Homeಕರ್ನಾಟಕ'ಇದೇ ನಿಮ್ಮ ನಿಜವಾದ ಜಾತಕ..'; ಪ್ರಲ್ಹಾದ ಜೋಷಿ 'ರಾಜಕೀಯ ತಂತ್ರಗಾರಿಕೆ' ವಾಟ್ಸಾಪ್ ಸಂದೇಶ ವೈರಲ್

‘ಇದೇ ನಿಮ್ಮ ನಿಜವಾದ ಜಾತಕ..’; ಪ್ರಲ್ಹಾದ ಜೋಷಿ ‘ರಾಜಕೀಯ ತಂತ್ರಗಾರಿಕೆ’ ವಾಟ್ಸಾಪ್ ಸಂದೇಶ ವೈರಲ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಬಿಜೆಪಿ ಲೋಕಸಭಾ ಅಭ್ಯರ್ಥಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದಲ್ಲಿ ಎದ್ದಿರುವ ಅಸಮಾಧಾನ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಈ ಹೊತ್ತಿನಲ್ಲೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ವೀರಶೈವ ಲಿಂಗಾಯಿತ ಸ್ವಾಮೀಜಿಗಳ ಬಂಡಾಯ ಸಾರಿದ್ದು, ಇದೀಗ ಜೋಷಿ ವಿರುದ್ಧ 12 ಅಂಶಗಳ ಚಾರ್ಜ್ ಶೀಟ್ ಒಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.

ವಾಟ್ಸಾಪ್ ಸಂದೇಶದಲ್ಲಿ ಏನಿದೆ?

‘ಮಿ. ಜೋಷಿ, ಹಳ್ಳಿ ಜನ ದಡ್ಡರಲ್ಲ, ಅವರಿಗೆ ನಿಮ್ಮ ಜಾತಕ ಚೆನ್ನಾಗಿ ಗೊತ್ತಿದೆ. ನಿಮ್ಮ ಜಾತಕ ನಾ ಹೇಳತೀನಿ ಕೇಳ್ರಿ; ಇದೂ ಯಾರಿಗೂ ಗೊತ್ತಿಲ್ಲಾಂತ ತಿಳಿಬೇಡ್ರಿ.. ಎಂದು ಕಟುವಾಗಿ ಟೀಕಿಸಿರುವ ಸಂದೇಶದಲ್ಲಿ, ಜೋಷಿ ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ನಡೆಸಿರುವ ತಂತ್ರಗಾರಿಕೆಗೆ ಸಂಬಂಧಿಸಿದಂತೆ ಒಟ್ಟು ಹನ್ನೆರಡು ಅಂಶಗಳನ್ನು ಪಟ್ಟಿ ಮಾಡಲಾಗಿದೆ.

ಅಮೃತ್ ದೇಸಾಯಿ ಹೆಗಲ ಮೇಲೆ ಬಂದೂಕು ಇಟ್ಟು ಸೀಮಾ ಮಸೂತಿ ಹೊಡೆದ್ರಿ, ⁠ನಾಗರಾಜ್ ಚಬ್ಬಿ ಕರ್ಕೊಂಡು ಬಂದು ಶಿವು ಹಿರೇಮಠ್ ಅವರನ್ ನಿತ್ರಾಣ ಮಾಡಿದಿರಿ, ⁠ಈರೇಶ್ ಅಂಚಟಗೇರಿನ್ ಚೂ ಬಿಟ್ಟು ಅರವಿಂದ್ ಬೆಲ್ಲದ್ ಹೊಡೆಯಾಕ್ ಪ್ರಯತ್ನ ಪಟ್ರಿ, ⁠ಅದೇ ಬೆಲ್ಲದ್ ಬಳಸ್ಕೊಂಡು ಮುನೇನಕೊಪ್ಪನ್ ಹೊಡೆಯಾಕ್ ಟ್ರೈ ಮಾಡಿದ್ರಿ, ⁠ಅಧಿಕಾರ ದುರ್ಬಳಕೆ ಮಾಡಿಕೊಂಡು ವಿನಯ್ ಕುಲಕರ್ಣಿನ್ ಜೈಲಿಗಟ್ಟಿ, ಜಿಲ್ಲೆಯೊಳಗ ಕಾಲ್ ಇಡದಂಗ್ ಮಾಡಿದ್ರಿ’ ಎಂದು ಆರೋಪ ಮಾಡಿದ್ದಾರೆ.

