Homeಫ್ಯಾಕ್ಟ್‌ಚೆಕ್ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

- Advertisement -
- Advertisement -

ಮಾಸ್ಕ್‌‌ ಧರಿಸಿರುವ ವ್ಯಕ್ತಿಯೊಬ್ಬ ರೋಗಿಯೊಬ್ಬರನ್ನು ಉಸಿರುಗಟ್ಟಿಸುವ ರೀತಿಯಲ್ಲಿ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊ ಜೊತೆಗೆ, ಕೊರೊನಾ ರೋಗಿಗಳನ್ನು ದುಡ್ಡಿಗಾಗಿ ಆಸ್ಪತ್ರೆಯ ಜನರು ಕೊಲ್ಲುತ್ತಿದ್ದಾರೆ ಎಂದು ಸಂದೇಶ ಕೂಡಾ ಹರಿದಾಡುತ್ತಿದೆ.

ಕೆಲವರು, ಕೊರೊನಾ ಸೋಗಿನಲ್ಲಿ ಭಾರಿ ಪಿತೂರಿ ನಡೆಯುತ್ತಿದೆ ಎಂದು ಪ್ರತಿಪಾದಿಸಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೊವನ್ನು ಹಲವಾರು ಜನರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್‌

ಈ ಬಗ್ಗೆ ಫ್ಯಾಕ್ಟ್‌ಚೆಕ್‌‌ ವೆಬ್‌ಸೈಟ್‌‌ ಆಲ್ಟ್‌ನ್ಯೂಸ್‌‌‌‌ ವಿಡಿಯೊವನ್ನು ಇಂಟರ್‌ನೆಟ್‌‌ನಲ್ಲಿ ಹುಡುಕಾಡಿದ್ದು, ಅದು ಮೇ 19, 2020 ರಂದು ಮಾಡಿದ್ದ ಟ್ವೀಟ್‌ ಒಂದರಲ್ಲಿ ಈ ವಿಡಿಯೊ ಬಗ್ಗೆಗಿನ ವರದಿ ಇರುವುದನ್ನು ಕಂಡುಕೊಂಡಿದೆ. ಈ ವರದಿಯನ್ನು ಬಾಂಗ್ಲಾದೇಶ ಮೂಲದ ಸೊಕಲರ್‌ಸೊಂಗ್‌ಬಾದ್.ಕಾಮ್ ಬರೆದಿತ್ತು. “ಇಬ್ಬರು ವ್ಯಕ್ತಿಗಳು ಜಗಳವಾಡಿದ್ದು, ಹಿರಿಯ ವ್ಯಕ್ತಿಯಾದ ಮನ್ಸೂರ್‌ ಮೊಲ್ಲಾ ಅವರನ್ನು ಏಪ್ರಿಲ್ 21, 2020 ರಂದು ಆಸ್ಪತ್ರೆಯ ಹಾಸಿಗೆಯಲ್ಲಿ ಕತ್ತು ಹಿಸುಕಲಾಗಿದೆ. ಅವರು ಮರುದಿನ ನಿಧನರಾದರು. ಈ ಘಟನೆ ಬಾಂಗ್ಲಾದೇಶದ ಬೋಲ್‌ಮರಿಯ ಫರೀದ್‌ಪುರದ ದಾದ್ಪುರದಲ್ಲಿ ನಡೆದಿದೆ” ಎಂದು ವರದಿ ಹೇಳಿದೆ.

ಆದಾಗ್ಯೂ, ಘಟನೆಯ ಆರಂಭಿಕ ವರದಿಗಳಲ್ಲಿ ವೀಡಿಯೊ ಬಗ್ಗೆ ಯಾವುದೇ ಉಲ್ಲೇಖವಿಲ್ಲ, ಜೊತೆಗೆ ಘಟನೆಯ ವಿವರಗಳಿಗೆ ವೀಡಿಯೊ ಹೊಂದಿಕೆಯಾಗುವುದಿಲ್ಲ.

ಏಪ್ರಿಲ್ 22 ರಂದು ಡಾಕಾಟೈಮ್ಸ್ 24.ಕಾಂನಲ್ಲಿ ಪ್ರಕಟವಾದ ವರದಿಯ ಪ್ರಕಾರ, “ಬೋಲ್ಮರಿ ಪೊಲೀಸ್ ಅಧಿಕಾರಿ (ಒಸಿ) ಅಮಿನೂರ್ ರಹಮಾನ್ ಹೇಳುವಂತೆ, ‘ದೋಲ್ಪುರ್ ಗ್ರಾಮದ ಫಜಲ್ ಖಾರ್ ಅವರ ಪುತ್ರ ಅಬುಬಕ್ಕರ್ ಎಂಬವರು ಮಂಗಳವಾರ [ಏಪ್ರಿಲ್ 21] ಸಂಜೆ ಕ್ರಿಕೆಟ್ ಆಡುತ್ತಿದ್ದಾಗ, ಸೊಲೈಮಾನ್ ಮೊಲ್ಲಾ ಅವರ ಪುತ್ರ ಕಿಬ್ರಿಯಾ ಮೊಲ್ಲಾ ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಕಾರಣದಿಂದಾಗಿ, ಫಜಲ್ ಖಾರ್‌ನ ಜನರು ರಾತ್ರಿ ವೇಳೆಯಲ್ಲಿ ಛೇಲಮಾನ್ ಮೊಹಲ್ಲಾ ಜನರ ಮೇಲೆ ದಾಳಿ ನಡೆಸಿದ್ದಾರೆ. ಆ ಸಮಯದಲ್ಲಿ ಈ ಗಲಾಟೆಯನ್ನು ನಿಲ್ಲಿಸಲು ಪ್ರಯತ್ನಿಸಿದ ಮನ್ಸೂರ್ ಮೊಲ್ಲಾ ಅವರಿಗೆ ತಲೆಗೆ ಹೊಡೆಯಲಾಗಿದೆ. ಅವರನ್ನು ಫರೀದ್ಪುರ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಂಜಾನೆ 1 ಗಂಟೆ ಸುಮಾರಿಗೆ ನಿಧನರಾದರು”

