Homeಫ್ಯಾಕ್ಟ್‌ಚೆಕ್ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

- Advertisement -
- Advertisement -

ಮಾಸ್ಕ್‌‌ ಧರಿಸಿರುವ ವ್ಯಕ್ತಿಯೊಬ್ಬ ರೋಗಿಯೊಬ್ಬರನ್ನು ಉಸಿರುಗಟ್ಟಿಸುವ ರೀತಿಯಲ್ಲಿ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊ ಜೊತೆಗೆ, ಕೊರೊನಾ ರೋಗಿಗಳನ್ನು ದುಡ್ಡಿಗಾಗಿ ಆಸ್ಪತ್ರೆಯ ಜನರು ಕೊಲ್ಲುತ್ತಿದ್ದಾರೆ ಎಂದು ಸಂದೇಶ ಕೂಡಾ ಹರಿದಾಡುತ್ತಿದೆ.

ಕೆಲವರು, ಕೊರೊನಾ ಸೋಗಿನಲ್ಲಿ ಭಾರಿ ಪಿತೂರಿ ನಡೆಯುತ್ತಿದೆ ಎಂದು ಪ್ರತಿಪಾದಿಸಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೊವನ್ನು ಹಲವಾರು ಜನರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್‌

ಈ ಬಗ್ಗೆ ಫ್ಯಾಕ್ಟ್‌ಚೆಕ್‌‌ ವೆಬ್‌ಸೈಟ್‌‌ ಆಲ್ಟ್‌ನ್ಯೂಸ್‌‌‌‌ ವಿಡಿಯೊವನ್ನು ಇಂಟರ್‌ನೆಟ್‌‌ನಲ್ಲಿ ಹುಡುಕಾಡಿದ್ದು, ಅದು ಮೇ 19, 2020 ರಂದು ಮಾಡಿದ್ದ ಟ್ವೀಟ್‌ ಒಂದರಲ್ಲಿ ಈ ವಿಡಿಯೊ ಬಗ್ಗೆಗಿನ ವರದಿ ಇರುವುದನ್ನು ಕಂಡುಕೊಂಡಿದೆ. ಈ ವರದಿಯನ್ನು ಬಾಂಗ್ಲಾದೇಶ ಮೂಲದ ಸೊಕಲರ್‌ಸೊಂಗ್‌ಬಾದ್.ಕಾಮ್ ಬರೆದಿತ್ತು. “ಇಬ್ಬರು ವ್ಯಕ್ತಿಗಳು ಜಗಳವಾಡಿದ್ದು, ಹಿರಿಯ ವ್ಯಕ್ತಿಯಾದ ಮನ್ಸೂರ್‌ ಮೊಲ್ಲಾ ಅವರನ್ನು ಏಪ್ರಿಲ್ 21, 2020 ರಂದು ಆಸ್ಪತ್ರೆಯ ಹಾಸಿಗೆಯಲ್ಲಿ ಕತ್ತು ಹಿಸುಕಲಾಗಿದೆ. ಅವರು ಮರುದಿನ ನಿಧನರಾದರು. ಈ ಘಟನೆ ಬಾಂಗ್ಲಾದೇಶದ ಬೋಲ್‌ಮರಿಯ ಫರೀದ್‌ಪುರದ ದಾದ್ಪುರದಲ್ಲಿ ನಡೆದಿದೆ” ಎಂದು ವರದಿ ಹೇಳಿದೆ.

ಆದಾಗ್ಯೂ, ಘಟನೆಯ ಆರಂಭಿಕ ವರದಿಗಳಲ್ಲಿ ವೀಡಿಯೊ ಬಗ್ಗೆ ಯಾವುದೇ ಉಲ್ಲೇಖವಿಲ್ಲ, ಜೊತೆಗೆ ಘಟನೆಯ ವಿವರಗಳಿಗೆ ವೀಡಿಯೊ ಹೊಂದಿಕೆಯಾಗುವುದಿಲ್ಲ.

ಏಪ್ರಿಲ್ 22 ರಂದು ಡಾಕಾಟೈಮ್ಸ್ 24.ಕಾಂನಲ್ಲಿ ಪ್ರಕಟವಾದ ವರದಿಯ ಪ್ರಕಾರ, “ಬೋಲ್ಮರಿ ಪೊಲೀಸ್ ಅಧಿಕಾರಿ (ಒಸಿ) ಅಮಿನೂರ್ ರಹಮಾನ್ ಹೇಳುವಂತೆ, ‘ದೋಲ್ಪುರ್ ಗ್ರಾಮದ ಫಜಲ್ ಖಾರ್ ಅವರ ಪುತ್ರ ಅಬುಬಕ್ಕರ್ ಎಂಬವರು ಮಂಗಳವಾರ [ಏಪ್ರಿಲ್ 21] ಸಂಜೆ ಕ್ರಿಕೆಟ್ ಆಡುತ್ತಿದ್ದಾಗ, ಸೊಲೈಮಾನ್ ಮೊಲ್ಲಾ ಅವರ ಪುತ್ರ ಕಿಬ್ರಿಯಾ ಮೊಲ್ಲಾ ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಕಾರಣದಿಂದಾಗಿ, ಫಜಲ್ ಖಾರ್‌ನ ಜನರು ರಾತ್ರಿ ವೇಳೆಯಲ್ಲಿ ಛೇಲಮಾನ್ ಮೊಹಲ್ಲಾ ಜನರ ಮೇಲೆ ದಾಳಿ ನಡೆಸಿದ್ದಾರೆ. ಆ ಸಮಯದಲ್ಲಿ ಈ ಗಲಾಟೆಯನ್ನು ನಿಲ್ಲಿಸಲು ಪ್ರಯತ್ನಿಸಿದ ಮನ್ಸೂರ್ ಮೊಲ್ಲಾ ಅವರಿಗೆ ತಲೆಗೆ ಹೊಡೆಯಲಾಗಿದೆ. ಅವರನ್ನು ಫರೀದ್ಪುರ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಂಜಾನೆ 1 ಗಂಟೆ ಸುಮಾರಿಗೆ ನಿಧನರಾದರು”

