Homeಕರ್ನಾಟಕ'ಇದೇ ನಿಮ್ಮ ನಿಜವಾದ ಜಾತಕ..'; ಪ್ರಲ್ಹಾದ ಜೋಷಿ 'ರಾಜಕೀಯ ತಂತ್ರಗಾರಿಕೆ' ವಾಟ್ಸಾಪ್ ಸಂದೇಶ ವೈರಲ್

‘ಇದೇ ನಿಮ್ಮ ನಿಜವಾದ ಜಾತಕ..’; ಪ್ರಲ್ಹಾದ ಜೋಷಿ ‘ರಾಜಕೀಯ ತಂತ್ರಗಾರಿಕೆ’ ವಾಟ್ಸಾಪ್ ಸಂದೇಶ ವೈರಲ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಬಿಜೆಪಿ ಲೋಕಸಭಾ ಅಭ್ಯರ್ಥಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದಲ್ಲಿ ಎದ್ದಿರುವ ಅಸಮಾಧಾನ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಈ ಹೊತ್ತಿನಲ್ಲೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ವೀರಶೈವ ಲಿಂಗಾಯಿತ ಸ್ವಾಮೀಜಿಗಳ ಬಂಡಾಯ ಸಾರಿದ್ದು, ಇದೀಗ ಜೋಷಿ ವಿರುದ್ಧ 12 ಅಂಶಗಳ ಚಾರ್ಜ್ ಶೀಟ್ ಒಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.

ವಾಟ್ಸಾಪ್ ಸಂದೇಶದಲ್ಲಿ ಏನಿದೆ?

‘ಮಿ. ಜೋಷಿ, ಹಳ್ಳಿ ಜನ ದಡ್ಡರಲ್ಲ, ಅವರಿಗೆ ನಿಮ್ಮ ಜಾತಕ ಚೆನ್ನಾಗಿ ಗೊತ್ತಿದೆ. ನಿಮ್ಮ ಜಾತಕ ನಾ ಹೇಳತೀನಿ ಕೇಳ್ರಿ; ಇದೂ ಯಾರಿಗೂ ಗೊತ್ತಿಲ್ಲಾಂತ ತಿಳಿಬೇಡ್ರಿ.. ಎಂದು ಕಟುವಾಗಿ ಟೀಕಿಸಿರುವ ಸಂದೇಶದಲ್ಲಿ, ಜೋಷಿ ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ನಡೆಸಿರುವ ತಂತ್ರಗಾರಿಕೆಗೆ ಸಂಬಂಧಿಸಿದಂತೆ ಒಟ್ಟು ಹನ್ನೆರಡು ಅಂಶಗಳನ್ನು ಪಟ್ಟಿ ಮಾಡಲಾಗಿದೆ.

ಅಮೃತ್ ದೇಸಾಯಿ ಹೆಗಲ ಮೇಲೆ ಬಂದೂಕು ಇಟ್ಟು ಸೀಮಾ ಮಸೂತಿ ಹೊಡೆದ್ರಿ, ⁠ನಾಗರಾಜ್ ಚಬ್ಬಿ ಕರ್ಕೊಂಡು ಬಂದು ಶಿವು ಹಿರೇಮಠ್ ಅವರನ್ ನಿತ್ರಾಣ ಮಾಡಿದಿರಿ, ⁠ಈರೇಶ್ ಅಂಚಟಗೇರಿನ್ ಚೂ ಬಿಟ್ಟು ಅರವಿಂದ್ ಬೆಲ್ಲದ್ ಹೊಡೆಯಾಕ್ ಪ್ರಯತ್ನ ಪಟ್ರಿ, ⁠ಅದೇ ಬೆಲ್ಲದ್ ಬಳಸ್ಕೊಂಡು ಮುನೇನಕೊಪ್ಪನ್ ಹೊಡೆಯಾಕ್ ಟ್ರೈ ಮಾಡಿದ್ರಿ, ⁠ಅಧಿಕಾರ ದುರ್ಬಳಕೆ ಮಾಡಿಕೊಂಡು ವಿನಯ್ ಕುಲಕರ್ಣಿನ್ ಜೈಲಿಗಟ್ಟಿ, ಜಿಲ್ಲೆಯೊಳಗ ಕಾಲ್ ಇಡದಂಗ್ ಮಾಡಿದ್ರಿ’ ಎಂದು ಆರೋಪ ಮಾಡಿದ್ದಾರೆ.

