Homeಅಂತರಾಷ್ಟ್ರೀಯ'ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ': 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

- Advertisement -
- Advertisement -

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3) ನಡೆಯಿತು.

ಈ ಕುರಿತ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮುಗ್ದ ಮಕ್ಕಳ ಸಾವಿಗೆ ಇಡೀ ಮಾನವೀಯ ಜಗತ್ತು ಮರುಗಿದೆ.

ಶಾಲೆಯ ಮೇಲೆ ದಾಳಿ ನಡೆಸಿ ಅಮಾಯಕ ಮಕ್ಕಳನ್ನು ಭೀಕರವಾಗಿ ಕೊಂದಿರುವುದಕ್ಕೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಾಗಾಗಿ, ಇಸ್ರೇಲ್ ತನ್ನ ದುಷ್ಕೃತ್ಯವನ್ನು ಮರೆಮಾಚುವ ಪ್ರಯತ್ನ ನಡೆಸುತ್ತಿದೆ. ಶಾಲೆಯ ಮೇಲೆ ನಾವು ಅಥವಾ ಅಮೆರಿಕ ದಾಳಿ ನಡೆಸಿಲ್ಲ ಎನ್ನುತ್ತಿದೆ.

ಗಾಝಾ ಮೇಲೆ ದಾಳಿ ನಡೆಸಿ ಮುಗ್ದ ಮಕ್ಕಳ ರಕ್ತ ಹರಿಸಿದಾಗಲೂ ಇಸ್ರೇಲ್ ಇದೇ ವಾದವನ್ನು ಮುಂದಿಡುತ್ತಿತ್ತು. ಮಾಧ್ಯಮಗಳ ಸಾಕ್ಷಿ ಸಮೇತ ಇಸ್ರೇಲ್‌ನ ಕ್ರೌರ್ಯವನ್ನು ಜಗತ್ತಿನ ಮುಂದಿಟ್ಟಾಗ, ಅದು ಅನಿವಾರ್ಯವಾಗಿ ದಾಳಿ ನಡೆಸಿರುವುದನ್ನು ಒಪ್ಪಿಕೊಳ್ಳಬೇಕಾಯಿತು ಎಂದು ಅಲ್‌-ಜಝೀರಾ ವರದಿ ಹೇಳುತ್ತದೆ.

ಇರಾನ್‌ನ ಸರ್ಕಾರಿ ಮಾಧ್ಯಮ ಮಕ್ಕಳ ಸಾಮೂಹಿಕ ಅಂತ್ಯ ಸಂಸ್ಕಾರದ ದೃಶ್ಯಗಳನ್ನು ಮಂಗಳವಾರ ಪ್ರಸಾರ ಮಾಡಿದೆ. ಅದರಲ್ಲಿ, ಮಿನಾಬ್‌ ನಗರದ ಸಾರ್ವಜನಿಕ ಚೌಕವೊಂದರಲ್ಲಿ ಸಾವಿರಾರು ಜನರು ಜಮಾಯಿಸಿರುವುದು ಕಂಡು ಬಂದಿದೆ. ಅಲ್ಲಿ ನೆರೆದಿದ್ದ ಪುರುಷರು ಇಸ್ಲಾಮಿಕ್ ರಿಪಬ್ಲಿಕ್ ಧ್ವಜವನ್ನು ಬೀಸುತ್ತಿದ್ದರು ಮತ್ತು ಕಪ್ಪು ಚಾದರ್ ಧರಿಸಿದ್ದ ಮಹಿಳೆಯರಿಂದ ಸ್ವಲ್ಪ ದೂರದಲ್ಲಿ ಪ್ರತ್ಯೇಕವಾಗಿ ನಿಂತಿದ್ದರು.

