Homeಅಂಕಣಗಳುತಾಯಂದಿರು ಸೇರಿಕೊಂಡಿರುವ ಈ ಹೋರಾಟವು ಇತಿಹಾಸ ನಿರ್ಮಿಸುವುದರಲ್ಲಿ ಸಂಶಯವಿಲ್ಲ..

ತಾಯಂದಿರು ಸೇರಿಕೊಂಡಿರುವ ಈ ಹೋರಾಟವು ಇತಿಹಾಸ ನಿರ್ಮಿಸುವುದರಲ್ಲಿ ಸಂಶಯವಿಲ್ಲ..

60 ದಿನಗಳಿಂದ ಎಡೆಬಿಡದೇ ಕಿಕ್ಕಿರಿದು ನಡೆಯುತ್ತಿರುವ ಶಾಹೀನ್‌ ಬಾಗ್‌ ಪ್ರತಿಭಟನೆ ದೇಶಾದ್ಯಂತ ಹಲವು ಹೋರಾಟಗಳಿಗೆ ಸ್ಫೂರ್ತಿ ನೀಡಿದೆ.

- Advertisement -
- Advertisement -

ಪ್ರಜಾಪ್ರಭುತ್ವದ ಕುರಿತು ಅಬ್ರಹಾಂ ಲಿಂಕನ್ ನೀಡಿದ ವ್ಯಾಖ್ಯಾನವಾಗಲೀ, ಭಾರತದ ಭವಿಷ್ಯದ ಕುರಿತು ಮಹಾತ್ಮಾಗಾಂಧಿಯವರು ಕಂಡಿದ್ದ ಕನಸಾಗಲೀ ಎರಡೂ ನಮ್ಮ ದೇಶದಲ್ಲಿಂದು ದೂರದ ಮಾತಾಗಿವೆ. ನಮ್ಮ ದೇಶದ ಸಂವಿಧಾನವು ಬಹಳ ಕೆಟ್ಟ ಸ್ಥಿತಿಯಲ್ಲಿವೆ ಎಂಬುದು ಸರ್ವವಿದಿತ.

ನಮ್ಮ ದೇಶದ ಪ್ರಜಾತಾಂತ್ರಿಕ ಮೌಲ್ಯಗಳೇ ಭ್ರಷ್ಟಗೊಂಡಿವೆ ಎಂದು ಹೇಳಬೇಕಾಗಿ ಬಂದಿರುವುದು ದುಃಖಕರವಾದ ಸಂಗತಿಯಾಗಿದೆ. ಈ ದೇಶದ ಮತದಾರರ ಅನಿಸಿಕೆಗಳಿಗೆ ಬೆಲೆಯಿಲ್ಲವಾಗಿದೆ. ಆಳುವ ಸರ್ಕಾರಗಳು ಸರ್ವಾಧಿಕಾರವನ್ನು ಹೇರುತ್ತಿವೆ. ಬ್ರಿಟಿಷರ ನಂತರ ಮತ್ತೊಮ್ಮೆ ಒಡೆದಾಳುವ ನೀತಿಯ ತಂತ್ರ ಹೂಡಿದ್ದಾರೆ. ದೇಶದ ಐಕ್ಯತೆಯು ಚೆದುರಿದೆ. ದೇಶದ ಪ್ರತಿಯೊಬ್ಬ ನಾಗರಿಕರ ಕಲ್ಯಾಣದ ಸುತ್ತ ಕೇಂದ್ರೀಕರಿಸಬೇಕಾದ ಸರ್ಕಾರವು ಅವರ ಗುರುತನ್ನೇ ಅಳಿಸಲು ಹೊರಟಿದೆ. ಬಿಜೆಪಿ ಆಳ್ವಿಕೆ ಶುರುವಾದ ನಂತರ ಏನಾಗುತ್ತಿದೆ ಎಂಬುದು ನಮಗೆಲ್ಲರಿಗೂ ಗೊತ್ತಿದೆ. ಮೊದಲೈದು ವರ್ಷಗಳಲ್ಲಿ ಅವರ ಪ್ರಣಾಳಿಕೆ ನೀಡಿದ್ದ ಅಭಿವೃದ್ಧಿಯ ಆಶ್ವಾಸನೆಯನ್ನೂ ಮಣ್ಣುಗೂಡಿಸಿದವು. ಆದರೂ ಜನರು ಅದನ್ನು ಒಪ್ಪಿಕೊಂಡರು. ಇದೀಗ ಇಡೀ ದೇಶವನ್ನು ಧರ್ಮದ ಆಧಾರದ ಮೇಲೆ ಒಡೆದು, ಹಿಂದೂ ರಾಷ್ಟ್ರವನ್ನು ಕಟ್ಟುವ ಅವರ ಕನಸಿನ ಸುತ್ತಲೇ ಕೆಲಸ ಮಾಡುತ್ತಿದ್ದಾರೆ.

