Homeಮುಖಪುಟದೆಹಲಿ ಚುನಾವಣೆಯಲ್ಲಿ ಈ ಬಾರಿಯು ಆಪ್‌ ಗೆಲ್ಲುತ್ತದೆ. ಏಕೆಂದರೆ...

ದೆಹಲಿ ಚುನಾವಣೆಯಲ್ಲಿ ಈ ಬಾರಿಯು ಆಪ್‌ ಗೆಲ್ಲುತ್ತದೆ. ಏಕೆಂದರೆ…

ದೇಶಕ್ಕೆ ನರೇಂದ್ರ ಮೋದಿ, ದೆಹಲಿಗೆ ಕೇಜ್ರಿವಾಲ್ ಎಂದು ಹಲವು ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರು ಮಾತನಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

- Advertisement -
- Advertisement -

ದೆಹಲಿಯ ಚುನಾವಣೆಯನ್ನು “ಪ್ರಸ್ತುತ ಆಪ್ ಸರ್ಕಾರದ ಇದುವರೆಗಿನ ಕಾರ್ಯಸಾಧನೆಗಳು ಮತ್ತು ಬಿಂಬಿತವಾಗಿರುವ ಜನಾಭಿಪ್ರಾಯದ ಹಿನ್ನೆಲೆಯಲ್ಲಿ ವಿಶ್ಲೇಷಿಸಿದರೆ ಆಶ್ಚರ್ಯವಾದ ಫಲಿತಾಂಶಗಳೇನು ಇರಲಿಕ್ಕಿಲ್ಲ” ಎಂದುಕೊಳ್ಳಬಹುದು. ಅಂದರೆ ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ಆಪ್ ಒಟ್ಟು 70 ಕ್ಷೇತ್ರಗಳಲ್ಲಿ ಕನಿಷ್ಟ 50ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೆ ಅಧಿಕಾರದ ಗದ್ದುಗೆ ಏರಲಿದೆ.

ಆದರೆ ರಾಷ್ಟ್ರರಾಜಧಾನಿಯಲ್ಲಿ ಹೇಗಾದರೂ ಮಾಡಿ ಅಧಿಕಾರ ಹಿಡಿಯಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಈ ಬಾರಿ, ಧರ್ಮ, ದೇಶದ್ರೋಹ, ಪಾಕಿಸ್ತಾನ, ಕೋಮು ಪ್ರಚೋದನಾ ಹೇಳಿಕೆಗಳ ಜೊತೆಗೆ ಒಂದಷ್ಟು ಸುಳ್ಳುಗಳನ್ನು ಹೆಣೆದು ಮತದಾರರ ಮನಸ್ಸನ್ನು ಹ್ಯಾಕ್ ಮಾಡಲು ಯತ್ನಿಸುತ್ತಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳನ್ನು ಕಳೆದುಕೊಂಡ ಬಿಜೆಪಿ ದೆಹಲಿ ಗೆಲ್ಲಲು ತನ್ನಿಡೀ ಬಲವನ್ನು ಸುರಿದಿದೆ. ಹಾಗಾಗಿ ದೆಹಲಿ ಚುನಾವಣೆಗೆ ಈ ಬಾರಿ ವಿಶೇಷ ಮಹತ್ವವಿದೆ.

ಒಂದು ಕಡೆ ಜನರಿಂದಲೇ ಹುಟ್ಟಿಬಂದ ಆಮ್‌ಆದ್ಮಿ ಪಾರ್ಟಿ ತನ್ನ ಐದು ವರ್ಷಗಳ ಅಧಿಕಾರಾವಧಿಯಲ್ಲಿ ನೀಡಿದ ಭರವಸೆಗಳನ್ನು ಬಹುತೇಕ ಈಡೇರಿಸಿ ತನ್ನ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿದೆ. ಇನ್ನೊಂದು ಕಡೆ ‘ವಿಕಾಸ’ದ ಹಳಿ ಏರಿಬಂದ ಬಿಜೆಪಿ ಹಳಿ ಬದಲಿಸಿ ಸನಾತನ ಧರ್ಮದ ಹೆಸರಿನಲ್ಲಿ ದೇಶವನ್ನು ಸನಾತನ ಕಾಲಕ್ಕೆ ಕರೆದೊಯ್ಯುವ ಭರದಲ್ಲಿದ್ದಂತಿದೆ. ಈ ಮಧ್ಯೆ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಭಾಗವಹಿಸುತ್ತಿದೆ.

ಆಪ್ ಏಕೆ ಗೆಲ್ಲುತ್ತದೆ?

