Homeಮುಖಪುಟದೆಹಲಿ ಚುನಾವಣೆಯಲ್ಲಿ ಈ ಬಾರಿಯು ಆಪ್‌ ಗೆಲ್ಲುತ್ತದೆ. ಏಕೆಂದರೆ...

ದೆಹಲಿ ಚುನಾವಣೆಯಲ್ಲಿ ಈ ಬಾರಿಯು ಆಪ್‌ ಗೆಲ್ಲುತ್ತದೆ. ಏಕೆಂದರೆ…

ದೇಶಕ್ಕೆ ನರೇಂದ್ರ ಮೋದಿ, ದೆಹಲಿಗೆ ಕೇಜ್ರಿವಾಲ್ ಎಂದು ಹಲವು ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರು ಮಾತನಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

- Advertisement -
- Advertisement -

ದೆಹಲಿಯ ಚುನಾವಣೆಯನ್ನು “ಪ್ರಸ್ತುತ ಆಪ್ ಸರ್ಕಾರದ ಇದುವರೆಗಿನ ಕಾರ್ಯಸಾಧನೆಗಳು ಮತ್ತು ಬಿಂಬಿತವಾಗಿರುವ ಜನಾಭಿಪ್ರಾಯದ ಹಿನ್ನೆಲೆಯಲ್ಲಿ ವಿಶ್ಲೇಷಿಸಿದರೆ ಆಶ್ಚರ್ಯವಾದ ಫಲಿತಾಂಶಗಳೇನು ಇರಲಿಕ್ಕಿಲ್ಲ” ಎಂದುಕೊಳ್ಳಬಹುದು. ಅಂದರೆ ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ಆಪ್ ಒಟ್ಟು 70 ಕ್ಷೇತ್ರಗಳಲ್ಲಿ ಕನಿಷ್ಟ 50ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೆ ಅಧಿಕಾರದ ಗದ್ದುಗೆ ಏರಲಿದೆ.

ಆದರೆ ರಾಷ್ಟ್ರರಾಜಧಾನಿಯಲ್ಲಿ ಹೇಗಾದರೂ ಮಾಡಿ ಅಧಿಕಾರ ಹಿಡಿಯಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಈ ಬಾರಿ, ಧರ್ಮ, ದೇಶದ್ರೋಹ, ಪಾಕಿಸ್ತಾನ, ಕೋಮು ಪ್ರಚೋದನಾ ಹೇಳಿಕೆಗಳ ಜೊತೆಗೆ ಒಂದಷ್ಟು ಸುಳ್ಳುಗಳನ್ನು ಹೆಣೆದು ಮತದಾರರ ಮನಸ್ಸನ್ನು ಹ್ಯಾಕ್ ಮಾಡಲು ಯತ್ನಿಸುತ್ತಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳನ್ನು ಕಳೆದುಕೊಂಡ ಬಿಜೆಪಿ ದೆಹಲಿ ಗೆಲ್ಲಲು ತನ್ನಿಡೀ ಬಲವನ್ನು ಸುರಿದಿದೆ. ಹಾಗಾಗಿ ದೆಹಲಿ ಚುನಾವಣೆಗೆ ಈ ಬಾರಿ ವಿಶೇಷ ಮಹತ್ವವಿದೆ.

ಒಂದು ಕಡೆ ಜನರಿಂದಲೇ ಹುಟ್ಟಿಬಂದ ಆಮ್‌ಆದ್ಮಿ ಪಾರ್ಟಿ ತನ್ನ ಐದು ವರ್ಷಗಳ ಅಧಿಕಾರಾವಧಿಯಲ್ಲಿ ನೀಡಿದ ಭರವಸೆಗಳನ್ನು ಬಹುತೇಕ ಈಡೇರಿಸಿ ತನ್ನ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿದೆ. ಇನ್ನೊಂದು ಕಡೆ ‘ವಿಕಾಸ’ದ ಹಳಿ ಏರಿಬಂದ ಬಿಜೆಪಿ ಹಳಿ ಬದಲಿಸಿ ಸನಾತನ ಧರ್ಮದ ಹೆಸರಿನಲ್ಲಿ ದೇಶವನ್ನು ಸನಾತನ ಕಾಲಕ್ಕೆ ಕರೆದೊಯ್ಯುವ ಭರದಲ್ಲಿದ್ದಂತಿದೆ. ಈ ಮಧ್ಯೆ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಭಾಗವಹಿಸುತ್ತಿದೆ.

ಆಪ್ ಏಕೆ ಗೆಲ್ಲುತ್ತದೆ?