ತ್ರಿವಳಿ ತಲಾಖ್, ಲವ್ ಜಿಹಾದ್, ಕಲಂ 370ರ ಹಿಂತೆಗೆತ ಮತ್ತು ಇದೀಗ ಅತ್ಯಂತ ಅಪಾಯಕಾರಿ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ಗಳ ಮೂಲಕ ಸಾಧಿಸುತ್ತಿರುವುದು ಅದನ್ನೇ. ಅದರ ವಿವರಗಳು ಎಲ್ಲರಿಗೂ ಗೊತ್ತಿರುವುದರಿಂದ ಇಲ್ಲಿ ಪುನರಾವರ್ತಿಸುವುದಿಲ್ಲ.

ಇದುವರೆಗೆ ಜಾರಿಗೆ ತಂದಿರುವ ನೀತಿಗಳು ಮತ್ತು ಕಾಯ್ದೆಗಳೆಲ್ಲದರ ಉದ್ದೇಶ ಒಂದೇ ಆಗಿದೆ. ಅದು ಮುಸ್ಲಿಮರು, ಆದಿವಾಸಿಗಳು ಮತ್ತು ದಲಿತರುಗಳ ಸಾಂವಿಧಾನಿಕ ಹಕ್ಕುಗಳ ಅವಹೇಳನ. ಭವಿಷ್ಯದ ಭಾರತದಲ್ಲಿ ಜಾತಿ, ಧರ್ಮಗಳನ್ನು ಮೀರಿದ ನಾಗರಿಕತ್ವವು ಇಲ್ಲದಂತೆ ಮಾಡಲು ಹೊರಟಿರುವುದು ಎದ್ದು ಕಾಣುತ್ತಿದೆ.

ಇವೆಲ್ಲವನ್ನೂ ಮಾಡಿದಾಗ ಯಾರೂ ಪರಿಣಾಮಕಾರಿಯಾಗಿ ದನಿಯೆತ್ತಲಿಲ್ಲ. ಆದರೆ ಯಾವಾಗ ಪೌರತ್ವವನ್ನೇ ಇಲ್ಲವಾಗಿಸುವ ಕಾನೂನು ಬಂದಿತೋ ಭವಿಷ್ಯದ ಕ್ರಾಂತಿಕಾರಿಗಳಾದ ವಿದ್ಯಾರ್ಥಿಗಳು ಮುಂದೆ ಬಂದು ಪ್ರತಿಭಟಿಸಿದರು; ಸಾಮಾನ್ಯ ಜನರು ಹೊರಬಂದರು. ಎಲ್ಲಕ್ಕಿಂತ ಮುಖ್ಯವಾಗಿ ಮಹಿಳೆಯರು, ಅದರಲ್ಲೂ ಮುಸ್ಲಿಂ ಮಹಿಳೆಯರು ಹೊರಬಂದು ಈ ಹೊಸ ಕಾಯ್ದೆಯ ವಿರುದ್ಧ ದನಿಯೆತ್ತಿದರು. ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರೆಂದರೆ ‘ಮನೆಯ ನಾಲ್ಕು ಗೋಡೆಗಳ ಮಧ್ಯೆ ಬಂದಿಯಾದ’ವರೆಂಬ ಚಿತ್ರಣವಷ್ಟೇ ಇರುತ್ತದೆ. ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಹೊರಬಂದು ಪ್ರತಿಭಟಿಸಿದವರು ಅವರು.

