ ಸೌಲಭ್ಯಗಳು ಮತ್ತು ಸಾಂಸ್ಕೃತಿಕ ಸ್ಮಾರಕಗಳನ್ನೂ ಬಿಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ವಿಶ್ವಸಂಸ್ಥೆಯ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆಯಾದ ಯುನೆಸ್ಕೋ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ ಮಲಾಲ ಯೂಸುಫ್‌ಝೈ ಅವರು ಶಾಲೆ ಮೇಲಿನ ದಾಳಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಛೇರಿಯು ಈ ದಾಳಿಯ ಕುರಿತು ತಕ್ಷಣದ, ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸುವಂತೆ ಕರೆ ನೀಡಿದೆ. ವಿಶ್ವಸಂಸ್ಥೆಯ ಹೈಕಮಿಷನರ್ ವೋಲ್ಕರ್ ಟರ್ಕ್ ಅವರ ಕಛೇರಿಯ ವಕ್ತಾರರಾದ ರವೀನಾ ಶಮದಾಸನಿ ಅವರು ಮಾತನಾಡುತ್ತಾ, ಈ ದಾಳಿಯು ‘ಯುದ್ಧಾಪರಾಧ’ ಎಂದು ನಿರ್ಧರಿಸಲು ತಮ್ಮ ಕಛೇರಿಯ ಬಳಿ ಸದ್ಯಕ್ಕೆ ಸಾಕಷ್ಟು ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಇದು ಅತ್ಯಂತ ಭಯಾನಕವಾದುದು ಎಂದು ಶಮದಾಸನಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋಗಳು ಈ ಸಂಘರ್ಷದ ವಿನಾಶ, ಹತಾಶೆ, ಅರ್ಥಹೀನತೆ ಮತ್ತು ಕ್ರೌರ್ಯದ ನೈಜ ಸ್ವರೂಪವನ್ನು ತೋರಿಸಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂತರರಾಷ್ಟ್ರೀಯ ಮಾನವೀಯ ಕಾನೂನಿನಡಿಯಲ್ಲಿ ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು ಅಥವಾ ಯಾವುದೇ ನಾಗರಿಕ ಮೂಲಸೌಕರ್ಯಗಳ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ಮಾಡುವುದು ಯುದ್ಧಾಪರಾಧ ಎಂದು ಪರಿಗಣಿಸಲಾಗುತ್ತದೆ.

“ಅದು ನಮ್ಮ ದಾಳಿಯಾಗಿದ್ದರೆ ಯುದ್ಧ ಇಲಾಖೆ ತನಿಖೆ ನಡೆಸುತ್ತದೆ ಮತ್ತು ನಿಮ್ಮ ಪ್ರಶ್ನೆಯನ್ನು ನಾನು ಅವರಿಗೆ ಉಲ್ಲೇಖಿಸುತ್ತೇನೆ” ಎಂದು ಘಟನೆಯ ಬಗ್ಗೆ ಕೇಳಿದಾಗ ಸೋಮವಾರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಉದ್ದೇಶಪೂರ್ವಕವಾಗಿ ಶಾಲೆಯನ್ನು ಗುರಿಯಾಗಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಗಳಿಂದ ನಾಗರಿಕರಿಗೆ ಹಾನಿಯಾಗಿದೆ ಎಂಬ ವರದಿಗಳನ್ನು ಪರಿಶೀಲಿಸುತ್ತಿರುವುದಾಗಿ ಯುಎಸ್ ಸೆಂಟ್ರಲ್ ಕಮಾಂಡ್ ಮಾಧ್ಯಮಗಳಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...