Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್ - ನಟ ಅಮಿತಾಬ್‌ ಬಚ್ಚನ್ ಹಂಚಿರುವ ಗಣೇಶ ಹಬ್ಬದ ಈ ವಿಡಿಯೊ 5 ವರ್ಷ...

ಫ್ಯಾಕ್ಟ್‌‌ಚೆಕ್ – ನಟ ಅಮಿತಾಬ್‌ ಬಚ್ಚನ್ ಹಂಚಿರುವ ಗಣೇಶ ಹಬ್ಬದ ಈ ವಿಡಿಯೊ 5 ವರ್ಷ ಹಳೆಯದು!

- Advertisement -
- Advertisement -

ನಟ ಅಮಿತಾಬ್ ಬಚ್ಚನ್ ಅವರು ಸೆಪ್ಟೆಂಬರ್ 8, 2021 ರಂದು ಮುಂಬೈನ ಲಾಲ್‌ಬಾಗ್‌ನಲ್ಲಿ ಈ ವರ್ಷದ ಗಣೇಶ ಮೂರ್ತಿಯ ಮೊದಲ ದರ್ಶನ ಎಂದು ವಿಡಿಯೊವೊಂದನ್ನು ಟ್ವೀಟ್‌ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಗಣೇಶ ಹಬ್ಬವನ್ನು ಬಹಳ ಸಂಭ್ರಮದಿಂದ ಪೂಜಿಸಲಾಗುತ್ತದೆ. ಅದರಲ್ಲೂ ಮುಂಬೈನ ಲಾಲ್‌ಬಾಗ್‌ನಲ್ಲಿರುವ ಗಣಪತಿ ಪೂಜೆಯ ಚಪ್ಪರ ಅತಿದೊಡ್ಡದು ಮತ್ತು ಅತ್ಯಂತ ಜನಪ್ರಿಯವಾಗಿದೆ. ಅಲ್ಲಿ ಕೂರಿಸುವ ಗಣಪತಿಯ ಮೂರ್ತಿಯನ್ನು ‘ಲಾಲ್‌ಬೌಚ ರಾಜಾ’ ಎಂದು ಎಂದು ಕರೆಯುತ್ತಾರೆ. ಅಲ್ಲಿ ಈ ವರ್ಷದ ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 10 ರಂದು ಆಚರಿಸಲಾಯಿತು.

ಅಮಿತಾಬ್ ಬಚ್ಚನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅದೇ ವಿಡಿಯೊವನ್ನು ಫೇಸ್‌ಬುಕ್‌ನಲ್ಲೂ ಹಂಚಿಕೊಂಡಿದ್ದಾರೆ.

ಅಮಿತಾಬ್ ಅವರು ಟ್ವೀಟ್ ಮಾಡಿರುವ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದಿದ್ದು, ಫೇಸ್‌ಬುಕ್‌ನಲ್ಲಿ ಅವರ ಪೋಸ್ಟ್ 4,500 ಕ್ಕೂ ಹೆಚ್ಚು ಶೇರ್ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಅಮಿತಾಬ್ ಅವರು ಟ್ವೀಟ್ ಮಾಡಿದ ನಂತರ ಹಲವಾರು ಜನರು ಈ ವಿಡಿಯೊ ಈ ವರ್ಷದ್ದು ಎಂದು ಹಂಚಿಕೊಂಡಿದ್ದಾರೆ. ಕೊರೊನಾ ಪ್ರಯುಕ್ತ ದೊಡ್ಡ ಕೂಟಗಳನ್ನು ನಿಷೇಧಿಸಿದರೂ ಸಹ ಸಾವಿರಾರು ಜನರು ಸೇರಿರುವುದು ವಿಡಿಯದಲ್ಲಿ ಕಾಣುತ್ತಿರುವುದರಿಂದ ಇದು ವಿವಾದವನ್ನೂ ಉಂಟು ಮಾಡಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದಲ್ಲಿ ಕಂಡುಬರುವಂತೆ ಜನಸಮೂಹವು ಯಾವುದೆ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿರುವಂತೆ ಕಾಣುತ್ತಿಲ್ಲ. ಮಹಾರಾಷ್ಟ್ರದಲ್ಲಿ ಪ್ರಾರ್ಥನಾ ಸ್ಥಳಗಳನ್ನು ತೆರೆಯಲು ಅನುಮತಿ ನೀಡುವಂತೆ ಮಹಾರಾಷ್ಟ್ರದ ಪ್ರತಿಪಕ್ಷವಾದ ಬಿಜೆಪಿ ಸರ್ಕಾರಕ್ಕೆ ಆಗ್ರಹಿಸಿತ್ತು. ಈ ಬಗ್ಗೆ ಆಡಳಿತ ಮತ್ತು ವಿಪಕ್ಷಗಳ ನಡುವೆ ವಿವಾದಗಳೂ ಉಂಟಾಗಿತ್ತು. ಹೀಗಾಗಿ, ವಿಡಿಯೊದಲ್ಲಿನ ಕಾಣುತ್ತಿರುವ ಜನರು ಮಾಸ್ಕ್‌ ಕೂಡಾ ಧರಿಸದೆ ಅಲ್ಲಿ ಭಾಗವಹಿಸಿದ್ದು ವಿವಾದವಾಗಿತ್ತು.

