Homeಕರ್ನಾಟಕಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಬಜೆಟ್ ಮಂಡನೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಈ ಕುರಿತು ಆರ್ಥಿಕ ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರೇ ಕೆಲ ಸುಳಿವುಗಳನ್ನು ಖುದ್ದು ಬಿಟ್ಟುಕೊಟ್ಟಿದ್ದಾರೆ. ಈ ಬಾರಿ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

”ಕೆಂಗಲ್ ಹನುಮಂತಯ್ಯ ಬಜೆಟ್ ಮಂಡಿಸುವಾಗ ಕರ್ನಾಟಕದ ಬಜೆಟ್ ಗಾತ್ರ 21 ಕೋಟಿ ರೂಪಾಯಿ ಇತ್ತು. ಇತ್ತೀಚೆಗೆ ಮಂಡಿಸಲಾಗ ಬಜೆಟ್ ಗಾತ್ರ 3.9 ಲಕ್ಷ ಕೋಟಿ ರೂಪಾಯಿ. ಆದರೆ ಈ ಬಾರಿ ಮಂಡಿಸಲಿರುವ ಬಜೆಟ್ ಗಾತ್ರ 30 ರಿಂದ 35 ಸಾವಿರ ಕೋಟಿ ರೂಪಾಯಿ ಹೆಚ್ಚಾಗಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ನಾವು 5 ಗ್ಯಾರೆಂಟಿ ಘೋಷಣೆ ಮಾಡಿದ್ದೇವೆ. ಇದಕ್ಕಾಗಿ ಹಣ ಹೊಂದಿಸಬೇಕಿದೆ. ಹೀಗಾಗಿ ಬಜೆಟ್ ಗಾತ್ರ ವಿಸ್ತರಣೆಯಾಗಲಿದೆ. 5 ಗ್ಯಾರಂಟಿ ಜಾರಿಗೆ ಸುಮಾರು 59-60 ಸಾವಿರ ಕೋಟಿ ರೂಪಾಯಿ ಹಣ ಬೇಕಾಗಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ಆದಾಯದ ವೃದ್ಧಿಗೆ ಸಾಮಾನ್ಯ ಜನರಿಗೆ ಹೊರೆಯಾಗದಂತೆ ಹೇಗೆ ತೆರಿಗೆ ವಿಧಿಸಬೇಕು ಎನ್ನುವುದನ್ನು ಮಹಾಭಾರತದ ಭೀಷ್ಮ, ಯುಧಿಷ್ಠರನಿಗೆ ಬೋಧಿಸಿದ್ದಾರೆ. ರಾಜ್ಯ ಸರ್ಕಾರವೂ ತೆರಿಗೆ ಭರಿಸುವ ಶಕ್ತಿ ಇರುವವರಿಂದ ತೆರಿಗೆ ಸಂಗ್ರಹಿಸಲು ಆದ್ಯತೆ ನೀಡಲಿದೆ. ಬಸವಣ್ಣನವರು ಹೇಳಿದಂತೆ ಕಾಯಕ ಮತ್ತು ದಾಸೋಹ ಬಜೆಟ್‌ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ” ಎಂದು ವಿಶ್ಲೇಷಿಸಿದರು.

”1994ರಲ್ಲಿ ಮೊದಲ ಬಾರಿ ಹಣಕಾಸು ಸಚಿವನಾಗಿ ಬಜೆಟ್ ಮಂಡಿಸುವಾಗ ಪತ್ರಿಕೆಯೊಂದು ಲೇವಡಿ ಮಾಡಿತ್ತು. 100 ಕುರಿ ಎಣಿಸಲು ಬಾರದವರು ಬಜೆಟ್‌ ಮಂಡಿಸಲಿದ್ದಾರೆ ಎಂಬ ಟೀಕೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಆರ್ಥಿಕ ತಜ್ಞರು, ಚಿಂತಕರ ಸಲಹೆ, ಸಹಕಾರ ಪಡೆದು ರಾಜ್ಯದ ಆರ್ಥಿಕತೆಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಇನ್ನೊಂದು ಪತ್ರಿಕೆ ಅತ್ಯುತ್ತಮ ಬಜೆಟ್ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಆ ಸಮಯದಲ್ಲಿ ವಾಟಾಳ್, ಜಯಪ್ರಕಾಶ್ ರೆಡ್ಡಿ, ಮಾಧುಸ್ವಾಮಿ ಕೂಡ ಇದ್ದರು” ಎಂದು ಹಿಂದಿನ ಘಟನೆಗಳನ್ನು ಮೆಲುಕು ಹಾಕಿದರು.

ಜುಲೈ ತಿಂಗಳಲ್ಲಿ ನೂತನ ಬಜೆಟ್ ಮಂಡಿಸಲಾಗುತ್ತದೆ. ಅದು ಆಗಸ್ಟ್ 1ರಿಂದ ಜಾರಿಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಸದನದಲ್ಲಿನ ಹಾಜರಾತಿ, ನೂತನ ಶಾಸಕರ ಕಾರ್ಯಗಳು, ಜನಸ್ಪಂದನೆ, ಕೆಲಸಗಳ ಅಚ್ಚಕಟ್ಟಾಗಿ ಮಾಡುವ ರೀತಿ ಕುರಿತು ಸಲಹೆ ನೀಡಿದ್ದಾರೆ.

”ನಾನು ಸಿಎಂ ಆಗಿ ಕಾರ್ಯನಿರ್ವಹಿಸಿದ್ದೇನೆ,ವಿರೋಧ ಪಕ್ಷದ ನಾಯಕನಾಗಿಯೂ ಸೇವೆ ಸಲ್ಲಿಸಿದ್ದೇನೆ. ಈ ಅನುಭವದ ಮೂಲಕ ಹೇಳುತ್ತೇನೆ. ನನ್ನ ಮಾತು ಯಾವಾಗಲು ಒರಟು, ಆದರೆ ಸತ್ಯವಾಗಿರುತ್ತದೆ ಎಂದು ಸಿದ್ದು ಹೇಳಿದ್ದಾರೆ. ನೂತನ ಶಾಸಕರಿಗೆ ವಾಟಾಳ್ ನಾಗರಾಜ್ ಶಾಸಕರಾಗಿ ಸದನದಲ್ಲಿ ನಡೆದುಕೊಂಡ ರೀತಿಯನ್ನು ಹೇಳಿದ್ದಾರೆ. ವಾಟಾಳ್ ನಾಗರಾಜ್ ಯಾವಾಗಲೂ ಸದನ ಬಿಟ್ಟು ಹೋಗುತ್ತಿರಲ್ಲಿಲ್ಲ. ನಾನು ಇಷ್ಟು ದಿನ ಶಾಸಕನಾಗಿದ್ದೇನೆ ಅಲ್ವಾ ಕೇವಲ 4-5 ದಿನ ಮಾತ್ರ ಬಂದಿರಲಿಲ್ಲ. ಎಲ್ಲರೂ ಸದನಕ್ಕೆ ತಪ್ಪದೆ ಬರಬೇಕು. ಸರ್ಕಾರದ ಕೆಲಸದಲ್ಲಿ ನಿರಂತರವಾಗಿ ಸ್ಪಂದಿಸಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...