Homeಫ್ಯಾಕ್ಟ್‌ಚೆಕ್ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

- Advertisement -
- Advertisement -

ಮಾಸ್ಕ್‌‌ ಧರಿಸಿರುವ ವ್ಯಕ್ತಿಯೊಬ್ಬ ರೋಗಿಯೊಬ್ಬರನ್ನು ಉಸಿರುಗಟ್ಟಿಸುವ ರೀತಿಯಲ್ಲಿ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊ ಜೊತೆಗೆ, ಕೊರೊನಾ ರೋಗಿಗಳನ್ನು ದುಡ್ಡಿಗಾಗಿ ಆಸ್ಪತ್ರೆಯ ಜನರು ಕೊಲ್ಲುತ್ತಿದ್ದಾರೆ ಎಂದು ಸಂದೇಶ ಕೂಡಾ ಹರಿದಾಡುತ್ತಿದೆ.

ಕೆಲವರು, ಕೊರೊನಾ ಸೋಗಿನಲ್ಲಿ ಭಾರಿ ಪಿತೂರಿ ನಡೆಯುತ್ತಿದೆ ಎಂದು ಪ್ರತಿಪಾದಿಸಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೊವನ್ನು ಹಲವಾರು ಜನರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್‌

ಈ ಬಗ್ಗೆ ಫ್ಯಾಕ್ಟ್‌ಚೆಕ್‌‌ ವೆಬ್‌ಸೈಟ್‌‌ ಆಲ್ಟ್‌ನ್ಯೂಸ್‌‌‌‌ ವಿಡಿಯೊವನ್ನು ಇಂಟರ್‌ನೆಟ್‌‌ನಲ್ಲಿ ಹುಡುಕಾಡಿದ್ದು, ಅದು ಮೇ 19, 2020 ರಂದು ಮಾಡಿದ್ದ ಟ್ವೀಟ್‌ ಒಂದರಲ್ಲಿ ಈ ವಿಡಿಯೊ ಬಗ್ಗೆಗಿನ ವರದಿ ಇರುವುದನ್ನು ಕಂಡುಕೊಂಡಿದೆ. ಈ ವರದಿಯನ್ನು ಬಾಂಗ್ಲಾದೇಶ ಮೂಲದ ಸೊಕಲರ್‌ಸೊಂಗ್‌ಬಾದ್.ಕಾಮ್ ಬರೆದಿತ್ತು. “ಇಬ್ಬರು ವ್ಯಕ್ತಿಗಳು ಜಗಳವಾಡಿದ್ದು, ಹಿರಿಯ ವ್ಯಕ್ತಿಯಾದ ಮನ್ಸೂರ್‌ ಮೊಲ್ಲಾ ಅವರನ್ನು ಏಪ್ರಿಲ್ 21, 2020 ರಂದು ಆಸ್ಪತ್ರೆಯ ಹಾಸಿಗೆಯಲ್ಲಿ ಕತ್ತು ಹಿಸುಕಲಾಗಿದೆ. ಅವರು ಮರುದಿನ ನಿಧನರಾದರು. ಈ ಘಟನೆ ಬಾಂಗ್ಲಾದೇಶದ ಬೋಲ್‌ಮರಿಯ ಫರೀದ್‌ಪುರದ ದಾದ್ಪುರದಲ್ಲಿ ನಡೆದಿದೆ” ಎಂದು ವರದಿ ಹೇಳಿದೆ.

ಆದಾಗ್ಯೂ, ಘಟನೆಯ ಆರಂಭಿಕ ವರದಿಗಳಲ್ಲಿ ವೀಡಿಯೊ ಬಗ್ಗೆ ಯಾವುದೇ ಉಲ್ಲೇಖವಿಲ್ಲ, ಜೊತೆಗೆ ಘಟನೆಯ ವಿವರಗಳಿಗೆ ವೀಡಿಯೊ ಹೊಂದಿಕೆಯಾಗುವುದಿಲ್ಲ.

ಏಪ್ರಿಲ್ 22 ರಂದು ಡಾಕಾಟೈಮ್ಸ್ 24.ಕಾಂನಲ್ಲಿ ಪ್ರಕಟವಾದ ವರದಿಯ ಪ್ರಕಾರ, “ಬೋಲ್ಮರಿ ಪೊಲೀಸ್ ಅಧಿಕಾರಿ (ಒಸಿ) ಅಮಿನೂರ್ ರಹಮಾನ್ ಹೇಳುವಂತೆ, ‘ದೋಲ್ಪುರ್ ಗ್ರಾಮದ ಫಜಲ್ ಖಾರ್ ಅವರ ಪುತ್ರ ಅಬುಬಕ್ಕರ್ ಎಂಬವರು ಮಂಗಳವಾರ [ಏಪ್ರಿಲ್ 21] ಸಂಜೆ ಕ್ರಿಕೆಟ್ ಆಡುತ್ತಿದ್ದಾಗ, ಸೊಲೈಮಾನ್ ಮೊಲ್ಲಾ ಅವರ ಪುತ್ರ ಕಿಬ್ರಿಯಾ ಮೊಲ್ಲಾ ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಕಾರಣದಿಂದಾಗಿ, ಫಜಲ್ ಖಾರ್‌ನ ಜನರು ರಾತ್ರಿ ವೇಳೆಯಲ್ಲಿ ಛೇಲಮಾನ್ ಮೊಹಲ್ಲಾ ಜನರ ಮೇಲೆ ದಾಳಿ ನಡೆಸಿದ್ದಾರೆ. ಆ ಸಮಯದಲ್ಲಿ ಈ ಗಲಾಟೆಯನ್ನು ನಿಲ್ಲಿಸಲು ಪ್ರಯತ್ನಿಸಿದ ಮನ್ಸೂರ್ ಮೊಲ್ಲಾ ಅವರಿಗೆ ತಲೆಗೆ ಹೊಡೆಯಲಾಗಿದೆ. ಅವರನ್ನು ಫರೀದ್ಪುರ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಂಜಾನೆ 1 ಗಂಟೆ ಸುಮಾರಿಗೆ ನಿಧನರಾದರು”

