Homeಅಂಕಣಗಳುತಾಯಂದಿರು ಸೇರಿಕೊಂಡಿರುವ ಈ ಹೋರಾಟವು ಇತಿಹಾಸ ನಿರ್ಮಿಸುವುದರಲ್ಲಿ ಸಂಶಯವಿಲ್ಲ..

ತಾಯಂದಿರು ಸೇರಿಕೊಂಡಿರುವ ಈ ಹೋರಾಟವು ಇತಿಹಾಸ ನಿರ್ಮಿಸುವುದರಲ್ಲಿ ಸಂಶಯವಿಲ್ಲ..

60 ದಿನಗಳಿಂದ ಎಡೆಬಿಡದೇ ಕಿಕ್ಕಿರಿದು ನಡೆಯುತ್ತಿರುವ ಶಾಹೀನ್‌ ಬಾಗ್‌ ಪ್ರತಿಭಟನೆ ದೇಶಾದ್ಯಂತ ಹಲವು ಹೋರಾಟಗಳಿಗೆ ಸ್ಫೂರ್ತಿ ನೀಡಿದೆ.

- Advertisement -
- Advertisement -

ಪ್ರಜಾಪ್ರಭುತ್ವದ ಕುರಿತು ಅಬ್ರಹಾಂ ಲಿಂಕನ್ ನೀಡಿದ ವ್ಯಾಖ್ಯಾನವಾಗಲೀ, ಭಾರತದ ಭವಿಷ್ಯದ ಕುರಿತು ಮಹಾತ್ಮಾಗಾಂಧಿಯವರು ಕಂಡಿದ್ದ ಕನಸಾಗಲೀ ಎರಡೂ ನಮ್ಮ ದೇಶದಲ್ಲಿಂದು ದೂರದ ಮಾತಾಗಿವೆ. ನಮ್ಮ ದೇಶದ ಸಂವಿಧಾನವು ಬಹಳ ಕೆಟ್ಟ ಸ್ಥಿತಿಯಲ್ಲಿವೆ ಎಂಬುದು ಸರ್ವವಿದಿತ.

ನಮ್ಮ ದೇಶದ ಪ್ರಜಾತಾಂತ್ರಿಕ ಮೌಲ್ಯಗಳೇ ಭ್ರಷ್ಟಗೊಂಡಿವೆ ಎಂದು ಹೇಳಬೇಕಾಗಿ ಬಂದಿರುವುದು ದುಃಖಕರವಾದ ಸಂಗತಿಯಾಗಿದೆ. ಈ ದೇಶದ ಮತದಾರರ ಅನಿಸಿಕೆಗಳಿಗೆ ಬೆಲೆಯಿಲ್ಲವಾಗಿದೆ. ಆಳುವ ಸರ್ಕಾರಗಳು ಸರ್ವಾಧಿಕಾರವನ್ನು ಹೇರುತ್ತಿವೆ. ಬ್ರಿಟಿಷರ ನಂತರ ಮತ್ತೊಮ್ಮೆ ಒಡೆದಾಳುವ ನೀತಿಯ ತಂತ್ರ ಹೂಡಿದ್ದಾರೆ. ದೇಶದ ಐಕ್ಯತೆಯು ಚೆದುರಿದೆ. ದೇಶದ ಪ್ರತಿಯೊಬ್ಬ ನಾಗರಿಕರ ಕಲ್ಯಾಣದ ಸುತ್ತ ಕೇಂದ್ರೀಕರಿಸಬೇಕಾದ ಸರ್ಕಾರವು ಅವರ ಗುರುತನ್ನೇ ಅಳಿಸಲು ಹೊರಟಿದೆ. ಬಿಜೆಪಿ ಆಳ್ವಿಕೆ ಶುರುವಾದ ನಂತರ ಏನಾಗುತ್ತಿದೆ ಎಂಬುದು ನಮಗೆಲ್ಲರಿಗೂ ಗೊತ್ತಿದೆ. ಮೊದಲೈದು ವರ್ಷಗಳಲ್ಲಿ ಅವರ ಪ್ರಣಾಳಿಕೆ ನೀಡಿದ್ದ ಅಭಿವೃದ್ಧಿಯ ಆಶ್ವಾಸನೆಯನ್ನೂ ಮಣ್ಣುಗೂಡಿಸಿದವು. ಆದರೂ ಜನರು ಅದನ್ನು ಒಪ್ಪಿಕೊಂಡರು. ಇದೀಗ ಇಡೀ ದೇಶವನ್ನು ಧರ್ಮದ ಆಧಾರದ ಮೇಲೆ ಒಡೆದು, ಹಿಂದೂ ರಾಷ್ಟ್ರವನ್ನು ಕಟ್ಟುವ ಅವರ ಕನಸಿನ ಸುತ್ತಲೇ ಕೆಲಸ ಮಾಡುತ್ತಿದ್ದಾರೆ.

