Homeಮುಖಪುಟಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ

- Advertisement -
- Advertisement -

ಸಾವಿರ ಕನಸುಗಳಿದ್ದ ತರುಣಿ ಮನಿಶಾಳ ದೇಹದ ಮೇಲೆ ನಡೆದ ಅತಿ ಘೋರ, ಬರ್ಬರ ಹಿಂಸೆ, ಆ ಅನ್ಯಾಯದ ಸಾವು, ಬಡಹೆಣ್ಣುಗಳ ಬಗೆಗೆ ರಕ್ಷಕ ವ್ಯವಸ್ಥೆಗಿರುವ ಕಣ್ಣಿಗೆ ರಾಚುವಂತಹ ನಿರ್ಲಕ್ಷ್ಯ ಮನುಷ್ಯ ಮಾತ್ರರ ಕಣ್ಣಲ್ಲಿ ನೆತ್ತರು ಉಕ್ಕಿಸುವಂತಹುದು. ಯಾವ ಹೆಣ್ಣುಜೀವಕ್ಕೂ ಇಂತಹ ಬರ್ಬರ ಅಂತ್ಯ ಬಾರದಿರಲಿ.

ಸಮಾಜ ಹೆಣ್ಣನ್ನು ಸದಾ ಶರಣಾಗತ ಸ್ಥಿತಿಯಲ್ಲಿಡಲು ಅತ್ಯಾಚಾರ ಎಂಬ ಅಸ್ತ್ರ ಬಳಸಿಕೊಂಡು ಬಂದಿದೆ. ಅನಾದಿಯಿಂದಲೂ ಯುದ್ಧವಿರಲಿ, ದಂಗೆಯಿರಲಿ ಅಥವಾ ಕ್ರಾಂತಿಯಿರಲಿ; ಯಾವ ಪಕ್ಷವಾದರೂ ಸೋಲಲಿ ಅಥವಾ ಗೆಲ್ಲಲಿ – ಈ ಕ್ರೌರ್ಯ, ಉನ್ಮಾದಗಳ ಅಂತಿಮ ಬಾಧಿತಳು ಮಹಿಳೆಯೇ ಆಗಿದ್ದಾಳೆ. ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ. ಈ ಮಾತು ದಲಿತ ಸೋದರಿಯರಿಗೆ ಹೆಚ್ಚು ಅನ್ವಯಿಸುತ್ತದೆ.

ಇದನ್ನೂ ಓದಿ:ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಅತ್ಯಾಚಾರವೊಂದು ವಿಲಕ್ಷಣ ಅಪರಾಧ. ಅದು ಇದ್ದಕ್ಕಿದ್ದಂತೆ ಸಂಭವಿಸಿಬಿಡುವುದಿಲ್ಲ. ಅಪರಾಧಿ ಮತ್ತು ಆ ಮನಸ್ಸು ಇದಕ್ಕಾಗಿ ಸಾಕಷ್ಟು ಮಾಹಿತಿ ಸಂಗ್ರಹಿಸಿರುತ್ತದೆ. ಪೂರ್ವ ತಯಾರಿ ನಡೆಸಿರುತ್ತದೆ. ಅದಕ್ಕೆಂದೇ ನಮ್ಮ ದಲಿತ ಸೋದರಿಯರು ಅತ್ಯಂತ ಬರ್ಬರವಾಗಿ ದೌರ್ಜನ್ಯಕ್ಕೊಳಗಾಗಿ, ಕೊಲೆಯಾಗಿ ಹೋಗುತ್ತಾರೆ. ದೇಶವೇ ಎದ್ದು ಕುಣಿದರೂ ನಾಲಿಗೆ ಕತ್ತರಿಸಲ್ಪಟ್ಟ ಮನಿಶಾಗಳು ‘ಸೂಕ್ತ ಸಾಕ್ಷ್ಯಾಧಾರ’ ಒದಗಿಸಲಾರದೆ ಕೇಸು ಬಿದ್ದು ಹೋಗುತ್ತವೆ.

ಈ ಹೊತ್ತು ಅಧ್ಯಯನ ಶಿಬಿರವೊಂದರಲ್ಲಿ ದಲಿತ ಸೋದರಿಯರು ಕೇಳಿದ, ವಿಸ್ತೃತ ಚರ್ಚೆಗೊಳಗಾದ ಪ್ರಶ್ನೆಗಳು ನೆನಪಾಗುತ್ತಿವೆ. ದಿನನಿತ್ಯ ನಡೆಯುವ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳ ಬಗೆಗೆ ಮಾಧ್ಯಮದವರಾಗಲೀ, ಆಡಳಿತ ಮತ್ತು ನ್ಯಾಯವ್ಯವಸ್ಥೆಯಾಗಲೀ, ಮಹಿಳಾ ಸಂಘಟನೆಗಳಾಗಲೀ ಒಮ್ಮೆಲೇ ಏಕೆ ಪ್ರತಿಕ್ರಿಯಿಸುವುದಿಲ್ಲ? ಖೈರ್ಲಾಂಜಿ, ನಾಗಲಾಪಲ್ಲಿಗಳಂತಹ ಎಷ್ಟೋ ಬರ್ಬರ ಅತ್ಯಾಚಾರ-ಸಾವುಗಳು ಸಂಭವಿಸಿದರೂ ಅವು ದೆಹಲಿ ಪ್ರಕರಣದಷ್ಟು ಪ್ರಾಮುಖ್ಯತೆ ಏಕೆ ಪಡೆಯಲಿಲ್ಲ? ತಳಹಂತದ ನ್ಯಾಯಾಲಯಗಳಲ್ಲಿ ಸಿಕ್ಕ ನ್ಯಾಯವು ಮತ್ತೆ ಮೇಲ್ಮನವಿಯಾಗಿ ಮೇಲಿನ ನ್ಯಾಯಾಲಯಗಳಿಗೆ ಹೋದದ್ದೇ ತಿರುಗುಮುರುಗು ಆಗುವುದೇಕೆ?

