Homeಅಂಕಣಗಳುತಾಯಂದಿರು ಸೇರಿಕೊಂಡಿರುವ ಈ ಹೋರಾಟವು ಇತಿಹಾಸ ನಿರ್ಮಿಸುವುದರಲ್ಲಿ ಸಂಶಯವಿಲ್ಲ..

ತಾಯಂದಿರು ಸೇರಿಕೊಂಡಿರುವ ಈ ಹೋರಾಟವು ಇತಿಹಾಸ ನಿರ್ಮಿಸುವುದರಲ್ಲಿ ಸಂಶಯವಿಲ್ಲ..

60 ದಿನಗಳಿಂದ ಎಡೆಬಿಡದೇ ಕಿಕ್ಕಿರಿದು ನಡೆಯುತ್ತಿರುವ ಶಾಹೀನ್‌ ಬಾಗ್‌ ಪ್ರತಿಭಟನೆ ದೇಶಾದ್ಯಂತ ಹಲವು ಹೋರಾಟಗಳಿಗೆ ಸ್ಫೂರ್ತಿ ನೀಡಿದೆ.

- Advertisement -
- Advertisement -

ಪ್ರಜಾಪ್ರಭುತ್ವದ ಕುರಿತು ಅಬ್ರಹಾಂ ಲಿಂಕನ್ ನೀಡಿದ ವ್ಯಾಖ್ಯಾನವಾಗಲೀ, ಭಾರತದ ಭವಿಷ್ಯದ ಕುರಿತು ಮಹಾತ್ಮಾಗಾಂಧಿಯವರು ಕಂಡಿದ್ದ ಕನಸಾಗಲೀ ಎರಡೂ ನಮ್ಮ ದೇಶದಲ್ಲಿಂದು ದೂರದ ಮಾತಾಗಿವೆ. ನಮ್ಮ ದೇಶದ ಸಂವಿಧಾನವು ಬಹಳ ಕೆಟ್ಟ ಸ್ಥಿತಿಯಲ್ಲಿವೆ ಎಂಬುದು ಸರ್ವವಿದಿತ.

ನಮ್ಮ ದೇಶದ ಪ್ರಜಾತಾಂತ್ರಿಕ ಮೌಲ್ಯಗಳೇ ಭ್ರಷ್ಟಗೊಂಡಿವೆ ಎಂದು ಹೇಳಬೇಕಾಗಿ ಬಂದಿರುವುದು ದುಃಖಕರವಾದ ಸಂಗತಿಯಾಗಿದೆ. ಈ ದೇಶದ ಮತದಾರರ ಅನಿಸಿಕೆಗಳಿಗೆ ಬೆಲೆಯಿಲ್ಲವಾಗಿದೆ. ಆಳುವ ಸರ್ಕಾರಗಳು ಸರ್ವಾಧಿಕಾರವನ್ನು ಹೇರುತ್ತಿವೆ. ಬ್ರಿಟಿಷರ ನಂತರ ಮತ್ತೊಮ್ಮೆ ಒಡೆದಾಳುವ ನೀತಿಯ ತಂತ್ರ ಹೂಡಿದ್ದಾರೆ. ದೇಶದ ಐಕ್ಯತೆಯು ಚೆದುರಿದೆ. ದೇಶದ ಪ್ರತಿಯೊಬ್ಬ ನಾಗರಿಕರ ಕಲ್ಯಾಣದ ಸುತ್ತ ಕೇಂದ್ರೀಕರಿಸಬೇಕಾದ ಸರ್ಕಾರವು ಅವರ ಗುರುತನ್ನೇ ಅಳಿಸಲು ಹೊರಟಿದೆ. ಬಿಜೆಪಿ ಆಳ್ವಿಕೆ ಶುರುವಾದ ನಂತರ ಏನಾಗುತ್ತಿದೆ ಎಂಬುದು ನಮಗೆಲ್ಲರಿಗೂ ಗೊತ್ತಿದೆ. ಮೊದಲೈದು ವರ್ಷಗಳಲ್ಲಿ ಅವರ ಪ್ರಣಾಳಿಕೆ ನೀಡಿದ್ದ ಅಭಿವೃದ್ಧಿಯ ಆಶ್ವಾಸನೆಯನ್ನೂ ಮಣ್ಣುಗೂಡಿಸಿದವು. ಆದರೂ ಜನರು ಅದನ್ನು ಒಪ್ಪಿಕೊಂಡರು. ಇದೀಗ ಇಡೀ ದೇಶವನ್ನು ಧರ್ಮದ ಆಧಾರದ ಮೇಲೆ ಒಡೆದು, ಹಿಂದೂ ರಾಷ್ಟ್ರವನ್ನು ಕಟ್ಟುವ ಅವರ ಕನಸಿನ ಸುತ್ತಲೇ ಕೆಲಸ ಮಾಡುತ್ತಿದ್ದಾರೆ.