ಆಮ್‌ಆದ್ಮಿ ನೀಡಿದ ಭರವಸೆಗಳಲ್ಲಿ “ವಿದ್ಯುತ್ ದರ ಕಡಿತ, ಉಚಿತ ನೀರು ಸರಬರಾಜು, ಉಚಿತ ಆರೋಗ್ಯ, ಮುಖ್ಯವಾಗಿ ಉತ್ತಮ ದರ್ಜೆಯ ಶಿಕ್ಷಣ” ಎಂಬ ಮೂಲ ಸೌಕರ್ಯಗಳನ್ನು ನೀಡಿದ ರೀತಿ ಇತ್ತೀಚಿನ ವರ್ಷಗಳ ರಾಜಕೀಯ ಪಕ್ಷಗಳನ್ನು ನೋಡಿದಾಗ ಅದು ರಾಜಕಾರಣದಲ್ಲಿ ಓಯಸಿಸ್‌ನಂತೆ ಕಾಣುತ್ತದೆ. ಅತ್ಯುತ್ತಮ ಸರ್ಕಾರಿ ಶಾಲೆಗಳು, ಉತ್ತಮ ಮೊಹಲ್ಲಾ ಕ್ಲಿನಿಕ್‌ಗಳು ದೇಶದ ಗಮನ ಸೆಳೆದಿವೆ. ಮಹಿಳೆಯರಿಗೆ ಉಚಿತ ಪ್ರಯಾಣ, ದೆಹಲಿ ತುಂಬಾ ಸಿಸಿಟಿವಿ ಕ್ಯಾಮರಾಗಳು, ಮನೆಬಾಗಿಲಿಗೆ ಸರ್ಕಾರಿ ಸೇವೆಗಳು ಹೀಗೆ ಅವರು ಮಾಡಿರುವ ಕೆಲಸಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಹೀಗೂ ಕೆಲಸ ಮಾಡಬಹುದು ಎನ್ನುವುದನ್ನು ಬಹುಶಃ ಜನ ಮರೆತೇಹೋಗಿರುವ ಸಮಯದಲ್ಲಿ ಅಲ್ಲಿನ ಮುಖ್ಯಮಂತ್ರಿ ಕೇಜ್ರಿವಾಲ್ ಒಂದು ಉದಾಹರಣೆಯಾಗಿ ಭಿನ್ನವಾಗಿ ನಿಲ್ಲುತ್ತಾರೆ. ಆದರೆ ಅವರ ಸರ್ಕಾರ ಹಾಗೂ ಅವರ ವೈಯಕ್ತಿಕ ನಡೆಗಳನ್ನು ನೇರವಾಗಿ ಟೀಕಿಸಲು ಸಕಾರಣಗಳು ಇಲ್ಲದ್ದರಿಂದ ಬಿಜೆಪಿ ‘ತುಕುಡೆ ತುಕುಡೆ ಗ್ಯಾಂಗ್ ಹಿಂದೆ ನಿಂತಿರುವ ದೇಶದ್ರೋಹಿಗಳು’ ಎನ್ನುವ ಪರೋಕ್ಷ ದಾಳಿಯಿಂದ ಉರುಳಿಸುವ ಯತ್ನ ನಡೆಸುತ್ತಿದೆ.

