Homeಅಂಕಣಗಳುತಾಯಂದಿರು ಸೇರಿಕೊಂಡಿರುವ ಈ ಹೋರಾಟವು ಇತಿಹಾಸ ನಿರ್ಮಿಸುವುದರಲ್ಲಿ ಸಂಶಯವಿಲ್ಲ..

ತಾಯಂದಿರು ಸೇರಿಕೊಂಡಿರುವ ಈ ಹೋರಾಟವು ಇತಿಹಾಸ ನಿರ್ಮಿಸುವುದರಲ್ಲಿ ಸಂಶಯವಿಲ್ಲ..

60 ದಿನಗಳಿಂದ ಎಡೆಬಿಡದೇ ಕಿಕ್ಕಿರಿದು ನಡೆಯುತ್ತಿರುವ ಶಾಹೀನ್‌ ಬಾಗ್‌ ಪ್ರತಿಭಟನೆ ದೇಶಾದ್ಯಂತ ಹಲವು ಹೋರಾಟಗಳಿಗೆ ಸ್ಫೂರ್ತಿ ನೀಡಿದೆ.

- Advertisement -
- Advertisement -

ಪ್ರಜಾಪ್ರಭುತ್ವದ ಕುರಿತು ಅಬ್ರಹಾಂ ಲಿಂಕನ್ ನೀಡಿದ ವ್ಯಾಖ್ಯಾನವಾಗಲೀ, ಭಾರತದ ಭವಿಷ್ಯದ ಕುರಿತು ಮಹಾತ್ಮಾಗಾಂಧಿಯವರು ಕಂಡಿದ್ದ ಕನಸಾಗಲೀ ಎರಡೂ ನಮ್ಮ ದೇಶದಲ್ಲಿಂದು ದೂರದ ಮಾತಾಗಿವೆ. ನಮ್ಮ ದೇಶದ ಸಂವಿಧಾನವು ಬಹಳ ಕೆಟ್ಟ ಸ್ಥಿತಿಯಲ್ಲಿವೆ ಎಂಬುದು ಸರ್ವವಿದಿತ.

ನಮ್ಮ ದೇಶದ ಪ್ರಜಾತಾಂತ್ರಿಕ ಮೌಲ್ಯಗಳೇ ಭ್ರಷ್ಟಗೊಂಡಿವೆ ಎಂದು ಹೇಳಬೇಕಾಗಿ ಬಂದಿರುವುದು ದುಃಖಕರವಾದ ಸಂಗತಿಯಾಗಿದೆ. ಈ ದೇಶದ ಮತದಾರರ ಅನಿಸಿಕೆಗಳಿಗೆ ಬೆಲೆಯಿಲ್ಲವಾಗಿದೆ. ಆಳುವ ಸರ್ಕಾರಗಳು ಸರ್ವಾಧಿಕಾರವನ್ನು ಹೇರುತ್ತಿವೆ. ಬ್ರಿಟಿಷರ ನಂತರ ಮತ್ತೊಮ್ಮೆ ಒಡೆದಾಳುವ ನೀತಿಯ ತಂತ್ರ ಹೂಡಿದ್ದಾರೆ. ದೇಶದ ಐಕ್ಯತೆಯು ಚೆದುರಿದೆ. ದೇಶದ ಪ್ರತಿಯೊಬ್ಬ ನಾಗರಿಕರ ಕಲ್ಯಾಣದ ಸುತ್ತ ಕೇಂದ್ರೀಕರಿಸಬೇಕಾದ ಸರ್ಕಾರವು ಅವರ ಗುರುತನ್ನೇ ಅಳಿಸಲು ಹೊರಟಿದೆ. ಬಿಜೆಪಿ ಆಳ್ವಿಕೆ ಶುರುವಾದ ನಂತರ ಏನಾಗುತ್ತಿದೆ ಎಂಬುದು ನಮಗೆಲ್ಲರಿಗೂ ಗೊತ್ತಿದೆ. ಮೊದಲೈದು ವರ್ಷಗಳಲ್ಲಿ ಅವರ ಪ್ರಣಾಳಿಕೆ ನೀಡಿದ್ದ ಅಭಿವೃದ್ಧಿಯ ಆಶ್ವಾಸನೆಯನ್ನೂ ಮಣ್ಣುಗೂಡಿಸಿದವು. ಆದರೂ ಜನರು ಅದನ್ನು ಒಪ್ಪಿಕೊಂಡರು. ಇದೀಗ ಇಡೀ ದೇಶವನ್ನು ಧರ್ಮದ ಆಧಾರದ ಮೇಲೆ ಒಡೆದು, ಹಿಂದೂ ರಾಷ್ಟ್ರವನ್ನು ಕಟ್ಟುವ ಅವರ ಕನಸಿನ ಸುತ್ತಲೇ ಕೆಲಸ ಮಾಡುತ್ತಿದ್ದಾರೆ.

