Homeಕರ್ನಾಟಕ'ಇದೇ ನಿಮ್ಮ ನಿಜವಾದ ಜಾತಕ..'; ಪ್ರಲ್ಹಾದ ಜೋಷಿ 'ರಾಜಕೀಯ ತಂತ್ರಗಾರಿಕೆ' ವಾಟ್ಸಾಪ್ ಸಂದೇಶ ವೈರಲ್

‘ಇದೇ ನಿಮ್ಮ ನಿಜವಾದ ಜಾತಕ..’; ಪ್ರಲ್ಹಾದ ಜೋಷಿ ‘ರಾಜಕೀಯ ತಂತ್ರಗಾರಿಕೆ’ ವಾಟ್ಸಾಪ್ ಸಂದೇಶ ವೈರಲ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಬಿಜೆಪಿ ಲೋಕಸಭಾ ಅಭ್ಯರ್ಥಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದಲ್ಲಿ ಎದ್ದಿರುವ ಅಸಮಾಧಾನ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಈ ಹೊತ್ತಿನಲ್ಲೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ವೀರಶೈವ ಲಿಂಗಾಯಿತ ಸ್ವಾಮೀಜಿಗಳ ಬಂಡಾಯ ಸಾರಿದ್ದು, ಇದೀಗ ಜೋಷಿ ವಿರುದ್ಧ 12 ಅಂಶಗಳ ಚಾರ್ಜ್ ಶೀಟ್ ಒಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.

ವಾಟ್ಸಾಪ್ ಸಂದೇಶದಲ್ಲಿ ಏನಿದೆ?

‘ಮಿ. ಜೋಷಿ, ಹಳ್ಳಿ ಜನ ದಡ್ಡರಲ್ಲ, ಅವರಿಗೆ ನಿಮ್ಮ ಜಾತಕ ಚೆನ್ನಾಗಿ ಗೊತ್ತಿದೆ. ನಿಮ್ಮ ಜಾತಕ ನಾ ಹೇಳತೀನಿ ಕೇಳ್ರಿ; ಇದೂ ಯಾರಿಗೂ ಗೊತ್ತಿಲ್ಲಾಂತ ತಿಳಿಬೇಡ್ರಿ.. ಎಂದು ಕಟುವಾಗಿ ಟೀಕಿಸಿರುವ ಸಂದೇಶದಲ್ಲಿ, ಜೋಷಿ ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ನಡೆಸಿರುವ ತಂತ್ರಗಾರಿಕೆಗೆ ಸಂಬಂಧಿಸಿದಂತೆ ಒಟ್ಟು ಹನ್ನೆರಡು ಅಂಶಗಳನ್ನು ಪಟ್ಟಿ ಮಾಡಲಾಗಿದೆ.

ಅಮೃತ್ ದೇಸಾಯಿ ಹೆಗಲ ಮೇಲೆ ಬಂದೂಕು ಇಟ್ಟು ಸೀಮಾ ಮಸೂತಿ ಹೊಡೆದ್ರಿ, ⁠ನಾಗರಾಜ್ ಚಬ್ಬಿ ಕರ್ಕೊಂಡು ಬಂದು ಶಿವು ಹಿರೇಮಠ್ ಅವರನ್ ನಿತ್ರಾಣ ಮಾಡಿದಿರಿ, ⁠ಈರೇಶ್ ಅಂಚಟಗೇರಿನ್ ಚೂ ಬಿಟ್ಟು ಅರವಿಂದ್ ಬೆಲ್ಲದ್ ಹೊಡೆಯಾಕ್ ಪ್ರಯತ್ನ ಪಟ್ರಿ, ⁠ಅದೇ ಬೆಲ್ಲದ್ ಬಳಸ್ಕೊಂಡು ಮುನೇನಕೊಪ್ಪನ್ ಹೊಡೆಯಾಕ್ ಟ್ರೈ ಮಾಡಿದ್ರಿ, ⁠ಅಧಿಕಾರ ದುರ್ಬಳಕೆ ಮಾಡಿಕೊಂಡು ವಿನಯ್ ಕುಲಕರ್ಣಿನ್ ಜೈಲಿಗಟ್ಟಿ, ಜಿಲ್ಲೆಯೊಳಗ ಕಾಲ್ ಇಡದಂಗ್ ಮಾಡಿದ್ರಿ’ ಎಂದು ಆರೋಪ ಮಾಡಿದ್ದಾರೆ.