ಇದನ್ನೂ ಓದಿ: ಆಮ್ಲಜನಕ ಮಟ್ಟ ಹೆಚ್ಚಳಕ್ಕೆ ಕರ್ಪೂರ, ಲವಂಗ, ಅಜಿವಾನ ಮತ್ತು ನೀಲಗಿರಿ ಎಣ್ಣೆ ಬಳಸಬೇಡಿ, ಇದು ಮಾರಣಾಂತಿಕವೂ ಆಗಬಹುದು

ಏಪ್ರಿಲ್ 21 ರಂದು ಕೆಲವು ಯುವಕರ ನಡುವಿನ ಕ್ರಿಕೆಟ್ ಪಂದ್ಯವೊಂದರಲ್ಲಿ ನಡೆದ ಜಗಳದಲ್ಲಿ ಮನ್ಸೂರ್ ಮೊಲ್ಲಾ ಗಾಯಗೊಂಡಿದ್ದಾರೆ. ಏಪ್ರಿಲ್ 22 ರ ಮುಂಜಾನೆ ಅವರು ನಿಧನ ಹೊಂದಿದರು ಎಂದು ದಿ ಡೈಲಿ ಪ್ರೋಥಮ್ ಅಲೋದಲ್ಲಿ ಪ್ರಕಟವಾದ ಮತ್ತೊಂದು ವರದಿ ಹೇಳುತ್ತದೆ.

ಈ ಬಗ್ಗೆ ‘ভিডিও মনসুর মোল্লা’ (ವಿಡಿಯೋ ಮನ್ಸೂರ್ ಮೊಲ್ಲಾ) ಎಂಬ ಕೀವರ್ಡ್‌ಗಳೊಂದಿಗೆ ಫೇಸ್‌ಬುಕ್‌ನಲ್ಲಿ ಹುಡುಕಾಡಿದಾಗ ಬಾಂಗ್ಲಾದೇಶದ ಡಾಕಾ ನಿವಾಸಿ ಹಸನ್ ಮೊಲ್ಲಾ ಎಂಬವರ ಫೇಸ್‌ಬುಕ್ ಸ್ಟೇಟಸ್ ಒಂದು ಕಂಡು ಬಂದಿದೆ. ಅದರಲ್ಲಿ ಮನ್ಸೂರ್ ಮೊಲ್ಲಾಗೆ ಸಂಬಂಧಿಸಿದ ಘಟನೆಯ ವೀಡಿಯೊವನ್ನು ತಪ್ಪಾಗಿ ನಿರೂಪಿಸಲಾಗುತ್ತಿದೆ ಎಂದು ಅವರು ಮೇ 18 ರಂದು ಬರೆದಿದ್ದಾರೆ.

ವೈರಲ್ ವಿಡಿಯೊದಲ್ಲಿ ಇರುವ ವ್ಯಕ್ತಿಗೂ, ಮನ್ಸೂರ್‌‌ ಮೊಲ್ಲಾ ಅವರಿಗೂ ಸಂಬಂಧವಿಲ್ಲ ಎಂದು ಮನ್ಸೂರ್‌ ಮೊಲ್ಲರಿಗೆ ಆಗಿರುವ ಗಾಯಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಮನ್ಸೂರ್‌ ಮೊಲ್ಲಾ ದಪ್ಪ ಗಡ್ಡವನ್ನು ಹೊಂದಿದ್ದು ಅದು ಅವನ ಕುತ್ತಿಗೆ ಪೂರ್ತಿ ಆವರಿಸಿದೆ. ಆದರೆ ವೀಡಿಯೊದಲ್ಲಿರುವ ವ್ಯಕ್ತಿಗೆ ಗಡ್ಡವಿಲ್ಲ ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಹಸನ್ ಮೊಲ್ಲಾ ಅವರ ಫೇಸ್‌ಬುಕ್‌ ಪೋಸ್ಟ್ ಬಗ್ಗೆ ಹಲವಾರು ಜನರು ಕಮೆಂಟ್ ಮಾಡಿದ್ದು, ಹಲವು ಲಿಂಕ್‌ಗಳನ್ನು ಹಂಚಿಕೊಂಡಿದ್ದಾರೆ. ಅಲ್ಲಿ ವೀಡಿಯೊವನ್ನು ಸಂಪೂರ್ಣವಾಗಿ ವಿಭಿನ್ನ ಸಂದರ್ಭದೊಂದಿಗೆ ಹಂಚಿಕೊಳ್ಳಲಾಗಿದೆ.

