Homeಮುಖಪುಟಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ತೆರಳಿರುವ ಪ್ರಧಾನಿ ಮೋದಿ

ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ತೆರಳಿರುವ ಪ್ರಧಾನಿ ಮೋದಿ

ನಿನ್ನೆಯಷ್ಟೇ ಉತ್ತರ ಜಮ್ಮು ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ಪಾಕಿಸ್ತಾನ ಸೈನ್ಯವು ಕದನ ವಿರಾಮ ಉಲ್ಲಂಘನೆ ಮಾಡಿದ್ದರಿಂದ ಐದು ಸೈನಿಕರು ಸೇರಿದಂತೆ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ.

- Advertisement -
- Advertisement -

ಸತತ ಏಳನೇ ವರ್ಷವೂ ಪ್ರಧಾನಿ ನರೇಂದ್ರ ಮೋದಿ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದು, ಈ ಬಾರಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸೈನಿಕರು ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಜವಾನರೊಂದಿಗೆ ಕಳೆಯಲಿದ್ದಾರೆ. ಲಾಂಗ್‌ವಾಲಾದಲ್ಲಿ ಕಾರ್ಯಕ್ರಮ ಆಯೋಜನೆಯಾಗಿದ್ದು, ಇದು ಮೂಲತಃ ಬಿಎಸ್‌ಎಫ್ ಪೋಸ್ಟ್‌ ಆಗಿದ್ದು, 1971 ರ ಇಂಡೋ-ಪಾಕಿಸ್ತಾನ ಯುದ್ಧದ ಸಮಯ ಪಶ್ಚಿಮ ದಿಕ್ಕಿನಲ್ಲಿ ಭಾರತದ ಒಂದು ಪ್ರಮುಖ ಆಯಕಟ್ಟಿನ ಪ್ರದೇಶವಾಗಿತ್ತು.

ನಿನ್ನೆಯಷ್ಟೇ ಉತ್ತರ ಜಮ್ಮು ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ಪಾಕಿಸ್ತಾನ ಸೈನ್ಯವು ಕದನ ವಿರಾಮ ಉಲ್ಲಂಘನೆ ಮಾಡಿದ್ದರಿಂದ ಐದು ಸೈನಿಕರು ಸೇರಿದಂತೆ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ: ಐವರು ಯೋಧರೂ ಸೇರಿ 8 ಮಂದಿ ಸಾವು

ಪ್ರಧಾನಿ ಮೋದಿಯೊಂದಿಗೆ ಬಿಎಸ್ಎಫ್ ಮಹಾನಿರ್ದೇಶಕ ರಾಕೇಶ್ ಅಸ್ತಾನಾ, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಎಂ.ಎಂ.ನಾರ್ವಾನೆ ಇರಲಿದ್ದಾರೆ. ಈ ಬಗ್ಗೆ ಪ್ರಧಾನಿ ನಿನ್ನೆ ಟ್ವೀಟ್ ಮಾಡಿ ಗಡಿಯಲ್ಲಿ ನಮ್ಮನ್ನು ರಕ್ಷಿಸುವವ ಸೈನಿಕರಿಗಾಗಿ ಹಣತೆಯನ್ನು ಬೆಳಗಿಸುವಂತೆ ಕೇಳಿಕೊಂಡಿದ್ದರು.

ಈ ವರ್ಷ ಪ್ರಧಾನಿಯು ಸೈನಿಕರೊಂದಿಗೆ ನಡೆಸುವ ಎರಡನೇ ಸಂವಹನವಾಗಿದೆ ಇದು. ಕಳೆದ ಜೂನ್‌ 14 ರಂದು ಗಾಲ್ವನ್ ಕಣಿವೆಯಲ್ಲಿ ನಡೆದ ಹಿಂಸಾಚಾರದಿಂದಾಗಿ ಭಾರತೀಯ ಸೈನ್ಯದ 20 ಸೈನಿಕರು ಸಾವನ್ನಪ್ಪಿದ ನಂತರ ಜುಲೈನಲ್ಲಿ ಲಡಾಖ್‌‌ನಲ್ಲಿ ಸೈನಿಕರನ್ನು ಭೇಟಿಯಾಗಿದ್ದರು.

ಇದು ಸೈನಿಕರೊಂದಿಗೆ ಪ್ರಧಾನ ಮಂತ್ರಿ ಆಚರಿಸುತ್ತಿರುವ ಏಳನೇ ದೀಪಾವಳಿಯಾಗಲಿದೆ; 2014 ರಲ್ಲಿ ಅವರ ಮೊದಲ ದೀಪಾವಳಿ ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್‌ನಲ್ಲಿ ಆಚರಿಸಿದ್ದರು. ಕಳೆದ ವರ್ಷ ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಗೆ ದೀಪಾವಳಿ ಆಚರಿಸಲು ತೆರಳಿದ್ದರು.

ಇದನ್ನೂ ಓದಿ: ಲಡಾಖ್‌ನಿಂದ ಚೀನಾ ಸೈನ್ಯವನ್ನು ಯಾವಾಗ ಹೊರಗೆ ಹಾಕುತ್ತೀರಿ: ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. I am wondering, if the purpose of this Media, which claims to be part of “Naanu Gauri” movement, is to “report” Modi’s daily routine, just like any other Media, without any critical reflections, why should Gauri’s name be used?

  2. Thank you Sir. I read the write-up once again, but this time with a hermeneutic of ‘reading between lines’, after being cautioned by you. In my ‘scond’ reading, I could indeed make sense of the critical tone. However, I still believe that the spirit of “Naanu Gauri” movement demands a more overtly vocal tone in our criticism against the fascist hypocricy so that it invokes and evokes every “common” reader.
    Thanks again. Much appreciations for your response.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...