ಮುಂದುವರಿದು, ‘⁠ಡಾ.ನಾಲವಾಡ್ ಅವರಿಗೆ ಆಸೆ ಹುಟ್ಟಿಸಿ ಹಾವೇರಿಗೆ ಕಳಿಸಿ ಹೈರಾಣ ಮಾಡಿದ್ರಿ, ⁠ಡಾ.ನಾಲವಾಡ್ ಹಿಂದೆನೇ ಶರಣು ಅಂಗಡಿನೂ ಚೂ ಬಿಟ್ಟು ಮಜಾ ನೋಡಿದ್ರಿ, ⁠ಹೈಕಮಾಂಡ್ ಹೆಗಲ ಮೇಲೆ ಬಂದೂಕು ಇಟ್ಟು ಜಗದೀಶ್ ಶೆಟ್ರಿಗೆ ಟಿಕೆಟ್ ಕೊಡದೇ ಅಸಹ್ಯ ಮಾಡಿದ್ರಿ, ಈಗ ಧಾರವಾಡ ಜಿಲ್ಲೆಯಿಂದಲೇ ಹೊರಗ ಹಾಕಿದ್ರಿ, ⁠ಎಂ.ಆರ್.ಪಾಟೀಲ್ ಬಳಸಕೊಂಡು ಚಿಕ್ಕನಗೌಡ್ರನ್ ಮುಗಿಸಿದಿರಿ. ⁠ಅನಂತ್ ಕುಮಾರ್ ಕೈ ಹಿಡ್ಕೊಂಡ್ ಮೇಲೆ ಬಂದು ಅವರ್ ಸತ್ ಮೇಲೆ ಅವರ ಕುಟುಂಬದ್ ಬೆನ್ನಾಗ್ ಚೂರಿ ಹಾಕಿದ್ರಿ. ⁠ನಿಂಬಣ್ಣವರ್ ವಯಸ್ಸೂ ನೋಡದೇ ಎಲ್ಲಾ ಕಡೆ ಅಸಹ್ಯ ಮಾಡಿದ್ರಿ, ಸಾಯೂತನಕ ಬಿಡಲಿಲ್ಲ. ⁠ವಿಜಯ್ ಸಂಕೇಶ್ವರ್ ಕೊಟ್ಟ ಭಿಕ್ಷೆಯಲ್ಲಿ ಎಂಪಿ ಆಗಿ ಅವರ ಬಗ್ಗೆ ತುಚ್ಛವಾಗಿ ಮಾತಾಡಿದ್ರಿ, ಇದೇ ನಿಮ್ಮ ನಿಜವಾದ ಜಾತಕ’ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸಚಿವ  ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದ ಮುಖಂಡರ ಕೋಪ ಇನ್ನೂ ತಣ್ಣಗಾಗಿಲ್ಲ. ಬಹುತೇಕ ಲಿಂಗಾಯತ ಮತ್ತು ಒಬಿಸಿ ಸಮುದಾಯದ ಮಠಾಧಿಶರು ಜೋಷಿ ವಿರುದ್ಧವಾಗಿ ನಿಂತಿದ್ದು, ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ವಾಟ್ಸಾಪ್ ಗುಂಪುಗಳಲ್ಲಿ ಈ ಸಂದೇಶ ಹರಿದಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಮುಜುಗರ ತಂದಿದೆ.

ಈ ನಡುವೆ ಲಿಂಗಾಯತ ಸಮಾಜದ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆರೋಪಿಸಿ ಪ್ರಲ್ಹಾದ ಜೋಶಿ ವಿರುದ್ಧ ಸಿಡಿದೆದ್ದಿರುವ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂಬ ಒತ್ತಡ ದಿನೇದಿನೇ ಹೆಚ್ಚಾಗುತ್ತಿದೆ. ಸ್ವಾಮೀಜಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ; ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...