Homeಮುಖಪುಟಹೀಗಿದ್ದರು ನಮ್ಮ ಡಾ. ಮನಮೋಹನ್ ಸಿಂಗ್: ಮಾಜಿ ಪ್ರಧಾನಿಗಳ ಕುರಿತು ಟ್ವಿಟರ್‌ನಲ್ಲಿ ಮೆಚ್ಚುಗೆಗೆ ಕಾರಣ?

ಹೀಗಿದ್ದರು ನಮ್ಮ ಡಾ. ಮನಮೋಹನ್ ಸಿಂಗ್: ಮಾಜಿ ಪ್ರಧಾನಿಗಳ ಕುರಿತು ಟ್ವಿಟರ್‌ನಲ್ಲಿ ಮೆಚ್ಚುಗೆಗೆ ಕಾರಣ?

- Advertisement -
- Advertisement -

ಹಲವು ದಿನಗಳ ನಂತರ ನಿನ್ನೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರವರು ಪ್ರಧಾನಿ ಮೋದಿ ಮತ್ತು ಅವರ ಸರ್ಕಾರದ ನೀತಿಗಳ ವಿರುದ್ಧ ಕಿಡಿಕಾರಿದ್ದರು. ‘ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ, ನಿಮ್ಮ ಸರ್ಕಾರದ ಎಲ್ಲಾ ತಪ್ಪುಗಳಿಗೂ ನೆಹರೂರವರನ್ನು ದೂರಬೇಡಿ’ ಎಂದು ತಮ್ಮ ವಿಡಿಯೋ ಸಂದೇಶದಲ್ಲಿ ಅಸಮಾಧಾನ ಹೊರಹಾಕಿದ್ದರು. ತದನಂತರ ಹಲವಾರು ಸೆಲೆಬ್ರಿಟಿಗಳು ಮಾಜಿ ಪ್ರಧಾನಿಗಳ ಬೆನ್ನಿಗೆ ನಿಂತಿದ್ದು, ಅವರಿಗೆ ಮೆಚ್ಚುಗೆ ಸಲ್ಲಿಸಿದ್ದಾರೆ. ಜೊತೆಗೆ ಹಾಲಿ ಪ್ರಧಾನಿಗಳ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

“ಒಂದೆಡೆ ಜನರು ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಮತ್ತೊಂದೆಡೆ ಕಳೆದ ಏಳೂವರೆ ವರ್ಷಗಳಿಂದ ಅಧಿಕಾರದಲ್ಲಿರುವ ಈಗಿನ ಸರ್ಕಾರವು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಸರಿಪಡಿಸುವ ಬದಲು ಜನರ ಸಮಸ್ಯೆಗಳಿಗೆ ಇನ್ನೂ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದೆ. ಪ್ರಧಾನಿ ಸ್ಥಾನಕ್ಕೆ ವಿಶೇಷ ಮಹತ್ವವಿದೆ ಎಂದು ನಾನು ಭಾವಿಸುತ್ತೇನೆ. ಪ್ರಧಾನಿಯವರು ಇತಿಹಾಸವನ್ನು ದೂಷಿಸುವ ಬದಲು ತಮ್ಮ ಘನತೆಯನ್ನು ಕಾಯ್ದುಕೊಳ್ಳಬೇಕು. ನಾನು 10 ವರ್ಷಗಳ ಕಾಲ ಪ್ರಧಾನಿಯಾಗಿದ್ದಾಗ ನನ್ನ ಕೆಲಸದ ಮೂಲಕ ಮಾತನಾಡಿದ್ದೇನೆ. ಪ್ರಪಂಚದ ಮುಂದೆ ದೇಶವು ಪ್ರತಿಷ್ಠೆಯನ್ನು ಕಳೆದುಕೊಳ್ಳಲು ನಾನು ಎಂದಿಗೂ ಬಿಡಲಿಲ್ಲ. ನಾನು ಎಂದಿಗೂ ಭಾರತದ ಹೆಮ್ಮೆಯನ್ನು ಕುಗ್ಗಿಸಿಲ್ಲ. ನನ್ನ ವಿರುದ್ಧ ದುರ್ಬಲ, ಶಾಂತ ಮತ್ತು ಭ್ರಷ್ಟ ಎಂಬ ಸುಳ್ಳು ಆರೋಪ ಮಾಡಿದ್ದ ಬಿಜೆಪಿ ಈಗ ಜಗತ್ತಿನೆದುರು ಬೆತ್ತಲುಗೊಳ್ಳುತ್ತಿದೆ” ಎಂದು ಸಿಂಗ್ ಕಿಡಿಕಾರಿದ್ದರು.

