Homeಫ್ಯಾಕ್ಟ್‌ಚೆಕ್ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

- Advertisement -
- Advertisement -

ಮಾಸ್ಕ್‌‌ ಧರಿಸಿರುವ ವ್ಯಕ್ತಿಯೊಬ್ಬ ರೋಗಿಯೊಬ್ಬರನ್ನು ಉಸಿರುಗಟ್ಟಿಸುವ ರೀತಿಯಲ್ಲಿ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊ ಜೊತೆಗೆ, ಕೊರೊನಾ ರೋಗಿಗಳನ್ನು ದುಡ್ಡಿಗಾಗಿ ಆಸ್ಪತ್ರೆಯ ಜನರು ಕೊಲ್ಲುತ್ತಿದ್ದಾರೆ ಎಂದು ಸಂದೇಶ ಕೂಡಾ ಹರಿದಾಡುತ್ತಿದೆ.

ಕೆಲವರು, ಕೊರೊನಾ ಸೋಗಿನಲ್ಲಿ ಭಾರಿ ಪಿತೂರಿ ನಡೆಯುತ್ತಿದೆ ಎಂದು ಪ್ರತಿಪಾದಿಸಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೊವನ್ನು ಹಲವಾರು ಜನರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್‌

ಈ ಬಗ್ಗೆ ಫ್ಯಾಕ್ಟ್‌ಚೆಕ್‌‌ ವೆಬ್‌ಸೈಟ್‌‌ ಆಲ್ಟ್‌ನ್ಯೂಸ್‌‌‌‌ ವಿಡಿಯೊವನ್ನು ಇಂಟರ್‌ನೆಟ್‌‌ನಲ್ಲಿ ಹುಡುಕಾಡಿದ್ದು, ಅದು ಮೇ 19, 2020 ರಂದು ಮಾಡಿದ್ದ ಟ್ವೀಟ್‌ ಒಂದರಲ್ಲಿ ಈ ವಿಡಿಯೊ ಬಗ್ಗೆಗಿನ ವರದಿ ಇರುವುದನ್ನು ಕಂಡುಕೊಂಡಿದೆ. ಈ ವರದಿಯನ್ನು ಬಾಂಗ್ಲಾದೇಶ ಮೂಲದ ಸೊಕಲರ್‌ಸೊಂಗ್‌ಬಾದ್.ಕಾಮ್ ಬರೆದಿತ್ತು. “ಇಬ್ಬರು ವ್ಯಕ್ತಿಗಳು ಜಗಳವಾಡಿದ್ದು, ಹಿರಿಯ ವ್ಯಕ್ತಿಯಾದ ಮನ್ಸೂರ್‌ ಮೊಲ್ಲಾ ಅವರನ್ನು ಏಪ್ರಿಲ್ 21, 2020 ರಂದು ಆಸ್ಪತ್ರೆಯ ಹಾಸಿಗೆಯಲ್ಲಿ ಕತ್ತು ಹಿಸುಕಲಾಗಿದೆ. ಅವರು ಮರುದಿನ ನಿಧನರಾದರು. ಈ ಘಟನೆ ಬಾಂಗ್ಲಾದೇಶದ ಬೋಲ್‌ಮರಿಯ ಫರೀದ್‌ಪುರದ ದಾದ್ಪುರದಲ್ಲಿ ನಡೆದಿದೆ” ಎಂದು ವರದಿ ಹೇಳಿದೆ.

ಆದಾಗ್ಯೂ, ಘಟನೆಯ ಆರಂಭಿಕ ವರದಿಗಳಲ್ಲಿ ವೀಡಿಯೊ ಬಗ್ಗೆ ಯಾವುದೇ ಉಲ್ಲೇಖವಿಲ್ಲ, ಜೊತೆಗೆ ಘಟನೆಯ ವಿವರಗಳಿಗೆ ವೀಡಿಯೊ ಹೊಂದಿಕೆಯಾಗುವುದಿಲ್ಲ.

ಏಪ್ರಿಲ್ 22 ರಂದು ಡಾಕಾಟೈಮ್ಸ್ 24.ಕಾಂನಲ್ಲಿ ಪ್ರಕಟವಾದ ವರದಿಯ ಪ್ರಕಾರ, “ಬೋಲ್ಮರಿ ಪೊಲೀಸ್ ಅಧಿಕಾರಿ (ಒಸಿ) ಅಮಿನೂರ್ ರಹಮಾನ್ ಹೇಳುವಂತೆ, ‘ದೋಲ್ಪುರ್ ಗ್ರಾಮದ ಫಜಲ್ ಖಾರ್ ಅವರ ಪುತ್ರ ಅಬುಬಕ್ಕರ್ ಎಂಬವರು ಮಂಗಳವಾರ [ಏಪ್ರಿಲ್ 21] ಸಂಜೆ ಕ್ರಿಕೆಟ್ ಆಡುತ್ತಿದ್ದಾಗ, ಸೊಲೈಮಾನ್ ಮೊಲ್ಲಾ ಅವರ ಪುತ್ರ ಕಿಬ್ರಿಯಾ ಮೊಲ್ಲಾ ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಕಾರಣದಿಂದಾಗಿ, ಫಜಲ್ ಖಾರ್‌ನ ಜನರು ರಾತ್ರಿ ವೇಳೆಯಲ್ಲಿ ಛೇಲಮಾನ್ ಮೊಹಲ್ಲಾ ಜನರ ಮೇಲೆ ದಾಳಿ ನಡೆಸಿದ್ದಾರೆ. ಆ ಸಮಯದಲ್ಲಿ ಈ ಗಲಾಟೆಯನ್ನು ನಿಲ್ಲಿಸಲು ಪ್ರಯತ್ನಿಸಿದ ಮನ್ಸೂರ್ ಮೊಲ್ಲಾ ಅವರಿಗೆ ತಲೆಗೆ ಹೊಡೆಯಲಾಗಿದೆ. ಅವರನ್ನು ಫರೀದ್ಪುರ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಂಜಾನೆ 1 ಗಂಟೆ ಸುಮಾರಿಗೆ ನಿಧನರಾದರು”

