Homeಮುಖಪುಟಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ

- Advertisement -
- Advertisement -

ಸಾವಿರ ಕನಸುಗಳಿದ್ದ ತರುಣಿ ಮನಿಶಾಳ ದೇಹದ ಮೇಲೆ ನಡೆದ ಅತಿ ಘೋರ, ಬರ್ಬರ ಹಿಂಸೆ, ಆ ಅನ್ಯಾಯದ ಸಾವು, ಬಡಹೆಣ್ಣುಗಳ ಬಗೆಗೆ ರಕ್ಷಕ ವ್ಯವಸ್ಥೆಗಿರುವ ಕಣ್ಣಿಗೆ ರಾಚುವಂತಹ ನಿರ್ಲಕ್ಷ್ಯ ಮನುಷ್ಯ ಮಾತ್ರರ ಕಣ್ಣಲ್ಲಿ ನೆತ್ತರು ಉಕ್ಕಿಸುವಂತಹುದು. ಯಾವ ಹೆಣ್ಣುಜೀವಕ್ಕೂ ಇಂತಹ ಬರ್ಬರ ಅಂತ್ಯ ಬಾರದಿರಲಿ.

ಸಮಾಜ ಹೆಣ್ಣನ್ನು ಸದಾ ಶರಣಾಗತ ಸ್ಥಿತಿಯಲ್ಲಿಡಲು ಅತ್ಯಾಚಾರ ಎಂಬ ಅಸ್ತ್ರ ಬಳಸಿಕೊಂಡು ಬಂದಿದೆ. ಅನಾದಿಯಿಂದಲೂ ಯುದ್ಧವಿರಲಿ, ದಂಗೆಯಿರಲಿ ಅಥವಾ ಕ್ರಾಂತಿಯಿರಲಿ; ಯಾವ ಪಕ್ಷವಾದರೂ ಸೋಲಲಿ ಅಥವಾ ಗೆಲ್ಲಲಿ – ಈ ಕ್ರೌರ್ಯ, ಉನ್ಮಾದಗಳ ಅಂತಿಮ ಬಾಧಿತಳು ಮಹಿಳೆಯೇ ಆಗಿದ್ದಾಳೆ. ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ. ಈ ಮಾತು ದಲಿತ ಸೋದರಿಯರಿಗೆ ಹೆಚ್ಚು ಅನ್ವಯಿಸುತ್ತದೆ.

ಇದನ್ನೂ ಓದಿ:ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಅತ್ಯಾಚಾರವೊಂದು ವಿಲಕ್ಷಣ ಅಪರಾಧ. ಅದು ಇದ್ದಕ್ಕಿದ್ದಂತೆ ಸಂಭವಿಸಿಬಿಡುವುದಿಲ್ಲ. ಅಪರಾಧಿ ಮತ್ತು ಆ ಮನಸ್ಸು ಇದಕ್ಕಾಗಿ ಸಾಕಷ್ಟು ಮಾಹಿತಿ ಸಂಗ್ರಹಿಸಿರುತ್ತದೆ. ಪೂರ್ವ ತಯಾರಿ ನಡೆಸಿರುತ್ತದೆ. ಅದಕ್ಕೆಂದೇ ನಮ್ಮ ದಲಿತ ಸೋದರಿಯರು ಅತ್ಯಂತ ಬರ್ಬರವಾಗಿ ದೌರ್ಜನ್ಯಕ್ಕೊಳಗಾಗಿ, ಕೊಲೆಯಾಗಿ ಹೋಗುತ್ತಾರೆ. ದೇಶವೇ ಎದ್ದು ಕುಣಿದರೂ ನಾಲಿಗೆ ಕತ್ತರಿಸಲ್ಪಟ್ಟ ಮನಿಶಾಗಳು ‘ಸೂಕ್ತ ಸಾಕ್ಷ್ಯಾಧಾರ’ ಒದಗಿಸಲಾರದೆ ಕೇಸು ಬಿದ್ದು ಹೋಗುತ್ತವೆ.

ಈ ಹೊತ್ತು ಅಧ್ಯಯನ ಶಿಬಿರವೊಂದರಲ್ಲಿ ದಲಿತ ಸೋದರಿಯರು ಕೇಳಿದ, ವಿಸ್ತೃತ ಚರ್ಚೆಗೊಳಗಾದ ಪ್ರಶ್ನೆಗಳು ನೆನಪಾಗುತ್ತಿವೆ. ದಿನನಿತ್ಯ ನಡೆಯುವ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳ ಬಗೆಗೆ ಮಾಧ್ಯಮದವರಾಗಲೀ, ಆಡಳಿತ ಮತ್ತು ನ್ಯಾಯವ್ಯವಸ್ಥೆಯಾಗಲೀ, ಮಹಿಳಾ ಸಂಘಟನೆಗಳಾಗಲೀ ಒಮ್ಮೆಲೇ ಏಕೆ ಪ್ರತಿಕ್ರಿಯಿಸುವುದಿಲ್ಲ? ಖೈರ್ಲಾಂಜಿ, ನಾಗಲಾಪಲ್ಲಿಗಳಂತಹ ಎಷ್ಟೋ ಬರ್ಬರ ಅತ್ಯಾಚಾರ-ಸಾವುಗಳು ಸಂಭವಿಸಿದರೂ ಅವು ದೆಹಲಿ ಪ್ರಕರಣದಷ್ಟು ಪ್ರಾಮುಖ್ಯತೆ ಏಕೆ ಪಡೆಯಲಿಲ್ಲ? ತಳಹಂತದ ನ್ಯಾಯಾಲಯಗಳಲ್ಲಿ ಸಿಕ್ಕ ನ್ಯಾಯವು ಮತ್ತೆ ಮೇಲ್ಮನವಿಯಾಗಿ ಮೇಲಿನ ನ್ಯಾಯಾಲಯಗಳಿಗೆ ಹೋದದ್ದೇ ತಿರುಗುಮುರುಗು ಆಗುವುದೇಕೆ?