ತ್ರಿವಳಿ ತಲಾಖ್, ಲವ್ ಜಿಹಾದ್, ಕಲಂ 370ರ ಹಿಂತೆಗೆತ ಮತ್ತು ಇದೀಗ ಅತ್ಯಂತ ಅಪಾಯಕಾರಿ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ಗಳ ಮೂಲಕ ಸಾಧಿಸುತ್ತಿರುವುದು ಅದನ್ನೇ. ಅದರ ವಿವರಗಳು ಎಲ್ಲರಿಗೂ ಗೊತ್ತಿರುವುದರಿಂದ ಇಲ್ಲಿ ಪುನರಾವರ್ತಿಸುವುದಿಲ್ಲ.

ಇದುವರೆಗೆ ಜಾರಿಗೆ ತಂದಿರುವ ನೀತಿಗಳು ಮತ್ತು ಕಾಯ್ದೆಗಳೆಲ್ಲದರ ಉದ್ದೇಶ ಒಂದೇ ಆಗಿದೆ. ಅದು ಮುಸ್ಲಿಮರು, ಆದಿವಾಸಿಗಳು ಮತ್ತು ದಲಿತರುಗಳ ಸಾಂವಿಧಾನಿಕ ಹಕ್ಕುಗಳ ಅವಹೇಳನ. ಭವಿಷ್ಯದ ಭಾರತದಲ್ಲಿ ಜಾತಿ, ಧರ್ಮಗಳನ್ನು ಮೀರಿದ ನಾಗರಿಕತ್ವವು ಇಲ್ಲದಂತೆ ಮಾಡಲು ಹೊರಟಿರುವುದು ಎದ್ದು ಕಾಣುತ್ತಿದೆ.

ಇವೆಲ್ಲವನ್ನೂ ಮಾಡಿದಾಗ ಯಾರೂ ಪರಿಣಾಮಕಾರಿಯಾಗಿ ದನಿಯೆತ್ತಲಿಲ್ಲ. ಆದರೆ ಯಾವಾಗ ಪೌರತ್ವವನ್ನೇ ಇಲ್ಲವಾಗಿಸುವ ಕಾನೂನು ಬಂದಿತೋ ಭವಿಷ್ಯದ ಕ್ರಾಂತಿಕಾರಿಗಳಾದ ವಿದ್ಯಾರ್ಥಿಗಳು ಮುಂದೆ ಬಂದು ಪ್ರತಿಭಟಿಸಿದರು; ಸಾಮಾನ್ಯ ಜನರು ಹೊರಬಂದರು. ಎಲ್ಲಕ್ಕಿಂತ ಮುಖ್ಯವಾಗಿ ಮಹಿಳೆಯರು, ಅದರಲ್ಲೂ ಮುಸ್ಲಿಂ ಮಹಿಳೆಯರು ಹೊರಬಂದು ಈ ಹೊಸ ಕಾಯ್ದೆಯ ವಿರುದ್ಧ ದನಿಯೆತ್ತಿದರು. ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರೆಂದರೆ ‘ಮನೆಯ ನಾಲ್ಕು ಗೋಡೆಗಳ ಮಧ್ಯೆ ಬಂದಿಯಾದ’ವರೆಂಬ ಚಿತ್ರಣವಷ್ಟೇ ಇರುತ್ತದೆ. ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಹೊರಬಂದು ಪ್ರತಿಭಟಿಸಿದವರು ಅವರು.

