Homeಮುಖಪುಟಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ

- Advertisement -
- Advertisement -

ಸಾವಿರ ಕನಸುಗಳಿದ್ದ ತರುಣಿ ಮನಿಶಾಳ ದೇಹದ ಮೇಲೆ ನಡೆದ ಅತಿ ಘೋರ, ಬರ್ಬರ ಹಿಂಸೆ, ಆ ಅನ್ಯಾಯದ ಸಾವು, ಬಡಹೆಣ್ಣುಗಳ ಬಗೆಗೆ ರಕ್ಷಕ ವ್ಯವಸ್ಥೆಗಿರುವ ಕಣ್ಣಿಗೆ ರಾಚುವಂತಹ ನಿರ್ಲಕ್ಷ್ಯ ಮನುಷ್ಯ ಮಾತ್ರರ ಕಣ್ಣಲ್ಲಿ ನೆತ್ತರು ಉಕ್ಕಿಸುವಂತಹುದು. ಯಾವ ಹೆಣ್ಣುಜೀವಕ್ಕೂ ಇಂತಹ ಬರ್ಬರ ಅಂತ್ಯ ಬಾರದಿರಲಿ.

ಸಮಾಜ ಹೆಣ್ಣನ್ನು ಸದಾ ಶರಣಾಗತ ಸ್ಥಿತಿಯಲ್ಲಿಡಲು ಅತ್ಯಾಚಾರ ಎಂಬ ಅಸ್ತ್ರ ಬಳಸಿಕೊಂಡು ಬಂದಿದೆ. ಅನಾದಿಯಿಂದಲೂ ಯುದ್ಧವಿರಲಿ, ದಂಗೆಯಿರಲಿ ಅಥವಾ ಕ್ರಾಂತಿಯಿರಲಿ; ಯಾವ ಪಕ್ಷವಾದರೂ ಸೋಲಲಿ ಅಥವಾ ಗೆಲ್ಲಲಿ – ಈ ಕ್ರೌರ್ಯ, ಉನ್ಮಾದಗಳ ಅಂತಿಮ ಬಾಧಿತಳು ಮಹಿಳೆಯೇ ಆಗಿದ್ದಾಳೆ. ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ. ಈ ಮಾತು ದಲಿತ ಸೋದರಿಯರಿಗೆ ಹೆಚ್ಚು ಅನ್ವಯಿಸುತ್ತದೆ.

ಇದನ್ನೂ ಓದಿ:ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಅತ್ಯಾಚಾರವೊಂದು ವಿಲಕ್ಷಣ ಅಪರಾಧ. ಅದು ಇದ್ದಕ್ಕಿದ್ದಂತೆ ಸಂಭವಿಸಿಬಿಡುವುದಿಲ್ಲ. ಅಪರಾಧಿ ಮತ್ತು ಆ ಮನಸ್ಸು ಇದಕ್ಕಾಗಿ ಸಾಕಷ್ಟು ಮಾಹಿತಿ ಸಂಗ್ರಹಿಸಿರುತ್ತದೆ. ಪೂರ್ವ ತಯಾರಿ ನಡೆಸಿರುತ್ತದೆ. ಅದಕ್ಕೆಂದೇ ನಮ್ಮ ದಲಿತ ಸೋದರಿಯರು ಅತ್ಯಂತ ಬರ್ಬರವಾಗಿ ದೌರ್ಜನ್ಯಕ್ಕೊಳಗಾಗಿ, ಕೊಲೆಯಾಗಿ ಹೋಗುತ್ತಾರೆ. ದೇಶವೇ ಎದ್ದು ಕುಣಿದರೂ ನಾಲಿಗೆ ಕತ್ತರಿಸಲ್ಪಟ್ಟ ಮನಿಶಾಗಳು ‘ಸೂಕ್ತ ಸಾಕ್ಷ್ಯಾಧಾರ’ ಒದಗಿಸಲಾರದೆ ಕೇಸು ಬಿದ್ದು ಹೋಗುತ್ತವೆ.

ಈ ಹೊತ್ತು ಅಧ್ಯಯನ ಶಿಬಿರವೊಂದರಲ್ಲಿ ದಲಿತ ಸೋದರಿಯರು ಕೇಳಿದ, ವಿಸ್ತೃತ ಚರ್ಚೆಗೊಳಗಾದ ಪ್ರಶ್ನೆಗಳು ನೆನಪಾಗುತ್ತಿವೆ. ದಿನನಿತ್ಯ ನಡೆಯುವ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳ ಬಗೆಗೆ ಮಾಧ್ಯಮದವರಾಗಲೀ, ಆಡಳಿತ ಮತ್ತು ನ್ಯಾಯವ್ಯವಸ್ಥೆಯಾಗಲೀ, ಮಹಿಳಾ ಸಂಘಟನೆಗಳಾಗಲೀ ಒಮ್ಮೆಲೇ ಏಕೆ ಪ್ರತಿಕ್ರಿಯಿಸುವುದಿಲ್ಲ? ಖೈರ್ಲಾಂಜಿ, ನಾಗಲಾಪಲ್ಲಿಗಳಂತಹ ಎಷ್ಟೋ ಬರ್ಬರ ಅತ್ಯಾಚಾರ-ಸಾವುಗಳು ಸಂಭವಿಸಿದರೂ ಅವು ದೆಹಲಿ ಪ್ರಕರಣದಷ್ಟು ಪ್ರಾಮುಖ್ಯತೆ ಏಕೆ ಪಡೆಯಲಿಲ್ಲ? ತಳಹಂತದ ನ್ಯಾಯಾಲಯಗಳಲ್ಲಿ ಸಿಕ್ಕ ನ್ಯಾಯವು ಮತ್ತೆ ಮೇಲ್ಮನವಿಯಾಗಿ ಮೇಲಿನ ನ್ಯಾಯಾಲಯಗಳಿಗೆ ಹೋದದ್ದೇ ತಿರುಗುಮುರುಗು ಆಗುವುದೇಕೆ?