ಇದನ್ನೂ ಓದಿ: ಆಮ್ಲಜನಕ ಮಟ್ಟ ಹೆಚ್ಚಳಕ್ಕೆ ಕರ್ಪೂರ, ಲವಂಗ, ಅಜಿವಾನ ಮತ್ತು ನೀಲಗಿರಿ ಎಣ್ಣೆ ಬಳಸಬೇಡಿ, ಇದು ಮಾರಣಾಂತಿಕವೂ ಆಗಬಹುದು

ಏಪ್ರಿಲ್ 21 ರಂದು ಕೆಲವು ಯುವಕರ ನಡುವಿನ ಕ್ರಿಕೆಟ್ ಪಂದ್ಯವೊಂದರಲ್ಲಿ ನಡೆದ ಜಗಳದಲ್ಲಿ ಮನ್ಸೂರ್ ಮೊಲ್ಲಾ ಗಾಯಗೊಂಡಿದ್ದಾರೆ. ಏಪ್ರಿಲ್ 22 ರ ಮುಂಜಾನೆ ಅವರು ನಿಧನ ಹೊಂದಿದರು ಎಂದು ದಿ ಡೈಲಿ ಪ್ರೋಥಮ್ ಅಲೋದಲ್ಲಿ ಪ್ರಕಟವಾದ ಮತ್ತೊಂದು ವರದಿ ಹೇಳುತ್ತದೆ.

ಈ ಬಗ್ಗೆ ‘ভিডিও মনসুর মোল্লা’ (ವಿಡಿಯೋ ಮನ್ಸೂರ್ ಮೊಲ್ಲಾ) ಎಂಬ ಕೀವರ್ಡ್‌ಗಳೊಂದಿಗೆ ಫೇಸ್‌ಬುಕ್‌ನಲ್ಲಿ ಹುಡುಕಾಡಿದಾಗ ಬಾಂಗ್ಲಾದೇಶದ ಡಾಕಾ ನಿವಾಸಿ ಹಸನ್ ಮೊಲ್ಲಾ ಎಂಬವರ ಫೇಸ್‌ಬುಕ್ ಸ್ಟೇಟಸ್ ಒಂದು ಕಂಡು ಬಂದಿದೆ. ಅದರಲ್ಲಿ ಮನ್ಸೂರ್ ಮೊಲ್ಲಾಗೆ ಸಂಬಂಧಿಸಿದ ಘಟನೆಯ ವೀಡಿಯೊವನ್ನು ತಪ್ಪಾಗಿ ನಿರೂಪಿಸಲಾಗುತ್ತಿದೆ ಎಂದು ಅವರು ಮೇ 18 ರಂದು ಬರೆದಿದ್ದಾರೆ.

ವೈರಲ್ ವಿಡಿಯೊದಲ್ಲಿ ಇರುವ ವ್ಯಕ್ತಿಗೂ, ಮನ್ಸೂರ್‌‌ ಮೊಲ್ಲಾ ಅವರಿಗೂ ಸಂಬಂಧವಿಲ್ಲ ಎಂದು ಮನ್ಸೂರ್‌ ಮೊಲ್ಲರಿಗೆ ಆಗಿರುವ ಗಾಯಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಮನ್ಸೂರ್‌ ಮೊಲ್ಲಾ ದಪ್ಪ ಗಡ್ಡವನ್ನು ಹೊಂದಿದ್ದು ಅದು ಅವನ ಕುತ್ತಿಗೆ ಪೂರ್ತಿ ಆವರಿಸಿದೆ. ಆದರೆ ವೀಡಿಯೊದಲ್ಲಿರುವ ವ್ಯಕ್ತಿಗೆ ಗಡ್ಡವಿಲ್ಲ ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಹಸನ್ ಮೊಲ್ಲಾ ಅವರ ಫೇಸ್‌ಬುಕ್‌ ಪೋಸ್ಟ್ ಬಗ್ಗೆ ಹಲವಾರು ಜನರು ಕಮೆಂಟ್ ಮಾಡಿದ್ದು, ಹಲವು ಲಿಂಕ್‌ಗಳನ್ನು ಹಂಚಿಕೊಂಡಿದ್ದಾರೆ. ಅಲ್ಲಿ ವೀಡಿಯೊವನ್ನು ಸಂಪೂರ್ಣವಾಗಿ ವಿಭಿನ್ನ ಸಂದರ್ಭದೊಂದಿಗೆ ಹಂಚಿಕೊಳ್ಳಲಾಗಿದೆ.

