Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್ - ನಟ ಅಮಿತಾಬ್‌ ಬಚ್ಚನ್ ಹಂಚಿರುವ ಗಣೇಶ ಹಬ್ಬದ ಈ ವಿಡಿಯೊ 5 ವರ್ಷ...

ಫ್ಯಾಕ್ಟ್‌‌ಚೆಕ್ – ನಟ ಅಮಿತಾಬ್‌ ಬಚ್ಚನ್ ಹಂಚಿರುವ ಗಣೇಶ ಹಬ್ಬದ ಈ ವಿಡಿಯೊ 5 ವರ್ಷ ಹಳೆಯದು!

- Advertisement -
- Advertisement -

ನಟ ಅಮಿತಾಬ್ ಬಚ್ಚನ್ ಅವರು ಸೆಪ್ಟೆಂಬರ್ 8, 2021 ರಂದು ಮುಂಬೈನ ಲಾಲ್‌ಬಾಗ್‌ನಲ್ಲಿ ಈ ವರ್ಷದ ಗಣೇಶ ಮೂರ್ತಿಯ ಮೊದಲ ದರ್ಶನ ಎಂದು ವಿಡಿಯೊವೊಂದನ್ನು ಟ್ವೀಟ್‌ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಗಣೇಶ ಹಬ್ಬವನ್ನು ಬಹಳ ಸಂಭ್ರಮದಿಂದ ಪೂಜಿಸಲಾಗುತ್ತದೆ. ಅದರಲ್ಲೂ ಮುಂಬೈನ ಲಾಲ್‌ಬಾಗ್‌ನಲ್ಲಿರುವ ಗಣಪತಿ ಪೂಜೆಯ ಚಪ್ಪರ ಅತಿದೊಡ್ಡದು ಮತ್ತು ಅತ್ಯಂತ ಜನಪ್ರಿಯವಾಗಿದೆ. ಅಲ್ಲಿ ಕೂರಿಸುವ ಗಣಪತಿಯ ಮೂರ್ತಿಯನ್ನು ‘ಲಾಲ್‌ಬೌಚ ರಾಜಾ’ ಎಂದು ಎಂದು ಕರೆಯುತ್ತಾರೆ. ಅಲ್ಲಿ ಈ ವರ್ಷದ ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 10 ರಂದು ಆಚರಿಸಲಾಯಿತು.

ಅಮಿತಾಬ್ ಬಚ್ಚನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅದೇ ವಿಡಿಯೊವನ್ನು ಫೇಸ್‌ಬುಕ್‌ನಲ್ಲೂ ಹಂಚಿಕೊಂಡಿದ್ದಾರೆ.

ಅಮಿತಾಬ್ ಅವರು ಟ್ವೀಟ್ ಮಾಡಿರುವ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದಿದ್ದು, ಫೇಸ್‌ಬುಕ್‌ನಲ್ಲಿ ಅವರ ಪೋಸ್ಟ್ 4,500 ಕ್ಕೂ ಹೆಚ್ಚು ಶೇರ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಅಮಿತಾಬ್ ಅವರು ಟ್ವೀಟ್ ಮಾಡಿದ ನಂತರ ಹಲವಾರು ಜನರು ಈ ವಿಡಿಯೊ ಈ ವರ್ಷದ್ದು ಎಂದು ಹಂಚಿಕೊಂಡಿದ್ದಾರೆ. ಕೊರೊನಾ ಪ್ರಯುಕ್ತ ದೊಡ್ಡ ಕೂಟಗಳನ್ನು ನಿಷೇಧಿಸಿದರೂ ಸಹ ಸಾವಿರಾರು ಜನರು ಸೇರಿರುವುದು ವಿಡಿಯದಲ್ಲಿ ಕಾಣುತ್ತಿರುವುದರಿಂದ ಇದು ವಿವಾದವನ್ನೂ ಉಂಟು ಮಾಡಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದಲ್ಲಿ ಕಂಡುಬರುವಂತೆ ಜನಸಮೂಹವು ಯಾವುದೆ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿರುವಂತೆ ಕಾಣುತ್ತಿಲ್ಲ. ಮಹಾರಾಷ್ಟ್ರದಲ್ಲಿ ಪ್ರಾರ್ಥನಾ ಸ್ಥಳಗಳನ್ನು ತೆರೆಯಲು ಅನುಮತಿ ನೀಡುವಂತೆ ಮಹಾರಾಷ್ಟ್ರದ ಪ್ರತಿಪಕ್ಷವಾದ ಬಿಜೆಪಿ ಸರ್ಕಾರಕ್ಕೆ ಆಗ್ರಹಿಸಿತ್ತು. ಈ ಬಗ್ಗೆ ಆಡಳಿತ ಮತ್ತು ವಿಪಕ್ಷಗಳ ನಡುವೆ ವಿವಾದಗಳೂ ಉಂಟಾಗಿತ್ತು. ಹೀಗಾಗಿ, ವಿಡಿಯೊದಲ್ಲಿನ ಕಾಣುತ್ತಿರುವ ಜನರು ಮಾಸ್ಕ್‌ ಕೂಡಾ ಧರಿಸದೆ ಅಲ್ಲಿ ಭಾಗವಹಿಸಿದ್ದು ವಿವಾದವಾಗಿತ್ತು.