ವೇದಿಕೆಯ ಮೇಲಿಂದ ಮಾತನಾಡಿದ ಮಹಿಳೆಯೊಬ್ಬರು, ತಾನು “ಆಟೆನಾ”ಳ (ಮೃತ ಬಾಲಕಿ) ತಾಯಿ ಎಂದು ಪರಿಚಯಿಸಿಕೊಂಡಿದ್ದು, ಅವರು ಫೋಟೋವೊಂದನ್ನು ಎತ್ತಿ ತೋರಿಸುತ್ತಾ, ಇದು ‘ಅಮೆರಿಕದ ಅಪರಾಧದ ದಾಖಲೆ’ ಎಂದು ಹೇಳಿದ್ದಾರೆ. ಮುಂದುವರಿದು ಅವರು, “ಅವರು (ಮಕ್ಕಳು) ದೇವರ ಹಾದಿಯಲ್ಲಿ ಮರಣ ಹೊಂದಿದ್ದಾರೆ” ಎಂದು ಹೇಳಿದ್ದಾರೆ.

ಸಭೆಯಲ್ಲಿದ್ದ ಜನಸಮೂಹವು ಅಮೆರಿಕ ಮತ್ತು ಇಸ್ರೇಲ್‌ನ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿತ್ತು. ಮತ್ತು ‘ಶರಣಾಗತಿ ಇಲ್ಲ’ (No surrender) ಎಂದು ಜೋರಾಗಿ ಹೇಳುತ್ತಿತ್ತು.

ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಸೋಮವಾರದಂದು, ಶಾಲಾ ವಿದ್ಯಾರ್ಥಿನಿಯರ ಹತ್ಯೆಗೆ ಅಮೆರಿಕ ಮತ್ತು ಇಸ್ರೇಲ್ ನೇರ ಕಾರಣ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ಮಕ್ಕಳನ್ನು ದಫನ ಮಾಡಲು ತೋಡಿದ್ದ ಗುಂಡಿಗಳ ಫೋಟೋ ಹಂಚಿಕೊಂಡಿದ್ದ ಅರಾಗ್ಚಿ, “ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಪ್ರಾಥಮಿಕ ಶಾಲೆಯ ಮೇಲಿನ ಬಾಂಬ್ ದಾಳಿಯಲ್ಲಿ ಹತ್ಯೆಗೀಡಾದ 160ಕ್ಕೂ ಹೆಚ್ಚು ಮುಗ್ಧ ಹೆಣ್ಣು ಮಕ್ಕಳ ಸಮಾಧಿಗಳಿವು. ದಾಳಿಯಲ್ಲಿ ಮಕ್ಕಳ ದೇಹಗಳು ಛಿದ್ರಛಿದ್ರವಾಗಿವೆ” ಎಂದು ಬರೆದುಕೊಂಡಿದ್ದರು.

“ಇದು ಮಿಸ್ಟರ್ ಟ್ರಂಪ್ ವಾಗ್ದಾನ ಮಾಡಿದ ರಕ್ಷಣಾ ಕಾರ್ಯದ ಅಸಲಿ ರೂಪ. ಗಾಝಾದಿಂದ ಮಿನಾಬ್‌ವರೆಗೆ ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ” ಎಂದು ಅರಾಗ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಿಂದ ಇರಾನ್‌ನಲ್ಲಿ ಹಲವು ಆಸ್ಪತ್ರೆಗಳು ಮತ್ತು ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಇರಾನ್‌ ನಾಯಕರು ಅಂತಾರಾಷ್ಟ್ರೀಯ ಮಟ್ಟದ ಕ್ರಮ ಮತ್ತು ಒಗ್ಗಟ್ಟಿಗೆ ಕರೆ ನೀಡಿದ್ದಾರೆ.

