Homeಕರ್ನಾಟಕ'ಇದೇ ನಿಮ್ಮ ನಿಜವಾದ ಜಾತಕ..'; ಪ್ರಲ್ಹಾದ ಜೋಷಿ 'ರಾಜಕೀಯ ತಂತ್ರಗಾರಿಕೆ' ವಾಟ್ಸಾಪ್ ಸಂದೇಶ ವೈರಲ್

‘ಇದೇ ನಿಮ್ಮ ನಿಜವಾದ ಜಾತಕ..’; ಪ್ರಲ್ಹಾದ ಜೋಷಿ ‘ರಾಜಕೀಯ ತಂತ್ರಗಾರಿಕೆ’ ವಾಟ್ಸಾಪ್ ಸಂದೇಶ ವೈರಲ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಬಿಜೆಪಿ ಲೋಕಸಭಾ ಅಭ್ಯರ್ಥಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದಲ್ಲಿ ಎದ್ದಿರುವ ಅಸಮಾಧಾನ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಈ ಹೊತ್ತಿನಲ್ಲೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ವೀರಶೈವ ಲಿಂಗಾಯಿತ ಸ್ವಾಮೀಜಿಗಳ ಬಂಡಾಯ ಸಾರಿದ್ದು, ಇದೀಗ ಜೋಷಿ ವಿರುದ್ಧ 12 ಅಂಶಗಳ ಚಾರ್ಜ್ ಶೀಟ್ ಒಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.

ವಾಟ್ಸಾಪ್ ಸಂದೇಶದಲ್ಲಿ ಏನಿದೆ?

‘ಮಿ. ಜೋಷಿ, ಹಳ್ಳಿ ಜನ ದಡ್ಡರಲ್ಲ, ಅವರಿಗೆ ನಿಮ್ಮ ಜಾತಕ ಚೆನ್ನಾಗಿ ಗೊತ್ತಿದೆ. ನಿಮ್ಮ ಜಾತಕ ನಾ ಹೇಳತೀನಿ ಕೇಳ್ರಿ; ಇದೂ ಯಾರಿಗೂ ಗೊತ್ತಿಲ್ಲಾಂತ ತಿಳಿಬೇಡ್ರಿ.. ಎಂದು ಕಟುವಾಗಿ ಟೀಕಿಸಿರುವ ಸಂದೇಶದಲ್ಲಿ, ಜೋಷಿ ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ನಡೆಸಿರುವ ತಂತ್ರಗಾರಿಕೆಗೆ ಸಂಬಂಧಿಸಿದಂತೆ ಒಟ್ಟು ಹನ್ನೆರಡು ಅಂಶಗಳನ್ನು ಪಟ್ಟಿ ಮಾಡಲಾಗಿದೆ.

ಅಮೃತ್ ದೇಸಾಯಿ ಹೆಗಲ ಮೇಲೆ ಬಂದೂಕು ಇಟ್ಟು ಸೀಮಾ ಮಸೂತಿ ಹೊಡೆದ್ರಿ, ⁠ನಾಗರಾಜ್ ಚಬ್ಬಿ ಕರ್ಕೊಂಡು ಬಂದು ಶಿವು ಹಿರೇಮಠ್ ಅವರನ್ ನಿತ್ರಾಣ ಮಾಡಿದಿರಿ, ⁠ಈರೇಶ್ ಅಂಚಟಗೇರಿನ್ ಚೂ ಬಿಟ್ಟು ಅರವಿಂದ್ ಬೆಲ್ಲದ್ ಹೊಡೆಯಾಕ್ ಪ್ರಯತ್ನ ಪಟ್ರಿ, ⁠ಅದೇ ಬೆಲ್ಲದ್ ಬಳಸ್ಕೊಂಡು ಮುನೇನಕೊಪ್ಪನ್ ಹೊಡೆಯಾಕ್ ಟ್ರೈ ಮಾಡಿದ್ರಿ, ⁠ಅಧಿಕಾರ ದುರ್ಬಳಕೆ ಮಾಡಿಕೊಂಡು ವಿನಯ್ ಕುಲಕರ್ಣಿನ್ ಜೈಲಿಗಟ್ಟಿ, ಜಿಲ್ಲೆಯೊಳಗ ಕಾಲ್ ಇಡದಂಗ್ ಮಾಡಿದ್ರಿ’ ಎಂದು ಆರೋಪ ಮಾಡಿದ್ದಾರೆ.

