Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್ - ನಟ ಅಮಿತಾಬ್‌ ಬಚ್ಚನ್ ಹಂಚಿರುವ ಗಣೇಶ ಹಬ್ಬದ ಈ ವಿಡಿಯೊ 5 ವರ್ಷ...

ಫ್ಯಾಕ್ಟ್‌‌ಚೆಕ್ – ನಟ ಅಮಿತಾಬ್‌ ಬಚ್ಚನ್ ಹಂಚಿರುವ ಗಣೇಶ ಹಬ್ಬದ ಈ ವಿಡಿಯೊ 5 ವರ್ಷ ಹಳೆಯದು!

- Advertisement -
- Advertisement -

ನಟ ಅಮಿತಾಬ್ ಬಚ್ಚನ್ ಅವರು ಸೆಪ್ಟೆಂಬರ್ 8, 2021 ರಂದು ಮುಂಬೈನ ಲಾಲ್‌ಬಾಗ್‌ನಲ್ಲಿ ಈ ವರ್ಷದ ಗಣೇಶ ಮೂರ್ತಿಯ ಮೊದಲ ದರ್ಶನ ಎಂದು ವಿಡಿಯೊವೊಂದನ್ನು ಟ್ವೀಟ್‌ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಗಣೇಶ ಹಬ್ಬವನ್ನು ಬಹಳ ಸಂಭ್ರಮದಿಂದ ಪೂಜಿಸಲಾಗುತ್ತದೆ. ಅದರಲ್ಲೂ ಮುಂಬೈನ ಲಾಲ್‌ಬಾಗ್‌ನಲ್ಲಿರುವ ಗಣಪತಿ ಪೂಜೆಯ ಚಪ್ಪರ ಅತಿದೊಡ್ಡದು ಮತ್ತು ಅತ್ಯಂತ ಜನಪ್ರಿಯವಾಗಿದೆ. ಅಲ್ಲಿ ಕೂರಿಸುವ ಗಣಪತಿಯ ಮೂರ್ತಿಯನ್ನು ‘ಲಾಲ್‌ಬೌಚ ರಾಜಾ’ ಎಂದು ಎಂದು ಕರೆಯುತ್ತಾರೆ. ಅಲ್ಲಿ ಈ ವರ್ಷದ ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 10 ರಂದು ಆಚರಿಸಲಾಯಿತು.

ಅಮಿತಾಬ್ ಬಚ್ಚನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅದೇ ವಿಡಿಯೊವನ್ನು ಫೇಸ್‌ಬುಕ್‌ನಲ್ಲೂ ಹಂಚಿಕೊಂಡಿದ್ದಾರೆ.

ಅಮಿತಾಬ್ ಅವರು ಟ್ವೀಟ್ ಮಾಡಿರುವ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದಿದ್ದು, ಫೇಸ್‌ಬುಕ್‌ನಲ್ಲಿ ಅವರ ಪೋಸ್ಟ್ 4,500 ಕ್ಕೂ ಹೆಚ್ಚು ಶೇರ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಅಮಿತಾಬ್ ಅವರು ಟ್ವೀಟ್ ಮಾಡಿದ ನಂತರ ಹಲವಾರು ಜನರು ಈ ವಿಡಿಯೊ ಈ ವರ್ಷದ್ದು ಎಂದು ಹಂಚಿಕೊಂಡಿದ್ದಾರೆ. ಕೊರೊನಾ ಪ್ರಯುಕ್ತ ದೊಡ್ಡ ಕೂಟಗಳನ್ನು ನಿಷೇಧಿಸಿದರೂ ಸಹ ಸಾವಿರಾರು ಜನರು ಸೇರಿರುವುದು ವಿಡಿಯದಲ್ಲಿ ಕಾಣುತ್ತಿರುವುದರಿಂದ ಇದು ವಿವಾದವನ್ನೂ ಉಂಟು ಮಾಡಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದಲ್ಲಿ ಕಂಡುಬರುವಂತೆ ಜನಸಮೂಹವು ಯಾವುದೆ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿರುವಂತೆ ಕಾಣುತ್ತಿಲ್ಲ. ಮಹಾರಾಷ್ಟ್ರದಲ್ಲಿ ಪ್ರಾರ್ಥನಾ ಸ್ಥಳಗಳನ್ನು ತೆರೆಯಲು ಅನುಮತಿ ನೀಡುವಂತೆ ಮಹಾರಾಷ್ಟ್ರದ ಪ್ರತಿಪಕ್ಷವಾದ ಬಿಜೆಪಿ ಸರ್ಕಾರಕ್ಕೆ ಆಗ್ರಹಿಸಿತ್ತು. ಈ ಬಗ್ಗೆ ಆಡಳಿತ ಮತ್ತು ವಿಪಕ್ಷಗಳ ನಡುವೆ ವಿವಾದಗಳೂ ಉಂಟಾಗಿತ್ತು. ಹೀಗಾಗಿ, ವಿಡಿಯೊದಲ್ಲಿನ ಕಾಣುತ್ತಿರುವ ಜನರು ಮಾಸ್ಕ್‌ ಕೂಡಾ ಧರಿಸದೆ ಅಲ್ಲಿ ಭಾಗವಹಿಸಿದ್ದು ವಿವಾದವಾಗಿತ್ತು.

