Homeಕರ್ನಾಟಕಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಬಜೆಟ್ ಮಂಡನೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಈ ಕುರಿತು ಆರ್ಥಿಕ ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರೇ ಕೆಲ ಸುಳಿವುಗಳನ್ನು ಖುದ್ದು ಬಿಟ್ಟುಕೊಟ್ಟಿದ್ದಾರೆ. ಈ ಬಾರಿ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

”ಕೆಂಗಲ್ ಹನುಮಂತಯ್ಯ ಬಜೆಟ್ ಮಂಡಿಸುವಾಗ ಕರ್ನಾಟಕದ ಬಜೆಟ್ ಗಾತ್ರ 21 ಕೋಟಿ ರೂಪಾಯಿ ಇತ್ತು. ಇತ್ತೀಚೆಗೆ ಮಂಡಿಸಲಾಗ ಬಜೆಟ್ ಗಾತ್ರ 3.9 ಲಕ್ಷ ಕೋಟಿ ರೂಪಾಯಿ. ಆದರೆ ಈ ಬಾರಿ ಮಂಡಿಸಲಿರುವ ಬಜೆಟ್ ಗಾತ್ರ 30 ರಿಂದ 35 ಸಾವಿರ ಕೋಟಿ ರೂಪಾಯಿ ಹೆಚ್ಚಾಗಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ನಾವು 5 ಗ್ಯಾರೆಂಟಿ ಘೋಷಣೆ ಮಾಡಿದ್ದೇವೆ. ಇದಕ್ಕಾಗಿ ಹಣ ಹೊಂದಿಸಬೇಕಿದೆ. ಹೀಗಾಗಿ ಬಜೆಟ್ ಗಾತ್ರ ವಿಸ್ತರಣೆಯಾಗಲಿದೆ. 5 ಗ್ಯಾರಂಟಿ ಜಾರಿಗೆ ಸುಮಾರು 59-60 ಸಾವಿರ ಕೋಟಿ ರೂಪಾಯಿ ಹಣ ಬೇಕಾಗಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ಆದಾಯದ ವೃದ್ಧಿಗೆ ಸಾಮಾನ್ಯ ಜನರಿಗೆ ಹೊರೆಯಾಗದಂತೆ ಹೇಗೆ ತೆರಿಗೆ ವಿಧಿಸಬೇಕು ಎನ್ನುವುದನ್ನು ಮಹಾಭಾರತದ ಭೀಷ್ಮ, ಯುಧಿಷ್ಠರನಿಗೆ ಬೋಧಿಸಿದ್ದಾರೆ. ರಾಜ್ಯ ಸರ್ಕಾರವೂ ತೆರಿಗೆ ಭರಿಸುವ ಶಕ್ತಿ ಇರುವವರಿಂದ ತೆರಿಗೆ ಸಂಗ್ರಹಿಸಲು ಆದ್ಯತೆ ನೀಡಲಿದೆ. ಬಸವಣ್ಣನವರು ಹೇಳಿದಂತೆ ಕಾಯಕ ಮತ್ತು ದಾಸೋಹ ಬಜೆಟ್‌ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ” ಎಂದು ವಿಶ್ಲೇಷಿಸಿದರು.

”1994ರಲ್ಲಿ ಮೊದಲ ಬಾರಿ ಹಣಕಾಸು ಸಚಿವನಾಗಿ ಬಜೆಟ್ ಮಂಡಿಸುವಾಗ ಪತ್ರಿಕೆಯೊಂದು ಲೇವಡಿ ಮಾಡಿತ್ತು. 100 ಕುರಿ ಎಣಿಸಲು ಬಾರದವರು ಬಜೆಟ್‌ ಮಂಡಿಸಲಿದ್ದಾರೆ ಎಂಬ ಟೀಕೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಆರ್ಥಿಕ ತಜ್ಞರು, ಚಿಂತಕರ ಸಲಹೆ, ಸಹಕಾರ ಪಡೆದು ರಾಜ್ಯದ ಆರ್ಥಿಕತೆಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಇನ್ನೊಂದು ಪತ್ರಿಕೆ ಅತ್ಯುತ್ತಮ ಬಜೆಟ್ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಆ ಸಮಯದಲ್ಲಿ ವಾಟಾಳ್, ಜಯಪ್ರಕಾಶ್ ರೆಡ್ಡಿ, ಮಾಧುಸ್ವಾಮಿ ಕೂಡ ಇದ್ದರು” ಎಂದು ಹಿಂದಿನ ಘಟನೆಗಳನ್ನು ಮೆಲುಕು ಹಾಕಿದರು.

ಜುಲೈ ತಿಂಗಳಲ್ಲಿ ನೂತನ ಬಜೆಟ್ ಮಂಡಿಸಲಾಗುತ್ತದೆ. ಅದು ಆಗಸ್ಟ್ 1ರಿಂದ ಜಾರಿಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಸದನದಲ್ಲಿನ ಹಾಜರಾತಿ, ನೂತನ ಶಾಸಕರ ಕಾರ್ಯಗಳು, ಜನಸ್ಪಂದನೆ, ಕೆಲಸಗಳ ಅಚ್ಚಕಟ್ಟಾಗಿ ಮಾಡುವ ರೀತಿ ಕುರಿತು ಸಲಹೆ ನೀಡಿದ್ದಾರೆ.

”ನಾನು ಸಿಎಂ ಆಗಿ ಕಾರ್ಯನಿರ್ವಹಿಸಿದ್ದೇನೆ,ವಿರೋಧ ಪಕ್ಷದ ನಾಯಕನಾಗಿಯೂ ಸೇವೆ ಸಲ್ಲಿಸಿದ್ದೇನೆ. ಈ ಅನುಭವದ ಮೂಲಕ ಹೇಳುತ್ತೇನೆ. ನನ್ನ ಮಾತು ಯಾವಾಗಲು ಒರಟು, ಆದರೆ ಸತ್ಯವಾಗಿರುತ್ತದೆ ಎಂದು ಸಿದ್ದು ಹೇಳಿದ್ದಾರೆ. ನೂತನ ಶಾಸಕರಿಗೆ ವಾಟಾಳ್ ನಾಗರಾಜ್ ಶಾಸಕರಾಗಿ ಸದನದಲ್ಲಿ ನಡೆದುಕೊಂಡ ರೀತಿಯನ್ನು ಹೇಳಿದ್ದಾರೆ. ವಾಟಾಳ್ ನಾಗರಾಜ್ ಯಾವಾಗಲೂ ಸದನ ಬಿಟ್ಟು ಹೋಗುತ್ತಿರಲ್ಲಿಲ್ಲ. ನಾನು ಇಷ್ಟು ದಿನ ಶಾಸಕನಾಗಿದ್ದೇನೆ ಅಲ್ವಾ ಕೇವಲ 4-5 ದಿನ ಮಾತ್ರ ಬಂದಿರಲಿಲ್ಲ. ಎಲ್ಲರೂ ಸದನಕ್ಕೆ ತಪ್ಪದೆ ಬರಬೇಕು. ಸರ್ಕಾರದ ಕೆಲಸದಲ್ಲಿ ನಿರಂತರವಾಗಿ ಸ್ಪಂದಿಸಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...