ಮುಂದುವರಿದು, ‘⁠ಡಾ.ನಾಲವಾಡ್ ಅವರಿಗೆ ಆಸೆ ಹುಟ್ಟಿಸಿ ಹಾವೇರಿಗೆ ಕಳಿಸಿ ಹೈರಾಣ ಮಾಡಿದ್ರಿ, ⁠ಡಾ.ನಾಲವಾಡ್ ಹಿಂದೆನೇ ಶರಣು ಅಂಗಡಿನೂ ಚೂ ಬಿಟ್ಟು ಮಜಾ ನೋಡಿದ್ರಿ, ⁠ಹೈಕಮಾಂಡ್ ಹೆಗಲ ಮೇಲೆ ಬಂದೂಕು ಇಟ್ಟು ಜಗದೀಶ್ ಶೆಟ್ರಿಗೆ ಟಿಕೆಟ್ ಕೊಡದೇ ಅಸಹ್ಯ ಮಾಡಿದ್ರಿ, ಈಗ ಧಾರವಾಡ ಜಿಲ್ಲೆಯಿಂದಲೇ ಹೊರಗ ಹಾಕಿದ್ರಿ, ⁠ಎಂ.ಆರ್.ಪಾಟೀಲ್ ಬಳಸಕೊಂಡು ಚಿಕ್ಕನಗೌಡ್ರನ್ ಮುಗಿಸಿದಿರಿ. ⁠ಅನಂತ್ ಕುಮಾರ್ ಕೈ ಹಿಡ್ಕೊಂಡ್ ಮೇಲೆ ಬಂದು ಅವರ್ ಸತ್ ಮೇಲೆ ಅವರ ಕುಟುಂಬದ್ ಬೆನ್ನಾಗ್ ಚೂರಿ ಹಾಕಿದ್ರಿ. ⁠ನಿಂಬಣ್ಣವರ್ ವಯಸ್ಸೂ ನೋಡದೇ ಎಲ್ಲಾ ಕಡೆ ಅಸಹ್ಯ ಮಾಡಿದ್ರಿ, ಸಾಯೂತನಕ ಬಿಡಲಿಲ್ಲ. ⁠ವಿಜಯ್ ಸಂಕೇಶ್ವರ್ ಕೊಟ್ಟ ಭಿಕ್ಷೆಯಲ್ಲಿ ಎಂಪಿ ಆಗಿ ಅವರ ಬಗ್ಗೆ ತುಚ್ಛವಾಗಿ ಮಾತಾಡಿದ್ರಿ, ಇದೇ ನಿಮ್ಮ ನಿಜವಾದ ಜಾತಕ’ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸಚಿವ  ಪ್ರಲ್ಹಾದ ಜೋಷಿ ವಿರುದ್ಧ ಕ್ಷೇತ್ರದ ಮುಖಂಡರ ಕೋಪ ಇನ್ನೂ ತಣ್ಣಗಾಗಿಲ್ಲ. ಬಹುತೇಕ ಲಿಂಗಾಯತ ಮತ್ತು ಒಬಿಸಿ ಸಮುದಾಯದ ಮಠಾಧಿಶರು ಜೋಷಿ ವಿರುದ್ಧವಾಗಿ ನಿಂತಿದ್ದು, ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ವಾಟ್ಸಾಪ್ ಗುಂಪುಗಳಲ್ಲಿ ಈ ಸಂದೇಶ ಹರಿದಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಮುಜುಗರ ತಂದಿದೆ.

ಈ ನಡುವೆ ಲಿಂಗಾಯತ ಸಮಾಜದ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆರೋಪಿಸಿ ಪ್ರಲ್ಹಾದ ಜೋಶಿ ವಿರುದ್ಧ ಸಿಡಿದೆದ್ದಿರುವ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂಬ ಒತ್ತಡ ದಿನೇದಿನೇ ಹೆಚ್ಚಾಗುತ್ತಿದೆ. ಸ್ವಾಮೀಜಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ; ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...