ದೆಹಲಿಯ ಶಾಹೀನ್ ಬಾಗ್‌ನಲ್ಲಿನ ಅತ್ಯಪೂರ್ವ ಹೋರಾಟವು ಸತತವಾಗಿ ಮುಂದುವರೆಯುತ್ತಲೇ ಇದ್ದು, ದೇಶದ ಎಲ್ಲೆಡೆಯ ಜನರನ್ನು ತಾರತಮ್ಯ ಪೂರಿತ ಕಾಯ್ದೆಯ ವಿರುದ್ಧದ ಹೋರಾಟಕ್ಕೆ ಸೆಳೆಯುತ್ತಿದೆ. ಈ ಹೋರಾಟಗಾರರಿಗೆ ಬೆಂಬಲ ಸೂಚಿಸಲು ವಿವಿಧೆಡೆಗಳಿಂದ ಜನರು ಆಹಾರ, ವಸ್ತುಗಳನ್ನು ಹೊತ್ತುಕೊಂಡು ಬರುತ್ತಿದ್ದಾರೆ. ಅವರೆಲ್ಲರೂ ಬಯಸಿರುವುದು, ಈ ಕಾಯ್ದೆ ಹೋಗಬೇಕೆಂದು ಅಷ್ಟೇ. ವಿದ್ಯಾರ್ಥಿಗಳು ಹೊರಬಂದ ಬಗೆಯು ನನ್ನನ್ನು ನಿಜಕ್ಕೂ ಮೂಕವಿಸ್ಮಿತಳನ್ನಾಗಿಸಿತು. ವಿದ್ಯಾರ್ಥಿ ಶಕ್ತಿ ಹಾಗೂ ಮಹಿಳೆಯರ ಸಂಕಲ್ಪವು ದೇಶ ಮತ್ತು ಪ್ರಜಾತಂತ್ರವನ್ನು ರಕ್ಷಿಸುತ್ತದೆಂಬ ಭರವಸೆ ಮೂಡಿಸಿದೆ.

ಇನ್ನೊಂದೆಡೆ ಈ ಪ್ರತಿಭಟನೆಯ ದನಿಯನ್ನು ಹತ್ತಿಕ್ಕಲು ಬಂದೂಕನ್ನು ಬಳಸಲಾಗುತ್ತಿದೆ ಮತ್ತು ಹಿಂಸೆಯ ಪ್ರಚೋದನೆಗೆ ಇಳಿದಿದ್ದಾರೆ. ಜಾಮಿಯಾ ಮಿಲಿಯಾ, ಜೆಎನ್‌ಯು ಮತ್ತು ಅಲಿಘರ್ ಮುಸ್ಲಿಂ ವಿವಿಯ ಮೇಲೆ ಹಾಗೂ ದೇಶದ ವಿವಿಧೆಡೆಗಳಲ್ಲಿ ಪ್ರತಿಭಟನಾಕಾರರ ಮೇಲೆ ನಡೆಸಿರುವ ದಾಳಿಯು ನಮಗೆಲ್ಲರಿಗೂ ಗೊತ್ತಿದೆ. ಉತ್ತರ ಪ್ರದೇಶ ಹಾಗೂ ಮಂಗಳೂರುಗಳಲ್ಲಿ ಅಮಾಯಕರನ್ನು ಪೊಲೀಸರು ಕೊಂದಿದ್ದಾರೆ. ಅವರಿಗೆ ಮೇಲಿನಿಂದ ಆದೇಶ ಇರುವುದು ಸ್ಪಷ್ಟವಾಗಿದೆ. ವಿವಿಧ ಸಂಘಟನೆಗಳ ಯುವಮುಖಗಳನ್ನೂ ಆಗಿಂದಾಗ್ಗೆ ಬಂಧಿಸುವುದು ನಡೆಯುತ್ತಲೇ ಇದೆ.