ತ್ರಿವಳಿ ತಲಾಖ್, ಲವ್ ಜಿಹಾದ್, ಕಲಂ 370ರ ಹಿಂತೆಗೆತ ಮತ್ತು ಇದೀಗ ಅತ್ಯಂತ ಅಪಾಯಕಾರಿ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ಗಳ ಮೂಲಕ ಸಾಧಿಸುತ್ತಿರುವುದು ಅದನ್ನೇ. ಅದರ ವಿವರಗಳು ಎಲ್ಲರಿಗೂ ಗೊತ್ತಿರುವುದರಿಂದ ಇಲ್ಲಿ ಪುನರಾವರ್ತಿಸುವುದಿಲ್ಲ.

ಇದುವರೆಗೆ ಜಾರಿಗೆ ತಂದಿರುವ ನೀತಿಗಳು ಮತ್ತು ಕಾಯ್ದೆಗಳೆಲ್ಲದರ ಉದ್ದೇಶ ಒಂದೇ ಆಗಿದೆ. ಅದು ಮುಸ್ಲಿಮರು, ಆದಿವಾಸಿಗಳು ಮತ್ತು ದಲಿತರುಗಳ ಸಾಂವಿಧಾನಿಕ ಹಕ್ಕುಗಳ ಅವಹೇಳನ. ಭವಿಷ್ಯದ ಭಾರತದಲ್ಲಿ ಜಾತಿ, ಧರ್ಮಗಳನ್ನು ಮೀರಿದ ನಾಗರಿಕತ್ವವು ಇಲ್ಲದಂತೆ ಮಾಡಲು ಹೊರಟಿರುವುದು ಎದ್ದು ಕಾಣುತ್ತಿದೆ.

ಇವೆಲ್ಲವನ್ನೂ ಮಾಡಿದಾಗ ಯಾರೂ ಪರಿಣಾಮಕಾರಿಯಾಗಿ ದನಿಯೆತ್ತಲಿಲ್ಲ. ಆದರೆ ಯಾವಾಗ ಪೌರತ್ವವನ್ನೇ ಇಲ್ಲವಾಗಿಸುವ ಕಾನೂನು ಬಂದಿತೋ ಭವಿಷ್ಯದ ಕ್ರಾಂತಿಕಾರಿಗಳಾದ ವಿದ್ಯಾರ್ಥಿಗಳು ಮುಂದೆ ಬಂದು ಪ್ರತಿಭಟಿಸಿದರು; ಸಾಮಾನ್ಯ ಜನರು ಹೊರಬಂದರು. ಎಲ್ಲಕ್ಕಿಂತ ಮುಖ್ಯವಾಗಿ ಮಹಿಳೆಯರು, ಅದರಲ್ಲೂ ಮುಸ್ಲಿಂ ಮಹಿಳೆಯರು ಹೊರಬಂದು ಈ ಹೊಸ ಕಾಯ್ದೆಯ ವಿರುದ್ಧ ದನಿಯೆತ್ತಿದರು. ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರೆಂದರೆ ‘ಮನೆಯ ನಾಲ್ಕು ಗೋಡೆಗಳ ಮಧ್ಯೆ ಬಂದಿಯಾದ’ವರೆಂಬ ಚಿತ್ರಣವಷ್ಟೇ ಇರುತ್ತದೆ. ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಹೊರಬಂದು ಪ್ರತಿಭಟಿಸಿದವರು ಅವರು.