ಇದನ್ನೂ ಓದಿ: ಆಮ್ಲಜನಕ ಮಟ್ಟ ಹೆಚ್ಚಳಕ್ಕೆ ಕರ್ಪೂರ, ಲವಂಗ, ಅಜಿವಾನ ಮತ್ತು ನೀಲಗಿರಿ ಎಣ್ಣೆ ಬಳಸಬೇಡಿ, ಇದು ಮಾರಣಾಂತಿಕವೂ ಆಗಬಹುದು

ಏಪ್ರಿಲ್ 21 ರಂದು ಕೆಲವು ಯುವಕರ ನಡುವಿನ ಕ್ರಿಕೆಟ್ ಪಂದ್ಯವೊಂದರಲ್ಲಿ ನಡೆದ ಜಗಳದಲ್ಲಿ ಮನ್ಸೂರ್ ಮೊಲ್ಲಾ ಗಾಯಗೊಂಡಿದ್ದಾರೆ. ಏಪ್ರಿಲ್ 22 ರ ಮುಂಜಾನೆ ಅವರು ನಿಧನ ಹೊಂದಿದರು ಎಂದು ದಿ ಡೈಲಿ ಪ್ರೋಥಮ್ ಅಲೋದಲ್ಲಿ ಪ್ರಕಟವಾದ ಮತ್ತೊಂದು ವರದಿ ಹೇಳುತ್ತದೆ.

ಈ ಬಗ್ಗೆ ‘ভিডিও মনসুর মোল্লা’ (ವಿಡಿಯೋ ಮನ್ಸೂರ್ ಮೊಲ್ಲಾ) ಎಂಬ ಕೀವರ್ಡ್‌ಗಳೊಂದಿಗೆ ಫೇಸ್‌ಬುಕ್‌ನಲ್ಲಿ ಹುಡುಕಾಡಿದಾಗ ಬಾಂಗ್ಲಾದೇಶದ ಡಾಕಾ ನಿವಾಸಿ ಹಸನ್ ಮೊಲ್ಲಾ ಎಂಬವರ ಫೇಸ್‌ಬುಕ್ ಸ್ಟೇಟಸ್ ಒಂದು ಕಂಡು ಬಂದಿದೆ. ಅದರಲ್ಲಿ ಮನ್ಸೂರ್ ಮೊಲ್ಲಾಗೆ ಸಂಬಂಧಿಸಿದ ಘಟನೆಯ ವೀಡಿಯೊವನ್ನು ತಪ್ಪಾಗಿ ನಿರೂಪಿಸಲಾಗುತ್ತಿದೆ ಎಂದು ಅವರು ಮೇ 18 ರಂದು ಬರೆದಿದ್ದಾರೆ.

ವೈರಲ್ ವಿಡಿಯೊದಲ್ಲಿ ಇರುವ ವ್ಯಕ್ತಿಗೂ, ಮನ್ಸೂರ್‌‌ ಮೊಲ್ಲಾ ಅವರಿಗೂ ಸಂಬಂಧವಿಲ್ಲ ಎಂದು ಮನ್ಸೂರ್‌ ಮೊಲ್ಲರಿಗೆ ಆಗಿರುವ ಗಾಯಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಮನ್ಸೂರ್‌ ಮೊಲ್ಲಾ ದಪ್ಪ ಗಡ್ಡವನ್ನು ಹೊಂದಿದ್ದು ಅದು ಅವನ ಕುತ್ತಿಗೆ ಪೂರ್ತಿ ಆವರಿಸಿದೆ. ಆದರೆ ವೀಡಿಯೊದಲ್ಲಿರುವ ವ್ಯಕ್ತಿಗೆ ಗಡ್ಡವಿಲ್ಲ ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಹಸನ್ ಮೊಲ್ಲಾ ಅವರ ಫೇಸ್‌ಬುಕ್‌ ಪೋಸ್ಟ್ ಬಗ್ಗೆ ಹಲವಾರು ಜನರು ಕಮೆಂಟ್ ಮಾಡಿದ್ದು, ಹಲವು ಲಿಂಕ್‌ಗಳನ್ನು ಹಂಚಿಕೊಂಡಿದ್ದಾರೆ. ಅಲ್ಲಿ ವೀಡಿಯೊವನ್ನು ಸಂಪೂರ್ಣವಾಗಿ ವಿಭಿನ್ನ ಸಂದರ್ಭದೊಂದಿಗೆ ಹಂಚಿಕೊಳ್ಳಲಾಗಿದೆ.