ಆಮ್‌ಆದ್ಮಿ ನೀಡಿದ ಭರವಸೆಗಳಲ್ಲಿ “ವಿದ್ಯುತ್ ದರ ಕಡಿತ, ಉಚಿತ ನೀರು ಸರಬರಾಜು, ಉಚಿತ ಆರೋಗ್ಯ, ಮುಖ್ಯವಾಗಿ ಉತ್ತಮ ದರ್ಜೆಯ ಶಿಕ್ಷಣ” ಎಂಬ ಮೂಲ ಸೌಕರ್ಯಗಳನ್ನು ನೀಡಿದ ರೀತಿ ಇತ್ತೀಚಿನ ವರ್ಷಗಳ ರಾಜಕೀಯ ಪಕ್ಷಗಳನ್ನು ನೋಡಿದಾಗ ಅದು ರಾಜಕಾರಣದಲ್ಲಿ ಓಯಸಿಸ್‌ನಂತೆ ಕಾಣುತ್ತದೆ. ಅತ್ಯುತ್ತಮ ಸರ್ಕಾರಿ ಶಾಲೆಗಳು, ಉತ್ತಮ ಮೊಹಲ್ಲಾ ಕ್ಲಿನಿಕ್‌ಗಳು ದೇಶದ ಗಮನ ಸೆಳೆದಿವೆ. ಮಹಿಳೆಯರಿಗೆ ಉಚಿತ ಪ್ರಯಾಣ, ದೆಹಲಿ ತುಂಬಾ ಸಿಸಿಟಿವಿ ಕ್ಯಾಮರಾಗಳು, ಮನೆಬಾಗಿಲಿಗೆ ಸರ್ಕಾರಿ ಸೇವೆಗಳು ಹೀಗೆ ಅವರು ಮಾಡಿರುವ ಕೆಲಸಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಹೀಗೂ ಕೆಲಸ ಮಾಡಬಹುದು ಎನ್ನುವುದನ್ನು ಬಹುಶಃ ಜನ ಮರೆತೇಹೋಗಿರುವ ಸಮಯದಲ್ಲಿ ಅಲ್ಲಿನ ಮುಖ್ಯಮಂತ್ರಿ ಕೇಜ್ರಿವಾಲ್ ಒಂದು ಉದಾಹರಣೆಯಾಗಿ ಭಿನ್ನವಾಗಿ ನಿಲ್ಲುತ್ತಾರೆ. ಆದರೆ ಅವರ ಸರ್ಕಾರ ಹಾಗೂ ಅವರ ವೈಯಕ್ತಿಕ ನಡೆಗಳನ್ನು ನೇರವಾಗಿ ಟೀಕಿಸಲು ಸಕಾರಣಗಳು ಇಲ್ಲದ್ದರಿಂದ ಬಿಜೆಪಿ ‘ತುಕುಡೆ ತುಕುಡೆ ಗ್ಯಾಂಗ್ ಹಿಂದೆ ನಿಂತಿರುವ ದೇಶದ್ರೋಹಿಗಳು’ ಎನ್ನುವ ಪರೋಕ್ಷ ದಾಳಿಯಿಂದ ಉರುಳಿಸುವ ಯತ್ನ ನಡೆಸುತ್ತಿದೆ.