ಬಿಜೆಪಿ ವರಸೆ…

ಇಲ್ಲಿವರೆಗೂ ಭಾರತದ ಗಣತಂತ್ರದಲ್ಲಿ ಕಂಡುಕೇಳರಿಯದ ಘಟನೆಗಳು ಇಂದಿನ ದಿನ ನಡೆಯುತ್ತಿವೆ. ಕೇಂದ್ರ ಸರ್ಕಾರ ಪಾಸು ಮಾಡಿದ ಸಿಎಎಯಂತಹ ಕಾಯ್ದೆಯ ವಿರುದ್ಧ ದೇಶದ ಒಂದು ದೊಡ್ಡ ಜನಸಮೂಹ ಕಂಡುಕೇಳರಿಯದ ರೀತಿಯಲ್ಲಿ ನಿರಂತರವಾದ ಪ್ರತಿಭಟನೆಯನ್ನು ಮಾಡುತ್ತಿದ್ದರೆ, ಸರ್ಕಾರದ ಪ್ರತಿನಿಧಿಗಳು ಉಪಯುಕ್ತ ಚರ್ಚೆಗಳನ್ನು ಕೈಗೊಳ್ಳುವ ಬದಲು ಮನೆಮನೆಗೆ ತಿರುಗಿ ಸಿಎಎ ಕಾಯ್ದೆಯ ಉಪಯುಕ್ತತೆಯ ಬಗ್ಗೆ ತಿಳಿವಳಿಕೆ ನೀಡುವಲ್ಲಿ ನಿರತರಾಗಿದ್ದಾರೆ. ಅನುರಾಗ್ ಠಾಕೂರ್ ಎಂಬ ಕೇಂದ್ರ ಮಂತ್ರಿ ತನ್ನ ಸಾರ್ವಜನಿಕ ಭಾಷಣದಲ್ಲಿ “ದೇಶದ್ರೋಹಿಗಳಿಗೆ ಗುಂಡು ಹೊಡೆಯಿರಿ” ಎಂಬ ಘೋಷಣೆ ಕೂಗಿದರೆ, ಇನ್ನೊಬ್ಬ ಬಿಜೆಪಿ ಸಂಸದ ಪರ್ವೇಶ್ ಸಾಹಿಬ್ ವರ್ಮಾ “ಶಾಹಿನ್‌ಬಾಗ್‌ನಲ್ಲಿ ಪ್ರತಿಭಟನೆ ನಡೆಸುವ ಜನ ನಾಳೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಹೆಂಡತಿ, ಮಗಳನ್ನು ರೇಪ್ ಮಾಡುತ್ತಾರೆ, ನಮಗೆ ಮತ ನೀಡಿದರೆ ಅಂತವರನ್ನು ಒಂದು ಗಂಟೆಯಲ್ಲಿ ಕಿತ್ತು ಹಾಕುತ್ತೇವೆ” ಎನ್ನುತ್ತಾನೆ. ಎಲ್ಲರಿಗಿಂತ ಹೆಚ್ಚಾಗಿ ದೇಶದ ಗೃಹಮಂತ್ರಿ ಅಮಿತ್ ಶಾ “ನೀವು ಸಿಟ್ಟಿನಿಂದ ಇವಿಯಂ ಗುಂಡಿ ಒತ್ತಿದರೆ ಅದರ ಬಿಸಿ ಶಾಹಿನ್‌ಬಾಗ್‌ನಲ್ಲಿರುವರನ್ನು ತಟ್ಟಬೇಕು” ಎಂಬ ಫರ್ಮಾನು ಹೊರಡಿಸುತ್ತಾರೆ. ಶಾಹಿನ್‌ಬಾಗ್ ಎಂಬುದು ಇಂದು ದೇಶದಲ್ಲಿ ಪ್ರತಿಭಟನೆ ನಡೆಸುವವರಿಗೆ ಒಂದು ಮಾದರಿಯಾಗಿ ಬದಲಾಗುತ್ತಿರುವುದು ಬಿಜೆಪಿಗೆ ಮಗ್ಗುಲಮುಳ್ಳಾಗಿ ಕಾಡುತ್ತಿದೆ.

ಜೆಎನ್‌ಯು ಒಳಗೆ ಗೂಂಡಾಗಳು ಅಟ್ಟಹಾಸ ಮಾಡುವುದನ್ನು ಕೈಕಟ್ಟಿ ನೋಡುತ್ತಾ ಕುಳಿತ ಗೃಹಮಂತ್ರಿಗೆ, ಶಾಹಿನ್‌ಬಾಗ್‌ನಲ್ಲಿ ಕುಳಿತ ಮಹಿಳೆಯರನ್ನು ಓಡಿಸುವುದು ದೂಡ್ಡ ಮಾತೇನಲ್ಲ. ಆದರೆ ಈಗಾಗಲೇ ಬೇಕಾದಷ್ಟು ಹುಳ ಮೈಮೇಲೆ ಬಿಟ್ಟುಕೊಂಡಿರುವ ಅವರಿಗೆ ಅದ್ಯಾಕೋ ಒಳನಡುಕ ಶುರುವಾದಂತಿದೆ.

ದೆಹಲಿಯ ಗದ್ದುಗೆ ಎನ್ನುವುದು ಕೇಂದ್ರ ಸರ್ಕಾರದ ಆಡಳಿತ ಪಕ್ಷಕ್ಕೆ ಸೇರಿದರೆ ಅದರ ಸ್ವರೂಪವೇ ಬೇರೆ. ಆದರೆ ಬೇರೆ ಪಕ್ಷಕ್ಕೆ ಸೇರಿದ್ದರೆ ಅದೊಂದು ದೊಡ್ಡ ಪ್ರಮಾಣದ ಮಹಾನಗರ ಪಾಲಿಕೆಗಿಂತ ಭಿನ್ನವೇನಲ್ಲ. ಆದರೆ ದೇಶದ ರಾಜಧಾನಿಯನ್ನೇ ಕೈಯಲ್ಲಿಟ್ಟುಕೊಳ್ಳಲು ಆಗದವರು ಎಂಬ ಹಣೆಪಟ್ಟಿ ಬಿಜೆಪಿಗೆ ದೊಡ್ಡದಾಗಿ ಕಾಡುತ್ತಿದೆ.

