Homeಫ್ಯಾಕ್ಟ್‌ಚೆಕ್ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

- Advertisement -
- Advertisement -

ಮಾಸ್ಕ್‌‌ ಧರಿಸಿರುವ ವ್ಯಕ್ತಿಯೊಬ್ಬ ರೋಗಿಯೊಬ್ಬರನ್ನು ಉಸಿರುಗಟ್ಟಿಸುವ ರೀತಿಯಲ್ಲಿ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊ ಜೊತೆಗೆ, ಕೊರೊನಾ ರೋಗಿಗಳನ್ನು ದುಡ್ಡಿಗಾಗಿ ಆಸ್ಪತ್ರೆಯ ಜನರು ಕೊಲ್ಲುತ್ತಿದ್ದಾರೆ ಎಂದು ಸಂದೇಶ ಕೂಡಾ ಹರಿದಾಡುತ್ತಿದೆ.

ಕೆಲವರು, ಕೊರೊನಾ ಸೋಗಿನಲ್ಲಿ ಭಾರಿ ಪಿತೂರಿ ನಡೆಯುತ್ತಿದೆ ಎಂದು ಪ್ರತಿಪಾದಿಸಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೊವನ್ನು ಹಲವಾರು ಜನರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್‌

ಈ ಬಗ್ಗೆ ಫ್ಯಾಕ್ಟ್‌ಚೆಕ್‌‌ ವೆಬ್‌ಸೈಟ್‌‌ ಆಲ್ಟ್‌ನ್ಯೂಸ್‌‌‌‌ ವಿಡಿಯೊವನ್ನು ಇಂಟರ್‌ನೆಟ್‌‌ನಲ್ಲಿ ಹುಡುಕಾಡಿದ್ದು, ಅದು ಮೇ 19, 2020 ರಂದು ಮಾಡಿದ್ದ ಟ್ವೀಟ್‌ ಒಂದರಲ್ಲಿ ಈ ವಿಡಿಯೊ ಬಗ್ಗೆಗಿನ ವರದಿ ಇರುವುದನ್ನು ಕಂಡುಕೊಂಡಿದೆ. ಈ ವರದಿಯನ್ನು ಬಾಂಗ್ಲಾದೇಶ ಮೂಲದ ಸೊಕಲರ್‌ಸೊಂಗ್‌ಬಾದ್.ಕಾಮ್ ಬರೆದಿತ್ತು. “ಇಬ್ಬರು ವ್ಯಕ್ತಿಗಳು ಜಗಳವಾಡಿದ್ದು, ಹಿರಿಯ ವ್ಯಕ್ತಿಯಾದ ಮನ್ಸೂರ್‌ ಮೊಲ್ಲಾ ಅವರನ್ನು ಏಪ್ರಿಲ್ 21, 2020 ರಂದು ಆಸ್ಪತ್ರೆಯ ಹಾಸಿಗೆಯಲ್ಲಿ ಕತ್ತು ಹಿಸುಕಲಾಗಿದೆ. ಅವರು ಮರುದಿನ ನಿಧನರಾದರು. ಈ ಘಟನೆ ಬಾಂಗ್ಲಾದೇಶದ ಬೋಲ್‌ಮರಿಯ ಫರೀದ್‌ಪುರದ ದಾದ್ಪುರದಲ್ಲಿ ನಡೆದಿದೆ” ಎಂದು ವರದಿ ಹೇಳಿದೆ.

ಆದಾಗ್ಯೂ, ಘಟನೆಯ ಆರಂಭಿಕ ವರದಿಗಳಲ್ಲಿ ವೀಡಿಯೊ ಬಗ್ಗೆ ಯಾವುದೇ ಉಲ್ಲೇಖವಿಲ್ಲ, ಜೊತೆಗೆ ಘಟನೆಯ ವಿವರಗಳಿಗೆ ವೀಡಿಯೊ ಹೊಂದಿಕೆಯಾಗುವುದಿಲ್ಲ.

ಏಪ್ರಿಲ್ 22 ರಂದು ಡಾಕಾಟೈಮ್ಸ್ 24.ಕಾಂನಲ್ಲಿ ಪ್ರಕಟವಾದ ವರದಿಯ ಪ್ರಕಾರ, “ಬೋಲ್ಮರಿ ಪೊಲೀಸ್ ಅಧಿಕಾರಿ (ಒಸಿ) ಅಮಿನೂರ್ ರಹಮಾನ್ ಹೇಳುವಂತೆ, ‘ದೋಲ್ಪುರ್ ಗ್ರಾಮದ ಫಜಲ್ ಖಾರ್ ಅವರ ಪುತ್ರ ಅಬುಬಕ್ಕರ್ ಎಂಬವರು ಮಂಗಳವಾರ [ಏಪ್ರಿಲ್ 21] ಸಂಜೆ ಕ್ರಿಕೆಟ್ ಆಡುತ್ತಿದ್ದಾಗ, ಸೊಲೈಮಾನ್ ಮೊಲ್ಲಾ ಅವರ ಪುತ್ರ ಕಿಬ್ರಿಯಾ ಮೊಲ್ಲಾ ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಕಾರಣದಿಂದಾಗಿ, ಫಜಲ್ ಖಾರ್‌ನ ಜನರು ರಾತ್ರಿ ವೇಳೆಯಲ್ಲಿ ಛೇಲಮಾನ್ ಮೊಹಲ್ಲಾ ಜನರ ಮೇಲೆ ದಾಳಿ ನಡೆಸಿದ್ದಾರೆ. ಆ ಸಮಯದಲ್ಲಿ ಈ ಗಲಾಟೆಯನ್ನು ನಿಲ್ಲಿಸಲು ಪ್ರಯತ್ನಿಸಿದ ಮನ್ಸೂರ್ ಮೊಲ್ಲಾ ಅವರಿಗೆ ತಲೆಗೆ ಹೊಡೆಯಲಾಗಿದೆ. ಅವರನ್ನು ಫರೀದ್ಪುರ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಂಜಾನೆ 1 ಗಂಟೆ ಸುಮಾರಿಗೆ ನಿಧನರಾದರು”