ದೆಹಲಿಯ ಶಾಹೀನ್ ಬಾಗ್‌ನಲ್ಲಿನ ಅತ್ಯಪೂರ್ವ ಹೋರಾಟವು ಸತತವಾಗಿ ಮುಂದುವರೆಯುತ್ತಲೇ ಇದ್ದು, ದೇಶದ ಎಲ್ಲೆಡೆಯ ಜನರನ್ನು ತಾರತಮ್ಯ ಪೂರಿತ ಕಾಯ್ದೆಯ ವಿರುದ್ಧದ ಹೋರಾಟಕ್ಕೆ ಸೆಳೆಯುತ್ತಿದೆ. ಈ ಹೋರಾಟಗಾರರಿಗೆ ಬೆಂಬಲ ಸೂಚಿಸಲು ವಿವಿಧೆಡೆಗಳಿಂದ ಜನರು ಆಹಾರ, ವಸ್ತುಗಳನ್ನು ಹೊತ್ತುಕೊಂಡು ಬರುತ್ತಿದ್ದಾರೆ. ಅವರೆಲ್ಲರೂ ಬಯಸಿರುವುದು, ಈ ಕಾಯ್ದೆ ಹೋಗಬೇಕೆಂದು ಅಷ್ಟೇ. ವಿದ್ಯಾರ್ಥಿಗಳು ಹೊರಬಂದ ಬಗೆಯು ನನ್ನನ್ನು ನಿಜಕ್ಕೂ ಮೂಕವಿಸ್ಮಿತಳನ್ನಾಗಿಸಿತು. ವಿದ್ಯಾರ್ಥಿ ಶಕ್ತಿ ಹಾಗೂ ಮಹಿಳೆಯರ ಸಂಕಲ್ಪವು ದೇಶ ಮತ್ತು ಪ್ರಜಾತಂತ್ರವನ್ನು ರಕ್ಷಿಸುತ್ತದೆಂಬ ಭರವಸೆ ಮೂಡಿಸಿದೆ.

ಇನ್ನೊಂದೆಡೆ ಈ ಪ್ರತಿಭಟನೆಯ ದನಿಯನ್ನು ಹತ್ತಿಕ್ಕಲು ಬಂದೂಕನ್ನು ಬಳಸಲಾಗುತ್ತಿದೆ ಮತ್ತು ಹಿಂಸೆಯ ಪ್ರಚೋದನೆಗೆ ಇಳಿದಿದ್ದಾರೆ. ಜಾಮಿಯಾ ಮಿಲಿಯಾ, ಜೆಎನ್‌ಯು ಮತ್ತು ಅಲಿಘರ್ ಮುಸ್ಲಿಂ ವಿವಿಯ ಮೇಲೆ ಹಾಗೂ ದೇಶದ ವಿವಿಧೆಡೆಗಳಲ್ಲಿ ಪ್ರತಿಭಟನಾಕಾರರ ಮೇಲೆ ನಡೆಸಿರುವ ದಾಳಿಯು ನಮಗೆಲ್ಲರಿಗೂ ಗೊತ್ತಿದೆ. ಉತ್ತರ ಪ್ರದೇಶ ಹಾಗೂ ಮಂಗಳೂರುಗಳಲ್ಲಿ ಅಮಾಯಕರನ್ನು ಪೊಲೀಸರು ಕೊಂದಿದ್ದಾರೆ. ಅವರಿಗೆ ಮೇಲಿನಿಂದ ಆದೇಶ ಇರುವುದು ಸ್ಪಷ್ಟವಾಗಿದೆ. ವಿವಿಧ ಸಂಘಟನೆಗಳ ಯುವಮುಖಗಳನ್ನೂ ಆಗಿಂದಾಗ್ಗೆ ಬಂಧಿಸುವುದು ನಡೆಯುತ್ತಲೇ ಇದೆ.

