Homeಫ್ಯಾಕ್ಟ್‌ಚೆಕ್ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

- Advertisement -
- Advertisement -

ಮಾಸ್ಕ್‌‌ ಧರಿಸಿರುವ ವ್ಯಕ್ತಿಯೊಬ್ಬ ರೋಗಿಯೊಬ್ಬರನ್ನು ಉಸಿರುಗಟ್ಟಿಸುವ ರೀತಿಯಲ್ಲಿ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊ ಜೊತೆಗೆ, ಕೊರೊನಾ ರೋಗಿಗಳನ್ನು ದುಡ್ಡಿಗಾಗಿ ಆಸ್ಪತ್ರೆಯ ಜನರು ಕೊಲ್ಲುತ್ತಿದ್ದಾರೆ ಎಂದು ಸಂದೇಶ ಕೂಡಾ ಹರಿದಾಡುತ್ತಿದೆ.

ಕೆಲವರು, ಕೊರೊನಾ ಸೋಗಿನಲ್ಲಿ ಭಾರಿ ಪಿತೂರಿ ನಡೆಯುತ್ತಿದೆ ಎಂದು ಪ್ರತಿಪಾದಿಸಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೊವನ್ನು ಹಲವಾರು ಜನರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್‌

ಈ ಬಗ್ಗೆ ಫ್ಯಾಕ್ಟ್‌ಚೆಕ್‌‌ ವೆಬ್‌ಸೈಟ್‌‌ ಆಲ್ಟ್‌ನ್ಯೂಸ್‌‌‌‌ ವಿಡಿಯೊವನ್ನು ಇಂಟರ್‌ನೆಟ್‌‌ನಲ್ಲಿ ಹುಡುಕಾಡಿದ್ದು, ಅದು ಮೇ 19, 2020 ರಂದು ಮಾಡಿದ್ದ ಟ್ವೀಟ್‌ ಒಂದರಲ್ಲಿ ಈ ವಿಡಿಯೊ ಬಗ್ಗೆಗಿನ ವರದಿ ಇರುವುದನ್ನು ಕಂಡುಕೊಂಡಿದೆ. ಈ ವರದಿಯನ್ನು ಬಾಂಗ್ಲಾದೇಶ ಮೂಲದ ಸೊಕಲರ್‌ಸೊಂಗ್‌ಬಾದ್.ಕಾಮ್ ಬರೆದಿತ್ತು. “ಇಬ್ಬರು ವ್ಯಕ್ತಿಗಳು ಜಗಳವಾಡಿದ್ದು, ಹಿರಿಯ ವ್ಯಕ್ತಿಯಾದ ಮನ್ಸೂರ್‌ ಮೊಲ್ಲಾ ಅವರನ್ನು ಏಪ್ರಿಲ್ 21, 2020 ರಂದು ಆಸ್ಪತ್ರೆಯ ಹಾಸಿಗೆಯಲ್ಲಿ ಕತ್ತು ಹಿಸುಕಲಾಗಿದೆ. ಅವರು ಮರುದಿನ ನಿಧನರಾದರು. ಈ ಘಟನೆ ಬಾಂಗ್ಲಾದೇಶದ ಬೋಲ್‌ಮರಿಯ ಫರೀದ್‌ಪುರದ ದಾದ್ಪುರದಲ್ಲಿ ನಡೆದಿದೆ” ಎಂದು ವರದಿ ಹೇಳಿದೆ.

ಆದಾಗ್ಯೂ, ಘಟನೆಯ ಆರಂಭಿಕ ವರದಿಗಳಲ್ಲಿ ವೀಡಿಯೊ ಬಗ್ಗೆ ಯಾವುದೇ ಉಲ್ಲೇಖವಿಲ್ಲ, ಜೊತೆಗೆ ಘಟನೆಯ ವಿವರಗಳಿಗೆ ವೀಡಿಯೊ ಹೊಂದಿಕೆಯಾಗುವುದಿಲ್ಲ.

ಏಪ್ರಿಲ್ 22 ರಂದು ಡಾಕಾಟೈಮ್ಸ್ 24.ಕಾಂನಲ್ಲಿ ಪ್ರಕಟವಾದ ವರದಿಯ ಪ್ರಕಾರ, “ಬೋಲ್ಮರಿ ಪೊಲೀಸ್ ಅಧಿಕಾರಿ (ಒಸಿ) ಅಮಿನೂರ್ ರಹಮಾನ್ ಹೇಳುವಂತೆ, ‘ದೋಲ್ಪುರ್ ಗ್ರಾಮದ ಫಜಲ್ ಖಾರ್ ಅವರ ಪುತ್ರ ಅಬುಬಕ್ಕರ್ ಎಂಬವರು ಮಂಗಳವಾರ [ಏಪ್ರಿಲ್ 21] ಸಂಜೆ ಕ್ರಿಕೆಟ್ ಆಡುತ್ತಿದ್ದಾಗ, ಸೊಲೈಮಾನ್ ಮೊಲ್ಲಾ ಅವರ ಪುತ್ರ ಕಿಬ್ರಿಯಾ ಮೊಲ್ಲಾ ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಕಾರಣದಿಂದಾಗಿ, ಫಜಲ್ ಖಾರ್‌ನ ಜನರು ರಾತ್ರಿ ವೇಳೆಯಲ್ಲಿ ಛೇಲಮಾನ್ ಮೊಹಲ್ಲಾ ಜನರ ಮೇಲೆ ದಾಳಿ ನಡೆಸಿದ್ದಾರೆ. ಆ ಸಮಯದಲ್ಲಿ ಈ ಗಲಾಟೆಯನ್ನು ನಿಲ್ಲಿಸಲು ಪ್ರಯತ್ನಿಸಿದ ಮನ್ಸೂರ್ ಮೊಲ್ಲಾ ಅವರಿಗೆ ತಲೆಗೆ ಹೊಡೆಯಲಾಗಿದೆ. ಅವರನ್ನು ಫರೀದ್ಪುರ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಂಜಾನೆ 1 ಗಂಟೆ ಸುಮಾರಿಗೆ ನಿಧನರಾದರು”

