Homeಮುಖಪುಟ‘ಇದು ನನ್ನ ಕೊನೆ ಚುನಾವಣೆಯಾಗಬಹುದು..'; ರಾಜಕೀಯ ನಿವೃತ್ತಿ ಘೋಷಿಸಿದ್ರಾ ತರೂರ್!

‘ಇದು ನನ್ನ ಕೊನೆ ಚುನಾವಣೆಯಾಗಬಹುದು..’; ರಾಜಕೀಯ ನಿವೃತ್ತಿ ಘೋಷಿಸಿದ್ರಾ ತರೂರ್!

- Advertisement -
- Advertisement -

‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರ ಕ್ಷೇತ್ರದಲ್ಲಿ ನನ್ನದು ಕೊನೆಯ ಸ್ಪರ್ಧೆಯಿರಬಹುದು’ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಲೋಕಸಭಾ ಸಂಸದ ಶಶಿ ತರೂರ್ ನಿವೃತ್ತಿ ಕುರಿತು ಪರೋಕ್ಷ ಹೇಳಿಕೆ ನೀಡಿದ್ದಾರೆ. ಯುವ ಜನತೆಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸುವ ಕುರಿತು ಗುರುವಾರ ಮಾತನಾಡಿದ ಅವರು, ‘2024ರ ನನ್ನ ಹೋರಾಟವೇ ಕ್ಷೇತ್ರದಲ್ಲಿ ಕೊನೆಯದಾಗಿರಬಹುದು ಎಂದು ಸೂಚಿಸುತ್ತದೆ’ ಎಂದರು.

ತಿರುವನಂತಪುರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆದರೆ, ಇದು ರಾಜಕೀಯವಾಗಿರುವುದರಿಂದ ಯಾವುದೇ ಅಂತಿಮ ತೀರ್ಮಾನವಿಲ್ಲ. ಕೆಲವು ಹಂತದಲ್ಲಿ, ಕಿರಿಯರಿಗೆ ಅವಕಾಶ ನೀಡುವ ಸಮಯ ಬರುತ್ತದೆ ಎಂದು ನಾನು ನಂಬುತ್ತೇನೆ, ಅದು ನನ್ನ ಆಲೋಚನೆ’ ಎಂದು ಅವರು ಹೇಳಿದರು.

‘ನಾನು ಎಂದಿಗೂ ಈ ಬಗ್ಗೆ ಮಾತನಾಡಿಲ್ಲ. ಆದರೆ, ಇದು ನನ್ನ ಕೊನೆಯ ಚುನಾವಣೆ ಎಂದು ನಾನು ಭಾವಿಸುತ್ತೇನೆ’ ಎಂದು 67 ವರ್ಷದ ಸಂಸದ ತರೂರ್ ಹೇಳಿದ್ದಾರೆ.

‘ನಾನು ತಿರುವನಂತಪುರದಿಂದ ಚುನಾವಣೆಗೆ ಸ್ಪರ್ಧಿಸಲು ಹೊರಟರೆ, ಅದು ತನ್ನ ಕೊನೆಯ ಚುನಾವಣೆಯಂತೆ, ಪೂರ್ಣ ಉತ್ಸಾಹದಿಂದ, ಜನರಿಗೆ ಅತ್ಯುತ್ತಮವಾದ ಕೆಲಸವನ್ನು ಮಾಡುತ್ತೇನೆ’ ಎಂದು ಹೇಳಿದರು.

ಒಂದೂವರೆ ದಶಕದ ಹಿಂದೆ ರಾಜಕೀಯ ಪ್ರವೇಶಿಸಿದ ತರೂರ್, ಕೇರಳದ ತಿರುವನಂತಪುರಂ ಲೋಕಸಭಾ ಟಿಕೆಟ್ ಪಡೆದುಕೊಂಡಿದ್ದರು. 2009ರ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯ ಸಾಧಿಸಿದ ಅವರು, ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದರು. ಅವರ ಮೊದಲ ಚುನಾವಣಾ ಕದನದಲ್ಲಿ ಸಿಪಿಐ ಅಭ್ಯರ್ಥಿ ಪಿ. ರಾಮಚಂದ್ರನ್ ನಾಯರ್ ವಿರುದ್ಧ 95 ಸಾವಿರ ಮತಗಳ ಅಂತರದಿಂದ ಜಯಗಳಿಸಿದರು.

ಈ ಯಶಸ್ಸಿನ ನಂತರ, ಅವರು 2014 ಮತ್ತು 2019ರ ಲೋಕಸಭೆ ಚುನಾವಣೆಗಳಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡರು.

ತಮ್ಮ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸುವ ಮೊದಲು ತರೂರ್ ವಿಶ್ವಸಂಸ್ಥೆಯೊಂದಿಗೆ ಕೆಲಸ ಮಾಡುತ್ತಿದ್ದರು. 2006 ರಲ್ಲಿ ಯುಎನ್ ಸೆಕ್ರೆಟರಿ ಜನರಲ್ ಹುದ್ದೆಗೆ ಅಧಿಕೃತ ಅಭ್ಯರ್ಥಿಯಾಗಿ ಭಾರತವನ್ನು ಪ್ರತಿನಿಧಿಸಿದ್ದರು. ಸ್ಪರ್ಧೆಯಲ್ಲಿದ್ದ ಏಳು ಅಭ್ಯರ್ಥಿಗಳಲ್ಲಿ ಅವರು ಎರಡನೇ ಸ್ಥಾನ ಪಡೆದರು.

ಇದನ್ನೂ ಓದಿ; ಸಿಐಎಸ್ಎಫ್‌ನ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಪಿಎಸ್‌ ಅಧಿಕಾರಿ ನೀನಾ ಸಿಂಗ್ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...