ಪ್ರತಿಭಟನೆಯು ನಮ್ಮ ಹಕ್ಕಾಗಿದ್ದು ಅದನ್ನು ಯಾರೂ ಕಿತ್ತುಕೊಳ್ಳುವುದು ಸಾಧ್ಯವಿಲ್ಲ. ಈ ರೀತಿಯ ಪ್ರತಿಭಟನೆಗಳು ಹೊಸದೊಂದು ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಬಲ್ಲ ದಾರಿಯನ್ನು ತೋರಿಸುತ್ತಿದೆ. ಅದು ಮಹಾತ್ಮಾಗಾಂಧಿ ಮತ್ತು ಸಂವಿಧಾನವು ಆಶಿಸಿದ ಬದಲಾವಣೆಯಾಗಿರುತ್ತದೆ. ಗಾಂಧಿಯವರು ಕ್ವಿಟ್ ಇಂಡಿಯಾ ಕರೆ ಕೊಟ್ಟಿದ್ದು ಬ್ರಿಟಿಷರ ವಿರುದ್ಧ. ಇದೀಗ ದೇಶವನ್ನು ಒಡೆಯಲು ಹೊರಟಿರುವ ಶಕ್ತಿಗಳ ವಿರುದ್ಧ ಈ ಸ್ವಾತಂತ್ರ್‍ಯ ಸಂಗ್ರಾಮವು ನಡೆದು ಇತಿಹಾಸವನ್ನು ನಿರ್ಮಿಸಲಿದೆ. ಏಕೆಂದರೆ ಸಂವಿಧಾನದ ಮುನ್ನುಡಿಯು ದೇಶದ ಎಲ್ಲಾ ಜನರ ಸಂಕಲ್ಪ ಶಕ್ತಿಯ ಪ್ರತೀಕವಾಗಿರುವುದೇ ಆದಲ್ಲಿ, ಅದನ್ನು ರಕ್ಷಿಸಿಕೊಂಡು ತಮ್ಮದನ್ನಾಗಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿರುತ್ತದೆ.

ಅದರ ಸೂಚನೆಗಳು ಈಗಾಗಲೇ ಸಿಕ್ಕಿವೆ. ಅಂದರೆ ಬಿಜೆಪಿ ಹಾಗೂ ಆರೆಸ್ಸೆಸ್‌ನ ಫ್ಯಾಸಿಸ್ಟ್ ಆಡಳಿತದ ಕುಸಿತದ ಲಕ್ಷಣಗಳು ದೆಹಲಿಯ ಚುನಾವಣೆಯ ಮೂಲಕವೂ ಕಂಡಿದೆ. ಅದು ಅಳವಡಿಸಿದ ಒಡೆದಾಳುವ ನೀತಿಯನ್ನು ಅಲ್ಲಿನ ಜನರು ಒಪ್ಪಿಲ್ಲ. ಕೋಮುಗಲಭೆ ಮತ್ತು ಹಿಂಸೆಗಳು ವೋಟ್‌ಬ್ಯಾಂಕನ್ನು ತುಂಬಲಿವೆ ಎಂದು ಭಾವಿಸಿದವರಿಗೆ ಅವರು ಸರಿಯಾದ ಪೆಟ್ಟನ್ನು ಕೊಟ್ಟಿದ್ದಾರೆ.

ಇದಕ್ಕೇನು ಕಾರಣ ಎಂದು ಯೋಚಿಸಬೇಕು. ವಿದ್ಯಾರ್ಥಿಗಳ ದನಿಯನ್ನು ಪ್ರಭುತ್ವವು ದಮನಿಸಲು ಹೊರಟಾಗ ಹೃದಯವಂತ ತಾಯಂದಿರು ಬೀದಿಗಿಳಿದರು. ನರಮೇಧವನ್ನು ನಾವು ತಡೆದು ನಿಲ್ಲಿಸುತ್ತೇವೆ, ನಮ್ಮ ನೆಲದಿಂದ ನಮ್ಮನ್ನು ಯಾರೂ ಕದಲಿಸಲಾಗದು ಎಂಬ ಧೀಶಕ್ತಿ ಅಲ್ಲಿ ಎದ್ದು ಕಾಣುತ್ತಿತ್ತು. ಇದು ಭಾರತದ ಭೂಮಿಯಲ್ಲಿ ಇತಿಹಾಸವೊಂದನ್ನು ನಿರ್ಮಿಸಲು ಹೊರಟಿರುವವರ ಹೋರಾಟ ಎಂಬುದರ ಸೂಚನೆಗಳು ಈಗ ಸ್ಪಷ್ಟವಾಗಿ ಸಿಕ್ಕಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...