ಮುಂದುವರಿದು, ‘⁠ಡಾ.ನಾಲವಾಡ್ ಅವರಿಗೆ ಆಸೆ ಹುಟ್ಟಿಸಿ ಹಾವೇರಿಗೆ ಕಳಿಸಿ ಹೈರಾಣ ಮಾಡಿದ್ರಿ, ⁠ಡಾ.ನಾಲವಾಡ್ ಹಿಂದೆನೇ ಶರಣು ಅಂಗಡಿನೂ ಚೂ ಬಿಟ್ಟು ಮಜಾ ನೋಡಿದ್ರಿ, ⁠ಹೈಕಮಾಂಡ್ ಹೆಗಲ ಮೇಲೆ ಬಂದೂಕು ಇಟ್ಟು ಜಗದೀಶ್ ಶೆಟ್ರಿಗೆ ಟಿಕೆಟ್ ಕೊಡದೇ ಅಸಹ್ಯ ಮಾಡಿದ್ರಿ, ಈಗ ಧಾರವಾಡ ಜಿಲ್ಲೆಯಿಂದಲೇ ಹೊರಗ ಹಾಕಿದ್ರಿ, ⁠ಎಂ.ಆರ್.ಪಾಟೀಲ್ ಬಳಸಕೊಂಡು ಚಿಕ್ಕನಗೌಡ್ರನ್ ಮುಗಿಸಿದಿರಿ. ⁠ಅನಂತ್ ಕುಮಾರ್ ಕೈ ಹಿಡ್ಕೊಂಡ್ ಮೇಲೆ ಬಂದು ಅವರ್ ಸತ್ ಮೇಲೆ ಅವರ ಕುಟುಂಬದ್ ಬೆನ್ನಾಗ್ ಚೂರಿ ಹಾಕಿದ್ರಿ. ⁠ನಿಂಬಣ್ಣವರ್ ವಯಸ್ಸೂ ನೋಡದೇ ಎಲ್ಲಾ ಕಡೆ ಅಸಹ್ಯ ಮಾಡಿದ್ರಿ, ಸಾಯೂತನಕ ಬಿಡಲಿಲ್ಲ. ⁠ವಿಜಯ್ ಸಂಕೇಶ್ವರ್ ಕೊಟ್ಟ ಭಿಕ್ಷೆಯಲ್ಲಿ ಎಂಪಿ ಆಗಿ ಅವರ ಬಗ್ಗೆ ತುಚ್ಛವಾಗಿ ಮಾತಾಡಿದ್ರಿ, ಇದೇ ನಿಮ್ಮ ನಿಜವಾದ ಜಾತಕ’ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸಚಿವ  ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದ ಮುಖಂಡರ ಕೋಪ ಇನ್ನೂ ತಣ್ಣಗಾಗಿಲ್ಲ. ಬಹುತೇಕ ಲಿಂಗಾಯತ ಮತ್ತು ಒಬಿಸಿ ಸಮುದಾಯದ ಮಠಾಧಿಶರು ಜೋಷಿ ವಿರುದ್ಧವಾಗಿ ನಿಂತಿದ್ದು, ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ವಾಟ್ಸಾಪ್ ಗುಂಪುಗಳಲ್ಲಿ ಈ ಸಂದೇಶ ಹರಿದಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಮುಜುಗರ ತಂದಿದೆ.

ಈ ನಡುವೆ ಲಿಂಗಾಯತ ಸಮಾಜದ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆರೋಪಿಸಿ ಪ್ರಲ್ಹಾದ ಜೋಶಿ ವಿರುದ್ಧ ಸಿಡಿದೆದ್ದಿರುವ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂಬ ಒತ್ತಡ ದಿನೇದಿನೇ ಹೆಚ್ಚಾಗುತ್ತಿದೆ. ಸ್ವಾಮೀಜಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ; ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...