Homeಮುಖಪುಟಹೀಗಿದ್ದರು ನಮ್ಮ ಡಾ. ಮನಮೋಹನ್ ಸಿಂಗ್: ಮಾಜಿ ಪ್ರಧಾನಿಗಳ ಕುರಿತು ಟ್ವಿಟರ್‌ನಲ್ಲಿ ಮೆಚ್ಚುಗೆಗೆ ಕಾರಣ?

ಹೀಗಿದ್ದರು ನಮ್ಮ ಡಾ. ಮನಮೋಹನ್ ಸಿಂಗ್: ಮಾಜಿ ಪ್ರಧಾನಿಗಳ ಕುರಿತು ಟ್ವಿಟರ್‌ನಲ್ಲಿ ಮೆಚ್ಚುಗೆಗೆ ಕಾರಣ?

- Advertisement -
- Advertisement -

ಹಲವು ದಿನಗಳ ನಂತರ ನಿನ್ನೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರವರು ಪ್ರಧಾನಿ ಮೋದಿ ಮತ್ತು ಅವರ ಸರ್ಕಾರದ ನೀತಿಗಳ ವಿರುದ್ಧ ಕಿಡಿಕಾರಿದ್ದರು. ‘ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ, ನಿಮ್ಮ ಸರ್ಕಾರದ ಎಲ್ಲಾ ತಪ್ಪುಗಳಿಗೂ ನೆಹರೂರವರನ್ನು ದೂರಬೇಡಿ’ ಎಂದು ತಮ್ಮ ವಿಡಿಯೋ ಸಂದೇಶದಲ್ಲಿ ಅಸಮಾಧಾನ ಹೊರಹಾಕಿದ್ದರು. ತದನಂತರ ಹಲವಾರು ಸೆಲೆಬ್ರಿಟಿಗಳು ಮಾಜಿ ಪ್ರಧಾನಿಗಳ ಬೆನ್ನಿಗೆ ನಿಂತಿದ್ದು, ಅವರಿಗೆ ಮೆಚ್ಚುಗೆ ಸಲ್ಲಿಸಿದ್ದಾರೆ. ಜೊತೆಗೆ ಹಾಲಿ ಪ್ರಧಾನಿಗಳ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

“ಒಂದೆಡೆ ಜನರು ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಮತ್ತೊಂದೆಡೆ ಕಳೆದ ಏಳೂವರೆ ವರ್ಷಗಳಿಂದ ಅಧಿಕಾರದಲ್ಲಿರುವ ಈಗಿನ ಸರ್ಕಾರವು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಸರಿಪಡಿಸುವ ಬದಲು ಜನರ ಸಮಸ್ಯೆಗಳಿಗೆ ಇನ್ನೂ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದೆ. ಪ್ರಧಾನಿ ಸ್ಥಾನಕ್ಕೆ ವಿಶೇಷ ಮಹತ್ವವಿದೆ ಎಂದು ನಾನು ಭಾವಿಸುತ್ತೇನೆ. ಪ್ರಧಾನಿಯವರು ಇತಿಹಾಸವನ್ನು ದೂಷಿಸುವ ಬದಲು ತಮ್ಮ ಘನತೆಯನ್ನು ಕಾಯ್ದುಕೊಳ್ಳಬೇಕು. ನಾನು 10 ವರ್ಷಗಳ ಕಾಲ ಪ್ರಧಾನಿಯಾಗಿದ್ದಾಗ ನನ್ನ ಕೆಲಸದ ಮೂಲಕ ಮಾತನಾಡಿದ್ದೇನೆ. ಪ್ರಪಂಚದ ಮುಂದೆ ದೇಶವು ಪ್ರತಿಷ್ಠೆಯನ್ನು ಕಳೆದುಕೊಳ್ಳಲು ನಾನು ಎಂದಿಗೂ ಬಿಡಲಿಲ್ಲ. ನಾನು ಎಂದಿಗೂ ಭಾರತದ ಹೆಮ್ಮೆಯನ್ನು ಕುಗ್ಗಿಸಿಲ್ಲ. ನನ್ನ ವಿರುದ್ಧ ದುರ್ಬಲ, ಶಾಂತ ಮತ್ತು ಭ್ರಷ್ಟ ಎಂಬ ಸುಳ್ಳು ಆರೋಪ ಮಾಡಿದ್ದ ಬಿಜೆಪಿ ಈಗ ಜಗತ್ತಿನೆದುರು ಬೆತ್ತಲುಗೊಳ್ಳುತ್ತಿದೆ” ಎಂದು ಸಿಂಗ್ ಕಿಡಿಕಾರಿದ್ದರು.