ಇದನ್ನೂ ಓದಿ: ಆಮ್ಲಜನಕ ಮಟ್ಟ ಹೆಚ್ಚಳಕ್ಕೆ ಕರ್ಪೂರ, ಲವಂಗ, ಅಜಿವಾನ ಮತ್ತು ನೀಲಗಿರಿ ಎಣ್ಣೆ ಬಳಸಬೇಡಿ, ಇದು ಮಾರಣಾಂತಿಕವೂ ಆಗಬಹುದು

ಏಪ್ರಿಲ್ 21 ರಂದು ಕೆಲವು ಯುವಕರ ನಡುವಿನ ಕ್ರಿಕೆಟ್ ಪಂದ್ಯವೊಂದರಲ್ಲಿ ನಡೆದ ಜಗಳದಲ್ಲಿ ಮನ್ಸೂರ್ ಮೊಲ್ಲಾ ಗಾಯಗೊಂಡಿದ್ದಾರೆ. ಏಪ್ರಿಲ್ 22 ರ ಮುಂಜಾನೆ ಅವರು ನಿಧನ ಹೊಂದಿದರು ಎಂದು ದಿ ಡೈಲಿ ಪ್ರೋಥಮ್ ಅಲೋದಲ್ಲಿ ಪ್ರಕಟವಾದ ಮತ್ತೊಂದು ವರದಿ ಹೇಳುತ್ತದೆ.

ಈ ಬಗ್ಗೆ ‘ভিডিও মনসুর মোল্লা’ (ವಿಡಿಯೋ ಮನ್ಸೂರ್ ಮೊಲ್ಲಾ) ಎಂಬ ಕೀವರ್ಡ್‌ಗಳೊಂದಿಗೆ ಫೇಸ್‌ಬುಕ್‌ನಲ್ಲಿ ಹುಡುಕಾಡಿದಾಗ ಬಾಂಗ್ಲಾದೇಶದ ಡಾಕಾ ನಿವಾಸಿ ಹಸನ್ ಮೊಲ್ಲಾ ಎಂಬವರ ಫೇಸ್‌ಬುಕ್ ಸ್ಟೇಟಸ್ ಒಂದು ಕಂಡು ಬಂದಿದೆ. ಅದರಲ್ಲಿ ಮನ್ಸೂರ್ ಮೊಲ್ಲಾಗೆ ಸಂಬಂಧಿಸಿದ ಘಟನೆಯ ವೀಡಿಯೊವನ್ನು ತಪ್ಪಾಗಿ ನಿರೂಪಿಸಲಾಗುತ್ತಿದೆ ಎಂದು ಅವರು ಮೇ 18 ರಂದು ಬರೆದಿದ್ದಾರೆ.

ವೈರಲ್ ವಿಡಿಯೊದಲ್ಲಿ ಇರುವ ವ್ಯಕ್ತಿಗೂ, ಮನ್ಸೂರ್‌‌ ಮೊಲ್ಲಾ ಅವರಿಗೂ ಸಂಬಂಧವಿಲ್ಲ ಎಂದು ಮನ್ಸೂರ್‌ ಮೊಲ್ಲರಿಗೆ ಆಗಿರುವ ಗಾಯಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಮನ್ಸೂರ್‌ ಮೊಲ್ಲಾ ದಪ್ಪ ಗಡ್ಡವನ್ನು ಹೊಂದಿದ್ದು ಅದು ಅವನ ಕುತ್ತಿಗೆ ಪೂರ್ತಿ ಆವರಿಸಿದೆ. ಆದರೆ ವೀಡಿಯೊದಲ್ಲಿರುವ ವ್ಯಕ್ತಿಗೆ ಗಡ್ಡವಿಲ್ಲ ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಹಸನ್ ಮೊಲ್ಲಾ ಅವರ ಫೇಸ್‌ಬುಕ್‌ ಪೋಸ್ಟ್ ಬಗ್ಗೆ ಹಲವಾರು ಜನರು ಕಮೆಂಟ್ ಮಾಡಿದ್ದು, ಹಲವು ಲಿಂಕ್‌ಗಳನ್ನು ಹಂಚಿಕೊಂಡಿದ್ದಾರೆ. ಅಲ್ಲಿ ವೀಡಿಯೊವನ್ನು ಸಂಪೂರ್ಣವಾಗಿ ವಿಭಿನ್ನ ಸಂದರ್ಭದೊಂದಿಗೆ ಹಂಚಿಕೊಳ್ಳಲಾಗಿದೆ.