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಹೌದು. ಎಲೈಟ್ ಜಾತಿ/ವರ್ಗ ಅನುಭವಿಸುವ ಕಷ್ಟಗಳಿಗೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ದೊರೆಯುತ್ತದೆ. ವ್ಯವಸ್ಥೆಯ ಗಮನ ಸೆಳೆದು ಪರಿಹಾರವೂ ಬೇಗ ದೊರೆಯುತ್ತದೆ. ನ್ಯಾಯದಾನ ವ್ಯವಸ್ಥೆ ಕೂಡ ವರ್ಗ/ಜಾತಿ ತಾರತಮ್ಯ ತೋರಿಸುತ್ತದೆ. ಬ್ರಿಟಿಷರು ಅತ್ಯಾಚಾರ ಕಾಯ್ದೆ ತಂದಾಗ ಕೆಲ ಮ್ಯಾಜಿಸ್ಟ್ರೇಟುಗಳು ತಮ್ಮ ತೀರ್ಪಿನಲ್ಲಿ ಮೇಲ್ಜಾತಿ ಹೆಣ್ಣು ಕೆಳಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಹೆಚ್ಚು ‘ಮಾನ’ ನಷ್ಟವಾಗುವುದಾಗಿಯೂ; ಕೆಳಜಾತಿ ಹೆಣ್ಣು ಮೊದಲೇ ‘ಸಡಿಲ’ ನಡತೆಯವಳಾಗಿರುವ ಕಾರಣ ಮೇಲ್ಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಮಾನ ನಷ್ಟ ಕಡಿಮೆ ಎಂದೂ ತೀರ್ಪು ಬರೆಯುತ್ತಿದ್ದರು! 1995ರಲ್ಲಿ ಭಂವರಿದೇವಿ ಅತ್ಯಾಚಾರ ಪ್ರಕರಣದಲ್ಲಿಯೂ ರಾಜಸ್ಥಾನ ಹೈಕೋರ್ಟು ಮೇಲ್ಜಾತಿ ಪುರುಷರು ದಲಿತ ಭಂವರಿಯ ಅತ್ಯಾಚಾರ ಮಾಡಿರಲಿಕ್ಕಿಲ್ಲ ಎಂದು ಇಂಥದೇ ತೀರ್ಪು ಬರೆಯಿತು!

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಹೀಗೆ ಅಸಮಾನ ಭಾರತದ ಪೊಲೀಸ್ ಮತ್ತು ನ್ಯಾಯವ್ಯವಸ್ಥೆಗಳು ಜಾತಿಪೂರ್ವಗ್ರಹದಿಂದ ಮುಕ್ತವಲ್ಲದೆ ಇರುವಾಗ ಪ್ರಕರಣಗಳ ದಾಖಲು, ವರದಿ, ನ್ಯಾಯದಾನ, ಶಿಕ್ಷೆ ಎಲ್ಲದರಲ್ಲೂ ಜಾತಿ/ವರ್ಗಗಳು ಪ್ರಮುಖ ಪಾತ್ರ ವಹಿಸುತ್ತವೆ. ಲಿಂಗಸಂಬಂಧ ಮತ್ತು ಲಿಂಗ ತಾರತಮ್ಯದೊಂದಿಗೆ ಭಾರತೀಯ ಜಾತಿವ್ಯವಸ್ಥೆ ಅವಿನಾ ಸಂಬಂಧ ಹೊಂದಿದ್ದು ಶೋಷಣೆಗೆ ಜಾತಿಯೂ ಒಂದು ಪ್ರಬಲ ಅಸ್ತ್ರವಾಗಿದೆ. ಎಂದೇ ಮಹಿಳಾ ಚಳುವಳಿ ತಮ್ಮನ್ನು ಒಳಗೊಳ್ಳುವ ಕುರಿತು ತಳಸಮುದಾಯಗಳಿಗೆ ಆಳದ ಅವಿಶ್ವಾಸ ಬೆಳೆದುಬಂದಿದೆ.

ಹೀಗಿರುತ್ತ ನಮ್ಮೊಳಗಿನ್ನೂ ಜೀವಂತವಿರಬಹುದಾದ ಜಾತಿವಾದ, ಜಾತಿ ಪೂರ್ವಗ್ರಹಗಳೆಂಬ ಕಿಲುಬನ್ನು ಸೋದರಿತ್ವದ ಪ್ರೀತಿಯಿಂದ ಉಜ್ಜಿ, ತಿಕ್ಕಿ ಸ್ವಚ್ಛಗೊಳಿಸಲೇಬೇಕಿದೆ.


ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ: ಬೆಂಗಳೂರು ಹಾಗೂ ತುಮಕೂರಿನಲ್ಲಿ ನಾಳೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...