ಇದನ್ನೂ ಓದಿ: ಆಮ್ಲಜನಕ ಮಟ್ಟ ಹೆಚ್ಚಳಕ್ಕೆ ಕರ್ಪೂರ, ಲವಂಗ, ಅಜಿವಾನ ಮತ್ತು ನೀಲಗಿರಿ ಎಣ್ಣೆ ಬಳಸಬೇಡಿ, ಇದು ಮಾರಣಾಂತಿಕವೂ ಆಗಬಹುದು

ಏಪ್ರಿಲ್ 21 ರಂದು ಕೆಲವು ಯುವಕರ ನಡುವಿನ ಕ್ರಿಕೆಟ್ ಪಂದ್ಯವೊಂದರಲ್ಲಿ ನಡೆದ ಜಗಳದಲ್ಲಿ ಮನ್ಸೂರ್ ಮೊಲ್ಲಾ ಗಾಯಗೊಂಡಿದ್ದಾರೆ. ಏಪ್ರಿಲ್ 22 ರ ಮುಂಜಾನೆ ಅವರು ನಿಧನ ಹೊಂದಿದರು ಎಂದು ದಿ ಡೈಲಿ ಪ್ರೋಥಮ್ ಅಲೋದಲ್ಲಿ ಪ್ರಕಟವಾದ ಮತ್ತೊಂದು ವರದಿ ಹೇಳುತ್ತದೆ.

ಈ ಬಗ್ಗೆ ‘ভিডিও মনসুর মোল্লা’ (ವಿಡಿಯೋ ಮನ್ಸೂರ್ ಮೊಲ್ಲಾ) ಎಂಬ ಕೀವರ್ಡ್‌ಗಳೊಂದಿಗೆ ಫೇಸ್‌ಬುಕ್‌ನಲ್ಲಿ ಹುಡುಕಾಡಿದಾಗ ಬಾಂಗ್ಲಾದೇಶದ ಡಾಕಾ ನಿವಾಸಿ ಹಸನ್ ಮೊಲ್ಲಾ ಎಂಬವರ ಫೇಸ್‌ಬುಕ್ ಸ್ಟೇಟಸ್ ಒಂದು ಕಂಡು ಬಂದಿದೆ. ಅದರಲ್ಲಿ ಮನ್ಸೂರ್ ಮೊಲ್ಲಾಗೆ ಸಂಬಂಧಿಸಿದ ಘಟನೆಯ ವೀಡಿಯೊವನ್ನು ತಪ್ಪಾಗಿ ನಿರೂಪಿಸಲಾಗುತ್ತಿದೆ ಎಂದು ಅವರು ಮೇ 18 ರಂದು ಬರೆದಿದ್ದಾರೆ.

ವೈರಲ್ ವಿಡಿಯೊದಲ್ಲಿ ಇರುವ ವ್ಯಕ್ತಿಗೂ, ಮನ್ಸೂರ್‌‌ ಮೊಲ್ಲಾ ಅವರಿಗೂ ಸಂಬಂಧವಿಲ್ಲ ಎಂದು ಮನ್ಸೂರ್‌ ಮೊಲ್ಲರಿಗೆ ಆಗಿರುವ ಗಾಯಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಮನ್ಸೂರ್‌ ಮೊಲ್ಲಾ ದಪ್ಪ ಗಡ್ಡವನ್ನು ಹೊಂದಿದ್ದು ಅದು ಅವನ ಕುತ್ತಿಗೆ ಪೂರ್ತಿ ಆವರಿಸಿದೆ. ಆದರೆ ವೀಡಿಯೊದಲ್ಲಿರುವ ವ್ಯಕ್ತಿಗೆ ಗಡ್ಡವಿಲ್ಲ ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಹಸನ್ ಮೊಲ್ಲಾ ಅವರ ಫೇಸ್‌ಬುಕ್‌ ಪೋಸ್ಟ್ ಬಗ್ಗೆ ಹಲವಾರು ಜನರು ಕಮೆಂಟ್ ಮಾಡಿದ್ದು, ಹಲವು ಲಿಂಕ್‌ಗಳನ್ನು ಹಂಚಿಕೊಂಡಿದ್ದಾರೆ. ಅಲ್ಲಿ ವೀಡಿಯೊವನ್ನು ಸಂಪೂರ್ಣವಾಗಿ ವಿಭಿನ್ನ ಸಂದರ್ಭದೊಂದಿಗೆ ಹಂಚಿಕೊಳ್ಳಲಾಗಿದೆ.