ದೆಹಲಿಯ ಶಾಹೀನ್ ಬಾಗ್‌ನಲ್ಲಿನ ಅತ್ಯಪೂರ್ವ ಹೋರಾಟವು ಸತತವಾಗಿ ಮುಂದುವರೆಯುತ್ತಲೇ ಇದ್ದು, ದೇಶದ ಎಲ್ಲೆಡೆಯ ಜನರನ್ನು ತಾರತಮ್ಯ ಪೂರಿತ ಕಾಯ್ದೆಯ ವಿರುದ್ಧದ ಹೋರಾಟಕ್ಕೆ ಸೆಳೆಯುತ್ತಿದೆ. ಈ ಹೋರಾಟಗಾರರಿಗೆ ಬೆಂಬಲ ಸೂಚಿಸಲು ವಿವಿಧೆಡೆಗಳಿಂದ ಜನರು ಆಹಾರ, ವಸ್ತುಗಳನ್ನು ಹೊತ್ತುಕೊಂಡು ಬರುತ್ತಿದ್ದಾರೆ. ಅವರೆಲ್ಲರೂ ಬಯಸಿರುವುದು, ಈ ಕಾಯ್ದೆ ಹೋಗಬೇಕೆಂದು ಅಷ್ಟೇ. ವಿದ್ಯಾರ್ಥಿಗಳು ಹೊರಬಂದ ಬಗೆಯು ನನ್ನನ್ನು ನಿಜಕ್ಕೂ ಮೂಕವಿಸ್ಮಿತಳನ್ನಾಗಿಸಿತು. ವಿದ್ಯಾರ್ಥಿ ಶಕ್ತಿ ಹಾಗೂ ಮಹಿಳೆಯರ ಸಂಕಲ್ಪವು ದೇಶ ಮತ್ತು ಪ್ರಜಾತಂತ್ರವನ್ನು ರಕ್ಷಿಸುತ್ತದೆಂಬ ಭರವಸೆ ಮೂಡಿಸಿದೆ.

ಇನ್ನೊಂದೆಡೆ ಈ ಪ್ರತಿಭಟನೆಯ ದನಿಯನ್ನು ಹತ್ತಿಕ್ಕಲು ಬಂದೂಕನ್ನು ಬಳಸಲಾಗುತ್ತಿದೆ ಮತ್ತು ಹಿಂಸೆಯ ಪ್ರಚೋದನೆಗೆ ಇಳಿದಿದ್ದಾರೆ. ಜಾಮಿಯಾ ಮಿಲಿಯಾ, ಜೆಎನ್‌ಯು ಮತ್ತು ಅಲಿಘರ್ ಮುಸ್ಲಿಂ ವಿವಿಯ ಮೇಲೆ ಹಾಗೂ ದೇಶದ ವಿವಿಧೆಡೆಗಳಲ್ಲಿ ಪ್ರತಿಭಟನಾಕಾರರ ಮೇಲೆ ನಡೆಸಿರುವ ದಾಳಿಯು ನಮಗೆಲ್ಲರಿಗೂ ಗೊತ್ತಿದೆ. ಉತ್ತರ ಪ್ರದೇಶ ಹಾಗೂ ಮಂಗಳೂರುಗಳಲ್ಲಿ ಅಮಾಯಕರನ್ನು ಪೊಲೀಸರು ಕೊಂದಿದ್ದಾರೆ. ಅವರಿಗೆ ಮೇಲಿನಿಂದ ಆದೇಶ ಇರುವುದು ಸ್ಪಷ್ಟವಾಗಿದೆ. ವಿವಿಧ ಸಂಘಟನೆಗಳ ಯುವಮುಖಗಳನ್ನೂ ಆಗಿಂದಾಗ್ಗೆ ಬಂಧಿಸುವುದು ನಡೆಯುತ್ತಲೇ ಇದೆ.

