Homeಕರ್ನಾಟಕಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಬಜೆಟ್ ಮಂಡನೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಈ ಕುರಿತು ಆರ್ಥಿಕ ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರೇ ಕೆಲ ಸುಳಿವುಗಳನ್ನು ಖುದ್ದು ಬಿಟ್ಟುಕೊಟ್ಟಿದ್ದಾರೆ. ಈ ಬಾರಿ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

”ಕೆಂಗಲ್ ಹನುಮಂತಯ್ಯ ಬಜೆಟ್ ಮಂಡಿಸುವಾಗ ಕರ್ನಾಟಕದ ಬಜೆಟ್ ಗಾತ್ರ 21 ಕೋಟಿ ರೂಪಾಯಿ ಇತ್ತು. ಇತ್ತೀಚೆಗೆ ಮಂಡಿಸಲಾಗ ಬಜೆಟ್ ಗಾತ್ರ 3.9 ಲಕ್ಷ ಕೋಟಿ ರೂಪಾಯಿ. ಆದರೆ ಈ ಬಾರಿ ಮಂಡಿಸಲಿರುವ ಬಜೆಟ್ ಗಾತ್ರ 30 ರಿಂದ 35 ಸಾವಿರ ಕೋಟಿ ರೂಪಾಯಿ ಹೆಚ್ಚಾಗಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ನಾವು 5 ಗ್ಯಾರೆಂಟಿ ಘೋಷಣೆ ಮಾಡಿದ್ದೇವೆ. ಇದಕ್ಕಾಗಿ ಹಣ ಹೊಂದಿಸಬೇಕಿದೆ. ಹೀಗಾಗಿ ಬಜೆಟ್ ಗಾತ್ರ ವಿಸ್ತರಣೆಯಾಗಲಿದೆ. 5 ಗ್ಯಾರಂಟಿ ಜಾರಿಗೆ ಸುಮಾರು 59-60 ಸಾವಿರ ಕೋಟಿ ರೂಪಾಯಿ ಹಣ ಬೇಕಾಗಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ಆದಾಯದ ವೃದ್ಧಿಗೆ ಸಾಮಾನ್ಯ ಜನರಿಗೆ ಹೊರೆಯಾಗದಂತೆ ಹೇಗೆ ತೆರಿಗೆ ವಿಧಿಸಬೇಕು ಎನ್ನುವುದನ್ನು ಮಹಾಭಾರತದ ಭೀಷ್ಮ, ಯುಧಿಷ್ಠರನಿಗೆ ಬೋಧಿಸಿದ್ದಾರೆ. ರಾಜ್ಯ ಸರ್ಕಾರವೂ ತೆರಿಗೆ ಭರಿಸುವ ಶಕ್ತಿ ಇರುವವರಿಂದ ತೆರಿಗೆ ಸಂಗ್ರಹಿಸಲು ಆದ್ಯತೆ ನೀಡಲಿದೆ. ಬಸವಣ್ಣನವರು ಹೇಳಿದಂತೆ ಕಾಯಕ ಮತ್ತು ದಾಸೋಹ ಬಜೆಟ್‌ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ” ಎಂದು ವಿಶ್ಲೇಷಿಸಿದರು.

”1994ರಲ್ಲಿ ಮೊದಲ ಬಾರಿ ಹಣಕಾಸು ಸಚಿವನಾಗಿ ಬಜೆಟ್ ಮಂಡಿಸುವಾಗ ಪತ್ರಿಕೆಯೊಂದು ಲೇವಡಿ ಮಾಡಿತ್ತು. 100 ಕುರಿ ಎಣಿಸಲು ಬಾರದವರು ಬಜೆಟ್‌ ಮಂಡಿಸಲಿದ್ದಾರೆ ಎಂಬ ಟೀಕೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಆರ್ಥಿಕ ತಜ್ಞರು, ಚಿಂತಕರ ಸಲಹೆ, ಸಹಕಾರ ಪಡೆದು ರಾಜ್ಯದ ಆರ್ಥಿಕತೆಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಇನ್ನೊಂದು ಪತ್ರಿಕೆ ಅತ್ಯುತ್ತಮ ಬಜೆಟ್ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಆ ಸಮಯದಲ್ಲಿ ವಾಟಾಳ್, ಜಯಪ್ರಕಾಶ್ ರೆಡ್ಡಿ, ಮಾಧುಸ್ವಾಮಿ ಕೂಡ ಇದ್ದರು” ಎಂದು ಹಿಂದಿನ ಘಟನೆಗಳನ್ನು ಮೆಲುಕು ಹಾಕಿದರು.

ಜುಲೈ ತಿಂಗಳಲ್ಲಿ ನೂತನ ಬಜೆಟ್ ಮಂಡಿಸಲಾಗುತ್ತದೆ. ಅದು ಆಗಸ್ಟ್ 1ರಿಂದ ಜಾರಿಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಸದನದಲ್ಲಿನ ಹಾಜರಾತಿ, ನೂತನ ಶಾಸಕರ ಕಾರ್ಯಗಳು, ಜನಸ್ಪಂದನೆ, ಕೆಲಸಗಳ ಅಚ್ಚಕಟ್ಟಾಗಿ ಮಾಡುವ ರೀತಿ ಕುರಿತು ಸಲಹೆ ನೀಡಿದ್ದಾರೆ.

”ನಾನು ಸಿಎಂ ಆಗಿ ಕಾರ್ಯನಿರ್ವಹಿಸಿದ್ದೇನೆ,ವಿರೋಧ ಪಕ್ಷದ ನಾಯಕನಾಗಿಯೂ ಸೇವೆ ಸಲ್ಲಿಸಿದ್ದೇನೆ. ಈ ಅನುಭವದ ಮೂಲಕ ಹೇಳುತ್ತೇನೆ. ನನ್ನ ಮಾತು ಯಾವಾಗಲು ಒರಟು, ಆದರೆ ಸತ್ಯವಾಗಿರುತ್ತದೆ ಎಂದು ಸಿದ್ದು ಹೇಳಿದ್ದಾರೆ. ನೂತನ ಶಾಸಕರಿಗೆ ವಾಟಾಳ್ ನಾಗರಾಜ್ ಶಾಸಕರಾಗಿ ಸದನದಲ್ಲಿ ನಡೆದುಕೊಂಡ ರೀತಿಯನ್ನು ಹೇಳಿದ್ದಾರೆ. ವಾಟಾಳ್ ನಾಗರಾಜ್ ಯಾವಾಗಲೂ ಸದನ ಬಿಟ್ಟು ಹೋಗುತ್ತಿರಲ್ಲಿಲ್ಲ. ನಾನು ಇಷ್ಟು ದಿನ ಶಾಸಕನಾಗಿದ್ದೇನೆ ಅಲ್ವಾ ಕೇವಲ 4-5 ದಿನ ಮಾತ್ರ ಬಂದಿರಲಿಲ್ಲ. ಎಲ್ಲರೂ ಸದನಕ್ಕೆ ತಪ್ಪದೆ ಬರಬೇಕು. ಸರ್ಕಾರದ ಕೆಲಸದಲ್ಲಿ ನಿರಂತರವಾಗಿ ಸ್ಪಂದಿಸಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...