Homeಕರ್ನಾಟಕಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಬಜೆಟ್ ಮಂಡನೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಈ ಕುರಿತು ಆರ್ಥಿಕ ಇಲಾಖೆಯ ಜವಾಬ್ದಾರಿ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರೇ ಕೆಲ ಸುಳಿವುಗಳನ್ನು ಖುದ್ದು ಬಿಟ್ಟುಕೊಟ್ಟಿದ್ದಾರೆ. ಈ ಬಾರಿ ಬಜೆಟ್ ಗಾತ್ರ 3.35 ಲಕ್ಷ ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

”ಕೆಂಗಲ್ ಹನುಮಂತಯ್ಯ ಬಜೆಟ್ ಮಂಡಿಸುವಾಗ ಕರ್ನಾಟಕದ ಬಜೆಟ್ ಗಾತ್ರ 21 ಕೋಟಿ ರೂಪಾಯಿ ಇತ್ತು. ಇತ್ತೀಚೆಗೆ ಮಂಡಿಸಲಾಗ ಬಜೆಟ್ ಗಾತ್ರ 3.9 ಲಕ್ಷ ಕೋಟಿ ರೂಪಾಯಿ. ಆದರೆ ಈ ಬಾರಿ ಮಂಡಿಸಲಿರುವ ಬಜೆಟ್ ಗಾತ್ರ 30 ರಿಂದ 35 ಸಾವಿರ ಕೋಟಿ ರೂಪಾಯಿ ಹೆಚ್ಚಾಗಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ನಾವು 5 ಗ್ಯಾರೆಂಟಿ ಘೋಷಣೆ ಮಾಡಿದ್ದೇವೆ. ಇದಕ್ಕಾಗಿ ಹಣ ಹೊಂದಿಸಬೇಕಿದೆ. ಹೀಗಾಗಿ ಬಜೆಟ್ ಗಾತ್ರ ವಿಸ್ತರಣೆಯಾಗಲಿದೆ. 5 ಗ್ಯಾರಂಟಿ ಜಾರಿಗೆ ಸುಮಾರು 59-60 ಸಾವಿರ ಕೋಟಿ ರೂಪಾಯಿ ಹಣ ಬೇಕಾಗಲಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ಆದಾಯದ ವೃದ್ಧಿಗೆ ಸಾಮಾನ್ಯ ಜನರಿಗೆ ಹೊರೆಯಾಗದಂತೆ ಹೇಗೆ ತೆರಿಗೆ ವಿಧಿಸಬೇಕು ಎನ್ನುವುದನ್ನು ಮಹಾಭಾರತದ ಭೀಷ್ಮ, ಯುಧಿಷ್ಠರನಿಗೆ ಬೋಧಿಸಿದ್ದಾರೆ. ರಾಜ್ಯ ಸರ್ಕಾರವೂ ತೆರಿಗೆ ಭರಿಸುವ ಶಕ್ತಿ ಇರುವವರಿಂದ ತೆರಿಗೆ ಸಂಗ್ರಹಿಸಲು ಆದ್ಯತೆ ನೀಡಲಿದೆ. ಬಸವಣ್ಣನವರು ಹೇಳಿದಂತೆ ಕಾಯಕ ಮತ್ತು ದಾಸೋಹ ಬಜೆಟ್‌ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ” ಎಂದು ವಿಶ್ಲೇಷಿಸಿದರು.

”1994ರಲ್ಲಿ ಮೊದಲ ಬಾರಿ ಹಣಕಾಸು ಸಚಿವನಾಗಿ ಬಜೆಟ್ ಮಂಡಿಸುವಾಗ ಪತ್ರಿಕೆಯೊಂದು ಲೇವಡಿ ಮಾಡಿತ್ತು. 100 ಕುರಿ ಎಣಿಸಲು ಬಾರದವರು ಬಜೆಟ್‌ ಮಂಡಿಸಲಿದ್ದಾರೆ ಎಂಬ ಟೀಕೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಆರ್ಥಿಕ ತಜ್ಞರು, ಚಿಂತಕರ ಸಲಹೆ, ಸಹಕಾರ ಪಡೆದು ರಾಜ್ಯದ ಆರ್ಥಿಕತೆಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಇನ್ನೊಂದು ಪತ್ರಿಕೆ ಅತ್ಯುತ್ತಮ ಬಜೆಟ್ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಆ ಸಮಯದಲ್ಲಿ ವಾಟಾಳ್, ಜಯಪ್ರಕಾಶ್ ರೆಡ್ಡಿ, ಮಾಧುಸ್ವಾಮಿ ಕೂಡ ಇದ್ದರು” ಎಂದು ಹಿಂದಿನ ಘಟನೆಗಳನ್ನು ಮೆಲುಕು ಹಾಕಿದರು.

ಜುಲೈ ತಿಂಗಳಲ್ಲಿ ನೂತನ ಬಜೆಟ್ ಮಂಡಿಸಲಾಗುತ್ತದೆ. ಅದು ಆಗಸ್ಟ್ 1ರಿಂದ ಜಾರಿಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಸದನದಲ್ಲಿನ ಹಾಜರಾತಿ, ನೂತನ ಶಾಸಕರ ಕಾರ್ಯಗಳು, ಜನಸ್ಪಂದನೆ, ಕೆಲಸಗಳ ಅಚ್ಚಕಟ್ಟಾಗಿ ಮಾಡುವ ರೀತಿ ಕುರಿತು ಸಲಹೆ ನೀಡಿದ್ದಾರೆ.

”ನಾನು ಸಿಎಂ ಆಗಿ ಕಾರ್ಯನಿರ್ವಹಿಸಿದ್ದೇನೆ,ವಿರೋಧ ಪಕ್ಷದ ನಾಯಕನಾಗಿಯೂ ಸೇವೆ ಸಲ್ಲಿಸಿದ್ದೇನೆ. ಈ ಅನುಭವದ ಮೂಲಕ ಹೇಳುತ್ತೇನೆ. ನನ್ನ ಮಾತು ಯಾವಾಗಲು ಒರಟು, ಆದರೆ ಸತ್ಯವಾಗಿರುತ್ತದೆ ಎಂದು ಸಿದ್ದು ಹೇಳಿದ್ದಾರೆ. ನೂತನ ಶಾಸಕರಿಗೆ ವಾಟಾಳ್ ನಾಗರಾಜ್ ಶಾಸಕರಾಗಿ ಸದನದಲ್ಲಿ ನಡೆದುಕೊಂಡ ರೀತಿಯನ್ನು ಹೇಳಿದ್ದಾರೆ. ವಾಟಾಳ್ ನಾಗರಾಜ್ ಯಾವಾಗಲೂ ಸದನ ಬಿಟ್ಟು ಹೋಗುತ್ತಿರಲ್ಲಿಲ್ಲ. ನಾನು ಇಷ್ಟು ದಿನ ಶಾಸಕನಾಗಿದ್ದೇನೆ ಅಲ್ವಾ ಕೇವಲ 4-5 ದಿನ ಮಾತ್ರ ಬಂದಿರಲಿಲ್ಲ. ಎಲ್ಲರೂ ಸದನಕ್ಕೆ ತಪ್ಪದೆ ಬರಬೇಕು. ಸರ್ಕಾರದ ಕೆಲಸದಲ್ಲಿ ನಿರಂತರವಾಗಿ ಸ್ಪಂದಿಸಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...