Homeಮುಖಪುಟಹೀಗಿದ್ದರು ನಮ್ಮ ಡಾ. ಮನಮೋಹನ್ ಸಿಂಗ್: ಮಾಜಿ ಪ್ರಧಾನಿಗಳ ಕುರಿತು ಟ್ವಿಟರ್‌ನಲ್ಲಿ ಮೆಚ್ಚುಗೆಗೆ ಕಾರಣ?

ಹೀಗಿದ್ದರು ನಮ್ಮ ಡಾ. ಮನಮೋಹನ್ ಸಿಂಗ್: ಮಾಜಿ ಪ್ರಧಾನಿಗಳ ಕುರಿತು ಟ್ವಿಟರ್‌ನಲ್ಲಿ ಮೆಚ್ಚುಗೆಗೆ ಕಾರಣ?

- Advertisement -
- Advertisement -

ಹಲವು ದಿನಗಳ ನಂತರ ನಿನ್ನೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರವರು ಪ್ರಧಾನಿ ಮೋದಿ ಮತ್ತು ಅವರ ಸರ್ಕಾರದ ನೀತಿಗಳ ವಿರುದ್ಧ ಕಿಡಿಕಾರಿದ್ದರು. ‘ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ, ನಿಮ್ಮ ಸರ್ಕಾರದ ಎಲ್ಲಾ ತಪ್ಪುಗಳಿಗೂ ನೆಹರೂರವರನ್ನು ದೂರಬೇಡಿ’ ಎಂದು ತಮ್ಮ ವಿಡಿಯೋ ಸಂದೇಶದಲ್ಲಿ ಅಸಮಾಧಾನ ಹೊರಹಾಕಿದ್ದರು. ತದನಂತರ ಹಲವಾರು ಸೆಲೆಬ್ರಿಟಿಗಳು ಮಾಜಿ ಪ್ರಧಾನಿಗಳ ಬೆನ್ನಿಗೆ ನಿಂತಿದ್ದು, ಅವರಿಗೆ ಮೆಚ್ಚುಗೆ ಸಲ್ಲಿಸಿದ್ದಾರೆ. ಜೊತೆಗೆ ಹಾಲಿ ಪ್ರಧಾನಿಗಳ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

“ಒಂದೆಡೆ ಜನರು ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಮತ್ತೊಂದೆಡೆ ಕಳೆದ ಏಳೂವರೆ ವರ್ಷಗಳಿಂದ ಅಧಿಕಾರದಲ್ಲಿರುವ ಈಗಿನ ಸರ್ಕಾರವು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಸರಿಪಡಿಸುವ ಬದಲು ಜನರ ಸಮಸ್ಯೆಗಳಿಗೆ ಇನ್ನೂ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದೆ. ಪ್ರಧಾನಿ ಸ್ಥಾನಕ್ಕೆ ವಿಶೇಷ ಮಹತ್ವವಿದೆ ಎಂದು ನಾನು ಭಾವಿಸುತ್ತೇನೆ. ಪ್ರಧಾನಿಯವರು ಇತಿಹಾಸವನ್ನು ದೂಷಿಸುವ ಬದಲು ತಮ್ಮ ಘನತೆಯನ್ನು ಕಾಯ್ದುಕೊಳ್ಳಬೇಕು. ನಾನು 10 ವರ್ಷಗಳ ಕಾಲ ಪ್ರಧಾನಿಯಾಗಿದ್ದಾಗ ನನ್ನ ಕೆಲಸದ ಮೂಲಕ ಮಾತನಾಡಿದ್ದೇನೆ. ಪ್ರಪಂಚದ ಮುಂದೆ ದೇಶವು ಪ್ರತಿಷ್ಠೆಯನ್ನು ಕಳೆದುಕೊಳ್ಳಲು ನಾನು ಎಂದಿಗೂ ಬಿಡಲಿಲ್ಲ. ನಾನು ಎಂದಿಗೂ ಭಾರತದ ಹೆಮ್ಮೆಯನ್ನು ಕುಗ್ಗಿಸಿಲ್ಲ. ನನ್ನ ವಿರುದ್ಧ ದುರ್ಬಲ, ಶಾಂತ ಮತ್ತು ಭ್ರಷ್ಟ ಎಂಬ ಸುಳ್ಳು ಆರೋಪ ಮಾಡಿದ್ದ ಬಿಜೆಪಿ ಈಗ ಜಗತ್ತಿನೆದುರು ಬೆತ್ತಲುಗೊಳ್ಳುತ್ತಿದೆ” ಎಂದು ಸಿಂಗ್ ಕಿಡಿಕಾರಿದ್ದರು.

