Homeಕರ್ನಾಟಕ'ಇದೇ ನಿಮ್ಮ ನಿಜವಾದ ಜಾತಕ..'; ಪ್ರಲ್ಹಾದ ಜೋಷಿ 'ರಾಜಕೀಯ ತಂತ್ರಗಾರಿಕೆ' ವಾಟ್ಸಾಪ್ ಸಂದೇಶ ವೈರಲ್

‘ಇದೇ ನಿಮ್ಮ ನಿಜವಾದ ಜಾತಕ..’; ಪ್ರಲ್ಹಾದ ಜೋಷಿ ‘ರಾಜಕೀಯ ತಂತ್ರಗಾರಿಕೆ’ ವಾಟ್ಸಾಪ್ ಸಂದೇಶ ವೈರಲ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಬಿಜೆಪಿ ಲೋಕಸಭಾ ಅಭ್ಯರ್ಥಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದಲ್ಲಿ ಎದ್ದಿರುವ ಅಸಮಾಧಾನ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಈ ಹೊತ್ತಿನಲ್ಲೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ವೀರಶೈವ ಲಿಂಗಾಯಿತ ಸ್ವಾಮೀಜಿಗಳ ಬಂಡಾಯ ಸಾರಿದ್ದು, ಇದೀಗ ಜೋಷಿ ವಿರುದ್ಧ 12 ಅಂಶಗಳ ಚಾರ್ಜ್ ಶೀಟ್ ಒಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.

ವಾಟ್ಸಾಪ್ ಸಂದೇಶದಲ್ಲಿ ಏನಿದೆ?

‘ಮಿ. ಜೋಷಿ, ಹಳ್ಳಿ ಜನ ದಡ್ಡರಲ್ಲ, ಅವರಿಗೆ ನಿಮ್ಮ ಜಾತಕ ಚೆನ್ನಾಗಿ ಗೊತ್ತಿದೆ. ನಿಮ್ಮ ಜಾತಕ ನಾ ಹೇಳತೀನಿ ಕೇಳ್ರಿ; ಇದೂ ಯಾರಿಗೂ ಗೊತ್ತಿಲ್ಲಾಂತ ತಿಳಿಬೇಡ್ರಿ.. ಎಂದು ಕಟುವಾಗಿ ಟೀಕಿಸಿರುವ ಸಂದೇಶದಲ್ಲಿ, ಜೋಷಿ ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ನಡೆಸಿರುವ ತಂತ್ರಗಾರಿಕೆಗೆ ಸಂಬಂಧಿಸಿದಂತೆ ಒಟ್ಟು ಹನ್ನೆರಡು ಅಂಶಗಳನ್ನು ಪಟ್ಟಿ ಮಾಡಲಾಗಿದೆ.

ಅಮೃತ್ ದೇಸಾಯಿ ಹೆಗಲ ಮೇಲೆ ಬಂದೂಕು ಇಟ್ಟು ಸೀಮಾ ಮಸೂತಿ ಹೊಡೆದ್ರಿ, ⁠ನಾಗರಾಜ್ ಚಬ್ಬಿ ಕರ್ಕೊಂಡು ಬಂದು ಶಿವು ಹಿರೇಮಠ್ ಅವರನ್ ನಿತ್ರಾಣ ಮಾಡಿದಿರಿ, ⁠ಈರೇಶ್ ಅಂಚಟಗೇರಿನ್ ಚೂ ಬಿಟ್ಟು ಅರವಿಂದ್ ಬೆಲ್ಲದ್ ಹೊಡೆಯಾಕ್ ಪ್ರಯತ್ನ ಪಟ್ರಿ, ⁠ಅದೇ ಬೆಲ್ಲದ್ ಬಳಸ್ಕೊಂಡು ಮುನೇನಕೊಪ್ಪನ್ ಹೊಡೆಯಾಕ್ ಟ್ರೈ ಮಾಡಿದ್ರಿ, ⁠ಅಧಿಕಾರ ದುರ್ಬಳಕೆ ಮಾಡಿಕೊಂಡು ವಿನಯ್ ಕುಲಕರ್ಣಿನ್ ಜೈಲಿಗಟ್ಟಿ, ಜಿಲ್ಲೆಯೊಳಗ ಕಾಲ್ ಇಡದಂಗ್ ಮಾಡಿದ್ರಿ’ ಎಂದು ಆರೋಪ ಮಾಡಿದ್ದಾರೆ.