ಬಿಜೆಪಿ ವರಸೆ…

ಇಲ್ಲಿವರೆಗೂ ಭಾರತದ ಗಣತಂತ್ರದಲ್ಲಿ ಕಂಡುಕೇಳರಿಯದ ಘಟನೆಗಳು ಇಂದಿನ ದಿನ ನಡೆಯುತ್ತಿವೆ. ಕೇಂದ್ರ ಸರ್ಕಾರ ಪಾಸು ಮಾಡಿದ ಸಿಎಎಯಂತಹ ಕಾಯ್ದೆಯ ವಿರುದ್ಧ ದೇಶದ ಒಂದು ದೊಡ್ಡ ಜನಸಮೂಹ ಕಂಡುಕೇಳರಿಯದ ರೀತಿಯಲ್ಲಿ ನಿರಂತರವಾದ ಪ್ರತಿಭಟನೆಯನ್ನು ಮಾಡುತ್ತಿದ್ದರೆ, ಸರ್ಕಾರದ ಪ್ರತಿನಿಧಿಗಳು ಉಪಯುಕ್ತ ಚರ್ಚೆಗಳನ್ನು ಕೈಗೊಳ್ಳುವ ಬದಲು ಮನೆಮನೆಗೆ ತಿರುಗಿ ಸಿಎಎ ಕಾಯ್ದೆಯ ಉಪಯುಕ್ತತೆಯ ಬಗ್ಗೆ ತಿಳಿವಳಿಕೆ ನೀಡುವಲ್ಲಿ ನಿರತರಾಗಿದ್ದಾರೆ. ಅನುರಾಗ್ ಠಾಕೂರ್ ಎಂಬ ಕೇಂದ್ರ ಮಂತ್ರಿ ತನ್ನ ಸಾರ್ವಜನಿಕ ಭಾಷಣದಲ್ಲಿ “ದೇಶದ್ರೋಹಿಗಳಿಗೆ ಗುಂಡು ಹೊಡೆಯಿರಿ” ಎಂಬ ಘೋಷಣೆ ಕೂಗಿದರೆ, ಇನ್ನೊಬ್ಬ ಬಿಜೆಪಿ ಸಂಸದ ಪರ್ವೇಶ್ ಸಾಹಿಬ್ ವರ್ಮಾ “ಶಾಹಿನ್‌ಬಾಗ್‌ನಲ್ಲಿ ಪ್ರತಿಭಟನೆ ನಡೆಸುವ ಜನ ನಾಳೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಹೆಂಡತಿ, ಮಗಳನ್ನು ರೇಪ್ ಮಾಡುತ್ತಾರೆ, ನಮಗೆ ಮತ ನೀಡಿದರೆ ಅಂತವರನ್ನು ಒಂದು ಗಂಟೆಯಲ್ಲಿ ಕಿತ್ತು ಹಾಕುತ್ತೇವೆ” ಎನ್ನುತ್ತಾನೆ. ಎಲ್ಲರಿಗಿಂತ ಹೆಚ್ಚಾಗಿ ದೇಶದ ಗೃಹಮಂತ್ರಿ ಅಮಿತ್ ಶಾ “ನೀವು ಸಿಟ್ಟಿನಿಂದ ಇವಿಯಂ ಗುಂಡಿ ಒತ್ತಿದರೆ ಅದರ ಬಿಸಿ ಶಾಹಿನ್‌ಬಾಗ್‌ನಲ್ಲಿರುವರನ್ನು ತಟ್ಟಬೇಕು” ಎಂಬ ಫರ್ಮಾನು ಹೊರಡಿಸುತ್ತಾರೆ. ಶಾಹಿನ್‌ಬಾಗ್ ಎಂಬುದು ಇಂದು ದೇಶದಲ್ಲಿ ಪ್ರತಿಭಟನೆ ನಡೆಸುವವರಿಗೆ ಒಂದು ಮಾದರಿಯಾಗಿ ಬದಲಾಗುತ್ತಿರುವುದು ಬಿಜೆಪಿಗೆ ಮಗ್ಗುಲಮುಳ್ಳಾಗಿ ಕಾಡುತ್ತಿದೆ.

ಜೆಎನ್‌ಯು ಒಳಗೆ ಗೂಂಡಾಗಳು ಅಟ್ಟಹಾಸ ಮಾಡುವುದನ್ನು ಕೈಕಟ್ಟಿ ನೋಡುತ್ತಾ ಕುಳಿತ ಗೃಹಮಂತ್ರಿಗೆ, ಶಾಹಿನ್‌ಬಾಗ್‌ನಲ್ಲಿ ಕುಳಿತ ಮಹಿಳೆಯರನ್ನು ಓಡಿಸುವುದು ದೂಡ್ಡ ಮಾತೇನಲ್ಲ. ಆದರೆ ಈಗಾಗಲೇ ಬೇಕಾದಷ್ಟು ಹುಳ ಮೈಮೇಲೆ ಬಿಟ್ಟುಕೊಂಡಿರುವ ಅವರಿಗೆ ಅದ್ಯಾಕೋ ಒಳನಡುಕ ಶುರುವಾದಂತಿದೆ.

ದೆಹಲಿಯ ಗದ್ದುಗೆ ಎನ್ನುವುದು ಕೇಂದ್ರ ಸರ್ಕಾರದ ಆಡಳಿತ ಪಕ್ಷಕ್ಕೆ ಸೇರಿದರೆ ಅದರ ಸ್ವರೂಪವೇ ಬೇರೆ. ಆದರೆ ಬೇರೆ ಪಕ್ಷಕ್ಕೆ ಸೇರಿದ್ದರೆ ಅದೊಂದು ದೊಡ್ಡ ಪ್ರಮಾಣದ ಮಹಾನಗರ ಪಾಲಿಕೆಗಿಂತ ಭಿನ್ನವೇನಲ್ಲ. ಆದರೆ ದೇಶದ ರಾಜಧಾನಿಯನ್ನೇ ಕೈಯಲ್ಲಿಟ್ಟುಕೊಳ್ಳಲು ಆಗದವರು ಎಂಬ ಹಣೆಪಟ್ಟಿ ಬಿಜೆಪಿಗೆ ದೊಡ್ಡದಾಗಿ ಕಾಡುತ್ತಿದೆ.