ಖ್ಯಾತ ಸ್ಟ್ಯಾಂಡಪ್ ಕಾಮಿಡಿಯನ್ ವೀರ್ ದಾಸ್, ಖ್ಯಾತ ಕಾರ್ಟೂನಿಸ್ಟ್ ಸತೀಶ್ ಆಚಾರ್ಯ ಸೇರಿದಂತೆ ಹಲವರು ಮಾಜಿ ಪ್ರಧಾನಿಗಳ ಕುರಿತು ತಮ್ಮ ಅನಿಸಿಕೆಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿಂದೆ ನಾವು ಪ್ರಧಾನಿಗಳನ್ನು ಮತ್ತು ಸರ್ಕಾರವನ್ನು ಯಾವುದೇ ಅಳುಕಿಲ್ಲದೆ ಟೀಕಿಸುತ್ತಿದ್ದೆವು, ಜೋಕ್ ಮಾಡುತ್ತಿದ್ದೆವು ಮತ್ತು ಕಾರ್ಟೂನ್ ಬರೆಯುತ್ತಿದ್ದೆವು. ಅವರು ಸಹ ಅವನ್ನು ಆನಂದಿಸುತ್ತಿದ್ದರು. ಆಗ ಈಗ ಆ ಕಾಲ ಮಾಯವಾಗಿ, ಬೆದರಿಕೆಗಳ ಕಾಲವಾಗಿದೆ ಎಂದು ಪರೋಕ್ಷವಾಗಿ ಈಗಿನ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.

ವೀರ್ ದಾಸ್ ಟ್ವೀಟ್ ಮಾಡಿ, “ಡಾ. ಮನಮೋಹನ್ ಸಿಂಗ್‌ರವರ ಸುದ್ದಿ ನೋಡಿದಾಗ ಹಿಂದಿನ ಒಂದು ಸಾಮಾನ್ಯ ಕಾಲ ನೆನಪಾಯಿತು. ನಾವು ಸಿಎನ್‌ಬಿಸಿ ಚಾನೆಲ್‌ನಲ್ಲಿ ವಾರಕ್ಕೆ ಐದು ದಿನ ಪ್ರೈಮ್‌ಟೈಮ್ ಬುಲೆಟಿನ್‌ನಲ್ಲಿ ನಮ್ಮ ಪ್ರಧಾನಿ ಮತ್ತು ಆಡಳಿತ ಪಕ್ಷದ ಬಗ್ಗೆ ಜೋಕ್ ಮಾಡಿದ್ದೇವೆ. ನಮಗೆ ಗೊತ್ತು, ಕೆಲವೊಮ್ಮೆ ಅವರು ಆ ಕಾರ್ಯಕ್ರಮ ನೋಡಿ ನಕ್ಕಿರುತ್ತಾರೆ ಎಂದು. ಈಗ ಇದೆಲ್ಲ ಶತಮಾನದ ಹಿಂದೆ ಮರೆತುಹೋದಂತೆ ಭಾಸವಾಗುತ್ತಿದೆ” ಎಂದಿದ್ದಾರೆ.

ಅದಕ್ಕೆ ಪ್ರತಿಕ್ರಿಯಿಸಿರುವ ಕಾರ್ಟೂನಿಸ್ಟ್ ಸತೀಶ್ ಆಚಾರ್ಯರವರು, “ನಿಜ. ನಾನು ಮನಮೋಹನ್ ಸಿಂಗ್ ಮತ್ತು ಅವರ ಸರ್ಕಾರದ ಮೇಲೆ ಹಲವಾರು ಕಾರ್ಟೂನ್‌ಗಳನ್ನು ಚಿತ್ರಿಸಿದ್ದೇನೆ (ಅವರ ಬಗ್ಗೆ ನನಗೆ ಅಪಾಯ ತುಂಬಾ ಗೌರವವಿದ್ದರೂ). ಆಗ ಯಾರೂ ನನ್ನನ್ನು ತಡೆಯಲು ಪ್ರಯತ್ನಿಸಲಿಲ್ಲ. ಯಾರೂ ನನ್ನನ್ನು ನಿಂದಿಸಿಲ್ಲ. ಪತ್ರಿಕೆಗಳು ಅವುಗಳನ್ನು ಪ್ರಕಟಿಸಲು ಹೆದರುತ್ತಿರಲಿಲ್ಲ. ಯಾರೂ ನನ್ನ ಕೆಲಸವನ್ನು ಕಸಿದುಕೊಳ್ಳಲು ಪ್ರಯತ್ನಿಸಲಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅನು ಮಿತ್ತಲ್ ಎಂಬುವವರು ಸಿಂಗಾಪುರದ ಪ್ರಧಾನಿಗಳ ಉದಾಹರಣೆ ನೀಡಿದ್ದಾರೆ. ‘ಸಿಂಗಾಪುರ ಪ್ರಧಾನಿಗಳ ವಿಡಿಯೋವನ್ನು ನನ್ನ ಮಗುವಿಗೆ ತೋರಿಸಿದಾಗ, “ಇವರು ನಿಜವಾಗಲೂ ಪ್ರಧಾನಿಗಳೇ, ಅವರ ಮುಖ ಮತ್ತು ಉಡುಪಿನಲ್ಲಿನ ವಿನಯ ನೋಡಿ” ಎಂಬುದು ಅವನ ಮೊದಲ ಪ್ರತಿಕ್ರಿಯೆಯಾಗಿತ್ತು. ನಮ್ಮ ಹಿಂದಿನ ಪ್ರಧಾನಿಗಳು ಸಹ ಹೀಗೆ ಇದ್ದರು. ಅವರೆಲ್ಲರೂ ತಮ್ಮ ಅದ್ವೀತಿಯ ಕೆಲಸಗಳಿಂದ ನೆನಪಿನಲ್ಲಿದ್ದಾರೆಯೆ ಹೊರತು ಅವರ ಫ್ಯಾನ್ಸಿ ಡ್ರೆಸ್‌ನಿಂದ ಅಲ್ಲ ಎಂದು ನಾನು ಮಗುವಿಗೆ ಹೇಳಿದೆ’ ಎಂದು ಪರೋಕ್ಷವಾಗಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.