ಮೇ 14 ರಂದು ಬಾಂಗ್ಲಾದೇಶದ ಸಿಲ್ಹೆಟ್‌ನ ರಾಜೇಶ್ ಸರ್ಕಾರ್ ಈ ವಿಡಿಯೋವನ್ನು ಹಂಚಿಕೊಂಡಿದ್ದು, ವ್ಯಕ್ತಿಯೊಬ್ಬ ತನ್ನ ತಂದೆಯನ್ನು ಕತ್ತು ಹಿಸುಕುತ್ತಿದ್ದಾನೆ ಎಂದು ಬರೆದಿದ್ದಾರೆ. ಅವರು ಹಂಚಿರುವ ವೀಡಿಯೊ slynewsbd.com ನ ಲೋಗೊವನ್ನು ಹೊಂದಿದೆ. ಅದೆ ವೀಡಿಯೊವನ್ನು ಅದೇ ರೀತಿಯ ನಿರೂಪಣೆಯೊಂದಿಗೆ ಔಟ್‌ಲೆಟ್‌ ಹಂಚಿಕೊಂಡಿತ್ತು.

ಇದನ್ನೂ ಓದಿ: ಗೌರಿ ಲಂಕೇಶ್‌ ನ್ಯಾಯಪಥ ಪತ್ರಿಕೆಯ ಚಂದಾದಾರರಾಗಲು ಇಲ್ಲಿ ಕ್ಲಿಕ್ಕಿಸಿ

ಮಗನೊಬ್ಬ ತನ್ನ ಅನಾರೋಗ್ಯ ಪೀಡಿತ ತಂದೆಯನ್ನು ಕತ್ತು ಹಿಸುಕುತ್ತಿದ್ದಾನೆ ಎಂಬ ಹೇಳಿಕೆಯೊಂದಿಗೆ ಈ ವೀಡಿಯೊ ಬಾಂಗ್ಲಾದೇಶದಲ್ಲಿ ವೈರಲ್ ಆಗಿದೆ. ಆದರೆ ದೇಶದ ಯೂಟ್ಯೂಬರ್ ಒಬ್ಬರು, ಮಗನೊಬ್ಬ ತನ್ನ ತಂದೆಗೆ ಬಲವಂತವಾಗಿ ಆಹಾರವನ್ನು ನೀಡಲು ಪ್ರಯತ್ನಿಸುತ್ತಿದ್ದಾನೆ ಎಂದು ಹೇಳುತ್ತಾರೆ.

ಈ ವೀಡಿಯೊವನ್ನು ಎಚ್ಚರಿಕೆಯಿಂದ ನೋಡಿದರೆ, ವಯಸ್ಸಾದ ವ್ಯಕ್ತಿಯ ಕೈಗಳು ಅವರ ಕುತ್ತಿಗೆಗೆ ಹೋಗುವುದೆ ಇಲ್ಲ. ಅವರು ತಮ್ಮ ಬಾಯಿಯನ್ನು ಮುಚ್ಚಲು ಪ್ರಯತ್ನಿಸುತ್ತಾ ಇದ್ದಾರೆ. ಅದಕ್ಕಾಗಿ ಅವರ ಮಗ ಅವರ ಕೈಗಳನ್ನು ತನ್ನ ಕೈಯಿಂದ ತಳ್ಳುತ್ತಾ ಇರುವುದನ್ನು ನೋಡಬಹುದಾಗಿದೆ.

ಈ ವೀಡಿಯೊ ಮೊದಲಿಗೆ ಬಾಂಗ್ಲಾದೇಶದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗಿತ್ತು ಮತ್ತು ಅದನ್ನು ಹಲವಾರು ಮಾಧ್ಯಮಗಳು ಕೂಡಾ ಸುಳ್ಳು ಪ್ರತಿಪಾದನೆಯೊಂದಿಗೆ ವರದಿ ಮಾಡಿದ್ದವು. ಈಗ ಅದು ಕೊರೊನಾ ಸಮಯದಲ್ಲಿ ಭಾರತದಲ್ಲಿ ವೈರಲ್ ಆಗಿದ್ದು, ಆಸ್ಪತ್ರೆಗಳು ರೋಗಿಗಳನ್ನು ಹಣಕ್ಕಾಗಿ ಕೊಲ್ಲುತ್ತಿದೆ ಎಂಬ ಸುಳ್ಳು ಪ್ರತಿಪಾದನೆಯೊಂದಗೆ ವೈರಲ್ ಆಗಿದೆ.

ಕೃಪೆ: Alt News

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...