ಈ ಬಗ್ಗೆ ಆಲ್ಟ್ ನ್ಯೂಸ್ ವಿಡಿಯೋವನ್ನು ಫ್ಯಾಕ್ಟ್‌ಚೆಕ್ ನಡೆಸಲು ಅದನ್ನು ರಿವರ್ಸ್ ಇಮೇಜ್‌ ಸರ್ಚ್‌ ಮೂಲಕ ಹುಡುಕಾಡಿದೆ. ಈ ಹುಡುಕಾಟದಲ್ಲಿ ಪ್ರಸ್ತುತ ವಿಡಿಯೊ ಈ ವರ್ಷದ್ದಲ್ಲ ಎಂದು ಆಲ್ಟ್‌ನ್ಯೂಸ್‌ ಕಂಡು ಹಿಡಿದಿದೆ. ಅಮಿತಾಬ್ ಅವರು ಹಂಚಿಕೊಂಡಿರುವ ವಿಡಿಯೊ 2016 ರ ಸೆಪ್ಟೆಂಬರ್‌ನದ್ದು ಎಂದು ಆಲ್ಟ್‌ ನ್ಯೂಸ್ ಕಂಡುಕೊಂಡಿದೆ. 2016 ರ ಸೆಪ್ಟೆಂಬರ್ 5 ರಂದು ಗಣೇಶ ಚತುರ್ಥಿಯನ್ನು ಆಚರಿಸಲಾಗಿತ್ತು.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊವನ್ನು 2016 ರ ಸೆಪ್ಟೆಂಬರ್ 2 ರಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

 

ಸುದ್ದಿ ಸಂಸ್ಥೆ ಎಎನ್ಐ ಕೂಡಾ ಇದೇ ಘಟನೆಯನ್ನು ಬೇರೆ ಬೇರೆ ಕೋನದಿಂದ ಚಿತ್ರೀಕರಿಸಿದ ವಿಡಿಯೊವನ್ನು 2016 ರ ಸೆಪ್ಟೆಂಬರ್‌ 1 ರಂದು ಟ್ವಿಟರ್‌ಗೆ ಅಪ್ಲೋಡ್ ಮಾಡಿತ್ತು.

ಕೊರೊನಾ ನಿರ್ಬಂಧಗಳ ಹಿನ್ನಲೆಯಲ್ಲಿ ಈ ವರ್ಷವು ಮಹಾರಾಷ್ಟ್ರ ಸರ್ಕಾರವು ಲಾಲ್‌ಬಾಗ್‌ಗೆ ಯಾವುದೇ ಭಕ್ತರಿಗೆ ದೈಹಿಕ ಭೇಟಿಗೆ ಅನುಮತಿ ನೀಡಿರಲಿಲ್ಲ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ‘ಲಾಲ್‌ಬೌಚಾ ರಾಜ’ ಸರ್ವಜನಿಕ ಗಣೇಶೋತ್ಸವ ಮಂಡಳಿಯು ವಿಗ್ರಹದ ಆನ್‌ಲೈನ್ ದರ್ಶನವನ್ನು ಸೆಪ್ಟೆಂಬರ್ 10 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಆರಂಭಿಸಿತ್ತು.

ವರದಿಯಲ್ಲಿ, ಈ ವರ್ಷದ ಮೂರ್ತಿಯ ಚಿತ್ರವನ್ನೂ ನೀಡಲಾಗಿತ್ತು. ಸಾಮಾನ್ಯವಾಗಿ ಪ್ರತಿಷ್ಟಾಪಿಸುವ 14 ಅಡಿಗಳ ಮೂರ್ತಿಯ ಬದಲಾಗಿ, 4 ಅಡಿ ವಿಗ್ರಹವನ್ನು ಅಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಅಲ್ಲದೆ ಅಮಿತಾಬ್ ಬಚ್ಚನ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಕಾಣುವ ವಿಗ್ರಹಕ್ಕಿಂತ ಈ ವಿಗ್ರಹವು ವಿಭಿನ್ನವಾಗಿ ಕಾಣುತ್ತದೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಅಮಿತಾಬ್ ಬಚ್ಚನ್ ಅವರ ಟ್ವೀಟ್‌ ಸಂಖ್ಯೆ ‘T 4023’ ಮತ್ತು ‘FB 3053’ ಸಂಖ್ಯೆಯ ಫೇಸ್‌ಬುಕ್ ಪೋಸ್ಟ್ ಮೂಲಕ ಹಂಚಿಕೊಂಡಿರುವ ವಿಡಿಯೊ ಈ ವರ್ಷದ ಲಾಲ್‌ಬಾಗ್‌ನಲ್ಲಿ ಪ್ರತಿಷ್ಠಾಪಿಸಿರುವ ಗಣೇಶನ ಮೂರ್ತಿಯಲ್ಲ. ಅದನ್ನು ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ವಾಸ್ತವದಲ್ಲಿ ಈ ವಿಡಿಯೊ ತುಣುಕು ಐದು ವರ್ಷಗಳ ಹಿಂದಿನ ಗಣೇಶ ಚತುರ್ಥಿಯ ಆಚರಣೆಯದ್ದಾಗಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ರೋಹಿಂಗ್ಯಾ ನಿರಾಶ್ರಿತರಿಗೆ ದೆಹಲಿ ಸರ್ಕಾರ ಸೌಲಭ್ಯಗಳನ್ನು ಒದಗಿಸಿದೆ ಎಂದು ಸುಳ್ಳು ಸುದ್ದಿ ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...