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಹೌದು. ಎಲೈಟ್ ಜಾತಿ/ವರ್ಗ ಅನುಭವಿಸುವ ಕಷ್ಟಗಳಿಗೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ದೊರೆಯುತ್ತದೆ. ವ್ಯವಸ್ಥೆಯ ಗಮನ ಸೆಳೆದು ಪರಿಹಾರವೂ ಬೇಗ ದೊರೆಯುತ್ತದೆ. ನ್ಯಾಯದಾನ ವ್ಯವಸ್ಥೆ ಕೂಡ ವರ್ಗ/ಜಾತಿ ತಾರತಮ್ಯ ತೋರಿಸುತ್ತದೆ. ಬ್ರಿಟಿಷರು ಅತ್ಯಾಚಾರ ಕಾಯ್ದೆ ತಂದಾಗ ಕೆಲ ಮ್ಯಾಜಿಸ್ಟ್ರೇಟುಗಳು ತಮ್ಮ ತೀರ್ಪಿನಲ್ಲಿ ಮೇಲ್ಜಾತಿ ಹೆಣ್ಣು ಕೆಳಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಹೆಚ್ಚು ‘ಮಾನ’ ನಷ್ಟವಾಗುವುದಾಗಿಯೂ; ಕೆಳಜಾತಿ ಹೆಣ್ಣು ಮೊದಲೇ ‘ಸಡಿಲ’ ನಡತೆಯವಳಾಗಿರುವ ಕಾರಣ ಮೇಲ್ಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಮಾನ ನಷ್ಟ ಕಡಿಮೆ ಎಂದೂ ತೀರ್ಪು ಬರೆಯುತ್ತಿದ್ದರು! 1995ರಲ್ಲಿ ಭಂವರಿದೇವಿ ಅತ್ಯಾಚಾರ ಪ್ರಕರಣದಲ್ಲಿಯೂ ರಾಜಸ್ಥಾನ ಹೈಕೋರ್ಟು ಮೇಲ್ಜಾತಿ ಪುರುಷರು ದಲಿತ ಭಂವರಿಯ ಅತ್ಯಾಚಾರ ಮಾಡಿರಲಿಕ್ಕಿಲ್ಲ ಎಂದು ಇಂಥದೇ ತೀರ್ಪು ಬರೆಯಿತು!

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಹೀಗೆ ಅಸಮಾನ ಭಾರತದ ಪೊಲೀಸ್ ಮತ್ತು ನ್ಯಾಯವ್ಯವಸ್ಥೆಗಳು ಜಾತಿಪೂರ್ವಗ್ರಹದಿಂದ ಮುಕ್ತವಲ್ಲದೆ ಇರುವಾಗ ಪ್ರಕರಣಗಳ ದಾಖಲು, ವರದಿ, ನ್ಯಾಯದಾನ, ಶಿಕ್ಷೆ ಎಲ್ಲದರಲ್ಲೂ ಜಾತಿ/ವರ್ಗಗಳು ಪ್ರಮುಖ ಪಾತ್ರ ವಹಿಸುತ್ತವೆ. ಲಿಂಗಸಂಬಂಧ ಮತ್ತು ಲಿಂಗ ತಾರತಮ್ಯದೊಂದಿಗೆ ಭಾರತೀಯ ಜಾತಿವ್ಯವಸ್ಥೆ ಅವಿನಾ ಸಂಬಂಧ ಹೊಂದಿದ್ದು ಶೋಷಣೆಗೆ ಜಾತಿಯೂ ಒಂದು ಪ್ರಬಲ ಅಸ್ತ್ರವಾಗಿದೆ. ಎಂದೇ ಮಹಿಳಾ ಚಳುವಳಿ ತಮ್ಮನ್ನು ಒಳಗೊಳ್ಳುವ ಕುರಿತು ತಳಸಮುದಾಯಗಳಿಗೆ ಆಳದ ಅವಿಶ್ವಾಸ ಬೆಳೆದುಬಂದಿದೆ.

ಹೀಗಿರುತ್ತ ನಮ್ಮೊಳಗಿನ್ನೂ ಜೀವಂತವಿರಬಹುದಾದ ಜಾತಿವಾದ, ಜಾತಿ ಪೂರ್ವಗ್ರಹಗಳೆಂಬ ಕಿಲುಬನ್ನು ಸೋದರಿತ್ವದ ಪ್ರೀತಿಯಿಂದ ಉಜ್ಜಿ, ತಿಕ್ಕಿ ಸ್ವಚ್ಛಗೊಳಿಸಲೇಬೇಕಿದೆ.


ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ: ಬೆಂಗಳೂರು ಹಾಗೂ ತುಮಕೂರಿನಲ್ಲಿ ನಾಳೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...