ಈ ಬಗ್ಗೆ ಆಲ್ಟ್ ನ್ಯೂಸ್ ವಿಡಿಯೋವನ್ನು ಫ್ಯಾಕ್ಟ್‌ಚೆಕ್ ನಡೆಸಲು ಅದನ್ನು ರಿವರ್ಸ್ ಇಮೇಜ್‌ ಸರ್ಚ್‌ ಮೂಲಕ ಹುಡುಕಾಡಿದೆ. ಈ ಹುಡುಕಾಟದಲ್ಲಿ ಪ್ರಸ್ತುತ ವಿಡಿಯೊ ಈ ವರ್ಷದ್ದಲ್ಲ ಎಂದು ಆಲ್ಟ್‌ನ್ಯೂಸ್‌ ಕಂಡು ಹಿಡಿದಿದೆ. ಅಮಿತಾಬ್ ಅವರು ಹಂಚಿಕೊಂಡಿರುವ ವಿಡಿಯೊ 2016 ರ ಸೆಪ್ಟೆಂಬರ್‌ನದ್ದು ಎಂದು ಆಲ್ಟ್‌ ನ್ಯೂಸ್ ಕಂಡುಕೊಂಡಿದೆ. 2016 ರ ಸೆಪ್ಟೆಂಬರ್ 5 ರಂದು ಗಣೇಶ ಚತುರ್ಥಿಯನ್ನು ಆಚರಿಸಲಾಗಿತ್ತು.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊವನ್ನು 2016 ರ ಸೆಪ್ಟೆಂಬರ್ 2 ರಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

 

ಸುದ್ದಿ ಸಂಸ್ಥೆ ಎಎನ್ಐ ಕೂಡಾ ಇದೇ ಘಟನೆಯನ್ನು ಬೇರೆ ಬೇರೆ ಕೋನದಿಂದ ಚಿತ್ರೀಕರಿಸಿದ ವಿಡಿಯೊವನ್ನು 2016 ರ ಸೆಪ್ಟೆಂಬರ್‌ 1 ರಂದು ಟ್ವಿಟರ್‌ಗೆ ಅಪ್ಲೋಡ್ ಮಾಡಿತ್ತು.

ಕೊರೊನಾ ನಿರ್ಬಂಧಗಳ ಹಿನ್ನಲೆಯಲ್ಲಿ ಈ ವರ್ಷವು ಮಹಾರಾಷ್ಟ್ರ ಸರ್ಕಾರವು ಲಾಲ್‌ಬಾಗ್‌ಗೆ ಯಾವುದೇ ಭಕ್ತರಿಗೆ ದೈಹಿಕ ಭೇಟಿಗೆ ಅನುಮತಿ ನೀಡಿರಲಿಲ್ಲ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ‘ಲಾಲ್‌ಬೌಚಾ ರಾಜ’ ಸರ್ವಜನಿಕ ಗಣೇಶೋತ್ಸವ ಮಂಡಳಿಯು ವಿಗ್ರಹದ ಆನ್‌ಲೈನ್ ದರ್ಶನವನ್ನು ಸೆಪ್ಟೆಂಬರ್ 10 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಆರಂಭಿಸಿತ್ತು.

ವರದಿಯಲ್ಲಿ, ಈ ವರ್ಷದ ಮೂರ್ತಿಯ ಚಿತ್ರವನ್ನೂ ನೀಡಲಾಗಿತ್ತು. ಸಾಮಾನ್ಯವಾಗಿ ಪ್ರತಿಷ್ಟಾಪಿಸುವ 14 ಅಡಿಗಳ ಮೂರ್ತಿಯ ಬದಲಾಗಿ, 4 ಅಡಿ ವಿಗ್ರಹವನ್ನು ಅಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಅಲ್ಲದೆ ಅಮಿತಾಬ್ ಬಚ್ಚನ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಕಾಣುವ ವಿಗ್ರಹಕ್ಕಿಂತ ಈ ವಿಗ್ರಹವು ವಿಭಿನ್ನವಾಗಿ ಕಾಣುತ್ತದೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಅಮಿತಾಬ್ ಬಚ್ಚನ್ ಅವರ ಟ್ವೀಟ್‌ ಸಂಖ್ಯೆ ‘T 4023’ ಮತ್ತು ‘FB 3053’ ಸಂಖ್ಯೆಯ ಫೇಸ್‌ಬುಕ್ ಪೋಸ್ಟ್ ಮೂಲಕ ಹಂಚಿಕೊಂಡಿರುವ ವಿಡಿಯೊ ಈ ವರ್ಷದ ಲಾಲ್‌ಬಾಗ್‌ನಲ್ಲಿ ಪ್ರತಿಷ್ಠಾಪಿಸಿರುವ ಗಣೇಶನ ಮೂರ್ತಿಯಲ್ಲ. ಅದನ್ನು ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ವಾಸ್ತವದಲ್ಲಿ ಈ ವಿಡಿಯೊ ತುಣುಕು ಐದು ವರ್ಷಗಳ ಹಿಂದಿನ ಗಣೇಶ ಚತುರ್ಥಿಯ ಆಚರಣೆಯದ್ದಾಗಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ರೋಹಿಂಗ್ಯಾ ನಿರಾಶ್ರಿತರಿಗೆ ದೆಹಲಿ ಸರ್ಕಾರ ಸೌಲಭ್ಯಗಳನ್ನು ಒದಗಿಸಿದೆ ಎಂದು ಸುಳ್ಳು ಸುದ್ದಿ ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...