ಮೇ 14 ರಂದು ಬಾಂಗ್ಲಾದೇಶದ ಸಿಲ್ಹೆಟ್‌ನ ರಾಜೇಶ್ ಸರ್ಕಾರ್ ಈ ವಿಡಿಯೋವನ್ನು ಹಂಚಿಕೊಂಡಿದ್ದು, ವ್ಯಕ್ತಿಯೊಬ್ಬ ತನ್ನ ತಂದೆಯನ್ನು ಕತ್ತು ಹಿಸುಕುತ್ತಿದ್ದಾನೆ ಎಂದು ಬರೆದಿದ್ದಾರೆ. ಅವರು ಹಂಚಿರುವ ವೀಡಿಯೊ slynewsbd.com ನ ಲೋಗೊವನ್ನು ಹೊಂದಿದೆ. ಅದೆ ವೀಡಿಯೊವನ್ನು ಅದೇ ರೀತಿಯ ನಿರೂಪಣೆಯೊಂದಿಗೆ ಔಟ್‌ಲೆಟ್‌ ಹಂಚಿಕೊಂಡಿತ್ತು.

ಇದನ್ನೂ ಓದಿ: ಗೌರಿ ಲಂಕೇಶ್‌ ನ್ಯಾಯಪಥ ಪತ್ರಿಕೆಯ ಚಂದಾದಾರರಾಗಲು ಇಲ್ಲಿ ಕ್ಲಿಕ್ಕಿಸಿ

ಮಗನೊಬ್ಬ ತನ್ನ ಅನಾರೋಗ್ಯ ಪೀಡಿತ ತಂದೆಯನ್ನು ಕತ್ತು ಹಿಸುಕುತ್ತಿದ್ದಾನೆ ಎಂಬ ಹೇಳಿಕೆಯೊಂದಿಗೆ ಈ ವೀಡಿಯೊ ಬಾಂಗ್ಲಾದೇಶದಲ್ಲಿ ವೈರಲ್ ಆಗಿದೆ. ಆದರೆ ದೇಶದ ಯೂಟ್ಯೂಬರ್ ಒಬ್ಬರು, ಮಗನೊಬ್ಬ ತನ್ನ ತಂದೆಗೆ ಬಲವಂತವಾಗಿ ಆಹಾರವನ್ನು ನೀಡಲು ಪ್ರಯತ್ನಿಸುತ್ತಿದ್ದಾನೆ ಎಂದು ಹೇಳುತ್ತಾರೆ.

ಈ ವೀಡಿಯೊವನ್ನು ಎಚ್ಚರಿಕೆಯಿಂದ ನೋಡಿದರೆ, ವಯಸ್ಸಾದ ವ್ಯಕ್ತಿಯ ಕೈಗಳು ಅವರ ಕುತ್ತಿಗೆಗೆ ಹೋಗುವುದೆ ಇಲ್ಲ. ಅವರು ತಮ್ಮ ಬಾಯಿಯನ್ನು ಮುಚ್ಚಲು ಪ್ರಯತ್ನಿಸುತ್ತಾ ಇದ್ದಾರೆ. ಅದಕ್ಕಾಗಿ ಅವರ ಮಗ ಅವರ ಕೈಗಳನ್ನು ತನ್ನ ಕೈಯಿಂದ ತಳ್ಳುತ್ತಾ ಇರುವುದನ್ನು ನೋಡಬಹುದಾಗಿದೆ.

ಈ ವೀಡಿಯೊ ಮೊದಲಿಗೆ ಬಾಂಗ್ಲಾದೇಶದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗಿತ್ತು ಮತ್ತು ಅದನ್ನು ಹಲವಾರು ಮಾಧ್ಯಮಗಳು ಕೂಡಾ ಸುಳ್ಳು ಪ್ರತಿಪಾದನೆಯೊಂದಿಗೆ ವರದಿ ಮಾಡಿದ್ದವು. ಈಗ ಅದು ಕೊರೊನಾ ಸಮಯದಲ್ಲಿ ಭಾರತದಲ್ಲಿ ವೈರಲ್ ಆಗಿದ್ದು, ಆಸ್ಪತ್ರೆಗಳು ರೋಗಿಗಳನ್ನು ಹಣಕ್ಕಾಗಿ ಕೊಲ್ಲುತ್ತಿದೆ ಎಂಬ ಸುಳ್ಳು ಪ್ರತಿಪಾದನೆಯೊಂದಗೆ ವೈರಲ್ ಆಗಿದೆ.

ಕೃಪೆ: Alt News

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...