ಖ್ಯಾತ ಸ್ಟ್ಯಾಂಡಪ್ ಕಾಮಿಡಿಯನ್ ವೀರ್ ದಾಸ್, ಖ್ಯಾತ ಕಾರ್ಟೂನಿಸ್ಟ್ ಸತೀಶ್ ಆಚಾರ್ಯ ಸೇರಿದಂತೆ ಹಲವರು ಮಾಜಿ ಪ್ರಧಾನಿಗಳ ಕುರಿತು ತಮ್ಮ ಅನಿಸಿಕೆಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿಂದೆ ನಾವು ಪ್ರಧಾನಿಗಳನ್ನು ಮತ್ತು ಸರ್ಕಾರವನ್ನು ಯಾವುದೇ ಅಳುಕಿಲ್ಲದೆ ಟೀಕಿಸುತ್ತಿದ್ದೆವು, ಜೋಕ್ ಮಾಡುತ್ತಿದ್ದೆವು ಮತ್ತು ಕಾರ್ಟೂನ್ ಬರೆಯುತ್ತಿದ್ದೆವು. ಅವರು ಸಹ ಅವನ್ನು ಆನಂದಿಸುತ್ತಿದ್ದರು. ಆಗ ಈಗ ಆ ಕಾಲ ಮಾಯವಾಗಿ, ಬೆದರಿಕೆಗಳ ಕಾಲವಾಗಿದೆ ಎಂದು ಪರೋಕ್ಷವಾಗಿ ಈಗಿನ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.

ವೀರ್ ದಾಸ್ ಟ್ವೀಟ್ ಮಾಡಿ, “ಡಾ. ಮನಮೋಹನ್ ಸಿಂಗ್‌ರವರ ಸುದ್ದಿ ನೋಡಿದಾಗ ಹಿಂದಿನ ಒಂದು ಸಾಮಾನ್ಯ ಕಾಲ ನೆನಪಾಯಿತು. ನಾವು ಸಿಎನ್‌ಬಿಸಿ ಚಾನೆಲ್‌ನಲ್ಲಿ ವಾರಕ್ಕೆ ಐದು ದಿನ ಪ್ರೈಮ್‌ಟೈಮ್ ಬುಲೆಟಿನ್‌ನಲ್ಲಿ ನಮ್ಮ ಪ್ರಧಾನಿ ಮತ್ತು ಆಡಳಿತ ಪಕ್ಷದ ಬಗ್ಗೆ ಜೋಕ್ ಮಾಡಿದ್ದೇವೆ. ನಮಗೆ ಗೊತ್ತು, ಕೆಲವೊಮ್ಮೆ ಅವರು ಆ ಕಾರ್ಯಕ್ರಮ ನೋಡಿ ನಕ್ಕಿರುತ್ತಾರೆ ಎಂದು. ಈಗ ಇದೆಲ್ಲ ಶತಮಾನದ ಹಿಂದೆ ಮರೆತುಹೋದಂತೆ ಭಾಸವಾಗುತ್ತಿದೆ” ಎಂದಿದ್ದಾರೆ.

ಅದಕ್ಕೆ ಪ್ರತಿಕ್ರಿಯಿಸಿರುವ ಕಾರ್ಟೂನಿಸ್ಟ್ ಸತೀಶ್ ಆಚಾರ್ಯರವರು, “ನಿಜ. ನಾನು ಮನಮೋಹನ್ ಸಿಂಗ್ ಮತ್ತು ಅವರ ಸರ್ಕಾರದ ಮೇಲೆ ಹಲವಾರು ಕಾರ್ಟೂನ್‌ಗಳನ್ನು ಚಿತ್ರಿಸಿದ್ದೇನೆ (ಅವರ ಬಗ್ಗೆ ನನಗೆ ಅಪಾಯ ತುಂಬಾ ಗೌರವವಿದ್ದರೂ). ಆಗ ಯಾರೂ ನನ್ನನ್ನು ತಡೆಯಲು ಪ್ರಯತ್ನಿಸಲಿಲ್ಲ. ಯಾರೂ ನನ್ನನ್ನು ನಿಂದಿಸಿಲ್ಲ. ಪತ್ರಿಕೆಗಳು ಅವುಗಳನ್ನು ಪ್ರಕಟಿಸಲು ಹೆದರುತ್ತಿರಲಿಲ್ಲ. ಯಾರೂ ನನ್ನ ಕೆಲಸವನ್ನು ಕಸಿದುಕೊಳ್ಳಲು ಪ್ರಯತ್ನಿಸಲಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅನು ಮಿತ್ತಲ್ ಎಂಬುವವರು ಸಿಂಗಾಪುರದ ಪ್ರಧಾನಿಗಳ ಉದಾಹರಣೆ ನೀಡಿದ್ದಾರೆ. ‘ಸಿಂಗಾಪುರ ಪ್ರಧಾನಿಗಳ ವಿಡಿಯೋವನ್ನು ನನ್ನ ಮಗುವಿಗೆ ತೋರಿಸಿದಾಗ, “ಇವರು ನಿಜವಾಗಲೂ ಪ್ರಧಾನಿಗಳೇ, ಅವರ ಮುಖ ಮತ್ತು ಉಡುಪಿನಲ್ಲಿನ ವಿನಯ ನೋಡಿ” ಎಂಬುದು ಅವನ ಮೊದಲ ಪ್ರತಿಕ್ರಿಯೆಯಾಗಿತ್ತು. ನಮ್ಮ ಹಿಂದಿನ ಪ್ರಧಾನಿಗಳು ಸಹ ಹೀಗೆ ಇದ್ದರು. ಅವರೆಲ್ಲರೂ ತಮ್ಮ ಅದ್ವೀತಿಯ ಕೆಲಸಗಳಿಂದ ನೆನಪಿನಲ್ಲಿದ್ದಾರೆಯೆ ಹೊರತು ಅವರ ಫ್ಯಾನ್ಸಿ ಡ್ರೆಸ್‌ನಿಂದ ಅಲ್ಲ ಎಂದು ನಾನು ಮಗುವಿಗೆ ಹೇಳಿದೆ’ ಎಂದು ಪರೋಕ್ಷವಾಗಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.