ಪ್ರತಿಭಟನೆಯು ನಮ್ಮ ಹಕ್ಕಾಗಿದ್ದು ಅದನ್ನು ಯಾರೂ ಕಿತ್ತುಕೊಳ್ಳುವುದು ಸಾಧ್ಯವಿಲ್ಲ. ಈ ರೀತಿಯ ಪ್ರತಿಭಟನೆಗಳು ಹೊಸದೊಂದು ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಬಲ್ಲ ದಾರಿಯನ್ನು ತೋರಿಸುತ್ತಿದೆ. ಅದು ಮಹಾತ್ಮಾಗಾಂಧಿ ಮತ್ತು ಸಂವಿಧಾನವು ಆಶಿಸಿದ ಬದಲಾವಣೆಯಾಗಿರುತ್ತದೆ. ಗಾಂಧಿಯವರು ಕ್ವಿಟ್ ಇಂಡಿಯಾ ಕರೆ ಕೊಟ್ಟಿದ್ದು ಬ್ರಿಟಿಷರ ವಿರುದ್ಧ. ಇದೀಗ ದೇಶವನ್ನು ಒಡೆಯಲು ಹೊರಟಿರುವ ಶಕ್ತಿಗಳ ವಿರುದ್ಧ ಈ ಸ್ವಾತಂತ್ರ್‍ಯ ಸಂಗ್ರಾಮವು ನಡೆದು ಇತಿಹಾಸವನ್ನು ನಿರ್ಮಿಸಲಿದೆ. ಏಕೆಂದರೆ ಸಂವಿಧಾನದ ಮುನ್ನುಡಿಯು ದೇಶದ ಎಲ್ಲಾ ಜನರ ಸಂಕಲ್ಪ ಶಕ್ತಿಯ ಪ್ರತೀಕವಾಗಿರುವುದೇ ಆದಲ್ಲಿ, ಅದನ್ನು ರಕ್ಷಿಸಿಕೊಂಡು ತಮ್ಮದನ್ನಾಗಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿರುತ್ತದೆ.

ಅದರ ಸೂಚನೆಗಳು ಈಗಾಗಲೇ ಸಿಕ್ಕಿವೆ. ಅಂದರೆ ಬಿಜೆಪಿ ಹಾಗೂ ಆರೆಸ್ಸೆಸ್‌ನ ಫ್ಯಾಸಿಸ್ಟ್ ಆಡಳಿತದ ಕುಸಿತದ ಲಕ್ಷಣಗಳು ದೆಹಲಿಯ ಚುನಾವಣೆಯ ಮೂಲಕವೂ ಕಂಡಿದೆ. ಅದು ಅಳವಡಿಸಿದ ಒಡೆದಾಳುವ ನೀತಿಯನ್ನು ಅಲ್ಲಿನ ಜನರು ಒಪ್ಪಿಲ್ಲ. ಕೋಮುಗಲಭೆ ಮತ್ತು ಹಿಂಸೆಗಳು ವೋಟ್‌ಬ್ಯಾಂಕನ್ನು ತುಂಬಲಿವೆ ಎಂದು ಭಾವಿಸಿದವರಿಗೆ ಅವರು ಸರಿಯಾದ ಪೆಟ್ಟನ್ನು ಕೊಟ್ಟಿದ್ದಾರೆ.

ಇದಕ್ಕೇನು ಕಾರಣ ಎಂದು ಯೋಚಿಸಬೇಕು. ವಿದ್ಯಾರ್ಥಿಗಳ ದನಿಯನ್ನು ಪ್ರಭುತ್ವವು ದಮನಿಸಲು ಹೊರಟಾಗ ಹೃದಯವಂತ ತಾಯಂದಿರು ಬೀದಿಗಿಳಿದರು. ನರಮೇಧವನ್ನು ನಾವು ತಡೆದು ನಿಲ್ಲಿಸುತ್ತೇವೆ, ನಮ್ಮ ನೆಲದಿಂದ ನಮ್ಮನ್ನು ಯಾರೂ ಕದಲಿಸಲಾಗದು ಎಂಬ ಧೀಶಕ್ತಿ ಅಲ್ಲಿ ಎದ್ದು ಕಾಣುತ್ತಿತ್ತು. ಇದು ಭಾರತದ ಭೂಮಿಯಲ್ಲಿ ಇತಿಹಾಸವೊಂದನ್ನು ನಿರ್ಮಿಸಲು ಹೊರಟಿರುವವರ ಹೋರಾಟ ಎಂಬುದರ ಸೂಚನೆಗಳು ಈಗ ಸ್ಪಷ್ಟವಾಗಿ ಸಿಕ್ಕಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...