ಪ್ರತಿಭಟನೆಯು ನಮ್ಮ ಹಕ್ಕಾಗಿದ್ದು ಅದನ್ನು ಯಾರೂ ಕಿತ್ತುಕೊಳ್ಳುವುದು ಸಾಧ್ಯವಿಲ್ಲ. ಈ ರೀತಿಯ ಪ್ರತಿಭಟನೆಗಳು ಹೊಸದೊಂದು ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಬಲ್ಲ ದಾರಿಯನ್ನು ತೋರಿಸುತ್ತಿದೆ. ಅದು ಮಹಾತ್ಮಾಗಾಂಧಿ ಮತ್ತು ಸಂವಿಧಾನವು ಆಶಿಸಿದ ಬದಲಾವಣೆಯಾಗಿರುತ್ತದೆ. ಗಾಂಧಿಯವರು ಕ್ವಿಟ್ ಇಂಡಿಯಾ ಕರೆ ಕೊಟ್ಟಿದ್ದು ಬ್ರಿಟಿಷರ ವಿರುದ್ಧ. ಇದೀಗ ದೇಶವನ್ನು ಒಡೆಯಲು ಹೊರಟಿರುವ ಶಕ್ತಿಗಳ ವಿರುದ್ಧ ಈ ಸ್ವಾತಂತ್ರ್‍ಯ ಸಂಗ್ರಾಮವು ನಡೆದು ಇತಿಹಾಸವನ್ನು ನಿರ್ಮಿಸಲಿದೆ. ಏಕೆಂದರೆ ಸಂವಿಧಾನದ ಮುನ್ನುಡಿಯು ದೇಶದ ಎಲ್ಲಾ ಜನರ ಸಂಕಲ್ಪ ಶಕ್ತಿಯ ಪ್ರತೀಕವಾಗಿರುವುದೇ ಆದಲ್ಲಿ, ಅದನ್ನು ರಕ್ಷಿಸಿಕೊಂಡು ತಮ್ಮದನ್ನಾಗಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿರುತ್ತದೆ.

ಅದರ ಸೂಚನೆಗಳು ಈಗಾಗಲೇ ಸಿಕ್ಕಿವೆ. ಅಂದರೆ ಬಿಜೆಪಿ ಹಾಗೂ ಆರೆಸ್ಸೆಸ್‌ನ ಫ್ಯಾಸಿಸ್ಟ್ ಆಡಳಿತದ ಕುಸಿತದ ಲಕ್ಷಣಗಳು ದೆಹಲಿಯ ಚುನಾವಣೆಯ ಮೂಲಕವೂ ಕಂಡಿದೆ. ಅದು ಅಳವಡಿಸಿದ ಒಡೆದಾಳುವ ನೀತಿಯನ್ನು ಅಲ್ಲಿನ ಜನರು ಒಪ್ಪಿಲ್ಲ. ಕೋಮುಗಲಭೆ ಮತ್ತು ಹಿಂಸೆಗಳು ವೋಟ್‌ಬ್ಯಾಂಕನ್ನು ತುಂಬಲಿವೆ ಎಂದು ಭಾವಿಸಿದವರಿಗೆ ಅವರು ಸರಿಯಾದ ಪೆಟ್ಟನ್ನು ಕೊಟ್ಟಿದ್ದಾರೆ.

ಇದಕ್ಕೇನು ಕಾರಣ ಎಂದು ಯೋಚಿಸಬೇಕು. ವಿದ್ಯಾರ್ಥಿಗಳ ದನಿಯನ್ನು ಪ್ರಭುತ್ವವು ದಮನಿಸಲು ಹೊರಟಾಗ ಹೃದಯವಂತ ತಾಯಂದಿರು ಬೀದಿಗಿಳಿದರು. ನರಮೇಧವನ್ನು ನಾವು ತಡೆದು ನಿಲ್ಲಿಸುತ್ತೇವೆ, ನಮ್ಮ ನೆಲದಿಂದ ನಮ್ಮನ್ನು ಯಾರೂ ಕದಲಿಸಲಾಗದು ಎಂಬ ಧೀಶಕ್ತಿ ಅಲ್ಲಿ ಎದ್ದು ಕಾಣುತ್ತಿತ್ತು. ಇದು ಭಾರತದ ಭೂಮಿಯಲ್ಲಿ ಇತಿಹಾಸವೊಂದನ್ನು ನಿರ್ಮಿಸಲು ಹೊರಟಿರುವವರ ಹೋರಾಟ ಎಂಬುದರ ಸೂಚನೆಗಳು ಈಗ ಸ್ಪಷ್ಟವಾಗಿ ಸಿಕ್ಕಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...