ಖ್ಯಾತ ಸ್ಟ್ಯಾಂಡಪ್ ಕಾಮಿಡಿಯನ್ ವೀರ್ ದಾಸ್, ಖ್ಯಾತ ಕಾರ್ಟೂನಿಸ್ಟ್ ಸತೀಶ್ ಆಚಾರ್ಯ ಸೇರಿದಂತೆ ಹಲವರು ಮಾಜಿ ಪ್ರಧಾನಿಗಳ ಕುರಿತು ತಮ್ಮ ಅನಿಸಿಕೆಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿಂದೆ ನಾವು ಪ್ರಧಾನಿಗಳನ್ನು ಮತ್ತು ಸರ್ಕಾರವನ್ನು ಯಾವುದೇ ಅಳುಕಿಲ್ಲದೆ ಟೀಕಿಸುತ್ತಿದ್ದೆವು, ಜೋಕ್ ಮಾಡುತ್ತಿದ್ದೆವು ಮತ್ತು ಕಾರ್ಟೂನ್ ಬರೆಯುತ್ತಿದ್ದೆವು. ಅವರು ಸಹ ಅವನ್ನು ಆನಂದಿಸುತ್ತಿದ್ದರು. ಆಗ ಈಗ ಆ ಕಾಲ ಮಾಯವಾಗಿ, ಬೆದರಿಕೆಗಳ ಕಾಲವಾಗಿದೆ ಎಂದು ಪರೋಕ್ಷವಾಗಿ ಈಗಿನ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.

ವೀರ್ ದಾಸ್ ಟ್ವೀಟ್ ಮಾಡಿ, “ಡಾ. ಮನಮೋಹನ್ ಸಿಂಗ್‌ರವರ ಸುದ್ದಿ ನೋಡಿದಾಗ ಹಿಂದಿನ ಒಂದು ಸಾಮಾನ್ಯ ಕಾಲ ನೆನಪಾಯಿತು. ನಾವು ಸಿಎನ್‌ಬಿಸಿ ಚಾನೆಲ್‌ನಲ್ಲಿ ವಾರಕ್ಕೆ ಐದು ದಿನ ಪ್ರೈಮ್‌ಟೈಮ್ ಬುಲೆಟಿನ್‌ನಲ್ಲಿ ನಮ್ಮ ಪ್ರಧಾನಿ ಮತ್ತು ಆಡಳಿತ ಪಕ್ಷದ ಬಗ್ಗೆ ಜೋಕ್ ಮಾಡಿದ್ದೇವೆ. ನಮಗೆ ಗೊತ್ತು, ಕೆಲವೊಮ್ಮೆ ಅವರು ಆ ಕಾರ್ಯಕ್ರಮ ನೋಡಿ ನಕ್ಕಿರುತ್ತಾರೆ ಎಂದು. ಈಗ ಇದೆಲ್ಲ ಶತಮಾನದ ಹಿಂದೆ ಮರೆತುಹೋದಂತೆ ಭಾಸವಾಗುತ್ತಿದೆ” ಎಂದಿದ್ದಾರೆ.

ಅದಕ್ಕೆ ಪ್ರತಿಕ್ರಿಯಿಸಿರುವ ಕಾರ್ಟೂನಿಸ್ಟ್ ಸತೀಶ್ ಆಚಾರ್ಯರವರು, “ನಿಜ. ನಾನು ಮನಮೋಹನ್ ಸಿಂಗ್ ಮತ್ತು ಅವರ ಸರ್ಕಾರದ ಮೇಲೆ ಹಲವಾರು ಕಾರ್ಟೂನ್‌ಗಳನ್ನು ಚಿತ್ರಿಸಿದ್ದೇನೆ (ಅವರ ಬಗ್ಗೆ ನನಗೆ ಅಪಾಯ ತುಂಬಾ ಗೌರವವಿದ್ದರೂ). ಆಗ ಯಾರೂ ನನ್ನನ್ನು ತಡೆಯಲು ಪ್ರಯತ್ನಿಸಲಿಲ್ಲ. ಯಾರೂ ನನ್ನನ್ನು ನಿಂದಿಸಿಲ್ಲ. ಪತ್ರಿಕೆಗಳು ಅವುಗಳನ್ನು ಪ್ರಕಟಿಸಲು ಹೆದರುತ್ತಿರಲಿಲ್ಲ. ಯಾರೂ ನನ್ನ ಕೆಲಸವನ್ನು ಕಸಿದುಕೊಳ್ಳಲು ಪ್ರಯತ್ನಿಸಲಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅನು ಮಿತ್ತಲ್ ಎಂಬುವವರು ಸಿಂಗಾಪುರದ ಪ್ರಧಾನಿಗಳ ಉದಾಹರಣೆ ನೀಡಿದ್ದಾರೆ. ‘ಸಿಂಗಾಪುರ ಪ್ರಧಾನಿಗಳ ವಿಡಿಯೋವನ್ನು ನನ್ನ ಮಗುವಿಗೆ ತೋರಿಸಿದಾಗ, “ಇವರು ನಿಜವಾಗಲೂ ಪ್ರಧಾನಿಗಳೇ, ಅವರ ಮುಖ ಮತ್ತು ಉಡುಪಿನಲ್ಲಿನ ವಿನಯ ನೋಡಿ” ಎಂಬುದು ಅವನ ಮೊದಲ ಪ್ರತಿಕ್ರಿಯೆಯಾಗಿತ್ತು. ನಮ್ಮ ಹಿಂದಿನ ಪ್ರಧಾನಿಗಳು ಸಹ ಹೀಗೆ ಇದ್ದರು. ಅವರೆಲ್ಲರೂ ತಮ್ಮ ಅದ್ವೀತಿಯ ಕೆಲಸಗಳಿಂದ ನೆನಪಿನಲ್ಲಿದ್ದಾರೆಯೆ ಹೊರತು ಅವರ ಫ್ಯಾನ್ಸಿ ಡ್ರೆಸ್‌ನಿಂದ ಅಲ್ಲ ಎಂದು ನಾನು ಮಗುವಿಗೆ ಹೇಳಿದೆ’ ಎಂದು ಪರೋಕ್ಷವಾಗಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.