ಬಿಜೆಪಿ, ಕಾಂಗ್ರೆಸ್‌ಗೆ ಮುಖಗಳಿಲ್ಲ…

ದೇಶಕ್ಕೆ ನರೇಂದ್ರ ಮೋದಿ, ದೆಹಲಿಗೆ ಕೇಜ್ರಿವಾಲ್ ಎಂದು ಹಲವು ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರು ಮಾತನಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಲೋಕಸಭೆಯ ಚುನಾವಣೆಯ ವೇಳೆಯಲ್ಲಿ ಹೇಗೆ ಮೋದಿಗೆ ಎದುರಾಳಿಗಳಿರಲಿಲ್ಲವೋ ಹಾಗೆ ಈಗ ದೆಹಲಿಯಲ್ಲಿ ಕೇಜ್ರಿವಾಲ್‌ಗೆ ಎದುರಾಳಿಗಳಿಲ್ಲ.. ಇದುವರೆಗೂ ಬಿಜೆಪಿಯಾಗಲೀ, ಕಾಂಗ್ರೆಸ್ ಆಗಲಿ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ.

ಪ್ರತಿದಿನ ಅರವಿಂದ್ ಕೇಜ್ರಿವಾಲ್ ಮೇಲೆ ಟೀಕೆ ಮಾಡುತ್ತಿರುವ ಬಿಜೆಪಿಗೆ ಕೇಜ್ರಿವಾಲ್ ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿ, ಅವರೊಡನೆ ನಾನು ಬಹಿರಂಗ ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದ್ದಾರೆ. ಆದರೆ ಆ ರೀತಿಯ ಸಮರ್ಥ ಅಭ್ಯರ್ಥಿ ಇದ್ದರೆ ತಾನೇ ಚರ್ಚೆಯ ವಿಷಯ…?

ಕೊನೆಯದಾಗಿ…

ದಿಲ್ಲಿಯಲ್ಲಿ ಮೇಲು ಮತ್ತು ಮಧ್ಯಮ ವರ್ಗದವರು ಕೇಜ್ರಿವಾಲ್ ಬಗ್ಗೆ ಭ್ರಮನಿರಸನಗೊಂಡಿರಬಹುದು. ಆದರೆ, ಅವರು ಕೆಳಮಧ್ಯಮ ಮತ್ತು ಬಡಜನರು ಮತ್ತು ಆ ನಡುವೆ ಬದುಕುವ ಜನರ ಕಣ್ಮಣಿಯಾಗಿಯೇ ಉಳಿದಿದ್ದಾರೆ. ಬಿಜೆಪಿ ನಾಯಕರಿಗೆ ವ್ಯತಿರಿಕ್ತವಾಗಿ ಅವರು ಯಾವತ್ತೂ ಕಾಲಿಗೆ ಚಕ್ರ ಕಟ್ಟಿಕೊಂಡಿರುವ ವ್ಯಕ್ತಿ. 2017ರ ಏಪ್ರಿಲ್‌ನಲ್ಲಿ ನಡೆದ ದಿಲ್ಲಿ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಸೋತ ಬಳಿಕ ಅವರು ದಿಲ್ಲಿಯ ಮೂಲೆಮೂಲೆಯನ್ನೂ ತಿರುಗಿ ಪ್ರತಿದಿನವೆಂಬತೆ ಚಿಕ್ಕ ದೊಡ್ಡ ಸಭೆಗಳಲ್ಲಿ ಮಾತನಾಡುತ್ತಲೇ ಇದ್ದಾರೆ. ಅವರೀಗ ತನ್ನ ಮಾಂತ್ರಿಕ ಸ್ಪರ್ಶವನ್ನು ಮರಳಿ ಪಡೆದಂತಿದೆ ಎನ್ನುತ್ತಾರೆ ದೆಹಲಿಯ ಪತ್ರಕರ್ತ ಅಶುತೋಷ್..

ಹಾಗೆಯೇ ಕೇಜ್ರಿವಾಲ್ ಮೌನ ಸಹ ಅವರಿಗೆ ವರದಾನವಾಗಲಿದೆ. 2015ರ ಭಾರೀ ಗೆಲುವಿನ ನಂತರ ಕೇಜ್ರಿವಾಲ್ ಆಕ್ರಮಣಕಾರಿಯಾಗಿ ಮೋದಿಯನ್ನು ಎದುರಿಸಿದ್ದರು. ಅದನ್ನು ಮೋದಿ ನೆಗೆಟಿವಾಗಿ ಬಳಸಿದ್ದರು. ಆದರೆ, ಈ ಬಾರಿ ಅವರ ಮೌನ ಮೋದಿಗೆ ಯಾವುದೇ ಅಸ್ತ್ರ ಒದಗಿಸುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ಕೇಜ್ರಿವಾಲ್ ಈ ಚುನಾವಣೆಯಲ್ಲಿ ಬಿಜೆಪಿಗೆ ಕಬ್ಬಿಣದ ಕಡಲೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...