“ಯಾರ್ಯಾರು ಡಾ.ಮನಮೋಹನ್ ಸಿಂಗ್‌ರವರನ್ನು ಪ್ರಧಾನಿಯಾಗಿ ಮಿಸ್ ಮಾಡಿಕೊಳ್ಳುತ್ತಿದ್ದೀರಿ” ಎಂದು ಕ್ಯಾಪ್ಟನ್ ನರೇಶ್ ಸಿಂಗ್ ಎಂಬುವವರು ಪ್ರಶ್ನಿಸಿದ್ದಾರೆ.

ನಿನ್ನೆಯ ವಿಡಿಯೋ ಸಂದೇಶದಲ್ಲಿ ಡಾ.ಸಿಂಗ್, “ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಆರ್ಥಿಕ ನೀತಿಯ ಬಗ್ಗೆ ತಿಳುವಳಿಕೆ ಇಲ್ಲ. ವಿದೇಶಾಂಗ ನೀತಿಯಲ್ಲೂ ಈ ಸರ್ಕಾರ ವಿಫಲವಾಗಿದೆ, ಚೀನಾ ನಮ್ಮ ಗಡಿಯಲ್ಲಿ ಕುಳಿತು ತಂಟೆ ಮಾಡುತ್ತಿದೆ. ಬೇರೆ ದೇಶದ ನಾಯಕರನ್ನು ಬಲವಂತವಾಗಿ ತಬ್ಬಿಕೊಳ್ಳುವುದು ಅಥವಾ ಅವರಿಗೆ ಬಿರಿಯಾನಿ ತಿನ್ನಿಸುವ ಮೂಲಕ ವಿದೇಶಾಂಗ ನೀತಿಯನ್ನು ನಡೆಸಲಾಗುವುದಿಲ್ಲ ಎಂದು ಪ್ರಧಾನಿ ಅರ್ಥಮಾಡಿಕೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ನಾವು ಎಂದಿಗೂ ಪಟ್ಟಭದ್ರ ರಾಜಕೀಯ ಲಾಭಕ್ಕಾಗಿ ದೇಶವನ್ನು ವಿಭಜಿಸಲಿಲ್ಲ. ನಾವು ಎಂದಿಗೂ ಸತ್ಯವನ್ನು ಮರೆಮಾಚಲು ಪ್ರಯತ್ನಿಸಲಿಲ್ಲ. ನಾವು ಎಂದಿಗೂ ದೇಶದ ಗೌರವ ಅಥವಾ ಪ್ರಧಾನಿ ಸ್ಥಾನಕ್ಕೆ ಧಕ್ಕೆ ತಂದಿಲ್ಲ. ಜನರು ಇಂದು ವಿಭಜನೆಯಾಗುತ್ತಿದ್ದಾರೆ. ಈ ಸರ್ಕಾರದ ನಕಲಿ ರಾಷ್ಟ್ರೀಯತೆ ಟೊಳ್ಳು ಮತ್ತು ಅಪಾಯಕಾರಿ. ಒಡೆದು ಆಳುವ ಬ್ರಿಟಿಷರ ನೀತಿಯ ಮೇಲೆ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಸರ್ಕಾರದ ಆರ್ಥಿಕ ನೀತಿಯಲ್ಲಿ ಸ್ವಾರ್ಥ ಮತ್ತು ದುರಾಸೆ ಇದೆ. ತಮ್ಮ ಸ್ವಾರ್ಥಕ್ಕಾಗಿ ಜನರನ್ನು ಒಡೆದು ಹೊಡೆದಾಡುವಂತೆ ಮಾಡುತ್ತಿದ್ದಾರೆ” ಎಂದು ತೀಕ್ಷ್ಣವಾಗಿ ಟೀಕಿಸಿದ್ದರು.


ಇದನ್ನೂ ಓದಿ; ’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...