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಹೌದು. ಎಲೈಟ್ ಜಾತಿ/ವರ್ಗ ಅನುಭವಿಸುವ ಕಷ್ಟಗಳಿಗೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ದೊರೆಯುತ್ತದೆ. ವ್ಯವಸ್ಥೆಯ ಗಮನ ಸೆಳೆದು ಪರಿಹಾರವೂ ಬೇಗ ದೊರೆಯುತ್ತದೆ. ನ್ಯಾಯದಾನ ವ್ಯವಸ್ಥೆ ಕೂಡ ವರ್ಗ/ಜಾತಿ ತಾರತಮ್ಯ ತೋರಿಸುತ್ತದೆ. ಬ್ರಿಟಿಷರು ಅತ್ಯಾಚಾರ ಕಾಯ್ದೆ ತಂದಾಗ ಕೆಲ ಮ್ಯಾಜಿಸ್ಟ್ರೇಟುಗಳು ತಮ್ಮ ತೀರ್ಪಿನಲ್ಲಿ ಮೇಲ್ಜಾತಿ ಹೆಣ್ಣು ಕೆಳಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಹೆಚ್ಚು ‘ಮಾನ’ ನಷ್ಟವಾಗುವುದಾಗಿಯೂ; ಕೆಳಜಾತಿ ಹೆಣ್ಣು ಮೊದಲೇ ‘ಸಡಿಲ’ ನಡತೆಯವಳಾಗಿರುವ ಕಾರಣ ಮೇಲ್ಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಮಾನ ನಷ್ಟ ಕಡಿಮೆ ಎಂದೂ ತೀರ್ಪು ಬರೆಯುತ್ತಿದ್ದರು! 1995ರಲ್ಲಿ ಭಂವರಿದೇವಿ ಅತ್ಯಾಚಾರ ಪ್ರಕರಣದಲ್ಲಿಯೂ ರಾಜಸ್ಥಾನ ಹೈಕೋರ್ಟು ಮೇಲ್ಜಾತಿ ಪುರುಷರು ದಲಿತ ಭಂವರಿಯ ಅತ್ಯಾಚಾರ ಮಾಡಿರಲಿಕ್ಕಿಲ್ಲ ಎಂದು ಇಂಥದೇ ತೀರ್ಪು ಬರೆಯಿತು!

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಹೀಗೆ ಅಸಮಾನ ಭಾರತದ ಪೊಲೀಸ್ ಮತ್ತು ನ್ಯಾಯವ್ಯವಸ್ಥೆಗಳು ಜಾತಿಪೂರ್ವಗ್ರಹದಿಂದ ಮುಕ್ತವಲ್ಲದೆ ಇರುವಾಗ ಪ್ರಕರಣಗಳ ದಾಖಲು, ವರದಿ, ನ್ಯಾಯದಾನ, ಶಿಕ್ಷೆ ಎಲ್ಲದರಲ್ಲೂ ಜಾತಿ/ವರ್ಗಗಳು ಪ್ರಮುಖ ಪಾತ್ರ ವಹಿಸುತ್ತವೆ. ಲಿಂಗಸಂಬಂಧ ಮತ್ತು ಲಿಂಗ ತಾರತಮ್ಯದೊಂದಿಗೆ ಭಾರತೀಯ ಜಾತಿವ್ಯವಸ್ಥೆ ಅವಿನಾ ಸಂಬಂಧ ಹೊಂದಿದ್ದು ಶೋಷಣೆಗೆ ಜಾತಿಯೂ ಒಂದು ಪ್ರಬಲ ಅಸ್ತ್ರವಾಗಿದೆ. ಎಂದೇ ಮಹಿಳಾ ಚಳುವಳಿ ತಮ್ಮನ್ನು ಒಳಗೊಳ್ಳುವ ಕುರಿತು ತಳಸಮುದಾಯಗಳಿಗೆ ಆಳದ ಅವಿಶ್ವಾಸ ಬೆಳೆದುಬಂದಿದೆ.

ಹೀಗಿರುತ್ತ ನಮ್ಮೊಳಗಿನ್ನೂ ಜೀವಂತವಿರಬಹುದಾದ ಜಾತಿವಾದ, ಜಾತಿ ಪೂರ್ವಗ್ರಹಗಳೆಂಬ ಕಿಲುಬನ್ನು ಸೋದರಿತ್ವದ ಪ್ರೀತಿಯಿಂದ ಉಜ್ಜಿ, ತಿಕ್ಕಿ ಸ್ವಚ್ಛಗೊಳಿಸಲೇಬೇಕಿದೆ.


ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ: ಬೆಂಗಳೂರು ಹಾಗೂ ತುಮಕೂರಿನಲ್ಲಿ ನಾಳೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...