ಇದನ್ನೂ ಓದಿ: ಆಮ್ಲಜನಕ ಮಟ್ಟ ಹೆಚ್ಚಳಕ್ಕೆ ಕರ್ಪೂರ, ಲವಂಗ, ಅಜಿವಾನ ಮತ್ತು ನೀಲಗಿರಿ ಎಣ್ಣೆ ಬಳಸಬೇಡಿ, ಇದು ಮಾರಣಾಂತಿಕವೂ ಆಗಬಹುದು

ಏಪ್ರಿಲ್ 21 ರಂದು ಕೆಲವು ಯುವಕರ ನಡುವಿನ ಕ್ರಿಕೆಟ್ ಪಂದ್ಯವೊಂದರಲ್ಲಿ ನಡೆದ ಜಗಳದಲ್ಲಿ ಮನ್ಸೂರ್ ಮೊಲ್ಲಾ ಗಾಯಗೊಂಡಿದ್ದಾರೆ. ಏಪ್ರಿಲ್ 22 ರ ಮುಂಜಾನೆ ಅವರು ನಿಧನ ಹೊಂದಿದರು ಎಂದು ದಿ ಡೈಲಿ ಪ್ರೋಥಮ್ ಅಲೋದಲ್ಲಿ ಪ್ರಕಟವಾದ ಮತ್ತೊಂದು ವರದಿ ಹೇಳುತ್ತದೆ.

ಈ ಬಗ್ಗೆ ‘ভিডিও মনসুর মোল্লা’ (ವಿಡಿಯೋ ಮನ್ಸೂರ್ ಮೊಲ್ಲಾ) ಎಂಬ ಕೀವರ್ಡ್‌ಗಳೊಂದಿಗೆ ಫೇಸ್‌ಬುಕ್‌ನಲ್ಲಿ ಹುಡುಕಾಡಿದಾಗ ಬಾಂಗ್ಲಾದೇಶದ ಡಾಕಾ ನಿವಾಸಿ ಹಸನ್ ಮೊಲ್ಲಾ ಎಂಬವರ ಫೇಸ್‌ಬುಕ್ ಸ್ಟೇಟಸ್ ಒಂದು ಕಂಡು ಬಂದಿದೆ. ಅದರಲ್ಲಿ ಮನ್ಸೂರ್ ಮೊಲ್ಲಾಗೆ ಸಂಬಂಧಿಸಿದ ಘಟನೆಯ ವೀಡಿಯೊವನ್ನು ತಪ್ಪಾಗಿ ನಿರೂಪಿಸಲಾಗುತ್ತಿದೆ ಎಂದು ಅವರು ಮೇ 18 ರಂದು ಬರೆದಿದ್ದಾರೆ.

ವೈರಲ್ ವಿಡಿಯೊದಲ್ಲಿ ಇರುವ ವ್ಯಕ್ತಿಗೂ, ಮನ್ಸೂರ್‌‌ ಮೊಲ್ಲಾ ಅವರಿಗೂ ಸಂಬಂಧವಿಲ್ಲ ಎಂದು ಮನ್ಸೂರ್‌ ಮೊಲ್ಲರಿಗೆ ಆಗಿರುವ ಗಾಯಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಮನ್ಸೂರ್‌ ಮೊಲ್ಲಾ ದಪ್ಪ ಗಡ್ಡವನ್ನು ಹೊಂದಿದ್ದು ಅದು ಅವನ ಕುತ್ತಿಗೆ ಪೂರ್ತಿ ಆವರಿಸಿದೆ. ಆದರೆ ವೀಡಿಯೊದಲ್ಲಿರುವ ವ್ಯಕ್ತಿಗೆ ಗಡ್ಡವಿಲ್ಲ ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಹಸನ್ ಮೊಲ್ಲಾ ಅವರ ಫೇಸ್‌ಬುಕ್‌ ಪೋಸ್ಟ್ ಬಗ್ಗೆ ಹಲವಾರು ಜನರು ಕಮೆಂಟ್ ಮಾಡಿದ್ದು, ಹಲವು ಲಿಂಕ್‌ಗಳನ್ನು ಹಂಚಿಕೊಂಡಿದ್ದಾರೆ. ಅಲ್ಲಿ ವೀಡಿಯೊವನ್ನು ಸಂಪೂರ್ಣವಾಗಿ ವಿಭಿನ್ನ ಸಂದರ್ಭದೊಂದಿಗೆ ಹಂಚಿಕೊಳ್ಳಲಾಗಿದೆ.