ತ್ರಿವಳಿ ತಲಾಖ್, ಲವ್ ಜಿಹಾದ್, ಕಲಂ 370ರ ಹಿಂತೆಗೆತ ಮತ್ತು ಇದೀಗ ಅತ್ಯಂತ ಅಪಾಯಕಾರಿ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ಗಳ ಮೂಲಕ ಸಾಧಿಸುತ್ತಿರುವುದು ಅದನ್ನೇ. ಅದರ ವಿವರಗಳು ಎಲ್ಲರಿಗೂ ಗೊತ್ತಿರುವುದರಿಂದ ಇಲ್ಲಿ ಪುನರಾವರ್ತಿಸುವುದಿಲ್ಲ.

ಇದುವರೆಗೆ ಜಾರಿಗೆ ತಂದಿರುವ ನೀತಿಗಳು ಮತ್ತು ಕಾಯ್ದೆಗಳೆಲ್ಲದರ ಉದ್ದೇಶ ಒಂದೇ ಆಗಿದೆ. ಅದು ಮುಸ್ಲಿಮರು, ಆದಿವಾಸಿಗಳು ಮತ್ತು ದಲಿತರುಗಳ ಸಾಂವಿಧಾನಿಕ ಹಕ್ಕುಗಳ ಅವಹೇಳನ. ಭವಿಷ್ಯದ ಭಾರತದಲ್ಲಿ ಜಾತಿ, ಧರ್ಮಗಳನ್ನು ಮೀರಿದ ನಾಗರಿಕತ್ವವು ಇಲ್ಲದಂತೆ ಮಾಡಲು ಹೊರಟಿರುವುದು ಎದ್ದು ಕಾಣುತ್ತಿದೆ.

ಇವೆಲ್ಲವನ್ನೂ ಮಾಡಿದಾಗ ಯಾರೂ ಪರಿಣಾಮಕಾರಿಯಾಗಿ ದನಿಯೆತ್ತಲಿಲ್ಲ. ಆದರೆ ಯಾವಾಗ ಪೌರತ್ವವನ್ನೇ ಇಲ್ಲವಾಗಿಸುವ ಕಾನೂನು ಬಂದಿತೋ ಭವಿಷ್ಯದ ಕ್ರಾಂತಿಕಾರಿಗಳಾದ ವಿದ್ಯಾರ್ಥಿಗಳು ಮುಂದೆ ಬಂದು ಪ್ರತಿಭಟಿಸಿದರು; ಸಾಮಾನ್ಯ ಜನರು ಹೊರಬಂದರು. ಎಲ್ಲಕ್ಕಿಂತ ಮುಖ್ಯವಾಗಿ ಮಹಿಳೆಯರು, ಅದರಲ್ಲೂ ಮುಸ್ಲಿಂ ಮಹಿಳೆಯರು ಹೊರಬಂದು ಈ ಹೊಸ ಕಾಯ್ದೆಯ ವಿರುದ್ಧ ದನಿಯೆತ್ತಿದರು. ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರೆಂದರೆ ‘ಮನೆಯ ನಾಲ್ಕು ಗೋಡೆಗಳ ಮಧ್ಯೆ ಬಂದಿಯಾದ’ವರೆಂಬ ಚಿತ್ರಣವಷ್ಟೇ ಇರುತ್ತದೆ. ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಹೊರಬಂದು ಪ್ರತಿಭಟಿಸಿದವರು ಅವರು.