ಮೇ 14 ರಂದು ಬಾಂಗ್ಲಾದೇಶದ ಸಿಲ್ಹೆಟ್‌ನ ರಾಜೇಶ್ ಸರ್ಕಾರ್ ಈ ವಿಡಿಯೋವನ್ನು ಹಂಚಿಕೊಂಡಿದ್ದು, ವ್ಯಕ್ತಿಯೊಬ್ಬ ತನ್ನ ತಂದೆಯನ್ನು ಕತ್ತು ಹಿಸುಕುತ್ತಿದ್ದಾನೆ ಎಂದು ಬರೆದಿದ್ದಾರೆ. ಅವರು ಹಂಚಿರುವ ವೀಡಿಯೊ slynewsbd.com ನ ಲೋಗೊವನ್ನು ಹೊಂದಿದೆ. ಅದೆ ವೀಡಿಯೊವನ್ನು ಅದೇ ರೀತಿಯ ನಿರೂಪಣೆಯೊಂದಿಗೆ ಔಟ್‌ಲೆಟ್‌ ಹಂಚಿಕೊಂಡಿತ್ತು.

ಇದನ್ನೂ ಓದಿ: ಗೌರಿ ಲಂಕೇಶ್‌ ನ್ಯಾಯಪಥ ಪತ್ರಿಕೆಯ ಚಂದಾದಾರರಾಗಲು ಇಲ್ಲಿ ಕ್ಲಿಕ್ಕಿಸಿ

ಮಗನೊಬ್ಬ ತನ್ನ ಅನಾರೋಗ್ಯ ಪೀಡಿತ ತಂದೆಯನ್ನು ಕತ್ತು ಹಿಸುಕುತ್ತಿದ್ದಾನೆ ಎಂಬ ಹೇಳಿಕೆಯೊಂದಿಗೆ ಈ ವೀಡಿಯೊ ಬಾಂಗ್ಲಾದೇಶದಲ್ಲಿ ವೈರಲ್ ಆಗಿದೆ. ಆದರೆ ದೇಶದ ಯೂಟ್ಯೂಬರ್ ಒಬ್ಬರು, ಮಗನೊಬ್ಬ ತನ್ನ ತಂದೆಗೆ ಬಲವಂತವಾಗಿ ಆಹಾರವನ್ನು ನೀಡಲು ಪ್ರಯತ್ನಿಸುತ್ತಿದ್ದಾನೆ ಎಂದು ಹೇಳುತ್ತಾರೆ.

ಈ ವೀಡಿಯೊವನ್ನು ಎಚ್ಚರಿಕೆಯಿಂದ ನೋಡಿದರೆ, ವಯಸ್ಸಾದ ವ್ಯಕ್ತಿಯ ಕೈಗಳು ಅವರ ಕುತ್ತಿಗೆಗೆ ಹೋಗುವುದೆ ಇಲ್ಲ. ಅವರು ತಮ್ಮ ಬಾಯಿಯನ್ನು ಮುಚ್ಚಲು ಪ್ರಯತ್ನಿಸುತ್ತಾ ಇದ್ದಾರೆ. ಅದಕ್ಕಾಗಿ ಅವರ ಮಗ ಅವರ ಕೈಗಳನ್ನು ತನ್ನ ಕೈಯಿಂದ ತಳ್ಳುತ್ತಾ ಇರುವುದನ್ನು ನೋಡಬಹುದಾಗಿದೆ.

ಈ ವೀಡಿಯೊ ಮೊದಲಿಗೆ ಬಾಂಗ್ಲಾದೇಶದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗಿತ್ತು ಮತ್ತು ಅದನ್ನು ಹಲವಾರು ಮಾಧ್ಯಮಗಳು ಕೂಡಾ ಸುಳ್ಳು ಪ್ರತಿಪಾದನೆಯೊಂದಿಗೆ ವರದಿ ಮಾಡಿದ್ದವು. ಈಗ ಅದು ಕೊರೊನಾ ಸಮಯದಲ್ಲಿ ಭಾರತದಲ್ಲಿ ವೈರಲ್ ಆಗಿದ್ದು, ಆಸ್ಪತ್ರೆಗಳು ರೋಗಿಗಳನ್ನು ಹಣಕ್ಕಾಗಿ ಕೊಲ್ಲುತ್ತಿದೆ ಎಂಬ ಸುಳ್ಳು ಪ್ರತಿಪಾದನೆಯೊಂದಗೆ ವೈರಲ್ ಆಗಿದೆ.

ಕೃಪೆ: Alt News

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....