ಮೇ 14 ರಂದು ಬಾಂಗ್ಲಾದೇಶದ ಸಿಲ್ಹೆಟ್‌ನ ರಾಜೇಶ್ ಸರ್ಕಾರ್ ಈ ವಿಡಿಯೋವನ್ನು ಹಂಚಿಕೊಂಡಿದ್ದು, ವ್ಯಕ್ತಿಯೊಬ್ಬ ತನ್ನ ತಂದೆಯನ್ನು ಕತ್ತು ಹಿಸುಕುತ್ತಿದ್ದಾನೆ ಎಂದು ಬರೆದಿದ್ದಾರೆ. ಅವರು ಹಂಚಿರುವ ವೀಡಿಯೊ slynewsbd.com ನ ಲೋಗೊವನ್ನು ಹೊಂದಿದೆ. ಅದೆ ವೀಡಿಯೊವನ್ನು ಅದೇ ರೀತಿಯ ನಿರೂಪಣೆಯೊಂದಿಗೆ ಔಟ್‌ಲೆಟ್‌ ಹಂಚಿಕೊಂಡಿತ್ತು.

ಇದನ್ನೂ ಓದಿ: ಗೌರಿ ಲಂಕೇಶ್‌ ನ್ಯಾಯಪಥ ಪತ್ರಿಕೆಯ ಚಂದಾದಾರರಾಗಲು ಇಲ್ಲಿ ಕ್ಲಿಕ್ಕಿಸಿ

ಮಗನೊಬ್ಬ ತನ್ನ ಅನಾರೋಗ್ಯ ಪೀಡಿತ ತಂದೆಯನ್ನು ಕತ್ತು ಹಿಸುಕುತ್ತಿದ್ದಾನೆ ಎಂಬ ಹೇಳಿಕೆಯೊಂದಿಗೆ ಈ ವೀಡಿಯೊ ಬಾಂಗ್ಲಾದೇಶದಲ್ಲಿ ವೈರಲ್ ಆಗಿದೆ. ಆದರೆ ದೇಶದ ಯೂಟ್ಯೂಬರ್ ಒಬ್ಬರು, ಮಗನೊಬ್ಬ ತನ್ನ ತಂದೆಗೆ ಬಲವಂತವಾಗಿ ಆಹಾರವನ್ನು ನೀಡಲು ಪ್ರಯತ್ನಿಸುತ್ತಿದ್ದಾನೆ ಎಂದು ಹೇಳುತ್ತಾರೆ.

ಈ ವೀಡಿಯೊವನ್ನು ಎಚ್ಚರಿಕೆಯಿಂದ ನೋಡಿದರೆ, ವಯಸ್ಸಾದ ವ್ಯಕ್ತಿಯ ಕೈಗಳು ಅವರ ಕುತ್ತಿಗೆಗೆ ಹೋಗುವುದೆ ಇಲ್ಲ. ಅವರು ತಮ್ಮ ಬಾಯಿಯನ್ನು ಮುಚ್ಚಲು ಪ್ರಯತ್ನಿಸುತ್ತಾ ಇದ್ದಾರೆ. ಅದಕ್ಕಾಗಿ ಅವರ ಮಗ ಅವರ ಕೈಗಳನ್ನು ತನ್ನ ಕೈಯಿಂದ ತಳ್ಳುತ್ತಾ ಇರುವುದನ್ನು ನೋಡಬಹುದಾಗಿದೆ.

ಈ ವೀಡಿಯೊ ಮೊದಲಿಗೆ ಬಾಂಗ್ಲಾದೇಶದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗಿತ್ತು ಮತ್ತು ಅದನ್ನು ಹಲವಾರು ಮಾಧ್ಯಮಗಳು ಕೂಡಾ ಸುಳ್ಳು ಪ್ರತಿಪಾದನೆಯೊಂದಿಗೆ ವರದಿ ಮಾಡಿದ್ದವು. ಈಗ ಅದು ಕೊರೊನಾ ಸಮಯದಲ್ಲಿ ಭಾರತದಲ್ಲಿ ವೈರಲ್ ಆಗಿದ್ದು, ಆಸ್ಪತ್ರೆಗಳು ರೋಗಿಗಳನ್ನು ಹಣಕ್ಕಾಗಿ ಕೊಲ್ಲುತ್ತಿದೆ ಎಂಬ ಸುಳ್ಳು ಪ್ರತಿಪಾದನೆಯೊಂದಗೆ ವೈರಲ್ ಆಗಿದೆ.

ಕೃಪೆ: Alt News

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...