ದೆಹಲಿಯ ಶಾಹೀನ್ ಬಾಗ್‌ನಲ್ಲಿನ ಅತ್ಯಪೂರ್ವ ಹೋರಾಟವು ಸತತವಾಗಿ ಮುಂದುವರೆಯುತ್ತಲೇ ಇದ್ದು, ದೇಶದ ಎಲ್ಲೆಡೆಯ ಜನರನ್ನು ತಾರತಮ್ಯ ಪೂರಿತ ಕಾಯ್ದೆಯ ವಿರುದ್ಧದ ಹೋರಾಟಕ್ಕೆ ಸೆಳೆಯುತ್ತಿದೆ. ಈ ಹೋರಾಟಗಾರರಿಗೆ ಬೆಂಬಲ ಸೂಚಿಸಲು ವಿವಿಧೆಡೆಗಳಿಂದ ಜನರು ಆಹಾರ, ವಸ್ತುಗಳನ್ನು ಹೊತ್ತುಕೊಂಡು ಬರುತ್ತಿದ್ದಾರೆ. ಅವರೆಲ್ಲರೂ ಬಯಸಿರುವುದು, ಈ ಕಾಯ್ದೆ ಹೋಗಬೇಕೆಂದು ಅಷ್ಟೇ. ವಿದ್ಯಾರ್ಥಿಗಳು ಹೊರಬಂದ ಬಗೆಯು ನನ್ನನ್ನು ನಿಜಕ್ಕೂ ಮೂಕವಿಸ್ಮಿತಳನ್ನಾಗಿಸಿತು. ವಿದ್ಯಾರ್ಥಿ ಶಕ್ತಿ ಹಾಗೂ ಮಹಿಳೆಯರ ಸಂಕಲ್ಪವು ದೇಶ ಮತ್ತು ಪ್ರಜಾತಂತ್ರವನ್ನು ರಕ್ಷಿಸುತ್ತದೆಂಬ ಭರವಸೆ ಮೂಡಿಸಿದೆ.

ಇನ್ನೊಂದೆಡೆ ಈ ಪ್ರತಿಭಟನೆಯ ದನಿಯನ್ನು ಹತ್ತಿಕ್ಕಲು ಬಂದೂಕನ್ನು ಬಳಸಲಾಗುತ್ತಿದೆ ಮತ್ತು ಹಿಂಸೆಯ ಪ್ರಚೋದನೆಗೆ ಇಳಿದಿದ್ದಾರೆ. ಜಾಮಿಯಾ ಮಿಲಿಯಾ, ಜೆಎನ್‌ಯು ಮತ್ತು ಅಲಿಘರ್ ಮುಸ್ಲಿಂ ವಿವಿಯ ಮೇಲೆ ಹಾಗೂ ದೇಶದ ವಿವಿಧೆಡೆಗಳಲ್ಲಿ ಪ್ರತಿಭಟನಾಕಾರರ ಮೇಲೆ ನಡೆಸಿರುವ ದಾಳಿಯು ನಮಗೆಲ್ಲರಿಗೂ ಗೊತ್ತಿದೆ. ಉತ್ತರ ಪ್ರದೇಶ ಹಾಗೂ ಮಂಗಳೂರುಗಳಲ್ಲಿ ಅಮಾಯಕರನ್ನು ಪೊಲೀಸರು ಕೊಂದಿದ್ದಾರೆ. ಅವರಿಗೆ ಮೇಲಿನಿಂದ ಆದೇಶ ಇರುವುದು ಸ್ಪಷ್ಟವಾಗಿದೆ. ವಿವಿಧ ಸಂಘಟನೆಗಳ ಯುವಮುಖಗಳನ್ನೂ ಆಗಿಂದಾಗ್ಗೆ ಬಂಧಿಸುವುದು ನಡೆಯುತ್ತಲೇ ಇದೆ.