ಮುಂದುವರಿದು, ‘⁠ಡಾ.ನಾಲವಾಡ್ ಅವರಿಗೆ ಆಸೆ ಹುಟ್ಟಿಸಿ ಹಾವೇರಿಗೆ ಕಳಿಸಿ ಹೈರಾಣ ಮಾಡಿದ್ರಿ, ⁠ಡಾ.ನಾಲವಾಡ್ ಹಿಂದೆನೇ ಶರಣು ಅಂಗಡಿನೂ ಚೂ ಬಿಟ್ಟು ಮಜಾ ನೋಡಿದ್ರಿ, ⁠ಹೈಕಮಾಂಡ್ ಹೆಗಲ ಮೇಲೆ ಬಂದೂಕು ಇಟ್ಟು ಜಗದೀಶ್ ಶೆಟ್ರಿಗೆ ಟಿಕೆಟ್ ಕೊಡದೇ ಅಸಹ್ಯ ಮಾಡಿದ್ರಿ, ಈಗ ಧಾರವಾಡ ಜಿಲ್ಲೆಯಿಂದಲೇ ಹೊರಗ ಹಾಕಿದ್ರಿ, ⁠ಎಂ.ಆರ್.ಪಾಟೀಲ್ ಬಳಸಕೊಂಡು ಚಿಕ್ಕನಗೌಡ್ರನ್ ಮುಗಿಸಿದಿರಿ. ⁠ಅನಂತ್ ಕುಮಾರ್ ಕೈ ಹಿಡ್ಕೊಂಡ್ ಮೇಲೆ ಬಂದು ಅವರ್ ಸತ್ ಮೇಲೆ ಅವರ ಕುಟುಂಬದ್ ಬೆನ್ನಾಗ್ ಚೂರಿ ಹಾಕಿದ್ರಿ. ⁠ನಿಂಬಣ್ಣವರ್ ವಯಸ್ಸೂ ನೋಡದೇ ಎಲ್ಲಾ ಕಡೆ ಅಸಹ್ಯ ಮಾಡಿದ್ರಿ, ಸಾಯೂತನಕ ಬಿಡಲಿಲ್ಲ. ⁠ವಿಜಯ್ ಸಂಕೇಶ್ವರ್ ಕೊಟ್ಟ ಭಿಕ್ಷೆಯಲ್ಲಿ ಎಂಪಿ ಆಗಿ ಅವರ ಬಗ್ಗೆ ತುಚ್ಛವಾಗಿ ಮಾತಾಡಿದ್ರಿ, ಇದೇ ನಿಮ್ಮ ನಿಜವಾದ ಜಾತಕ’ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸಚಿವ  ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದ ಮುಖಂಡರ ಕೋಪ ಇನ್ನೂ ತಣ್ಣಗಾಗಿಲ್ಲ. ಬಹುತೇಕ ಲಿಂಗಾಯತ ಮತ್ತು ಒಬಿಸಿ ಸಮುದಾಯದ ಮಠಾಧಿಶರು ಜೋಷಿ ವಿರುದ್ಧವಾಗಿ ನಿಂತಿದ್ದು, ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ವಾಟ್ಸಾಪ್ ಗುಂಪುಗಳಲ್ಲಿ ಈ ಸಂದೇಶ ಹರಿದಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಮುಜುಗರ ತಂದಿದೆ.

ಈ ನಡುವೆ ಲಿಂಗಾಯತ ಸಮಾಜದ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆರೋಪಿಸಿ ಪ್ರಲ್ಹಾದ ಜೋಶಿ ವಿರುದ್ಧ ಸಿಡಿದೆದ್ದಿರುವ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂಬ ಒತ್ತಡ ದಿನೇದಿನೇ ಹೆಚ್ಚಾಗುತ್ತಿದೆ. ಸ್ವಾಮೀಜಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ; ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...