“ಯಾರ್ಯಾರು ಡಾ.ಮನಮೋಹನ್ ಸಿಂಗ್‌ರವರನ್ನು ಪ್ರಧಾನಿಯಾಗಿ ಮಿಸ್ ಮಾಡಿಕೊಳ್ಳುತ್ತಿದ್ದೀರಿ” ಎಂದು ಕ್ಯಾಪ್ಟನ್ ನರೇಶ್ ಸಿಂಗ್ ಎಂಬುವವರು ಪ್ರಶ್ನಿಸಿದ್ದಾರೆ.

ನಿನ್ನೆಯ ವಿಡಿಯೋ ಸಂದೇಶದಲ್ಲಿ ಡಾ.ಸಿಂಗ್, “ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಆರ್ಥಿಕ ನೀತಿಯ ಬಗ್ಗೆ ತಿಳುವಳಿಕೆ ಇಲ್ಲ. ವಿದೇಶಾಂಗ ನೀತಿಯಲ್ಲೂ ಈ ಸರ್ಕಾರ ವಿಫಲವಾಗಿದೆ, ಚೀನಾ ನಮ್ಮ ಗಡಿಯಲ್ಲಿ ಕುಳಿತು ತಂಟೆ ಮಾಡುತ್ತಿದೆ. ಬೇರೆ ದೇಶದ ನಾಯಕರನ್ನು ಬಲವಂತವಾಗಿ ತಬ್ಬಿಕೊಳ್ಳುವುದು ಅಥವಾ ಅವರಿಗೆ ಬಿರಿಯಾನಿ ತಿನ್ನಿಸುವ ಮೂಲಕ ವಿದೇಶಾಂಗ ನೀತಿಯನ್ನು ನಡೆಸಲಾಗುವುದಿಲ್ಲ ಎಂದು ಪ್ರಧಾನಿ ಅರ್ಥಮಾಡಿಕೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ನಾವು ಎಂದಿಗೂ ಪಟ್ಟಭದ್ರ ರಾಜಕೀಯ ಲಾಭಕ್ಕಾಗಿ ದೇಶವನ್ನು ವಿಭಜಿಸಲಿಲ್ಲ. ನಾವು ಎಂದಿಗೂ ಸತ್ಯವನ್ನು ಮರೆಮಾಚಲು ಪ್ರಯತ್ನಿಸಲಿಲ್ಲ. ನಾವು ಎಂದಿಗೂ ದೇಶದ ಗೌರವ ಅಥವಾ ಪ್ರಧಾನಿ ಸ್ಥಾನಕ್ಕೆ ಧಕ್ಕೆ ತಂದಿಲ್ಲ. ಜನರು ಇಂದು ವಿಭಜನೆಯಾಗುತ್ತಿದ್ದಾರೆ. ಈ ಸರ್ಕಾರದ ನಕಲಿ ರಾಷ್ಟ್ರೀಯತೆ ಟೊಳ್ಳು ಮತ್ತು ಅಪಾಯಕಾರಿ. ಒಡೆದು ಆಳುವ ಬ್ರಿಟಿಷರ ನೀತಿಯ ಮೇಲೆ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಸರ್ಕಾರದ ಆರ್ಥಿಕ ನೀತಿಯಲ್ಲಿ ಸ್ವಾರ್ಥ ಮತ್ತು ದುರಾಸೆ ಇದೆ. ತಮ್ಮ ಸ್ವಾರ್ಥಕ್ಕಾಗಿ ಜನರನ್ನು ಒಡೆದು ಹೊಡೆದಾಡುವಂತೆ ಮಾಡುತ್ತಿದ್ದಾರೆ” ಎಂದು ತೀಕ್ಷ್ಣವಾಗಿ ಟೀಕಿಸಿದ್ದರು.


ಇದನ್ನೂ ಓದಿ; ’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...