ಈ ಬಗ್ಗೆ ಆಲ್ಟ್ ನ್ಯೂಸ್ ವಿಡಿಯೋವನ್ನು ಫ್ಯಾಕ್ಟ್‌ಚೆಕ್ ನಡೆಸಲು ಅದನ್ನು ರಿವರ್ಸ್ ಇಮೇಜ್‌ ಸರ್ಚ್‌ ಮೂಲಕ ಹುಡುಕಾಡಿದೆ. ಈ ಹುಡುಕಾಟದಲ್ಲಿ ಪ್ರಸ್ತುತ ವಿಡಿಯೊ ಈ ವರ್ಷದ್ದಲ್ಲ ಎಂದು ಆಲ್ಟ್‌ನ್ಯೂಸ್‌ ಕಂಡು ಹಿಡಿದಿದೆ. ಅಮಿತಾಬ್ ಅವರು ಹಂಚಿಕೊಂಡಿರುವ ವಿಡಿಯೊ 2016 ರ ಸೆಪ್ಟೆಂಬರ್‌ನದ್ದು ಎಂದು ಆಲ್ಟ್‌ ನ್ಯೂಸ್ ಕಂಡುಕೊಂಡಿದೆ. 2016 ರ ಸೆಪ್ಟೆಂಬರ್ 5 ರಂದು ಗಣೇಶ ಚತುರ್ಥಿಯನ್ನು ಆಚರಿಸಲಾಗಿತ್ತು.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊವನ್ನು 2016 ರ ಸೆಪ್ಟೆಂಬರ್ 2 ರಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

 

ಸುದ್ದಿ ಸಂಸ್ಥೆ ಎಎನ್ಐ ಕೂಡಾ ಇದೇ ಘಟನೆಯನ್ನು ಬೇರೆ ಬೇರೆ ಕೋನದಿಂದ ಚಿತ್ರೀಕರಿಸಿದ ವಿಡಿಯೊವನ್ನು 2016 ರ ಸೆಪ್ಟೆಂಬರ್‌ 1 ರಂದು ಟ್ವಿಟರ್‌ಗೆ ಅಪ್ಲೋಡ್ ಮಾಡಿತ್ತು.

ಕೊರೊನಾ ನಿರ್ಬಂಧಗಳ ಹಿನ್ನಲೆಯಲ್ಲಿ ಈ ವರ್ಷವು ಮಹಾರಾಷ್ಟ್ರ ಸರ್ಕಾರವು ಲಾಲ್‌ಬಾಗ್‌ಗೆ ಯಾವುದೇ ಭಕ್ತರಿಗೆ ದೈಹಿಕ ಭೇಟಿಗೆ ಅನುಮತಿ ನೀಡಿರಲಿಲ್ಲ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ‘ಲಾಲ್‌ಬೌಚಾ ರಾಜ’ ಸರ್ವಜನಿಕ ಗಣೇಶೋತ್ಸವ ಮಂಡಳಿಯು ವಿಗ್ರಹದ ಆನ್‌ಲೈನ್ ದರ್ಶನವನ್ನು ಸೆಪ್ಟೆಂಬರ್ 10 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಆರಂಭಿಸಿತ್ತು.

ವರದಿಯಲ್ಲಿ, ಈ ವರ್ಷದ ಮೂರ್ತಿಯ ಚಿತ್ರವನ್ನೂ ನೀಡಲಾಗಿತ್ತು. ಸಾಮಾನ್ಯವಾಗಿ ಪ್ರತಿಷ್ಟಾಪಿಸುವ 14 ಅಡಿಗಳ ಮೂರ್ತಿಯ ಬದಲಾಗಿ, 4 ಅಡಿ ವಿಗ್ರಹವನ್ನು ಅಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಅಲ್ಲದೆ ಅಮಿತಾಬ್ ಬಚ್ಚನ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಕಾಣುವ ವಿಗ್ರಹಕ್ಕಿಂತ ಈ ವಿಗ್ರಹವು ವಿಭಿನ್ನವಾಗಿ ಕಾಣುತ್ತದೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಅಮಿತಾಬ್ ಬಚ್ಚನ್ ಅವರ ಟ್ವೀಟ್‌ ಸಂಖ್ಯೆ ‘T 4023’ ಮತ್ತು ‘FB 3053’ ಸಂಖ್ಯೆಯ ಫೇಸ್‌ಬುಕ್ ಪೋಸ್ಟ್ ಮೂಲಕ ಹಂಚಿಕೊಂಡಿರುವ ವಿಡಿಯೊ ಈ ವರ್ಷದ ಲಾಲ್‌ಬಾಗ್‌ನಲ್ಲಿ ಪ್ರತಿಷ್ಠಾಪಿಸಿರುವ ಗಣೇಶನ ಮೂರ್ತಿಯಲ್ಲ. ಅದನ್ನು ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ವಾಸ್ತವದಲ್ಲಿ ಈ ವಿಡಿಯೊ ತುಣುಕು ಐದು ವರ್ಷಗಳ ಹಿಂದಿನ ಗಣೇಶ ಚತುರ್ಥಿಯ ಆಚರಣೆಯದ್ದಾಗಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ರೋಹಿಂಗ್ಯಾ ನಿರಾಶ್ರಿತರಿಗೆ ದೆಹಲಿ ಸರ್ಕಾರ ಸೌಲಭ್ಯಗಳನ್ನು ಒದಗಿಸಿದೆ ಎಂದು ಸುಳ್ಳು ಸುದ್ದಿ ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...