ಮೇ 14 ರಂದು ಬಾಂಗ್ಲಾದೇಶದ ಸಿಲ್ಹೆಟ್‌ನ ರಾಜೇಶ್ ಸರ್ಕಾರ್ ಈ ವಿಡಿಯೋವನ್ನು ಹಂಚಿಕೊಂಡಿದ್ದು, ವ್ಯಕ್ತಿಯೊಬ್ಬ ತನ್ನ ತಂದೆಯನ್ನು ಕತ್ತು ಹಿಸುಕುತ್ತಿದ್ದಾನೆ ಎಂದು ಬರೆದಿದ್ದಾರೆ. ಅವರು ಹಂಚಿರುವ ವೀಡಿಯೊ slynewsbd.com ನ ಲೋಗೊವನ್ನು ಹೊಂದಿದೆ. ಅದೆ ವೀಡಿಯೊವನ್ನು ಅದೇ ರೀತಿಯ ನಿರೂಪಣೆಯೊಂದಿಗೆ ಔಟ್‌ಲೆಟ್‌ ಹಂಚಿಕೊಂಡಿತ್ತು.

ಇದನ್ನೂ ಓದಿ: ಗೌರಿ ಲಂಕೇಶ್‌ ನ್ಯಾಯಪಥ ಪತ್ರಿಕೆಯ ಚಂದಾದಾರರಾಗಲು ಇಲ್ಲಿ ಕ್ಲಿಕ್ಕಿಸಿ

ಮಗನೊಬ್ಬ ತನ್ನ ಅನಾರೋಗ್ಯ ಪೀಡಿತ ತಂದೆಯನ್ನು ಕತ್ತು ಹಿಸುಕುತ್ತಿದ್ದಾನೆ ಎಂಬ ಹೇಳಿಕೆಯೊಂದಿಗೆ ಈ ವೀಡಿಯೊ ಬಾಂಗ್ಲಾದೇಶದಲ್ಲಿ ವೈರಲ್ ಆಗಿದೆ. ಆದರೆ ದೇಶದ ಯೂಟ್ಯೂಬರ್ ಒಬ್ಬರು, ಮಗನೊಬ್ಬ ತನ್ನ ತಂದೆಗೆ ಬಲವಂತವಾಗಿ ಆಹಾರವನ್ನು ನೀಡಲು ಪ್ರಯತ್ನಿಸುತ್ತಿದ್ದಾನೆ ಎಂದು ಹೇಳುತ್ತಾರೆ.

ಈ ವೀಡಿಯೊವನ್ನು ಎಚ್ಚರಿಕೆಯಿಂದ ನೋಡಿದರೆ, ವಯಸ್ಸಾದ ವ್ಯಕ್ತಿಯ ಕೈಗಳು ಅವರ ಕುತ್ತಿಗೆಗೆ ಹೋಗುವುದೆ ಇಲ್ಲ. ಅವರು ತಮ್ಮ ಬಾಯಿಯನ್ನು ಮುಚ್ಚಲು ಪ್ರಯತ್ನಿಸುತ್ತಾ ಇದ್ದಾರೆ. ಅದಕ್ಕಾಗಿ ಅವರ ಮಗ ಅವರ ಕೈಗಳನ್ನು ತನ್ನ ಕೈಯಿಂದ ತಳ್ಳುತ್ತಾ ಇರುವುದನ್ನು ನೋಡಬಹುದಾಗಿದೆ.

ಈ ವೀಡಿಯೊ ಮೊದಲಿಗೆ ಬಾಂಗ್ಲಾದೇಶದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗಿತ್ತು ಮತ್ತು ಅದನ್ನು ಹಲವಾರು ಮಾಧ್ಯಮಗಳು ಕೂಡಾ ಸುಳ್ಳು ಪ್ರತಿಪಾದನೆಯೊಂದಿಗೆ ವರದಿ ಮಾಡಿದ್ದವು. ಈಗ ಅದು ಕೊರೊನಾ ಸಮಯದಲ್ಲಿ ಭಾರತದಲ್ಲಿ ವೈರಲ್ ಆಗಿದ್ದು, ಆಸ್ಪತ್ರೆಗಳು ರೋಗಿಗಳನ್ನು ಹಣಕ್ಕಾಗಿ ಕೊಲ್ಲುತ್ತಿದೆ ಎಂಬ ಸುಳ್ಳು ಪ್ರತಿಪಾದನೆಯೊಂದಗೆ ವೈರಲ್ ಆಗಿದೆ.

ಕೃಪೆ: Alt News

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...