ಇರಾನ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘಾಯಿ ಸೋಮವಾರ ಮಾತನಾಡಿ, “ಅಮೆರಿಕ ಮತ್ತು ಇಸ್ರೇಲ್ ಯಾವುದೇ ವ್ಯತ್ಯಾಸವಿಲ್ಲದೆ ವಸತಿ ಪ್ರದೇಶಗಳ ಮೇಲೆ ಸತತವಾಗಿ ದಾಳಿ ನಡೆಸುತ್ತಿವೆ. ಅವು ಆಸ್ಪತ್ರೆಗಳು, ಶಾಲೆಗಳು, ರೆಡ್ ಕ್ರೆಸೆಂಟ್ ಸೌಲಭ್ಯಗಳು ಮತ್ತು ಸಾಂಸ್ಕೃತಿಕ ಸ್ಮಾರಕಗಳನ್ನೂ ಬಿಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ವಿಶ್ವಸಂಸ್ಥೆಯ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆಯಾದ ಯುನೆಸ್ಕೋ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ ಮಲಾಲ ಯೂಸುಫ್‌ಝೈ ಅವರು ಶಾಲೆ ಮೇಲಿನ ದಾಳಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಛೇರಿಯು ಈ ದಾಳಿಯ ಕುರಿತು ತಕ್ಷಣದ, ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸುವಂತೆ ಕರೆ ನೀಡಿದೆ. ವಿಶ್ವಸಂಸ್ಥೆಯ ಹೈಕಮಿಷನರ್ ವೋಲ್ಕರ್ ಟರ್ಕ್ ಅವರ ಕಛೇರಿಯ ವಕ್ತಾರರಾದ ರವೀನಾ ಶಮದಾಸನಿ ಅವರು ಮಾತನಾಡುತ್ತಾ, ಈ ದಾಳಿಯು ‘ಯುದ್ಧಾಪರಾಧ’ ಎಂದು ನಿರ್ಧರಿಸಲು ತಮ್ಮ ಕಛೇರಿಯ ಬಳಿ ಸದ್ಯಕ್ಕೆ ಸಾಕಷ್ಟು ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಇದು ಅತ್ಯಂತ ಭಯಾನಕವಾದುದು ಎಂದು ಶಮದಾಸನಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋಗಳು ಈ ಸಂಘರ್ಷದ ವಿನಾಶ, ಹತಾಶೆ, ಅರ್ಥಹೀನತೆ ಮತ್ತು ಕ್ರೌರ್ಯದ ನೈಜ ಸ್ವರೂಪವನ್ನು ತೋರಿಸಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂತರರಾಷ್ಟ್ರೀಯ ಮಾನವೀಯ ಕಾನೂನಿನಡಿಯಲ್ಲಿ ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು ಅಥವಾ ಯಾವುದೇ ನಾಗರಿಕ ಮೂಲಸೌಕರ್ಯಗಳ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ಮಾಡುವುದು ಯುದ್ಧಾಪರಾಧ ಎಂದು ಪರಿಗಣಿಸಲಾಗುತ್ತದೆ.

“ಅದು ನಮ್ಮ ದಾಳಿಯಾಗಿದ್ದರೆ ಯುದ್ಧ ಇಲಾಖೆ ತನಿಖೆ ನಡೆಸುತ್ತದೆ ಮತ್ತು ನಿಮ್ಮ ಪ್ರಶ್ನೆಯನ್ನು ನಾನು ಅವರಿಗೆ ಉಲ್ಲೇಖಿಸುತ್ತೇನೆ” ಎಂದು ಘಟನೆಯ ಬಗ್ಗೆ ಕೇಳಿದಾಗ ಸೋಮವಾರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಉದ್ದೇಶಪೂರ್ವಕವಾಗಿ ಶಾಲೆಯನ್ನು ಗುರಿಯಾಗಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಗಳಿಂದ ನಾಗರಿಕರಿಗೆ ಹಾನಿಯಾಗಿದೆ ಎಂಬ ವರದಿಗಳನ್ನು ಪರಿಶೀಲಿಸುತ್ತಿರುವುದಾಗಿ ಯುಎಸ್ ಸೆಂಟ್ರಲ್ ಕಮಾಂಡ್ ಮಾಧ್ಯಮಗಳಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...