ಪ್ರತಿಭಟನೆಯು ನಮ್ಮ ಹಕ್ಕಾಗಿದ್ದು ಅದನ್ನು ಯಾರೂ ಕಿತ್ತುಕೊಳ್ಳುವುದು ಸಾಧ್ಯವಿಲ್ಲ. ಈ ರೀತಿಯ ಪ್ರತಿಭಟನೆಗಳು ಹೊಸದೊಂದು ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಬಲ್ಲ ದಾರಿಯನ್ನು ತೋರಿಸುತ್ತಿದೆ. ಅದು ಮಹಾತ್ಮಾಗಾಂಧಿ ಮತ್ತು ಸಂವಿಧಾನವು ಆಶಿಸಿದ ಬದಲಾವಣೆಯಾಗಿರುತ್ತದೆ. ಗಾಂಧಿಯವರು ಕ್ವಿಟ್ ಇಂಡಿಯಾ ಕರೆ ಕೊಟ್ಟಿದ್ದು ಬ್ರಿಟಿಷರ ವಿರುದ್ಧ. ಇದೀಗ ದೇಶವನ್ನು ಒಡೆಯಲು ಹೊರಟಿರುವ ಶಕ್ತಿಗಳ ವಿರುದ್ಧ ಈ ಸ್ವಾತಂತ್ರ್‍ಯ ಸಂಗ್ರಾಮವು ನಡೆದು ಇತಿಹಾಸವನ್ನು ನಿರ್ಮಿಸಲಿದೆ. ಏಕೆಂದರೆ ಸಂವಿಧಾನದ ಮುನ್ನುಡಿಯು ದೇಶದ ಎಲ್ಲಾ ಜನರ ಸಂಕಲ್ಪ ಶಕ್ತಿಯ ಪ್ರತೀಕವಾಗಿರುವುದೇ ಆದಲ್ಲಿ, ಅದನ್ನು ರಕ್ಷಿಸಿಕೊಂಡು ತಮ್ಮದನ್ನಾಗಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿರುತ್ತದೆ.

ಅದರ ಸೂಚನೆಗಳು ಈಗಾಗಲೇ ಸಿಕ್ಕಿವೆ. ಅಂದರೆ ಬಿಜೆಪಿ ಹಾಗೂ ಆರೆಸ್ಸೆಸ್‌ನ ಫ್ಯಾಸಿಸ್ಟ್ ಆಡಳಿತದ ಕುಸಿತದ ಲಕ್ಷಣಗಳು ದೆಹಲಿಯ ಚುನಾವಣೆಯ ಮೂಲಕವೂ ಕಂಡಿದೆ. ಅದು ಅಳವಡಿಸಿದ ಒಡೆದಾಳುವ ನೀತಿಯನ್ನು ಅಲ್ಲಿನ ಜನರು ಒಪ್ಪಿಲ್ಲ. ಕೋಮುಗಲಭೆ ಮತ್ತು ಹಿಂಸೆಗಳು ವೋಟ್‌ಬ್ಯಾಂಕನ್ನು ತುಂಬಲಿವೆ ಎಂದು ಭಾವಿಸಿದವರಿಗೆ ಅವರು ಸರಿಯಾದ ಪೆಟ್ಟನ್ನು ಕೊಟ್ಟಿದ್ದಾರೆ.

ಇದಕ್ಕೇನು ಕಾರಣ ಎಂದು ಯೋಚಿಸಬೇಕು. ವಿದ್ಯಾರ್ಥಿಗಳ ದನಿಯನ್ನು ಪ್ರಭುತ್ವವು ದಮನಿಸಲು ಹೊರಟಾಗ ಹೃದಯವಂತ ತಾಯಂದಿರು ಬೀದಿಗಿಳಿದರು. ನರಮೇಧವನ್ನು ನಾವು ತಡೆದು ನಿಲ್ಲಿಸುತ್ತೇವೆ, ನಮ್ಮ ನೆಲದಿಂದ ನಮ್ಮನ್ನು ಯಾರೂ ಕದಲಿಸಲಾಗದು ಎಂಬ ಧೀಶಕ್ತಿ ಅಲ್ಲಿ ಎದ್ದು ಕಾಣುತ್ತಿತ್ತು. ಇದು ಭಾರತದ ಭೂಮಿಯಲ್ಲಿ ಇತಿಹಾಸವೊಂದನ್ನು ನಿರ್ಮಿಸಲು ಹೊರಟಿರುವವರ ಹೋರಾಟ ಎಂಬುದರ ಸೂಚನೆಗಳು ಈಗ ಸ್ಪಷ್ಟವಾಗಿ ಸಿಕ್ಕಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...