“ಯಾರ್ಯಾರು ಡಾ.ಮನಮೋಹನ್ ಸಿಂಗ್‌ರವರನ್ನು ಪ್ರಧಾನಿಯಾಗಿ ಮಿಸ್ ಮಾಡಿಕೊಳ್ಳುತ್ತಿದ್ದೀರಿ” ಎಂದು ಕ್ಯಾಪ್ಟನ್ ನರೇಶ್ ಸಿಂಗ್ ಎಂಬುವವರು ಪ್ರಶ್ನಿಸಿದ್ದಾರೆ.

ನಿನ್ನೆಯ ವಿಡಿಯೋ ಸಂದೇಶದಲ್ಲಿ ಡಾ.ಸಿಂಗ್, “ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಆರ್ಥಿಕ ನೀತಿಯ ಬಗ್ಗೆ ತಿಳುವಳಿಕೆ ಇಲ್ಲ. ವಿದೇಶಾಂಗ ನೀತಿಯಲ್ಲೂ ಈ ಸರ್ಕಾರ ವಿಫಲವಾಗಿದೆ, ಚೀನಾ ನಮ್ಮ ಗಡಿಯಲ್ಲಿ ಕುಳಿತು ತಂಟೆ ಮಾಡುತ್ತಿದೆ. ಬೇರೆ ದೇಶದ ನಾಯಕರನ್ನು ಬಲವಂತವಾಗಿ ತಬ್ಬಿಕೊಳ್ಳುವುದು ಅಥವಾ ಅವರಿಗೆ ಬಿರಿಯಾನಿ ತಿನ್ನಿಸುವ ಮೂಲಕ ವಿದೇಶಾಂಗ ನೀತಿಯನ್ನು ನಡೆಸಲಾಗುವುದಿಲ್ಲ ಎಂದು ಪ್ರಧಾನಿ ಅರ್ಥಮಾಡಿಕೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ನಾವು ಎಂದಿಗೂ ಪಟ್ಟಭದ್ರ ರಾಜಕೀಯ ಲಾಭಕ್ಕಾಗಿ ದೇಶವನ್ನು ವಿಭಜಿಸಲಿಲ್ಲ. ನಾವು ಎಂದಿಗೂ ಸತ್ಯವನ್ನು ಮರೆಮಾಚಲು ಪ್ರಯತ್ನಿಸಲಿಲ್ಲ. ನಾವು ಎಂದಿಗೂ ದೇಶದ ಗೌರವ ಅಥವಾ ಪ್ರಧಾನಿ ಸ್ಥಾನಕ್ಕೆ ಧಕ್ಕೆ ತಂದಿಲ್ಲ. ಜನರು ಇಂದು ವಿಭಜನೆಯಾಗುತ್ತಿದ್ದಾರೆ. ಈ ಸರ್ಕಾರದ ನಕಲಿ ರಾಷ್ಟ್ರೀಯತೆ ಟೊಳ್ಳು ಮತ್ತು ಅಪಾಯಕಾರಿ. ಒಡೆದು ಆಳುವ ಬ್ರಿಟಿಷರ ನೀತಿಯ ಮೇಲೆ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಸರ್ಕಾರದ ಆರ್ಥಿಕ ನೀತಿಯಲ್ಲಿ ಸ್ವಾರ್ಥ ಮತ್ತು ದುರಾಸೆ ಇದೆ. ತಮ್ಮ ಸ್ವಾರ್ಥಕ್ಕಾಗಿ ಜನರನ್ನು ಒಡೆದು ಹೊಡೆದಾಡುವಂತೆ ಮಾಡುತ್ತಿದ್ದಾರೆ” ಎಂದು ತೀಕ್ಷ್ಣವಾಗಿ ಟೀಕಿಸಿದ್ದರು.


ಇದನ್ನೂ ಓದಿ; ’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...