ಬಿಜೆಪಿ, ಕಾಂಗ್ರೆಸ್‌ಗೆ ಮುಖಗಳಿಲ್ಲ…

ದೇಶಕ್ಕೆ ನರೇಂದ್ರ ಮೋದಿ, ದೆಹಲಿಗೆ ಕೇಜ್ರಿವಾಲ್ ಎಂದು ಹಲವು ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರು ಮಾತನಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಲೋಕಸಭೆಯ ಚುನಾವಣೆಯ ವೇಳೆಯಲ್ಲಿ ಹೇಗೆ ಮೋದಿಗೆ ಎದುರಾಳಿಗಳಿರಲಿಲ್ಲವೋ ಹಾಗೆ ಈಗ ದೆಹಲಿಯಲ್ಲಿ ಕೇಜ್ರಿವಾಲ್‌ಗೆ ಎದುರಾಳಿಗಳಿಲ್ಲ.. ಇದುವರೆಗೂ ಬಿಜೆಪಿಯಾಗಲೀ, ಕಾಂಗ್ರೆಸ್ ಆಗಲಿ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ.

ಪ್ರತಿದಿನ ಅರವಿಂದ್ ಕೇಜ್ರಿವಾಲ್ ಮೇಲೆ ಟೀಕೆ ಮಾಡುತ್ತಿರುವ ಬಿಜೆಪಿಗೆ ಕೇಜ್ರಿವಾಲ್ ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿ, ಅವರೊಡನೆ ನಾನು ಬಹಿರಂಗ ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದ್ದಾರೆ. ಆದರೆ ಆ ರೀತಿಯ ಸಮರ್ಥ ಅಭ್ಯರ್ಥಿ ಇದ್ದರೆ ತಾನೇ ಚರ್ಚೆಯ ವಿಷಯ…?

ಕೊನೆಯದಾಗಿ…

ದಿಲ್ಲಿಯಲ್ಲಿ ಮೇಲು ಮತ್ತು ಮಧ್ಯಮ ವರ್ಗದವರು ಕೇಜ್ರಿವಾಲ್ ಬಗ್ಗೆ ಭ್ರಮನಿರಸನಗೊಂಡಿರಬಹುದು. ಆದರೆ, ಅವರು ಕೆಳಮಧ್ಯಮ ಮತ್ತು ಬಡಜನರು ಮತ್ತು ಆ ನಡುವೆ ಬದುಕುವ ಜನರ ಕಣ್ಮಣಿಯಾಗಿಯೇ ಉಳಿದಿದ್ದಾರೆ. ಬಿಜೆಪಿ ನಾಯಕರಿಗೆ ವ್ಯತಿರಿಕ್ತವಾಗಿ ಅವರು ಯಾವತ್ತೂ ಕಾಲಿಗೆ ಚಕ್ರ ಕಟ್ಟಿಕೊಂಡಿರುವ ವ್ಯಕ್ತಿ. 2017ರ ಏಪ್ರಿಲ್‌ನಲ್ಲಿ ನಡೆದ ದಿಲ್ಲಿ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಸೋತ ಬಳಿಕ ಅವರು ದಿಲ್ಲಿಯ ಮೂಲೆಮೂಲೆಯನ್ನೂ ತಿರುಗಿ ಪ್ರತಿದಿನವೆಂಬತೆ ಚಿಕ್ಕ ದೊಡ್ಡ ಸಭೆಗಳಲ್ಲಿ ಮಾತನಾಡುತ್ತಲೇ ಇದ್ದಾರೆ. ಅವರೀಗ ತನ್ನ ಮಾಂತ್ರಿಕ ಸ್ಪರ್ಶವನ್ನು ಮರಳಿ ಪಡೆದಂತಿದೆ ಎನ್ನುತ್ತಾರೆ ದೆಹಲಿಯ ಪತ್ರಕರ್ತ ಅಶುತೋಷ್..

ಹಾಗೆಯೇ ಕೇಜ್ರಿವಾಲ್ ಮೌನ ಸಹ ಅವರಿಗೆ ವರದಾನವಾಗಲಿದೆ. 2015ರ ಭಾರೀ ಗೆಲುವಿನ ನಂತರ ಕೇಜ್ರಿವಾಲ್ ಆಕ್ರಮಣಕಾರಿಯಾಗಿ ಮೋದಿಯನ್ನು ಎದುರಿಸಿದ್ದರು. ಅದನ್ನು ಮೋದಿ ನೆಗೆಟಿವಾಗಿ ಬಳಸಿದ್ದರು. ಆದರೆ, ಈ ಬಾರಿ ಅವರ ಮೌನ ಮೋದಿಗೆ ಯಾವುದೇ ಅಸ್ತ್ರ ಒದಗಿಸುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ಕೇಜ್ರಿವಾಲ್ ಈ ಚುನಾವಣೆಯಲ್ಲಿ ಬಿಜೆಪಿಗೆ ಕಬ್ಬಿಣದ ಕಡಲೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...