ಮುಂದುವರಿದು, ‘⁠ಡಾ.ನಾಲವಾಡ್ ಅವರಿಗೆ ಆಸೆ ಹುಟ್ಟಿಸಿ ಹಾವೇರಿಗೆ ಕಳಿಸಿ ಹೈರಾಣ ಮಾಡಿದ್ರಿ, ⁠ಡಾ.ನಾಲವಾಡ್ ಹಿಂದೆನೇ ಶರಣು ಅಂಗಡಿನೂ ಚೂ ಬಿಟ್ಟು ಮಜಾ ನೋಡಿದ್ರಿ, ⁠ಹೈಕಮಾಂಡ್ ಹೆಗಲ ಮೇಲೆ ಬಂದೂಕು ಇಟ್ಟು ಜಗದೀಶ್ ಶೆಟ್ರಿಗೆ ಟಿಕೆಟ್ ಕೊಡದೇ ಅಸಹ್ಯ ಮಾಡಿದ್ರಿ, ಈಗ ಧಾರವಾಡ ಜಿಲ್ಲೆಯಿಂದಲೇ ಹೊರಗ ಹಾಕಿದ್ರಿ, ⁠ಎಂ.ಆರ್.ಪಾಟೀಲ್ ಬಳಸಕೊಂಡು ಚಿಕ್ಕನಗೌಡ್ರನ್ ಮುಗಿಸಿದಿರಿ. ⁠ಅನಂತ್ ಕುಮಾರ್ ಕೈ ಹಿಡ್ಕೊಂಡ್ ಮೇಲೆ ಬಂದು ಅವರ್ ಸತ್ ಮೇಲೆ ಅವರ ಕುಟುಂಬದ್ ಬೆನ್ನಾಗ್ ಚೂರಿ ಹಾಕಿದ್ರಿ. ⁠ನಿಂಬಣ್ಣವರ್ ವಯಸ್ಸೂ ನೋಡದೇ ಎಲ್ಲಾ ಕಡೆ ಅಸಹ್ಯ ಮಾಡಿದ್ರಿ, ಸಾಯೂತನಕ ಬಿಡಲಿಲ್ಲ. ⁠ವಿಜಯ್ ಸಂಕೇಶ್ವರ್ ಕೊಟ್ಟ ಭಿಕ್ಷೆಯಲ್ಲಿ ಎಂಪಿ ಆಗಿ ಅವರ ಬಗ್ಗೆ ತುಚ್ಛವಾಗಿ ಮಾತಾಡಿದ್ರಿ, ಇದೇ ನಿಮ್ಮ ನಿಜವಾದ ಜಾತಕ’ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸಚಿವ  ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದ ಮುಖಂಡರ ಕೋಪ ಇನ್ನೂ ತಣ್ಣಗಾಗಿಲ್ಲ. ಬಹುತೇಕ ಲಿಂಗಾಯತ ಮತ್ತು ಒಬಿಸಿ ಸಮುದಾಯದ ಮಠಾಧಿಶರು ಜೋಷಿ ವಿರುದ್ಧವಾಗಿ ನಿಂತಿದ್ದು, ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ವಾಟ್ಸಾಪ್ ಗುಂಪುಗಳಲ್ಲಿ ಈ ಸಂದೇಶ ಹರಿದಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಮುಜುಗರ ತಂದಿದೆ.

ಈ ನಡುವೆ ಲಿಂಗಾಯತ ಸಮಾಜದ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆರೋಪಿಸಿ ಪ್ರಲ್ಹಾದ ಜೋಶಿ ವಿರುದ್ಧ ಸಿಡಿದೆದ್ದಿರುವ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂಬ ಒತ್ತಡ ದಿನೇದಿನೇ ಹೆಚ್ಚಾಗುತ್ತಿದೆ. ಸ್ವಾಮೀಜಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ; ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...