ಮೇ 14 ರಂದು ಬಾಂಗ್ಲಾದೇಶದ ಸಿಲ್ಹೆಟ್‌ನ ರಾಜೇಶ್ ಸರ್ಕಾರ್ ಈ ವಿಡಿಯೋವನ್ನು ಹಂಚಿಕೊಂಡಿದ್ದು, ವ್ಯಕ್ತಿಯೊಬ್ಬ ತನ್ನ ತಂದೆಯನ್ನು ಕತ್ತು ಹಿಸುಕುತ್ತಿದ್ದಾನೆ ಎಂದು ಬರೆದಿದ್ದಾರೆ. ಅವರು ಹಂಚಿರುವ ವೀಡಿಯೊ slynewsbd.com ನ ಲೋಗೊವನ್ನು ಹೊಂದಿದೆ. ಅದೆ ವೀಡಿಯೊವನ್ನು ಅದೇ ರೀತಿಯ ನಿರೂಪಣೆಯೊಂದಿಗೆ ಔಟ್‌ಲೆಟ್‌ ಹಂಚಿಕೊಂಡಿತ್ತು.

ಇದನ್ನೂ ಓದಿ: ಗೌರಿ ಲಂಕೇಶ್‌ ನ್ಯಾಯಪಥ ಪತ್ರಿಕೆಯ ಚಂದಾದಾರರಾಗಲು ಇಲ್ಲಿ ಕ್ಲಿಕ್ಕಿಸಿ

ಮಗನೊಬ್ಬ ತನ್ನ ಅನಾರೋಗ್ಯ ಪೀಡಿತ ತಂದೆಯನ್ನು ಕತ್ತು ಹಿಸುಕುತ್ತಿದ್ದಾನೆ ಎಂಬ ಹೇಳಿಕೆಯೊಂದಿಗೆ ಈ ವೀಡಿಯೊ ಬಾಂಗ್ಲಾದೇಶದಲ್ಲಿ ವೈರಲ್ ಆಗಿದೆ. ಆದರೆ ದೇಶದ ಯೂಟ್ಯೂಬರ್ ಒಬ್ಬರು, ಮಗನೊಬ್ಬ ತನ್ನ ತಂದೆಗೆ ಬಲವಂತವಾಗಿ ಆಹಾರವನ್ನು ನೀಡಲು ಪ್ರಯತ್ನಿಸುತ್ತಿದ್ದಾನೆ ಎಂದು ಹೇಳುತ್ತಾರೆ.

ಈ ವೀಡಿಯೊವನ್ನು ಎಚ್ಚರಿಕೆಯಿಂದ ನೋಡಿದರೆ, ವಯಸ್ಸಾದ ವ್ಯಕ್ತಿಯ ಕೈಗಳು ಅವರ ಕುತ್ತಿಗೆಗೆ ಹೋಗುವುದೆ ಇಲ್ಲ. ಅವರು ತಮ್ಮ ಬಾಯಿಯನ್ನು ಮುಚ್ಚಲು ಪ್ರಯತ್ನಿಸುತ್ತಾ ಇದ್ದಾರೆ. ಅದಕ್ಕಾಗಿ ಅವರ ಮಗ ಅವರ ಕೈಗಳನ್ನು ತನ್ನ ಕೈಯಿಂದ ತಳ್ಳುತ್ತಾ ಇರುವುದನ್ನು ನೋಡಬಹುದಾಗಿದೆ.

ಈ ವೀಡಿಯೊ ಮೊದಲಿಗೆ ಬಾಂಗ್ಲಾದೇಶದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗಿತ್ತು ಮತ್ತು ಅದನ್ನು ಹಲವಾರು ಮಾಧ್ಯಮಗಳು ಕೂಡಾ ಸುಳ್ಳು ಪ್ರತಿಪಾದನೆಯೊಂದಿಗೆ ವರದಿ ಮಾಡಿದ್ದವು. ಈಗ ಅದು ಕೊರೊನಾ ಸಮಯದಲ್ಲಿ ಭಾರತದಲ್ಲಿ ವೈರಲ್ ಆಗಿದ್ದು, ಆಸ್ಪತ್ರೆಗಳು ರೋಗಿಗಳನ್ನು ಹಣಕ್ಕಾಗಿ ಕೊಲ್ಲುತ್ತಿದೆ ಎಂಬ ಸುಳ್ಳು ಪ್ರತಿಪಾದನೆಯೊಂದಗೆ ವೈರಲ್ ಆಗಿದೆ.

ಕೃಪೆ: Alt News

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...